Connect with us

LATEST NEWS

ಕೊನೆಗೂ ಬಯಲಾಯ್ತು ಮುಂಬೈ ಬಸ್ ದು*ರಂತದ ಅಸಲಿ ಕಾರಣ !!

Published

on

ಮಂಗಳೂರು/ಮುಂಬೈ: ಚಾಲಕನ ನಿರ್ಲಕ್ಷ್ಯದಿಂದ ಭೀ*ಕರವಾಗಿ ಬಸ್ ಅ*ಪಘಾತಕ್ಕೀಡಾದ ಘಟನೆ ಮುಂಬೈನ ಕುರ್ಲಾದಲ್ಲಿ ಸೋಮವಾರ (ಡಿ.9) ನಡೆದಿತ್ತು. ಅ*ಪಘಾತದಲ್ಲಿ ಸುಮಾರು 7 ಜನರು ದು*ರ್ಮರಣಕ್ಕೀಡಾಗಿದ್ದು, 50ಕ್ಕೂ ಹೆಚ್ಚು ಮಂದಿ ಗಾ*ಯಗೊಂಡಿದ್ದರು. ಗಾ*ಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಇನ್ನೂ ಚಿ*ಕಿತ್ಸೆ ನೀಡಲಾಗುತ್ತಿದೆ. ಅ*ಪಘಾಟದಲ್ಲಿ ಮೃ*ತರಾದ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಸ್‌ಸಿ) ಘೋಷಿಸಿದೆ.

ಅ*ಪಘಾತ ಸಂಭವಿಸಿದ್ದು ಹೇಗೆ?

ಇರಲಿಲ್ಲ. ಮೊದಲು ಸಂಜಯ್ ಮಿನಿ ಬಸ್ ಓಡಿಸುತ್ತಿದ್ದ. ಈ ಬಸ್ಸುಗಳು ಕ್ಲಚ್, ಬ್ರೇಕ್ ಮತ್ತು ವೇಗವರ್ಧಕವನ್ನು ಹೊಂದಿದ್ದವು. ಅದೇ ರೀತಿ 10 ದಿನಗಳ ತರಬೇತಿಯ ನಂತರ ಸಂಜಯ್ ಗೆ ನೇರವಾಗಿ ದೊಡ್ಡ ಬಸ್ ಓಡಿಸುವ ಕೆಲಸಕ್ಕೆ ಸೇರಿದ್ದಾನೆ. ಅ*ಪಘಾತದ ಸಮಯದಲ್ಲಿ, ಆರೋಪಿ ಬ್ರೇಕ್ ಬದಲಿಗೆ ಕ್ಲಚ್ ಆಕ್ಸಿಲರೇಟರ್ ಅನ್ನು ಒತ್ತಿದ ಕಾರಣದಿಂದಾಗಿ ಬಸ್ ನಿಲ್ಲುವ ಬದಲು ವೇಗವನ್ನು ಹೆಚ್ಚಾಗಿ ಅ*ಪಘಾತ ಸಂಭವಿಸಿದ ರಸ್ತೆಯಲ್ಲಿ ಜನಸಂದಣಿಯನ್ನು ನೋಡಿದ ಸಂಜಯ್, ಅನಿಯಂತ್ರಿತ ಬಸ್ ಅನ್ನು ನಿಲ್ಲಿಸಲು ಬಸ್ ಅನ್ನು ಭದ್ರತಾ ಗೋಡೆಗೆ ಡಿ*ಕ್ಕಿ ಹೊಡೆಸಿದ್ದಾನೆ.

ಇದನ್ನೂ ಓದಿ : ಅಡ್ಡಾದಿಡ್ಡಿ ಬಸ್ ಚಾಲನೆ; ಮುಂಬೈನಲ್ಲಿ ಅ*ಪಘಾತ; 6 ಸಾ*ವು, 49 ಮಂದಿಗೆ ಗಾ*ಯ

 

ಪೊಲೀಸರ ವಶವಾದ ಆರೋಪಿಗಳು :

ಬಸ್ ಅ*ಪಘಾತದ ತನಿಖೆಗಾಗಿ ಬೆಸ್ಟ್ ಎಂಟರ್‌ಪ್ರೈಸಸ್ ಮಂಗಳವಾರ (ಡಿ. 11) ಸಮಿತಿಯನ್ನು ರಚಿಸಿದೆ ಎನ್ನಲಾಗಿದೆ. ನ್ಯಾಯಾಲಯವು ಬಸ್ ಚಾಲಕನನ್ನು ಡಿಸೆಂಬರ್ 21 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ತನಿಖಾ ಸಮಿತಿಯು ಮುಖ್ಯ ವ್ಯವಸ್ಥಾಪಕ (ಸಾರಿಗೆ) ರಮೇಶ್ ಮಾದವಿ ಅವರ ನೇತೃತ್ವದಲ್ಲಿರುತ್ತದೆ. ಅ*ಪಘಾತದಲ್ಲಿ ಗಾ*ಯಗೊಂಡ ವ್ಯಕ್ತಿಗಳ ಚಿ*ಕಿತ್ಸೆಯ ವೆಚ್ಚವನ್ನು ಸಹ ಬೆಸ್ಟ್ ಭರಿಸಲಿದೆ. ಇದೇ ವೇಳೆ ಬಿಜೆಪಿ ನಿಯೋಗ ಬೆಸ್ಟ್ ಜನರಲ್ ಮ್ಯಾನೇಜರ್ ಅನಿಲ್ ಡಿಗ್ಗಿಕರ್ ಅವರನ್ನು ಭೇಟಿ ಮಾಡಿ ಮೃ*ತರ ಕುಟುಂಬಕ್ಕೆ ತಲಾ 10 ಲಕ್ಷ ಹಾಗೂ ಗಾ*ಯಗೊಂಡವರಿಗೆ 50 ಸಾವಿರದಿಂದ 2 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ

LATEST NEWS

ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ ಹೊಸ ಟೋಲ್ ರೇಟ್ ..! ಎಷ್ಟು ಹೆಚ್ಚಾಗಲಿದೆ ಗೊತ್ತಾ ?

Published

on

ಮಂಗಳೂರು/ನವದೆಹಲಿ : ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ  ಸರ್ಕಾರ ಮತ್ತೊಂದು ಶಾ*ಕ್ ಕೊಟ್ಟಿದೆ. ಟೋಲ್ ದರದಲ್ಲಿ ಏರಿಕೆ ಮಾಡುವ ಬಗ್ಗೆ ಪರಿಷ್ಕರಣೆ ನಡೆಸಲಾಗಿದೆ. ಏಪ್ರಿಲ್ 1 ರಿಂದ ಈ ಹೊಸ ದರ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ.

ಬೆಲೆ ಏರಿಕೆ, ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಮಾಡುವ ದರ ಪರಿಷ್ಕರಣೆ ಪ್ರಕ್ರಿಯೆ ಇದಾಗಿದ್ದು, ಕನಿಷ್ಠ ಶೇ.3 ರಿಂದ ಗರಿಷ್ಠ 5 ರಷ್ಟು ಏರಿಕೆಯಾಗಲಿವೆ.

ಎಲ್ಲೆಲ್ಲಿ ಹೆಚ್ಚಳ ?

ಕರ್ನಾಟಕದಲ್ಲಿ ಒಟ್ಟು 66 ಟೋಲ್ ಪ್ಲಾಜಾಗಳಿವೆ. ಬೆಂಗಳೂರು – ಮೈಸೂರು ಮಾರ್ಗದ ಕನಮಿಣಿಕೆ ಮತ್ತು ಶೇಷಗಿರಿಹಳ್ಳಿ, ಬೆಂಗಳೂರು – ತಿರುಪತಿ ಮಾರ್ಗದ ನಂಗ್ಲಿ, ಬೆಂಗಳೂರು-ಹೈದರಾಬಾದ್ ಮಾರ್ಗದ ಬಾಗೇಪಲ್ಲಿ, ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯ ಸಾದಹಳ್ಳಿ, ಮತ್ತು ಹುಲಿಕುಂಟೆ ಹಾಗೂ ನಲ್ಲೂರು ದೇವನಹಳ್ಳಿ (ಸ್ಯಾಟಲೈಟ್ ಟೌನ್ ರಿಂಗ್ ರೋಡ್) ಟೋಲ್ ಪ್ಲಾಜಾಗಳಲ್ಲಿ ದರಗಳು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ : ಅಮೆರಿಕದ ಮಿಲಿಟರಿಯಲ್ಲೇ ಭಾರಿ ದೊಡ್ಡ ಭದ್ರತಾ ಲೋಪ!

ದೇಶದಾದ್ಯಂತ ಒಟ್ಟು 323 ರಾಜ್ಯ ಹೆದ್ದಾರಿ ಟೋಲ್ ಫ್ಲಾಜಾ ಸೇರಿದಂತೆ, ದೇಶದಲ್ಲಿ ಒಟ್ಟು 1,181 ಟೋಲ್ ಗಳಿವೆ. 2023-24 ರಲ್ಲಿ 42,196 ಕೋಟಿ ರೂ, 2024-25 ರಲ್ಲಿ 64,809 ಕೋಟಿ ರೂ. ಟೋಲ್‌ ಸಂಗ್ರಹವಾಗಿದೆ. 2019-20 ರಲ್ಲಿ ಟೋಲ್ ಶುಲ್ಕ ಸಂಗ್ರಹವು 27,503 ಕೋಟಿ ರೂ.ಗಳಷ್ಟಿತ್ತು. ಈ ವರ್ಷ 1 ಲಕ್ಷ ಕೋಟಿಗೆ ಏರಿಕೆ ಮಾಡುವ ಗುರಿ ಹೊಂದಲಾಗಿದೆ.  ಕರ್ನಾಟಕದಲ್ಲಿ 66 ಟೋಲ್ ಫ್ಲಾಜಾಗಳಿದ್ದು, ಕಳೆದ 5 ವರ್ಷಗಳಲ್ಲಿ ಈ ಟೋಲ್‌ಗಳಿಂದ 13,702 ಕೋಟಿ ಸಂಗ್ರಹವಾಗಿದೆ.

 

Continue Reading

BANTWAL

ಎರಡನೇ ವರ್ಷದ ಮೂಳೂರು-ಅಡ್ಡೂರು ಕಂಬಳದ ಆಹ್ವಾನ ಪತ್ರಿಕೆ ಬಿಡುಗಡೆ

Published

on

ಮಂಗಳೂರು: ಎರಡನೇ ವರ್ಷದ ಮೂಳೂರು-ಅಡ್ಡೂರು ಜೋಡು ಕರೆ ಕಂಬಳ ಎಪ್ರಿಲ್ 12 ರ ಶನಿವಾರ ನಡೆಯಲಿದೆ.


ಸಮಾಜ ಸೇವಕ ಹಾಗೂ ರಾಜಕೀಯ ನಾಯಕ ಇನಾಯತ್ ಅಲಿಯವರ ನೇತೃತ್ವದಲ್ಲಿ ಈ ಕಂಬಳ ಆಯೋಜನೆಯಾಗಿದೆ. ವಿಜೃಂಭಣೆಯಿಂದ ನಡೆಯುವ ಮೂಳುರು-ಅಡ್ಡೂರು ಜೋಡುಕರೆ ಕಂಬಳದ ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಲಾಗಿದೆ.

ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರ ಸಮಕ್ಷಮದಲ್ಲಿ ಅಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಗಿದೆ. ಎರಡನೇ ವರ್ಷದ ಕಂಬಳವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಮಾಡಲಿದ್ದಾರೆ.

ಇದನ್ನೂ ಓದಿ: ಈ ದಿನದಂದು ನಿಮ್ಮ ಖಾತೆಗೆ ಸೇರಲಿದೆ 2 ತಿಂಗಳ ಗೃಹಲಕ್ಷ್ಮೀ ಹಣ 

ಸರ್ವ ಧರ್ಮಗಳ ಪ್ರಮುಖರ ಶುಭಾಶೀರ್ವಾದದೊಂದಿಗೆ ಕಾರ್ಯಕ್ರಮ ಉದ್ಘಾಟನೆಯಾಗಲಿದ್ದು, ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸ್ಪೀಕರ್ ಯು.ಟಿ. ಖಾದರ್, ಸಚಿವ ದಿನೇಶ್ ಗುಂಡೂರಾವ್ ಅವರು ಭಾಗವಹಿಸಲಿದ್ದಾರೆ. ಹಲವಾರು ಚಲನ ಚಿತ್ರ ನಟ ನಟಿಯರು ಕೂಡಾ ಸಂಜೆಯ ಸಭಾ ಕಾರ್ಯಕ್ರಮಕ್ಕೆ ಆಗಮಿಸಲಿರುವುದಾಗಿ ಕಂಬಳ ಸಮಿತಿಯ ಅಧ್ಯಕ್ಷ ಇನಾಯತ್ ಅಲಿ ಮಾಹಿತಿ ನೀಡಿದ್ದಾರೆ.

Continue Reading

LATEST NEWS

ಆಟವಾಡುತ್ತಿದ್ದಾಗ ಟ್ರ್ಯಾಕ್ಟರ್‌ ಹರಿದು 5 ವರ್ಷದ ಮಗು ಸಾವು

Published

on

ತುಮಕೂರು: ಮನೆ ಮುಂದೆ ಆಟವಾಡುತ್ತಿದ್ದ‌ 5 ವರ್ಷದ ಬಾಲಕನ ಮೇಲೆ ಮಣ್ಣು ತುಂಬಿದ ಟ್ರ್ಯಾಕ್ಟರ್‌ ಹರಿದು 5 ವರ್ಷದ ಮಗು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ವರುಣ್ (5) ಸಾವನ್ನಪ್ಪಿದ ಮಗು ಎಂದು ಗುರುತಿಸಲಾಗಿದೆ.

ಮನೆಯ ಎದುರುಗಡೆ ಮಗು ಆಟವಾಡುತ್ತಿತ್ತು. ಆಗ ಮಣ್ಣು ತುಂಬಿದ ಟ್ರ್ಯಾಕ್ಟರ್ ಒಂದು ವೇಗವಾಗಿ ಬಂದು ಮಗುವಿನ ಮೇಲೆ ಹರಿದು ಹೋಗಿದೆ. ಪರಿಣಾಮ ಮಗು ಸಾವನ್ನಪ್ಪಿದೆ. ವೈಎನ್ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page