Connect with us

STATE

ಅಂಕೋಲಾ: ಕಾರು ಪ*ಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾ*ವು !!

Published

on

ಅಂಕೋಲಾ: ನ್ಯಾನೋ ಕಾರು ಪ*ಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃ*ತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ಕೊಡಸಣಿಯ ಅಪಾಯಕಾರಿ ಕ್ರಾಸ್ ಬಳಿ ನಡೆದಿದೆ.

ಪರಿಣಾಮ ಓರ್ವ ಮೃ*ತಪಟ್ಟಟ್ಟು, ಮತ್ತೋರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಹೊನ್ನಾವರ ಅರೆಯಂಗಡಿ ಮೂಲದ ರಮೇಶ ಶಿವಾನಂದ ನಾಯ್ಕ ಮೃ*ತ ದುರ್ದೈವಿ ಎಂದು ಗುರುತಿಸಲಾಗಿದೆ.

ವಧು ಅನ್ವೇಷಣೆಗಾಗಿ ಅದೇ ಕಾರಿನಲ್ಲಿ ಅಂಕೋಲಾ ಕಡೆ ಬರುತ್ತಿದ್ದ ದಿನೇಶ ಎನ್ನುವವನ ತಲೆ ಹಾಗೂ ಇತರೆಡೆ ಗಾ*ಯನೋವುಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೊಳಪಡಿಸಲಾದ್ದು ಪ್ರಾ*ಣಾಪಾಯದಿಂದ ಪಾರಾಗಿದ್ದಾನೆ.

ಅವೈಜ್ಞಾನಿಕ ಹಾಗೂ ಅಪೂರ್ಣ ಹೆದ್ದಾರಿ ಕಾಮಗಾರಿಯಿಂದ ಕೊಡಸಣಿ ಕ್ರಾಸ್ ಬಳಿ ಹತ್ತಾರು ಅಪಘಾತಗಳು ಸಾ*ವು ನೋವುಗಳು ಸಂಭವಿಸುತ್ತಲೇ ಇದ್ದು ಕಳೆದ ವಾರ ಇದೇ ಸ್ಥಳದ ಹತ್ತಿಪತ್ತು ಮೀಟರ್ ದೂರದಲ್ಲಿ ಭಾರೀ ವಾಹನ ಒಂದು ಪ*ಲ್ಟಿಯಾಗಿತ್ತು.

LATEST NEWS

ಕಲಬುರಗಿ: ಭಾರೀ ಮಳೆಗೆ ಮನೆ ಕುಸಿತ; ಅಪಾಯದಿಂದ ಪಾರಾದ ಕುಟುಂಬಸ್ಥರು

Published

on

ಕಲಬುರಗಿ: ನಿನ್ನೆ (ಮೇ.19) ರಂದು ರಾತ್ರಿಯ ವೇಳೆ ಸುರಿದ ಭಾರೀ ಮಳೆಯಿಂದಾಗಿ ಮನೆ ಕುಸಿದಿದೆ. ಈ ಘಟನೆ ಕಲಬುರಗಿಯ ವೆಂಕಟಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಿಂಗಾನಗರ ತಾಂಡಾದಲ್ಲಿ ನಡೆದಿದೆ.

ಲಿಂಗಾನಗರದ ಅನುಷಾಬಾಯಿ ಚವ್ಹಾಣ್ ಎಂಬುವವರಿಗೆ ಸೇರಿದ ಮನೆ ಸಂಪೂರ್ಣ ಕುಸಿದಿದ್ದು, ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅನುಷಾಬಾಯಿ ಅವರ ಪತಿ ಬೇರೆ ಮದುವೆ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದು, ಮೂವರು ಹೆಣ್ಣು ಮಕ್ಕಳ ಪೋಷಣೆ ಅನುಷಾಬಾಯಿ ಅವರ ಮೇಲಿದೆ. ಇದೀಗ ಮನೆಯೂ ಕಳೆದುಕೊಂಡ ಅನುಷಾಬಾಯಿ ಕುಟುಂಬ ಅಕ್ಷರಶಃ ಬೀದಿಗೆ ಬಂದಿದೆ.

ಇದನ್ನೂ ಓದಿ: ಸಾಲೂರು ಬೃಹನ್ಮಠದ ಶ್ರೀ ಪಟ್ಟದ ಗುರುಸ್ವಾಮಿಗಳು ಲಿಂಗೈಕ್ಯ

ಕಳೆದ ಮೂರು ದಿನಗಳಿಂದ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲವೆಡೆ ರಸ್ತೆಯಲ್ಲಿ ಮರಗಳು ಉರುಳಿ ಬಿದ್ದಿದೆ. ಅಲ್ಲದೇ ಸಂಚಾರಕ್ಕೆ ತೊಂದರೆ ಉಂಟಾಗಿದೆ.

Continue Reading

LATEST NEWS

ಸಾಲೂರು ಬೃಹನ್ಮಠದ ಶ್ರೀ ಪಟ್ಟದ ಗುರುಸ್ವಾಮಿಗಳು ಲಿಂಗೈಕ್ಯ

Published

on

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಹಿರಿಯ ಶ್ರೀ ಗುರುಸ್ವಾಮೀಜಿ 70ನೇ ವಯಸ್ಸಿಗೆ ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಗುರುಸ್ವಾಮೀಜಿ ಅವರು ಸಾಲೂರು ಮಠದಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು.

ಶ್ರೀಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರ ಚಿಕಿತ್ಸೆ ಫಲಿಸದೇ ಇಂದು ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕಾಸರಗೋಡು: ಸೈಕಲ್ ಚೈನ್ ಕಾಲಿಗೆ ಸಿಲುಕಿ ನರಳಾಡಿದ ಆರು ವರ್ಷದ ಬಾಲಕ

ಇಂದು ಶ್ರೀಮಠದ ಆವರಣದಲ್ಲಿ ಸುತ್ತೂರು ಶ್ರೀಗಳು ಹಾಗೂ ಸಿದ್ಧಗಂಗಾ ಶ್ರೀಗಳ ನೇತೃತ್ವದಲ್ಲಿ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Continue Reading

LATEST NEWS

ಕಾಸರಗೋಡು: ಸೈಕಲ್ ಚೈನ್ ಕಾಲಿಗೆ ಸಿಲುಕಿ ನರಳಾಡಿದ ಆರು ವರ್ಷದ ಬಾಲಕ

Published

on

ಕಾಸರಗೋಡು: ಸೈಕಲ್ ತುಳಿಯುತ್ತಿದ್ದಾಗ ಅದರ ಚೈನ್ ಕಾಲಿಗೆ ಸಿಲುಕಿ ಆರು ವರ್ಷದ ಬಾಲಕ ನರಳಾಡಿದ ಘಟನೆ ಕಾಸರಗೋಡು ನಗರದ ತಳಂಗರೆಯಲ್ಲಿ ನಡೆದಿದೆ.

ಅಗ್ನಿ ಶಾಮಕ ದಳದ ಸಿಬಂದಿಯನ್ನು ಕರೆಸಿ ಬಾಲಕನನ್ನು ರಕ್ಷಿಸಲಾಯಿತು. ಸೋಮವಾರ ಸಂಜೆ ಸೈಕಲ್‌ನಲ್ಲಿ ತೆರಳುತ್ತಿದ್ದ ಬಾಲಕನ ಕಾಲಿಗೆ ಏಕಾ ಏಕಿ ಚೈನ್ ಸಿಲುಕಿಕೊಂಡಿದೆ. ಬಾಲಕನ ಬೊಬ್ಬೆ ಕೇಳಿ ಮನೆಯವರು ಹಾಗೂ ಸ್ಥಳೀಯರು ಓಡಿ ಬಂದು ಕಾಲಿಗೆ ಸಿಲುಕಿದ ಚೈನನ್ನು ತೆಗೆಯಲೆತ್ನಿಸಿದರೂ ಸಾಧ್ಯವಾಗಲಿಲ್ಲ.

ಇದನ್ನೂ ಓದಿ: Watch Video: ಅಬ್ಬಬ್ಬಾ! ಯಾವ ರಕ್ಷಣೆಯಿಲ್ಲದೆ ಜೇನು ಗೂಡಿಗೆ ಕೈ ಹಾಕಿದ ಭೂಪ

ಬಳಿಕ ಕಾಸರಗೋಡಿನ ಅಗ್ನಿ ಶಾಮಕ ದಳದವರಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬಂದಿ ಕಟ್ಟರ್ ಬಳಸಿ ಚೈನ್ ತುಂಡರಿಸಿ ಬಾಲಕನನ್ನು ರಕ್ಷಿಸಿದ್ದಾರೆ. ಬಾಲಕನ ಕಾಲಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳದ ಅಧಿಕಾರಿ ವಿ. ಎನ್ ಗೋಪಾಲನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

Continue Reading
Advertisement

Trending

Copyright © 2025 Namma Kudla News

You cannot copy content of this page