Connect with us

FILM

ಬಹುನಿರೀಕ್ಷಿತ ‘ಕಾಂತಾರ-1’; ಸಮರ ವೀರನಾಗಿ ರಿಷಬ್‌ ಶೆಟ್ಟಿ ..!! ಫೊಟೋ ರಿವೀಲ್

Published

on

ಇತ್ತೀಚೆಗಷ್ಟೇ ಕಾಂತಾರ ಸಿನೆಮಾ ನಟನೆಗಾಗಿ ರಿಷಬ್ ಶೆಟ್ಟಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದ್ದಾರೆ. ಅತ್ಯುತ್ತಮ ಮನರಂಜನೆ ವಿಭಾಗದಲ್ಲೂ ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ. ಇನ್ನು ಕಾಂತಾರ ಸಿನೆಮಾ ಈಗಾಗಲೇ ಬಾಕ್ಸ್ ಆಫೀಸ್‌ನಲ್ಲಿ ರೆಕಾರ್ಡ್‌ ಕ್ರಿಯೇಟ್ ಮಾಡಿದ್ದು, ಕಾಂತಾರ-1 ಗಾಗಿ ಸಿನಿ ಪ್ರೇಕ್ಷಕರು ಕಾಯುತ್ತಿದ್ದಾರೆ. ಇದೀಗ ಬಹುನಿರೀಕ್ಷಿತ ಕಾಂತಾರ-1 ಸಿನೆಮಾದ ಪೋಸ್ಟರ್‌ವೊಂದು ರರಿವೀಲ್‌ ಆಗಿದ್ದು ಭಾರೀ ಸುದ್ದಿ ಮಾಡುತ್ತಿದೆ.

ಕೆರಾಡಿ ಭಾರೀ ಸೆಟ್ ನಿರ್ಮಾಣ ಮಾಡಿ ಪ್ರೀಕ್ವೆಲ್ ಚಿತ್ರೀಕರಣ ನಡೆಸಲಾಗುತ್ತಿದೆ. ಮೊದಲ ಭಾಗಕ್ಕಿಂತ ಹಲವು ಪಟ್ಟು ದೊಡ್ಡದಾಗಿ ಎರಡನೇ ಭಾಗ ಪ್ರೇಕ್ಷಕರ ಮುಂದೆ ಬರಲಿದೆ. 1000 ಕೋಟಿ ರೂ. ಕಲೆಕ್ಷನ್ ಟಾರ್ಗೆಟ್ ಮಾಡಿ ಸಿನಿಮಾ ಕಟ್ಟಿಕೊಡಲಾಗುತ್ತಿದೆ. ಚಿತ್ರಕ್ಕಾಗಿ ರಿಷಬ್ ಶೆಟ್ಟಿ ಸಾಕಷ್ಟು ಕಸರತ್ತು ನಡೆಸುತ್ತಿದ್ದಾರೆ. ಪಾತ್ರಕ್ಕಾಗಿ ಕಳರಿ ಪಯಟ್ಟು ಸಮರಕಲೆಯನ್ನು ಕಲಿಯುತ್ತಿದ್ದಾರೆ. ಕೆಲ ದಿನಗಳ ಹಿಂದೆಯೇ ಈ ಬಗ್ಗೆ ಚರ್ಚೆ ನಡೆದಿತ್ತು. ಆದರೆ ಅಧಿಕೃತವಾಗಿ ಯಾರು ಇದನ್ನು ಸ್ಪಷ್ಟಪಡಿಸಿರಲಿಲ್ಲ. ಇದೀಗ ಫೋಟೊ ಸಮೇತ ಆ ವಿಚಾರ ಬಹಿರಂಗವಾಗಿದೆ. ಕತ್ತಿ, ಗುರಾಣಿ ಹಿಡಿದು ರಿಷಬ್ ಶೆಟ್ಟಿ ಕಳರಿ ಪಯಟ್ಟು ಕಲಿಯುತ್ತಿರುವ ಫೋಟೊ ರಿವೀಲ್ ಆಗಿದೆ.

ರಿಷಬ್ ಶೆಟ್ಟಿ ಫೋಟೊ ಹಂಚಿಕೊಂಡಿದ್ದಾರೆ. ಕಪ್ಪು ಬಣ್ಣದ ಬನಿಯನ್ ಹಾಗೂ ಕೆಂಪು ಬಣ್ಣದ ಕಚ್ಚೆ ಉಟ್ಟು ರಿಷಬ್ ಶೆಟ್ಟಿ ಸಮರ ಕಲೆಯನ್ನು ತಾಲೀಮು ನಡೆಸುತ್ತಿರುವುದನ್ನು ನೋಡಬಹುದು. ಇನ್ನು ಕರಾವಳಿಯ ‘ಕಾಂತಾರ’-1 ಕಥೆಗೆ ಕೇರಳದ ಪುರಾತನ ಸಮರ ಕಲೆಗೂ ಏನು ಸಂಬಂಧ ಎನ್ನುವುದು ಸಿನಿಮಾ ತೆರೆಗೆ ಬಂದಮೇಲೆ ಗೊತ್ತಾಗಲಿದೆ.


ಇನ್ ಸ್ಟಾಗ್ರಾಂ ಫಾಲೋವರ್ಸ್‌ ಪಟ್ಟಿಯಲ್ಲಿ ಮೋದಿಯನ್ನು ಹಿಂದಿಕ್ಕಿದ ಬಾಲಿವುಡ್ ನಟಿ
ಕುಂದಾಪುರದಲ್ಲಿ 22 ಸಾವಿರ ಚದರ ಅಡಿ ವಿಸ್ತೀರ್ಣದ ಶೂಟಿಂಗ್ ಫ್ಲೋರ್ ನಿರ್ಮಿಸಿ ‘ಕಾಂತಾರ’ ಚಾಪ್ಟರ್-1 ಚಿತ್ರೀಕರಣ ನಡೆಸಲಾಗುತ್ತಿದೆ. ಅದರ ಒಳಗೆ ನಾಲ್ಕೈದು ಸೆಟ್‌ಗಳನ್ನು ನಿರ್ಮಿಸಲಾಗಿದೆ. ಮಳೆ ಬರುವಾಗಲು ಚಿತ್ರೀಕರಣ ನಿಲ್ಲಿಸದೇ ಚಿತ್ರೀಕರಣ ನಡೆಸುತ್ತಿದ್ದಾರೆ. ತಮ್ಮದೇ ಬ್ಯಾನರ್‌ನ ‘ಲಾಫಿಂಗ್ ಬುದ್ಧ’ ಸಿನಿಮಾ ಪ್ರಚಾರಕ್ಕಾಗಿ ‘ಕಾಂತಾರ’-1 ಚಿತ್ರೀಕರಣದಿಂದ ಬಿಡುವು ಪಡೆದಿದ್ದಾರೆ. ಈಗಾಗಲೇ 3 ಶೆಡ್ಯೂಲ್‌ಗಳಲ್ಲಿ ‘ಕಾಂತಾರ’ ಪ್ರೀಕ್ವೆಲ್ ಚಿತ್ರೀಕರಣ ನಡೆದಿದೆ. ಮತ್ತಷ್ಟು ಶೆಡ್ಯೂಲ್‌ಗಳು ಬಾಕಿಯಿದೆ. ಮುಂದಿನ ವರ್ಷವೇ ಸಿನಿಮಾ ತೆರೆಗೆ ಬರುವುದು ಬಹುತೇಕ ಖಚಿತ ಎಂದು ರಿಷಬ್ ಶೆಟ್ಟಿ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ. ಮೇಕಿಂಗ್ ಹಂತದಲ್ಲೇ ಸಿನಿಮಾ ಮತ್ತಷ್ಟಯ ಕುತೂಹಲ ಮೂಡಿಸಿದೆ. ಈ ಬಾರಿ ಚಿತ್ರವನ್ನು ಆಸ್ಕರ್ ವೇದಿಕೆಗೂ ಕೊಂಡೊಯ್ಯುವ ಪ್ರಯತ್ನ ನಡೆಯುತ್ತಿದೆ.

FILM

‘ದಿ ಡೆವಿಲ್’ ಶೂಟಿಂಗ್‌ಗಾಗಿ ಹೊರ ರಾಜ್ಯಕ್ಕೆ ತೆರಳಿದ ದಾಸ; ಬಾಲಿವುಡ್ ಸ್ಟಾರ್ ನಟನ ಎಂಟ್ರಿ?

Published

on

ಮಂಗಳೂರು/ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರ ಬಹು ನಿರೀಕ್ಷಿತ ಸಿನಿಮಾ ದಿ ಡೆವಿಲ್ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಇದೀಗ ದರ್ಶನ್ ಅಭಿಮಾನಿಗಳಿಗೆ ಬಿಗ್ ಅಪ್ಡೇಟ್ ಕೊಟ್ಟಿದೆ ಚಿತ್ರತಂಡ.


‘ದಿ ಡೆವಿಲ್’ ಸಿನಿಮಾದ ಕೆಲಸಗಳಿಗೆ ಚುರುಕು ಮುಟ್ಟಿಸಲಾಗಿದೆ. ಬಿರುಸಿನಿಂದ ಶೂಟಿಂಗ್ ಮಾಡಲಾಗುತ್ತಿದೆ. ಕಾರಣಾಂತರಗಳಿಂದ ವಿಳಂಬ ಆಗಿದ್ದ ಚಿತ್ರಕರಣಕ್ಕೆ ಮರುಚಾಲನೆ ನೀಡಿದ್ದು, ರಾಜಸ್ಥಾನದಲ್ಲಿ ಶೂಟಿಂಗ್ ನಡೆಯುತ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್, ರಚನಾ ರೈ ಹಾಗೂ ಇನ್ನುಳಿದ ಕಲಾವಿದರು ‘ದಿ ಡೆವಿಲ್’ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಮೈಸೂರಿನಲ್ಲಿ ‘ದಿ ಡೆವಿಲ್’ ಸಿನಿಮಾದ ಶೂಟಿಂಗ್ ಆರಂಭವಾಗಿತ್ತು. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರ ಬಂದ ಬಳಿಕ ಮೊದಲ ಬಾರಿಗೆ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದರು.

ಈಗ ಇದೇ ಮೊದಲ ಬಾರಿಗೆ ಹೊರ ರಾಜ್ಯಕ್ಕೆ ಕಾಲಿಟ್ಟಿದ್ದಾರೆ. ನ್ಯಾಯಾಲಯ ಹೊರ ರಾಜ್ಯದಲ್ಲಿ ಚಿತ್ರೀಕರಣ ಮಾಡುವುದಕ್ಕೆ ಅನುಮತಿಯನ್ನು ನೀಡಿದ್ದರಿಂದ ‘ದಿ ಡೆವಿಲ್’ ಶೂಟ್ ರಾಜಸ್ಥಾನದಲ್ಲಿ ನಡೆಯುತ್ತಿದೆ. ರಾಜಸ್ಥಾನದಲ್ಲಿ ದಿ ಡೆವಿಲ್ ಸಿನಿಮಾದ ಟಾಕಿ ಪೋಷನ್ (ಮಾತಿನ ಭಾಗದ) ಚಿತ್ರೀಕರಣ ನಡೆಯುತ್ತಿದೆ.

ಇದನ್ನೂ ಓದಿ: ಮತ್ತೆ ಆರಂಭವಾಯ್ತು ‘ದಿ ಡೆವಿಲ್’ ಶೂಟಿಂಗ್; ಭಾರೀ ಮೊತ್ತ ಕಟ್ಟಿದ್ದು ಯಾಕೆ ಚಿತ್ರತಂಡ?

ದರ್ಶನ್ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ನಟ
ದಿ ಡೆವಿಲ್ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ನಟ ಕೂಡಾ ನಟಿಸಲಿದ್ದಾರೆ. ಡೆವಿಲ್ ಮೂಲಕ ಸಖತ್ ಆಗಿರುವ ಒಂದು ಕಾಂಬಿನೇಷನ್ ಪ್ರೇಕ್ಷಕರ ಮುಂದೆ ಬರಲಿದೆ. ಬಾಲಿವುಡ್‌ನ ಹೆಸರಾಂತ ನಟ-ಸ್ಕ್ರಿಪ್ಟ್ ರೈಟರ್-ಪ್ರೊಡ್ಯೂಸರ್ ಮತ್ತೊಮ್ಮೆ ಕನ್ನಡಕ್ಕೆ ಬರುತ್ತಿದ್ದಾರೆ. ಈ ಹಿಂದೆ ಕನ್ನಡದ ಒಂದು ಸಿನಿಮಾದಲ್ಲಿ ಮಹೇಶ್ ಮಂಜ್ರೇಕರ್ ನಟಿಸಿದ್ದರು. ಈಗ ಡೆವಿಲ್ ಮೂಲಕ ಮತ್ತೆ ಚಂದನವನದಲ್ಲಿ ಈ ನಟ ಸೌಂಡ್ ಮಾಡಲಿದ್ದಾರೆ.

ಈ ಸಿನಿಮಾದಲ್ಲಿ ದರ್ಶನ್ ಅವರಿಗೆ ಜೋಡಿಯಾಗಿ ರಚನಾ ರೈ ನಟಿಸುತ್ತಿದ್ದಾರೆ. ಅಚ್ಯುತ್ ಕುಮಾರ್, ತುಳಸಿ, ಶ್ರೀನಿವಾಸ್ ಪ್ರಭು, ಶೋಭರಾಜ್ ಮುಂತಾದ ಕಲಾವಿದರು ಈ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ.

Continue Reading

FILM

ಗೀತಾ ಶಿವರಾಜ್‌ಕುಮಾರ್ ಆಸ್ಪತ್ರೆಗೆ ದಾಖಲು… ಅಷ್ಟಕ್ಕೂ ಏನಾಯಿತು ಗೊತ್ತಾ..?

Published

on

ಬೆಂಗಳೂರು: ಇತ್ತೀಚಿಗಷ್ಟೇ ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ನಟ ಶಿವರಾಜ್‌ಕುಮಾರ್ ಚಿಕಿತ್ಸೆ ಪಡೆದು ಹುಷಾರ್ ಆಗಿ ಅಮೇರಿಕಾದಿಂದ ಬೆಂಗಳೂರಿಗೆ ಆಗಮಿಸಿದ್ದರು. ಇದೀಗ ಅವರು ಗುಣಮುಖರಾದ ಕೂಡಲೇ ಪತ್ನಿ ಗೀತಾ ಶಿವರಾಜ್‌ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗೀತಾ ಶಿವರಾಜ್‌ಕುಮಾರ್‌ ಅವರಿಗೆ ನರದ ಸಮಸ್ಯೆಯಿಂದ ಕತ್ತಿನ ಭಾಗದಲ್ಲಿ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಕತ್ತಿನ ಭಾಗದಲ್ಲಿ ಶಸ್ತ್ರಚಿಕಿತ್ಸೆ ನಡೆದಿದೆ ಎಂದು ವರದಿಯಾಗಿದೆ.

ಈ ಮೊದಲೇ ಅವರು ಇದಕ್ಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಿತ್ತು. ಆದರೆ ಇದು ಆಗಿರಲಿಲ್ಲ. ಈಗ ಅವರಿಗೆ ಕತ್ತಿನ ಭಾಗದಲ್ಲಿ ಸರ್ಜರಿ ನಡೆದಿದೆ. ಅವರು ಬೇಗ ಹುಷಾರ್ ಆಗಿ ಬರಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

Continue Reading

FILM

ಹುಡುಗಿಯನ್ನು ಹೊಗಳುವ ಭರದಲ್ಲಿ ಯಡವಟ್ಟು; ರಕ್ಷಕ್ ಬುಲೆಟ್ ವಿರುದ್ದ ದೂರು ದಾಖಲು ?

Published

on

ಮಂಗಳೂರು/ಬೆಂಗಳೂರು: ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಅವರ ಪುತ್ರ, ಮಾಜಿ ಬಿಗ್ ಬಾಸ್ ಸ್ಪರ್ಧಿ ರಕ್ಷಕ್ ಬುಲೆಟ್‌ ಪ್ರಕಾಶ್, ಇದೀಗ ಏನೋ ಮಾಡಲು ಹೋಗಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ರಕ್ಷಕ್ ಅವಹೇಳನಕಾರಿಯಾಗಿ ಮಾತನಾಡಿದ್ದು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು.


ರಕ್ಷಕ್ ಬುಲೆಟ್ ಪ್ರಕಾಶ್ ಸ್ಯಾಂಡಲ್‌ವುಡ್‌ನಲ್ಲಿ ನೆಲೆ ನಿಲ್ಲಲು ಪ್ರಯತ್ನ ಮಾಡುತ್ತಿದ್ದಾರೆ. ಬಿಗ್ ಬಾಸ್ ಬಳಿಕ ಮತ್ತೊಂದು ರಿಯಾಲಿಟಿ ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದು ಜನರಿಗೆ ಹತ್ತಿರವಾಗಲು ಸರ್ಕಸ್ ಮಾಡುತ್ತಿದ್ದಾರೆ. ದರ್ಶನ್ ಅಭಿಮಾನಿ ಎಂದೇ ಗುರುತಿಸಿಕೊಳ್ಳುವ ಅವರು, ಇದೀಗ ದರ್ಶನ್‌ ಅಭಿನಯದ ಸಿನಿಮಾವೊಂದರ ಡೈಲಾಗ್‌ನಿಂದಲೇ ಜನಾಕ್ರೋಶಕ್ಕೆ ಗುರಿಯಾಗಿದ್ದಾರೆ.

ಏನಿದು ವಿವಾದ ?
ಖಾಸಗಿ ಶೋನಲ್ಲಿ ರಕ್ಷಕ್ ಬುಲೆಟ್ ಅವರು ದರ್ಶನ್ ತೂಗುದೀಪ ಅಭಿನಯದ ಬುಲ್ ಬುಲ್ ಸಿನಿಮಾದ ದೃಶ್ಯವನ್ನು ಮರುಸೃಷ್ಟಿಸಲು ಹೋಗಿ ಎಡವಟ್ಟು ಮಾಡಿಕೊಂಡಿದ್ದಾರೆ. ರಮೋಲಾ ಜೊತೆ ಸಿನಿಮಾದ ಡೈಲಾಗ್ ಹೇಳುವಾಗ ಚಾಮುಂಡೇಶ್ವರಿ ತಾಯಿಗೆ ಅವಮಾನ ಮಾಡಿದ್ದಾರೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.

ಇದನ್ನೂ ಓದಿ: ಹಬ್ಬಕ್ಕೆಂದು ಊರಿಗೆ ಹೋಗುತ್ತೀರಾ..? ಹಾಗಾದರೆ ಬಸ್ ಟಿಕೆಟ್ ದರ ಎಷ್ಟಿದೆ ನೋಡಿ

ಬುಲ್ ಬುಲ್ ಸಿನಿಮಾದಲ್ಲಿ ದರ್ಶನ್‌ ರಚಿತಾ ರಾಮ್‌ರನ್ನು ಸ್ವಿಟ್ಜರ್ಲೆಂಡ್‌ನಲ್ಲಿ ಭೇಟಿಯಾದಾಗ ಹೊಡೆಯುವ ಡೈಲಾಗ್‌ ಅನ್ನೇ ರಕ್ಷಕ್ ಬುಲೆಟ್ ಹೇಳಿದ್ದಾರೆ ‘ನಿಮ್ಮನ್ನ ನೋಡ್ತಾ ಇದ್ದ ಹಾಗೆಯೇ ಅಂದುಕೊಂಡೆ. ತಾಯಿ ಚಾಮುಂಡೇಶ್ವರಿನೇ ಬೆಟ್ಟದಿಂದ ಇಳಿದು, ಸೀರೆ-ಒಡವೆ ಎಲ್ಲಾ ಬಿಚ್ಚಿಟ್ಟು, ಪ್ಯಾಂಟು-ಶರ್ಟು ಹಾಕಿಕೊಂಡು ಸ್ವಿಜರ್ಲೆಂಡ್‌ನಲ್ಲಿ ಒಳ್ಳೇ ಟ್ರಿಪ್‌ ಹೊಡೀತಾ ಇದ್ದಾರೆ ಅಂತಾ’ ಎನ್ನುವ ಡೈಲಾಗ್‌ ಇದೀಗ ವಿವಾದದ ಕಿಡಿ ಹೊತ್ತಿಸಿದೆ.

ರಕ್ಷಕ್ ಬುಲೆಟ್‌ ಏನೋ ಉತ್ಸಾಹದಲ್ಲೇ ಡೈಲಾಗ್ ಹೊಡೆದಿದ್ದಾರೆ. ಆದರೆ ‘ಚಾಮುಂಡೇಶ್ವರಿ ಸೀರೆ ಒಡವೆ ಬಿಚ್ಚಿಟ್ಟು ಪ್ಯಾಂಟು ಶರ್ಟ್ ಹಾಕಿಕೊಂಡು’ ಎನ್ನುವ ಸಾಲುಗಳೇ ವಿವಾದಕ್ಕೆ ಕಾರಣವಾಗಿದೆ.

ರಕ್ಷಕ್ ಬುಲೆಟ್ ವಿರುದ್ದ ಹಿಂದೂ ಕಾರ್ಯಕರ್ತ ಮಹೇಶ್ ಎಂಬುವವರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರಿಗೆ ದೂರು ಸಲ್ಲಿಸುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page