Connect with us

LATEST NEWS

24 ಕೋ. ಮೌಲ್ಯದ ಡ್ರ*ಗ್ಸ್ ಮಾರಾಟ ಮಾಡುತ್ತಿದ್ದ ಮಹಿಳೆ ಕೊನೆಗೂ ಸಿ.ಸಿ.ಬಿ ಕೈವಶ

Published

on

ಬೆಂಗಳೂರು: ಬೆಂಗಳೂರಿನಲ್ಲಿ ವಿದೇಶಿ ಮಹಿಳೆಯೊಬ್ಬರಿಂದ 24 ಕೋಟಿ ಮೌಲ್ಯದ 12 ಕೆಜಿ ಡ್ರ*ಗ್ಸ್ ಮಾರಾಟ ಮಾಡುತ್ತಿದ್ದು, ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಮಾ*ದಕ ದ್ರವ್ಯ ನಿಗ್ರಹ ದಳ ಇಂದು (ಡಿ.17) ಸೆರೆ ಹಿಡಿದಿದೆ.

ಸಿಸಿಬಿ ಮಾ*ದಕ ದ್ರವ್ಯ ನಿಗ್ರಹ ದಳ ಹಾಗೂ ಕೆ.ಆರ್‌.ಪುರಂ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ, ಡ್ರ*ಗ್ಸ್‌ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ 40 ವರ್ಷದ ಮಹಿಳೆಯನ್ನು ಬಂಧಿಸಿದ್ದು, 24 ಕೋಟಿ ಮೌಲ್ಯದ ಮಾ*ದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಬಂಧಿತ ವಿದೇಶಿ ಮಹಿಳೆಯ ಬಳಿ ಇದ್ದ, 12 ಕೆಜಿ ನಿಷೇಧಿದ ಎಂಡಿಎಂಎ, ಒಂದು ಮೊಬೈಲ್, 70 ಏರ್ಟೆಲ್ ಸಿಮ್ ಕಾರ್ಡ್ ಗಳನ್ನು ಜಪ್ತಿ ಮಾಡಲಾಗಿದೆ. ಇವುಗಳ ಮೌಲ್ಯ ಒಟ್ಟು 24 ಕೋಟಿ ರೂ. ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ತಿಳಿಸಿದ್ದಾರೆ.

ಬೆಂಗಳೂರಿನ ಟಿಸಿ ಪಾಳ್ಯದಲ್ಲಿ ತಂಗಿದ್ದ ವಿದೇಶಿ ಮಹಿಳೆಯ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಲಾಗಿದೆ.ಈ ಘಟನೆಯನ್ನಾಧರಿಸಿ ಬಂಧಿತ ಮಹಿಳೆಯ ಹಿಂದೆ ಒಂದು ತಂಡವೇ ಇದ್ದು, ಅದರ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LATEST NEWS

ಎಸ್‌. ಜೈಶಂಕರ್‌ಗೆ ಬುಲೆಟ್ ಪ್ರೂಫ್‌ ಕಾರು; ಹೇಗಿರಲಿದೆ ವಿದೇಶಾಂಗ ಸಚಿವರ ನೂತನ ಭದ್ರತಾ ವ್ಯವಸ್ಥೆ

Published

on

ಮಂಗಳೂರು/ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಮುಂದುವರೆದಿದ್ದು, ಭಾರತದ ವಿದೇಶಾಂಗ ಸಚಿವ ಎಸ್‌ ಜೈಶಂಕರ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಹೌದು, ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರ ಭದ್ರತೆಯನ್ನು ಗೃಹ ಸಚಿವಾಲಯ ಹೆಚ್ಚಿಸಲಾಗಿದೆ. ಈಗಾಗಲೇ ಇರುವ ಝಡ್ ಭದ್ರತೆ ಜತೆಗೆ ಬುಲೆಟ್​ ಪ್ರೂಫ್​ ಕಾರು ಕೂಡ ಸರ್ಕಾರ ಒದಗಿಸಲಿದೆ. ದೆಹಲಿಯಲ್ಲಿರುವ ಅವರ ನಿವಾಸದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ.

ಎಸ್ ಜೈಶಂಕರ್ ಅವರಿಗೆ ಈಗಾಗಲೇ ಗೃಹ ಸಚಿವಾಲಯವು Z- ವರ್ಗದ ಭದ್ರತೆಯನ್ನು ಹೊಂದಿದ್ದು, ಇದನ್ನು ಇದನ್ನು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಕಮಾಂಡೋಗಳು ಒದಗಿಸುತ್ತಿದ್ದು, ರಕ್ಷಣೆಗಾಗಿ 33 ಕಮಾಂಡೋಗಳ ತಂಡವನ್ನು 24/7 ನಿಯೋಜಿಸಲಾಗಿದೆ.

ಪಹಲ್ಲಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂದೂ‌ರ್ ನಂತರ ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚಿದ ಮಿಲಿಟರಿ ಉದ್ವಿಗ್ನತೆಯ ನಡುವೆ ಭದ್ರತೆ ಬಿಗಿ ಗೊಳಿಸಲಾಗಿದೆ.

ಇದನ್ನೂ ಓದಿ: ‘ಆಪರೇಷನ್‌ ಸಿಂದೂರ್’ ನಂತರದ ಮುಂದಿನ ಕ್ರಮದ ಕುರಿತು ಇಂದು ಮಹತ್ವದ ಸಭೆ

ಹೇಗಿರಲಿದೆ ವಿದೇಶಾಂಗ ಸಚಿವರ ನೂತನ ಭದ್ರತಾ ವ್ಯವಸ್ಥೆ?
Z- ವರ್ಗದ ಭದ್ರತೆಯು ಭಾರತದಲ್ಲಿ ಮೂರನೇ ಅತ್ಯುನ್ನತ ಭದ್ರತೆಯಾಗಿದೆ. ಅದರಲ್ಲಿ 22 ಸೈನಿಕರಿರುತ್ತಾರೆ. ಇವರಲ್ಲಿ 4 ರಿಂದ 6 ಎನ್‌ಎಸ್‌ಜಿ ಕಮಾಂಡೋಗಳು ಮತ್ತು ಸ್ಥಳೀಯ ಪೊಲೀಸರು ಸೇರಿದ್ದಾರೆ. ಇದು ಬುಲೆಟ್​ ಪ್ರೂಫ್​ ಕಾರನ್ನು ಸಹ ಹೊಂದಿದೆ. ಹೆಚ್ಚುವರಿಯಾಗಿ, ಬೆಂಗಾವಲು ಪಡೆಗಳನ್ನು ಸಹ ಒದಗಿಸಲಾಗುತ್ತದೆ. ಈ ಭದ್ರತೆಯನ್ನು ಹೆಚ್ಚಿನ ಭದ್ರತೆಯ ಅಗತ್ಯವಿರುವ ದೊಡ್ಡ ನಾಯಕರು ಮತ್ತು ಸೆಲೆಬ್ರಿಟಿಗಳಿಗೆ ನೀಡಲಾಗುತ್ತದೆ. ಅಕ್ಟೋಬರ್ 2023 ರಲ್ಲಿ, ಜೈಶಂಕರ್ ಅವರ ಭದ್ರತೆಯನ್ನು ಹೆಚ್ಚಿಸಲಾಯಿತು. ಈ ಹಿಂದೆ ಅವರಿಗೆ ವೈ-ಕೆಟಗರಿ ಭದ್ರತೆಯನ್ನು ಒದಗಿಸಲಾಗಿತ್ತು.

ವಿದೇಶಾಂಗ ಸಚಿವರಿಗೆ ಇರುವ ಬೆದರಿಕೆಯನ್ನು ನಿರ್ಣಯಿಸಿದ ನಂತರ ಅಕ್ಟೋಬರ್ 2023ರಲ್ಲಿ ಅವರ ಭದ್ರತೆಯನ್ನು Y- ವರ್ಗದಿಂದ Z- ವರ್ಗಕ್ಕೆ ಹೆಚ್ಚಿಸಲಾಗಿತ್ತು.

Continue Reading

LATEST NEWS

6 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಮೈಕ್ರೋಸಾಫ್ಟ್

Published

on

ನವದೆಹಲಿ: ಟೆಕ್ ದಿಗ್ಗಜ ಮೈಕ್ರೋಸಾಫ್ಟ್ 6,000 ಉದ್ಯೋಗಿಗಳನ್ನು ವಜಾಗೊಳಿಸಿದೆ.

ವಜಾಗೊಳಿಸುವಿಕೆಯು ಎಲ್ಲಾ ಹಂತಗಳು ಮತ್ತು ಭೌಗೋಳಿಕ ಪ್ರದೇಶಗಳ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ. ಆದರೆ ನಿರ್ವಹಣಾ ಮಟ್ಟವನ್ನು ಕಡಿಮೆ ಮಾಡುವತ್ತ ಗಮನಹರಿಸುತ್ತದೆ ಎಂದು ಕಂಪನಿಯು ಹೇಳಿಕೆಯಲ್ಲಿ ತಿಳಿಸಿದೆ. ಮಂಗಳವಾರ ಸೂಚನೆಗಳನ್ನು ಹೊರಡಿಸಲಾಗಿದೆ.

ಮೈಕ್ರೋಸಾಫ್ಟ್ ಎರಡು ವಾರಗಳ ಹಿಂದೆ ಜನವರಿಯಿಂದ ಮಾರ್ಚ್ ಅವಧಿಯ ದೃಢವಾದ ತ್ರೈಮಾಸಿಕ ಫಲಿತಾಂಶಗಳನ್ನು ಪ್ರಕಟಿಸಿತು. ಇದು ತನ್ನ ಕೌಡ್ ಕಂಪ್ಯೂಟಿಂಗ್ ಮತ್ತು ಕೃತಕ ಬುದ್ಧಿಮತ್ತೆ ವ್ಯವಹಾರಗಳಲ್ಲಿ ಬಲವಾದ ಕಾರ್ಯಕ್ಷಮತೆಯಿಂದ ಪ್ರೇರಿತವಾಗಿದೆ.

Continue Reading

DAKSHINA KANNADA

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Published

on

ಮಂಗಳೂರು: ಮಾವಿನ ಹಣ್ಣನ್ನು ಲೋಡ್ ಮಾಡಿಕೊಂಡು ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಘಟನೆ ಮಂಗಳೂರಿನ ಪಚ್ಚನಾಡಿ ಬೋಂದೆಲ್ ರಸ್ತೆಯಲ್ಲಿ ನಡೆದಿದೆ.

ಲಾರಿಯು ಉಡುಪಿಯಲ್ಲಿ ನಡೆಯಲಿರುವ ಮಾವು ಮೇಳಕ್ಕೆ ಹೋಗುತ್ತಿತ್ತು. ಈ ವೇಳೆ ವಾಮಂಜೂರು ಕಡೆಯಿಂದ ಪಚ್ಚನಾಡಿ ಕಡೆ ಸಂಚರಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಇದನ್ನೂ ಓದಿ: ಮಲ್ಪೆ ಬಂದರಿನಲ್ಲಿ ಬಾಂಬ್ ಸ್ಪೋ*ಟ, ಐವರಿಗೆ ಗಂ*ಭೀರ ಗಾಯ

ಘಟನೆಯಲ್ಲಿ ಲಾರಿ ಚಾಲಕ ರಫೀಕ್ ಉಳಾಯಿಬೆಟ್ಟು ಅವರಿಗೆ ಗಾಯಗಳಾಗಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಚಾಲಕ ನಗರದ‌ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page