Connect with us

LATEST NEWS

ಪತ್ನಿಗೆ ಬೆಂ*ಕಿ ಹಚ್ಚಿ ತಲೆಮರೆಸಿಕೊಂಡಿದ್ದ ವ್ಯಕ್ತಿ 12 ವರ್ಷಗಳ ಬಳಿಕ ಅರೆಸ್ಟ್

Published

on

ಮಂಗಳೂರು/ಛತ್ತೀಸ್ ಗಡ : ಪತ್ನಿಯನ್ನು ಕೊ*ಲೆ ಮಾಡಿ ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ ಕೊನೆಗೂ ಪೊಲೀಸರಿಗೆ ಸೆರೆ ಸಿಕ್ಕಿದ್ದಾನೆ. ಛತ್ತೀಸ್​ಗಢದ ದುರ್ಗ್​ನಲ್ಲಿ ಈ ಘಟನೆ ನಡೆದಿದೆ.

ಪತಿ – ಪತ್ನಿ ಇಬ್ಬರು ಜಗಳವಾಡುತ್ತಿದ್ದರು. ಈ ವೇಳೆ ಕೋಪ  ವಿಪರೀತಗೊಂಡು ಪತಿ ಪತ್ನಿಗೆ ಬೆಂ*ಕಿ ಹಚ್ಚಿ ಬಳಿಕ ಪರಾರಿಯಾಗಿದ್ದ. ಪತಿ – ಪತ್ನಿ ಇಬ್ಬರೂ ನಿತ್ಯ ಮದ್ಯಪಾನ ಮಾಡುತ್ತಿದ್ದರಂತೆ. ಇದೇ ನಶೆಯಲ್ಲಿ ಕೊ*ಲೆ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ : ಯಶ್ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ ಖ್ಯಾತ ಕ್ರಿಕೆಟಿಗನ ಪತ್ನಿ

ಪತ್ನಿಗೆ ಸೀಮೆ ಎಣ್ಣೆ ಸುರಿದು ಬೆಂ*ಕಿ ಹಚ್ಚಿದ್ದು, ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.  ಪರಾರಿಯಾಗಿದ್ದ ಆರೋಪಿ ಪದೇ ಪದೇ ಊರು ಬದಲಾಯಿಸುತ್ತಿದ್ದ. ಜತೆಗೆ ತನ್ನ ಗುರುತು ಕೂಡ ಬದಲಾಯಿಸಿಕೊಂಡಿದ್ದ. ಕೆಲವೊಮ್ಮೆ ಮಗಳ ಮನೆಯಲ್ಲಿ, ಮತ್ತೊಮ್ಮೆ ಬೇರೆ ಬೇರೆ ಜಿಲ್ಲೆಗಳಲ್ಲಿ ಕೂಲಿ ಕೆಲಸ ಮಾಡುತ್ತಿದ್ದ. ಆತನ ಚಲನವನಗಳ ಮೇಲೆ ನಿರಂತರ ಕಣ್ಣಿಟ್ಟ ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದೆ.

 

LATEST NEWS

ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ ಹೊಸ ಟೋಲ್ ರೇಟ್ ..! ಎಷ್ಟು ಹೆಚ್ಚಾಗಲಿದೆ ಗೊತ್ತಾ ?

Published

on

ಮಂಗಳೂರು/ನವದೆಹಲಿ : ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ  ಸರ್ಕಾರ ಮತ್ತೊಂದು ಶಾ*ಕ್ ಕೊಟ್ಟಿದೆ. ಟೋಲ್ ದರದಲ್ಲಿ ಏರಿಕೆ ಮಾಡುವ ಬಗ್ಗೆ ಪರಿಷ್ಕರಣೆ ನಡೆಸಲಾಗಿದೆ. ಏಪ್ರಿಲ್ 1 ರಿಂದ ಈ ಹೊಸ ದರ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ.

ಬೆಲೆ ಏರಿಕೆ, ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಮಾಡುವ ದರ ಪರಿಷ್ಕರಣೆ ಪ್ರಕ್ರಿಯೆ ಇದಾಗಿದ್ದು, ಕನಿಷ್ಠ ಶೇ.3 ರಿಂದ ಗರಿಷ್ಠ 5 ರಷ್ಟು ಏರಿಕೆಯಾಗಲಿವೆ.

ಎಲ್ಲೆಲ್ಲಿ ಹೆಚ್ಚಳ ?

ಕರ್ನಾಟಕದಲ್ಲಿ ಒಟ್ಟು 66 ಟೋಲ್ ಪ್ಲಾಜಾಗಳಿವೆ. ಬೆಂಗಳೂರು – ಮೈಸೂರು ಮಾರ್ಗದ ಕನಮಿಣಿಕೆ ಮತ್ತು ಶೇಷಗಿರಿಹಳ್ಳಿ, ಬೆಂಗಳೂರು – ತಿರುಪತಿ ಮಾರ್ಗದ ನಂಗ್ಲಿ, ಬೆಂಗಳೂರು-ಹೈದರಾಬಾದ್ ಮಾರ್ಗದ ಬಾಗೇಪಲ್ಲಿ, ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯ ಸಾದಹಳ್ಳಿ, ಮತ್ತು ಹುಲಿಕುಂಟೆ ಹಾಗೂ ನಲ್ಲೂರು ದೇವನಹಳ್ಳಿ (ಸ್ಯಾಟಲೈಟ್ ಟೌನ್ ರಿಂಗ್ ರೋಡ್) ಟೋಲ್ ಪ್ಲಾಜಾಗಳಲ್ಲಿ ದರಗಳು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ : ಅಮೆರಿಕದ ಮಿಲಿಟರಿಯಲ್ಲೇ ಭಾರಿ ದೊಡ್ಡ ಭದ್ರತಾ ಲೋಪ!

ದೇಶದಾದ್ಯಂತ ಒಟ್ಟು 323 ರಾಜ್ಯ ಹೆದ್ದಾರಿ ಟೋಲ್ ಫ್ಲಾಜಾ ಸೇರಿದಂತೆ, ದೇಶದಲ್ಲಿ ಒಟ್ಟು 1,181 ಟೋಲ್ ಗಳಿವೆ. 2023-24 ರಲ್ಲಿ 42,196 ಕೋಟಿ ರೂ, 2024-25 ರಲ್ಲಿ 64,809 ಕೋಟಿ ರೂ. ಟೋಲ್‌ ಸಂಗ್ರಹವಾಗಿದೆ. 2019-20 ರಲ್ಲಿ ಟೋಲ್ ಶುಲ್ಕ ಸಂಗ್ರಹವು 27,503 ಕೋಟಿ ರೂ.ಗಳಷ್ಟಿತ್ತು. ಈ ವರ್ಷ 1 ಲಕ್ಷ ಕೋಟಿಗೆ ಏರಿಕೆ ಮಾಡುವ ಗುರಿ ಹೊಂದಲಾಗಿದೆ.  ಕರ್ನಾಟಕದಲ್ಲಿ 66 ಟೋಲ್ ಫ್ಲಾಜಾಗಳಿದ್ದು, ಕಳೆದ 5 ವರ್ಷಗಳಲ್ಲಿ ಈ ಟೋಲ್‌ಗಳಿಂದ 13,702 ಕೋಟಿ ಸಂಗ್ರಹವಾಗಿದೆ.

 

Continue Reading

BANTWAL

ಎರಡನೇ ವರ್ಷದ ಮೂಳೂರು-ಅಡ್ಡೂರು ಕಂಬಳದ ಆಹ್ವಾನ ಪತ್ರಿಕೆ ಬಿಡುಗಡೆ

Published

on

ಮಂಗಳೂರು: ಎರಡನೇ ವರ್ಷದ ಮೂಳೂರು-ಅಡ್ಡೂರು ಜೋಡು ಕರೆ ಕಂಬಳ ಎಪ್ರಿಲ್ 12 ರ ಶನಿವಾರ ನಡೆಯಲಿದೆ.


ಸಮಾಜ ಸೇವಕ ಹಾಗೂ ರಾಜಕೀಯ ನಾಯಕ ಇನಾಯತ್ ಅಲಿಯವರ ನೇತೃತ್ವದಲ್ಲಿ ಈ ಕಂಬಳ ಆಯೋಜನೆಯಾಗಿದೆ. ವಿಜೃಂಭಣೆಯಿಂದ ನಡೆಯುವ ಮೂಳುರು-ಅಡ್ಡೂರು ಜೋಡುಕರೆ ಕಂಬಳದ ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಲಾಗಿದೆ.

ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರ ಸಮಕ್ಷಮದಲ್ಲಿ ಅಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಗಿದೆ. ಎರಡನೇ ವರ್ಷದ ಕಂಬಳವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಮಾಡಲಿದ್ದಾರೆ.

ಇದನ್ನೂ ಓದಿ: ಈ ದಿನದಂದು ನಿಮ್ಮ ಖಾತೆಗೆ ಸೇರಲಿದೆ 2 ತಿಂಗಳ ಗೃಹಲಕ್ಷ್ಮೀ ಹಣ 

ಸರ್ವ ಧರ್ಮಗಳ ಪ್ರಮುಖರ ಶುಭಾಶೀರ್ವಾದದೊಂದಿಗೆ ಕಾರ್ಯಕ್ರಮ ಉದ್ಘಾಟನೆಯಾಗಲಿದ್ದು, ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸ್ಪೀಕರ್ ಯು.ಟಿ. ಖಾದರ್, ಸಚಿವ ದಿನೇಶ್ ಗುಂಡೂರಾವ್ ಅವರು ಭಾಗವಹಿಸಲಿದ್ದಾರೆ. ಹಲವಾರು ಚಲನ ಚಿತ್ರ ನಟ ನಟಿಯರು ಕೂಡಾ ಸಂಜೆಯ ಸಭಾ ಕಾರ್ಯಕ್ರಮಕ್ಕೆ ಆಗಮಿಸಲಿರುವುದಾಗಿ ಕಂಬಳ ಸಮಿತಿಯ ಅಧ್ಯಕ್ಷ ಇನಾಯತ್ ಅಲಿ ಮಾಹಿತಿ ನೀಡಿದ್ದಾರೆ.

Continue Reading

LATEST NEWS

ಆಟವಾಡುತ್ತಿದ್ದಾಗ ಟ್ರ್ಯಾಕ್ಟರ್‌ ಹರಿದು 5 ವರ್ಷದ ಮಗು ಸಾವು

Published

on

ತುಮಕೂರು: ಮನೆ ಮುಂದೆ ಆಟವಾಡುತ್ತಿದ್ದ‌ 5 ವರ್ಷದ ಬಾಲಕನ ಮೇಲೆ ಮಣ್ಣು ತುಂಬಿದ ಟ್ರ್ಯಾಕ್ಟರ್‌ ಹರಿದು 5 ವರ್ಷದ ಮಗು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ವರುಣ್ (5) ಸಾವನ್ನಪ್ಪಿದ ಮಗು ಎಂದು ಗುರುತಿಸಲಾಗಿದೆ.

ಮನೆಯ ಎದುರುಗಡೆ ಮಗು ಆಟವಾಡುತ್ತಿತ್ತು. ಆಗ ಮಣ್ಣು ತುಂಬಿದ ಟ್ರ್ಯಾಕ್ಟರ್ ಒಂದು ವೇಗವಾಗಿ ಬಂದು ಮಗುವಿನ ಮೇಲೆ ಹರಿದು ಹೋಗಿದೆ. ಪರಿಣಾಮ ಮಗು ಸಾವನ್ನಪ್ಪಿದೆ. ವೈಎನ್ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page