Connect with us

BELTHANGADY

ಬೆಳ್ತಂಗಡಿ: ದಿನಸಿ ಅಂಗಡಿಗೆ ನುಗ್ಗಿ ನಗದು ಸೇರಿ ಇನ್ನಿತರ ವಸ್ತುಗಳನ್ನು ದೋಚಿದ ಕಳ್ಳರು

Published

on

ಬೆಳ್ತಂಗಡಿ: ದಿನಸಿ ಅಂಗಡಿಗೆ ಕಳ್ಳರು ನುಗ್ಗಿ ನಗದು ಸೇರಿ ಇನ್ನಿತರ ವಸ್ತುಗಳನ್ನು ಕಳ್ಳತನ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಓಡೀಲು ಎಂಬಲ್ಲಿ ಫೆ.10 ರಂದು ರಾತ್ರಿ ನಡೆದಿದೆ.

ಹರೀಶ್ ಕುಲಾಲ್ ಎಂಬುವವರಿಗೆ ಸೇರಿದ ದಿನಸಿ ಅಂಗಡಿ ಇದಾಗಿದ್ದು, ನಿನ್ನೆಯ ದಿನ ರಾತ್ರಿ ಕಳ್ಳರು ಅಂಗಡಿಗೆ ಹಾಕಿದ್ದ ಬೀಗವನ್ನು ಮುರಿದು ಒಳಗೆ ಹೋದಿ ಅಂಗಡಿಯಲ್ಲಿದ್ದ ಹಲವಾರು ವಸ್ತುಗಳನ್ನು ಬಾಚಿಕೊಂಡು ಹೋಗಿದ್ದಾರೆ.

ಇಂದು ಮುಂಜಾನೆ ಈ ಘಟನೆ ಬೆಳಕಿಗೆ ಬಂದಿದೆ. ಅಂಗಡಿಗೆ ಸಿಸಿ ಕ್ಯಾಮೆರಾವನ್ನು ಅಳವಡಿಸಲಾಗಿದ್ದು ಘಟನೆಯ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

BELTHANGADY

ಬೈಕ್ ಮೇಲೆ ಮರದ ಗೆಲ್ಲು ಬಿದ್ದು ಸವಾರ ಸಾವು

Published

on

ಬೆಳ್ತಂಗಡಿ : ಬೈಕ್ ಮೇಲೆ ಮರದ ಗೆಲ್ಲು ಮುರಿದು ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಿನ್ನೆ (ಮಾ.20) ರಾತ್ರಿ ಬೆಳ್ತಂಗಡಿಯ ಗೇರುಕಟ್ಟೆ ಜಾರಿಗೆಬೈಲಿನ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಬೆಳಾಲು ಗ್ರಾಮದ ನಿವಾಸಿ ಪ್ರವೀಣ್‌ (25) ಮೃತ ಯುವಕ ಎಂದು ಗುರುತಿಸಲಾಗಿದೆ.

ಮಂಗಳೂರಿನ ಖಾಸಗಿ ಬ್ಯಾಂಕ್ ಒಂದರಲ್ಲಿ ಲೋನ್ ಸೆಕ್ಷನ್ ನಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ್ ಕೆಲಸ ಮುಗಿಸಿಕೊಂಡು ಉಪ್ಪಿನಂಗಡಿ ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ಮರದ ಗೆಲ್ಲು ಮುರಿದು ಅವರ ಬೈಕ್ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡ ಪ್ರವೀಣ್‌ನನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ ಅದಾಗಲೇ ಪ್ರವೀಣ್ ಮೃತಪಟ್ಟಿದ್ದರು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Continue Reading

BELTHANGADY

ಬೆಳ್ತಂಗಡಿಯ 15 ಆದಿವಾಸಿ ಸಹಿತ 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ

Published

on

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿದಂತೆ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 27ರಂದು ನಡೆದ ಸಭೆಯಲ್ಲಿ ಆದಿವಾಸಿಗಳು ನೆಲೆಸಿರುವ ಅರಣ್ಯ ಪ್ರದೇಶದ ವಸತಿ ಪ್ರದೇಶಗಳಿಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್ ಮಾರ್ಗ ಅಳವಡಿಕೆಗೆ ಅರಣ್ಯ ಭೂಮಿ ಪರಿವರ್ತನೆಗಾಗಿ ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಹಾಕಿಸಿ, ಅನುಮತಿ ಪಡೆಯಲು ಕ್ರಮ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ್ದರು.

Continue Reading

BELTHANGADY

ಭಾರೀ ಮಳೆಗೆ ಬೆಳ್ತಂಗಡಿಯಲ್ಲಿ ಧರೆಗುರುಳಿದ 131 ವಿದ್ಯುತ್ ಕಂಬಗಳು

Published

on

ಬೆಳ್ತಂಗಡಿ: ಕಳೆದ ಒಂದು ವಾರದಿಂದ ವಾತಾವರಣದ ಉಷ್ಣತೆಯು ವಿಪರೀತ ಏರಿಕೆಯಾಗಿತ್ತು. ಆದರೆ ಬಿಸಿಯ ಗಾಳಿಗೆ ತತ್ತರಿಸಿ ಹೋಗಿದ್ದ ಜನರಿಗೆ ಇದೀಗ ವರುಣದೇವ ತಂಪೆರೆದಿದ್ದಾನೆ. ರಾಜ್ಯದ ಹಲವು ಭಾಗಗಳಲ್ಲಿ ಈಗ ಮಳೆಯ ಆರ್ಭಟ ಜೋರಾಗಿದೆ.

ಕರಾವಳಿಯಲ್ಲೂ ಮಳೆಯ ಸಿಂಚನವಾಗಿದ್ದು, ತಾಲೂಕಿನಾದ್ಯಂತ ಭರ್ಜರಿ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ ಕೆಲ ತಾಲೂಕಿನಲ್ಲಿ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯ ರಭಸಕ್ಕೆ 131 ವಿದ್ಯುತ್ ಕಂಬಗಳು ಧರೆಗುರುಳಿದೆ.

ರಭಸದ ಗಾಳಿಯೊಂದಿಗೆ ಆರ್ಭಟಿಸಿದ ವರ್ಷದ ಮೊದಲ ಮಳೆಗೆ ಬೆಳ್ತಂಗಡಿಯಲ್ಲಿ ಒಟ್ಟು 131 ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ಹೀಗಾಗಿ ತಾಲೂಕಿನೆಲ್ಲೆಡೆ ಕರೆಂಟ್ ಇಲ್ಲದೇ ಜನರು ಪರದಾಡುವಂತೆ ಆಗಿದೆ. ಅಪಾರ ಸಂಖ್ಯೆಯಲ್ಲಿ ಅಡಿಕೆ, ತೆಂಗು, ಬಾಳೆ ಗಿಡಗಳು ತುಂಡಾಗಿ ಅಪಾರ ಪ್ರಮಾಣದ ಕೃಷಿನಷ್ಟ ಉಂಟಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page