Connect with us

LATEST NEWS

‘ಬಾರೆ ಬಾರೆ ಕಲ್ಯಾಣ ಮಂಟಪಕ್ಕೆ ಬಾ’ ಅಂದವನಿಗೆ ಮಂಟಪದಲ್ಲೇ ಶಾಕ್ ಕೊಟ್ಟ ಮೊದಲ ಪತ್ನಿ!

Published

on

ತುಮಕೂರು: ಕಲ್ಯಾಣ ಮಂಟಪದಲ್ಲಿ ತಾಳಿ ಕಟ್ಟುವ ಶುಭ ಮುಹೂರ್ತದ ವೇಳೆಯೇ ಈ ಅಚ್ಚರಿಯ ಘಟನೆ ನಡೆದಿದೆ. ತಾಳಿ ಕಟ್ಟುವ ವೇಳೆ ರಿಯಲ್‌ ವಿಲನ್‌ ಥರ ಎಂಟ್ರಿಕೊಟ್ಟ ಮೊದಲ ಪತ್ನಿ ಮದುವೆಯನ್ನು ನಿಲ್ಲಿಸಿ, ಗಂಡನಿಗೆ ಶಾಕ್‌ ನೀಡಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.


ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸಿ, ಹರಿಪ್ರಸಾದ್ ಮತ್ತು ಲೇಪಾಕ್ಷಿ 2014ರಲ್ಲಿ ಮದುವೆಯಾಗಿದ್ದರು. ಇವರು ಎಂಟನೇ ತರಗತಿಯಿಂದಲೇ ಪ್ರೀತಿಸುತ್ತಿದ್ದರು. ದಂಪತಿಗಳ ನಡುವಿನ ಕೌಟುಂಬಿಕ ಕಲಹದಿಂದಾಗಿ ಅವರು ದೂರವಾಗಿದ್ದರು. ಆದರೆ, ಕಾನೂನಾತ್ಮಕವಾಗಿ ವಿಚ್ಛೇದನ ಪಡೆಯದೇ ಹರಿಪ್ರಸಾದ್ ಎರಡನೇ ಮದುವೆ ಮಾಡಿಕೊಳ್ಳಲು ಮುಂದಾಗಿದ್ದಾನೆ.


ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಿಟ್ಟೂರು ಗ್ರಾಮದ ಪುಣ್ಯಶ್ರೀ ಎಂಬಾಕೆಯ ಜತೆ ಹರಿಪ್ರಸಾದ್ ಸಪ್ತಪದಿ ತುಳಿಯಲು ಸಿದ್ಧತೆ ಮಾಡಿಕೊಂಡಿದ್ದನು. ಎಡೆಯೂರಿನ ಎಸ್‌ಎಲ್‌ ಎನ್ ಕಲ್ಯಾಣ ಮಂಟಪದಲ್ಲಿ ಹರಿಪ್ರಸಾದ್ ಮದುವೆ ನಡೆಯುತ್ತಿತ್ತು. ಮದುವೆಯ ವಿಚಾರ ತಿಳಿದ ಲೇಪಾಕ್ಷಿ ವಕೀಲರು, ಕುಣಿಗಲ್ ತಾಲೂಕಿನ ಅಮೃತೂರು ಪೊಲೀಸರು ಮತ್ತು ಸಂಬಂಧಿಕರ ಜತೆ ನೇರವಾಗಿ ಕಲ್ಯಾಣಮಂಟಪಕ್ಕೆ ನುಗ್ಗಿ, ತಾಳಿ ಕಟ್ಟುವ ಮೊದಲೇ ಮದುವೆಯನ್ನು ನಿಲ್ಲಿಸಿದ್ದಾರೆ.


ಆ ವೇಳೆ ಕಲ್ಯಾಣ ಮಂಟಪದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕೆಲಕಾಲ ಮಾತಿನ ಚಕಮಕಿ ಮತ್ತು ಜಗಳವೇ ನಡೆಯಿತು. ತಮಗೆ ಡಿವೋರ್ಸ್ ನೀಡದೇ ಮದುವೆಯಾಗುತ್ತಿರುವ ವಿಷಯವನ್ನು ವಧುವಿನ ಪೋಷಕರಿಗೆ ತಿಳಿಸಿದ್ದಾರೆ. ವಿಷಯ ತಿಳಿದ ವಧುವಿನ ಪೋಷಕರು ಸಹ ಮದುವೆ ನಿಲ್ಲಿಸಿದ್ದಾರೆ.

ಇದನ್ನೂ ಓದಿ: ಉಡುಪಿ : ಬಾವಿಗೆ ಹಾರಿ ವ್ಯಕ್ತಿ ಆ*ತ್ಮಹ*ತ್ಯೆ; ದೇಹದಿಂದ ಬೇರ್ಪಟ್ಟ ರುಂ*ಡ!

ಅಮೃತೂರು ಪೊಲೀಸರು ಹರಿಪ್ರಸಾದ್‌ ಮತ್ತು ಲೇಪಾಕ್ಷಿ ಜತೆ ಮದುವೆಗೆ ಸಜ್ಜಾಗಿದ್ದ ಯುವತಿಯ ಮನೆಯವರನ್ನು ಠಾಣೆಗೆ ಕರೆದೊಯ್ದಿದ್ದಾರೆ. ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

INTERNATIONAL

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾ*ಳಿ

Published

on

ಮಂಗಳೂರು/ದುಬೈ : ವಿಶ್ವದ ಎರಡನೇ ಅತ್ಯಂತ ಜನನಿಬಿಡ  ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.

ಘಟನೆಯ ಬೆನ್ನಲ್ಲೇ ದುಬೈ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು. ಡ್ರೋನ್ ಬಿದ್ದ ಜಾಗದಲ್ಲಿ ದಟ್ಟವಾದ ಹೊಗೆ ಕಾಣಿಸಿದ್ದು ಸಾ*ವು, ನೋ*ವಿನ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ದುಬೈಗೆ ಆಗಮಿಸುವ ಮತ್ತು ನಿರ್ಗಮಿಸುವ ವಿಮಾನಗಳನ್ನು ಮುಂದಿನ ಸೂಚನೆ ಬರುವ ವರೆಗೆ ಸ್ಥಗಿತಗೊಳಿಸಲು ಎಮಿರೇಟ್ಸ್ ಸರ್ಕಾರ ಸೂಚಿಸಿತ್ತು. ಇನ್ನು ಘಟನೆಗೆ ಸಂಬಂಧಪಟ್ಟ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ : ಮೂರು ದಿನದ ಸಾಂಬಾರ್‌ನಿಂದ ಜಗಳ….ಪ್ರಾ*ಣ ಬಿಟ್ಟ ಗೃಹಿಣಿ!

ಇದೀಗ ಭಾಗಶಃ ವಿಮಾನಗಳ ಹಾರಾಟ ಪ್ರಾರಂಭಿಸಲಾಗಿದೆ ಎಂದು ವರದಿಯಾಗಿದೆ.

Continue Reading

LATEST NEWS

ಪ್ರವಾಸಿ ತಾಣ ಜೇನುಕಲ್ಲು ಗುಡ್ಡದಲ್ಲಿ ದುರಂತ: ಪ್ರಪಾತಕ್ಕೆ ಹಾರಿ ಪ್ರಾಣ ಬಿಟ್ಟ ವ್ಯಕ್ತಿ

Published

on

ಯಲ್ಲಾಪುರ: ಪ್ರಸಿದ್ಧ ಪ್ರವಾಸಿ ತಾಣವಾದ ಜೇನುಕಲ್ಲು ಗುಡ್ಡದಲ್ಲಿ ವ್ಯಕ್ತಿಯೊಬ್ಬರು ಪ್ರಪಾತಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಸಂಭವಿಸಿದೆ.


ಮೃತಪಟ್ಟ ವ್ಯಕ್ತಿಯನ್ನು ಶ್ರೀನಿಧಿ ಕೃಷ್ಣ ಕಡಕೋಳ ಎಂದು ಗುರುತಿಸಲಾಗಿದೆ. ಯಲ್ಲಾಪುರದಿಂದ ಸುಮಾರು 17 ಕಿ.ಮೀ ದೂರದಲ್ಲಿರುವ ಪಶ್ಚಿಮ ಘಟ್ಟಗಳ ಸುಂದರ ವ್ಯೂ ಪಾಯಿಂಟ್ ಆದ ಜೇನುಕಲ್ಲು ಗುಡ್ಡದಲ್ಲಿ ಈ ದುರ್ಘಟನೆ ನಡೆದಿದೆ.

ಶ್ರೀನಿಧಿ ಮಾ.4ರಂದು ಗೋಕರ್ಣಕ್ಕೆ ಹೋಗಿ ಬರುವುದಾಗಿ ಹೇಳಿ ಸ್ಕೂಟಿಯಲ್ಲಿ ಹೊಟಿದ್ದ. ಮಾ.7ರಂದು ಈತನ ಶವ ಜೇನುಕಲ್ಲು ಗುಡ್ಡದಲ್ಲಿ ದೊರೆತಿದೆ. ಗುಡ್ಡದ ತುದಿಯಿಂದ ಆಳವಾದ ಪ್ರಪಾತಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಇದನ್ನೂ ಓದಿ: ದಳಪತಿ ವಿಜಯ್ ಪತ್ನಿ ಸಂಗೀತಾರಿಂದ ಕೋರ್ಟ್‌ಗೆ ಹೊಸ ಅರ್ಜಿ!

ಈ ಕುರಿತು ಯಲ್ಲಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತನ ಶರೀರವನ್ನು ಗುಡ್ಡದಿಂದ ಹೊರತೆಗೆದಿದ್ದಾರೆ. ಬಳಿಕ ಮುಂದಿನ ತನಿಖೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

15ನೇ ವರ್ಷದ ಮೂಡೂರು – ಪಡೂರು ‘ಬಂಟ್ವಾಳ ಕಂಬಳ’ಕ್ಕೆ ಚಾಲನೆ

Published

on

ಬಂಟ್ವಾಳ : ಬಂಟ್ವಾಳದ ಮೂಡೂರು-ಪಡೂರು ಜೋಡುಕರೆ ಕಂಬಳ ಸಮಿತಿ ವತಿಯಿಂದ ನಾವೂರ ಕೂಡಿಬೈಲು ಎಂಬಲ್ಲಿನ ಮೂಡೂರು – ಪಡೂರು ಜೋಡುಕರೆಯಲ್ಲಿ 15ನೇ ವರ್ಷದ ‘ಬಂಟ್ವಾಳ ಕಂಬಳ’ ಇಂದು(ಮಾ.07) ಮುಂಜಾನೆ ಸಂಪ್ರದಾಯಬದ್ಧವಾಗಿ ಆರಂಭಗೊಂಡಿತು.

ಮುಂಜಾನೆ ನಾಗದೇವರ ಕಟ್ಟೆ ಬಳಿ ಪೂಜೆ, ಪ್ರಾರ್ಥನೆ ನಡೆದ ಬಳಿಕ ಕಂಬಳ ಕರೆ ಪೂಜೆ ನಡೆಯಿತು. ಮಾಜಿ ಸಚಿವ, ಕಂಬಳ ಸಮಿತಿ ಗೌರವಾಧ್ಯಕ್ಷ ಬೆಳ್ಳಿಪ್ಪಾಡಿ ರಮಾನಾಥ ರೈ ನೇತೃತ್ವದಲ್ಲಿ ನಡೆಯುತ್ತಿರುವ ಕಂಬಳಕ್ಕೆ ಗಣ್ಯರನ್ನು ಮೆರವಣಿಗೆ ಮೂಲಕ ಕರೆತರಲಾಯಿತು. ತೆಂಗಿನ ಕಾಯಿ ಒಡೆದು ತುಳುನಾಡಿನ ಸಂಪ್ರದಾಯ ಪ್ರಕಾರ ಮಂಜೊಟ್ಟಿ ಬಳಿ ಕರೆ ಉದ್ಘಾಟನೆಗೊಂಡಿತು.

ಸಭಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಸೋಲೂರು ಮಹಾ ಸಂಸ್ಥಾನದ ಶ್ರೀವಿಖ್ಯಾತಾನಂದ ಸ್ವಾಮೀಜಿ, ಬಾರ್ಕೂರು ಮಹಾ ಸಂಸ್ಥಾನದ ಶ್ರೀ ವಿದ್ಯಾವಾಚಸ್ಪತಿ ಡಾ. ಸಂತೋಷ್ ಗುರೂಜಿ, ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ, ಅಲ್ಲಿಪಾದೆ ಚರ್ಚ್‌ ಧರ್ಮಗುರು ವಂ. ರಾಬರ್ಟ್ ಡಿಸೋಜ ಭಾಗವಹಿಸಿದ್ದರು.

ಇದನ್ನೂ ಓದಿ : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ: ಬಿ.ಸಿ. ರೋಡ್‌ನ ನವೀಕೃತ ಹವಾನಿಯಂತ್ರಿತ ಶಾಖೆಯ ಉದ್ಘಾಟನೆ

ಅಧ್ಯಕ್ಷತೆಯನ್ನು ರಮಾನಾಥ ರೈ ವಹಿಸಿದ್ದರು.  ಕಂಬಳ ಸಮಿತಿ ಅಧ್ಯಕ್ಷ ಪಿಯುಸ್ ಎಲ್. ರೋಡ್ರಿಗಸ್ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ಚಂದ್ರಪ್ರಕಾಶ್‌ ಶೆಟ್ಟಿ, ಸಂಚಾಲಕ ಬಿ. ಪದ್ಮಶೇಖರ ಜೈನ್, ಪ್ರಧಾನ ಕಾರ್ಯದರ್ಶಿ ರಾಜೀವ ಶೆಟ್ಟಿ ಎಡ್ತೂರು ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

 

Continue Reading
Advertisement

Trending

Copyright © 2025 Namma Kudla News

You cannot copy content of this page