Connect with us

DAKSHINA KANNADA

ಕಳ್ಳತನ ಪ್ರಕರಣ ಸಾಬೀತು; ಅಪರಾಧಿಗೆ ಸಾದಾ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ.!

Published

on

ಕಳ್ಳತನ ಪ್ರಕರಣ ಸಾಬೀತು; ಅಪರಾಧಿಗೆ ಸಾದಾ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ.!

ಮಂಗಳೂರು: ಕದ್ರಿ ಠಾಣಾ ವ್ಯಾಪ್ತಿಯ ಮೂರು ಪ್ರತ್ಯೇಕ ಕಳ್ಳತನ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ ಮಂಗಳೂರಿನ 2 ನೇ ಜಿಲ್ಲಾ ಮತ್ತು ಹೆಚ್ಚುವರಿ ಸತ್ರ ನ್ಯಾಯಾಲಯವು ನಾಲ್ಕು ವರುಷಗಳ ಸಾದಾ ಸಜೆ ಹಾಗೂ ದಂಡವನ್ನ ವಿಧಿಸಿ ತೀರ್ಪಿತ್ತಿದೆ.

ರಾತ್ರಿ ಹೊತ್ತಲ್ಲಿ ಮಂಗಳೂರು ನಗರಕ್ಕೆ ಆಗಮಿಸಿ ಕಳ್ಳತನಗೈಯುತ್ತಿದ್ದ ತಮಿಳುನಾಡು ಮೂಲದ ಸೆಲ್ವಕುಮಾರ್ ಅಲಿಯಾಸ್ ರಮೇಶ್ ಎಂಬಾತನ ಅಪರಾಧ ಸಾಬೀತಾದ ಹಿನ್ನೆಲೆ ನ್ಯಾಯಾಲಯವು ಸಾದಾ ಸಜೆಯನ್ನ ವಿಧಿಸಿ ತೀರ್ಪಿತ್ತಿದೆ.

ಕಳ್ಳತನ ಪ್ರಕರಣ ಸಂಬಂಧ ಸೆಲ್ವಕುಮಾರ್ ನನ್ನು ಕದ್ರಿ ಠಾಣಾ ಪೊಲೀಸರು ಅಂದಿನ ಪೊಲಿಸ್ ಇನ್ಸ್ ಪೆಕ್ಟರ್ ಮಾರುತಿ ನಾಯಕ್ ಅವರ ಮಾರ್ಗದರ್ಶನದಲ್ಲಿ ಕಂಕನಾಡಿ ಬಳಿ ಶಂಕಾಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದಾಗ ಬಂಧಿಸಿದ್ದರು.

ಬಂಧಿತನ ವಿಚಾರಣೆ ಸಂದರ್ಭ 2016 ರ ಸೆಪ್ಟಂಬರ್ ತಿಂಗಳಿನಲ್ಲಿ ರಾಶಿ ಕಲೆಕ್ಷನ್ ಹಾಗೂ ಸಿಲ್ಕ್ಸ್ ನಲ್ಲಿ ನಡೆದ 24ಸಾವಿರ ರೂ. ಕಳ್ಳತನ ಹಾಗೂ ಅದೇ ವರುಷದ ನವೆಂಬರ್ ತಿಂಗಳಿನಲ್ಲಿ ತಾಜ್ ಸೈಕಲ್ ನಲ್ಲಿ ನಡೆದ 90 ಸಾವಿರಕ್ಕೂ ಅಧಿಕ ರೂಪಾಯಿಯ ಕಳ್ಳತನ ಹಾಗೂ 2017ರ ಮಾರ್ಚ್ 9 ರಂದು ಅಸ್ಸಾದಿ ಕನ್ ಸ್ಟ್ರಕ್ಶನ್ ನಲ್ಲಿ ನಡೆದ ಎರಡು ಮೊಬೈಲ್ ಕಳ್ಳತನ ಪ್ರಕರಣದಲ್ಲಿ ಈತನ ಕೈವಾಡವಿರುವುದು ಗೊತ್ತಾಗಿತ್ತು.

ಪ್ರಕರಣ ಸಂಬಂಧ ಕದ್ರಿ ಠಾಣಾ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯವನ್ನ ಪ್ರಮುಖ ಸಾಕ್ಷಿಯಾಗಿ ಪರಿಗಣಿಸಿದ ನ್ಯಾಯಾಲಯವು ಪೂರಕ ಸಾಕ್ಷ್ಯಾಧಾರಗಳ ಅನ್ವಯ ನಾಲ್ಕು ವರುಷಗಳ ಸಾದಾ ಜೈಲು ವಾಸ ಹಾಗೂ ಐಪಿಸಿ ಸೆಕ್ಷನ್ 457 ರ ಅನ್ವಯ ಒಂದು ಸಾವಿರ ರೂ. ಹಾಗೂ ಐಪಿಸಿ 380 ರ ಅಪರಾಧದ ಅನ್ವಯ 2ಸಾವಿರ ರೂ. ದಂಡ ವಿಧಿಸಿದೆ.

ಅಲ್ಲದೇ ತಪ್ಪಿದ್ದಲ್ಲಿ ಹೆಚ್ಚುವರಿ ಒಂದು ತಿಂಗಳ ಶಿಕ್ಷೆಯನ್ನ ಅಪರಾಧಿಗೆ ಖಾಯಂ ಗೊಳಿಸಿದೆ. ಸರಕಾರದ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಮೋಹನ್ ಕುಮಾರ್ ವಾದಿಸಿದ್ದರು.

DAKSHINA KANNADA

ಪ್ರಚೋದನಕಾರಿ ಪೋಸ್ಟ್: 4 ಇನ್ಸ್ಟಾಗ್ರಾಂ, 1 ಪೇಸ್ಬುಕ್ ಪೇಜ್ ರದ್ದು

Published

on

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ 4 ಇನ್‌ಸ್ಟಾಗ್ರಾಂ ಹಾಗೂ 1 ಪೇಸ್‌ಬುಕ್ ಪೇಜ್‌ಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ, ಈ ಪೇಜ್‌ಗಳನ್ನು ಡಿಆ್ಯಕ್ಟಿವೇಟ್ ಮಾಡಲಾಗಿದೆ.

“ವಿಎಚ್‌ಪಿ ಬಜರಂಗದಳ ಅಶೋಕನಗರ’ ಮತ್ತು “ಶಂಖನಾದ’ ಇನ್‌ ಸ್ಟಾಗ್ರಾಂ ಪೇಜ್ ವಿರುದ್ಧ ಉರ್ವ ಪೊಲೀಸ್ ಠಾಣೆ, “ಡಿಜೆ ಭರತ್ 2008” ಇನ್‌ಸ್ಟಾಗ್ರಾಂ ಪೇಜ್ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ, “ಕರಾವಳಿ ಅಫೀಶಿಯಲ್ ಇನ್‌ಸ್ಟಾಗ್ರಾಂ ಪೇಜ್ ವಿರುದ್ಧ ಪಾಂಡೇಶ್ವರ ಠಾಣೆ ಮತ್ತು “ಆಶಿಕ್ ಮೈಕಾಲ’ ಫೇಸ್‌ಬುಕ್ ಪೇಜ್ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: WATCH : ಸಿನಿಮೀಯ ರೀತಿಯಲ್ಲಿ ನಡೆದಿತ್ತು ಕಾರ್ ಚೇಸಿಂಗ್! ಸುಹಾಸ್ ಹ*ತ್ಯೆಯ ಮತ್ತೊಂದು ಸಿಸಿ ಟಿವಿ ವೀಡಿಯೋ ವೈರಲ್

ಈ ಪ್ರಕರಣಗಳ ತನಿಖೆಯನ್ನು ಸೆನ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಈವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ಉದ್ರೇಕಕಾರಿ ಮತ್ತು ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ 6 ಇನ್‌ಸ್ಟಾಗ್ರಾಂ ಹಾಗೂ 1 ಪೇಸ್‌ಬುಕ್ ಪೇಜನ್ನು ರದ್ದುಗೊಳಿಸಲಾಗಿದೆ.

Continue Reading

DAKSHINA KANNADA

ಮಂಗಳೂರು: ಬೈಕ್ ಸ್ಕಿಡ್ ಆಗಿ ಸವಾರ ಸಾ*ವು

Published

on

ಮಂಗಳೂರು: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಗಂ*ಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾ*ವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಲ್ಯದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಮೃತರನ್ನು ಸೋಮೇಶ್ವರ ಗ್ರಾಮದ ಪಿಲಾರು ಅಂಬಿಸಾದಿ ನಿವಾಸಿ ಮನೋಜ್ ಗಟ್ಟಿ ಎಂದು ಗುರುತಿಸಲಾಗಿದೆ. ಇಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದ ಮನೋಜ್ ಶುಕ್ರವಾರ ರಾತ್ರಿ ಕೋಟೆಕಾರಿನ ಕೊಂಡಾಣ ಕ್ಷೇತ್ರದ ಕಡೆಯ ಬಂಡಿ ಉತ್ಸವಕ್ಕೆ ತನ್ನ ಬೈಕಲ್ಲಿ ತೆರಳಿದ್ದರು. ರಾತ್ರಿ ವೇಳೆ ವಾಪಸ್ ಆಗುತ್ತಿದ್ದಾಗ ಕೊಲ್ಯದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದಿದೆ.

ಇದನ್ನೂ ಓದಿ: WATCH : ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಹೃದಯಾ*ಘಾತ; ಯುವಕ ಸಾ*ವು

ಇದರಿಂದ ರಸ್ತೆಗೆಸೆಯಲ್ಪಟ್ಟ ಮನೋಜ್ ಅವರು ಗಂ*ಭೀರ ಗಾಯಗೊಂಡಿದ್ದು ಅವರನ್ನು ಸ್ಥಳೀಯರು ತಕ್ಷಣವೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.

Continue Reading

DAKSHINA KANNADA

WATCH : ಸಿನಿಮೀಯ ರೀತಿಯಲ್ಲಿ ನಡೆದಿತ್ತು ಕಾರ್ ಚೇಸಿಂಗ್! ಸುಹಾಸ್ ಹ*ತ್ಯೆಯ ಮತ್ತೊಂದು ಸಿಸಿ ಟಿವಿ ವೀಡಿಯೋ ವೈರಲ್

Published

on

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹ*ತ್ಯೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಬೆಚ್ಚಿ ಬೀಳಿಸಿತ್ತು. ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಈ ನಡುವೆ ಹ*ತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಂದು ಸಿಸಿಟಿವಿ ವೀಡಿಯೋ ವೈರಲ್ ಆಗುತ್ತಿದೆ.

ಸಿನಿಮೀಯ ರೀತಿಯಲ್ಲಿ ಕಾರ್ ಚೇಸಿಂಗ್ : 

ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದ್ದ ಸುಹಾಸ್ ಶೆಟ್ಟಿ ಹತ್ಯೆಯ ವೀಡಿಯೋ, ಸಿಸಿ ಕ್ಯಾಮೆರಾದ ವೀಡಿಯೋ ಈಗಾಗಲೇ ವೈರಲ್ ಆಗಿವೆ. ಇದೀಗ ಮತ್ತೊಂದು ವೀಡಿಯೋ ವೈರಲ್ ಆಗಿದೆ.

ಸಿನಿಮೀಯ ರೀತಿಯಲ್ಲಿ ಕಾರ್ ಚೇಸಿಂಗ್ ಮಾಡಿ ಭೀಕರವಾಗಿ ಸುಹಾಸ್ ಶೆಟ್ಟಿ ಹ*ತ್ಯೆ ಮಾಡಲಾಗಿದೆ. ಕೊ*ಲೆ ಆರೋಪಿ ಸಫ್ವಾನ್ ಚಲಾಯಿಸುತ್ತಿದ್ದ ಮೀನು ಸಾಗಾಟದ ಪಿಕಪ್ ವಾಹನ ಕಾರನ್ನು ಚೇಸ್ ಮಾಡಿ ಡಿ*ಕ್ಕಿ ಹೊಡೆಯುವ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.

ಮೀನು ಸಾಗಾಟದ ವಾಹನ ಓವರ್ ಟೇಕ್ ಮಾಡುತ್ತಿದ್ದಂತೆಯೇ ಅಲ್ಲಿ ಜನ ಸೇರಿದ್ದರು. ವಾಹನ ಡಿ*ಕ್ಕಿ ಹೊಡೆದು ಅಟ್ಟಾಡಿಸಿಕೊಂಡು ಹೋಗುವಾಗಲೂ ಜನರು ಮೂಕ ಪ್ರೇಕ್ಷಕರಂತೆ ನಿಂತಿದ್ದರು.

ನಾಳೆ(ಮೇ.25) ಬಜಪೆ ಚಲೋ :

ಮೇ 1 ರಂದು ಸಂಜೆ 7 ಗಂಟೆಗೆ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಈಗಾಗಲೇ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೊಂದು ಪಕ್ಕಾ ಪ್ರೀ ಪ್ಲ್ಯಾನ್ಡ್ ಮರ್ಡರ್ ಎಂದು ಹಿಂದೂ ಸಂಘಟನೆಗಳು ಹೇಳಿದ್ದು, ಈ ಕೃ*ತ್ಯದಲ್ಲಿ ಮೂವತ್ತಕ್ಕೂ ಅಧಿಕ ಜನ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಕಾಂಕ್ರೀಟ್‌ ಮಿಕ್ಸಿಂಗ್‌ ವಾಹನದಡಿಗೆ ಬಿದ್ದು ಮಹಿಳೆ ಸಾ*ವು

ಸುಹಾಸ್ ಪ್ರಕರಣವನ್ನು ಎನ್ ಐ ಎ ಗೆ ಒಪ್ಪಿಸಲು ಹಿಂದೂ ಸಂಘಟನೆಗಳ ಆಗ್ರಹಿಸುತ್ತಿದೆ. ಮತ್ತೊಂದೆಡೆ, ನಾಳೆ ಮಧ್ಯಾಹ್ನ ಮೂರು ಗಂಟೆಗೆ ಬಜಪೆ ಚಲೋ  ಹಮ್ಮಿಕೊಳ್ಳಲಾಗಿದೆ. ಬಜ್ಪೆ ಶಾರಾದ ಮಂಟಪದಲ್ಲಿ ಹಕ್ಕೊತ್ತಾಯ ಸಭೆ ನಡೆಯಲಿದ್ದು,  ಜಿಲ್ಲೆಯಾದ್ಯಂತ ಸಾವಿರಾರು ಜನ ಸೇರುವ ನಿರೀಕ್ಷೆಯಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page