Connect with us

DAKSHINA KANNADA

ತಾ.ಪಂ.ಅಧ್ಯಕ್ಷರಿಗೆ  ಕಾರ್ಯಕ್ರಮಕ್ಕೆ ಆಮಂತ್ರಣವಿಲ್ಲ .ಕುಕ್ಕೆ ದೇವಳದ ನಾಮಫಲಕದಲ್ಲಿ  ಸುಳ್ಯ ತಾಲೂಕಿನ ಹೆಸರು!ಸ್ಥಳೀಯರ ಆಕ್ರೋಶ

Published

on

ತಾ.ಪಂ.ಅಧ್ಯಕ್ಷರಿಗೆ  ಕಾರ್ಯಕ್ರಮಕ್ಕೆ ಆಮಂತ್ರಣವಿಲ್ಲ .ಕುಕ್ಕೆ ದೇವಳದ ನಾಮಫಲಕದಲ್ಲಿ  ಸುಳ್ಯ ತಾಲೂಕಿನ ಹೆಸರು!ಸ್ಥಳೀಯರ ಆಕ್ರೋಶ

ಕಡಬ: ರಾಜ್ಯದ ಪ್ರಸಿದ್ದ ದೇವಸ್ಥಾನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸುಳ್ಯ ತಾಲೂಕಿಗೆ ಸೇರಿದೆಯೋ ಅಥಾವ ಸರಕಾರ ಅನುಷ್ಠಾನಗೊಳಿಸಿದ ಕಡಬ ತಾಲೂಕಿಗೆ ಸೇರ್ಪಡೆಗೊಂಡಿದೆಯೋ  ಅನ್ನೋ ಪ್ರಶ್ನೆ ಉದ್ಬವಿಸಿದೆ, ಯಾಕೆಂದರೆ ಕಡಬ ತಾಲೂಕು ಅನುಷ್ಠಾನಗೊಂಡು ಎರಡು ವರ್ಷ ಪೂರ್ಣಗೊಳ್ಳುತ್ತಿದೆ.  ಬಳಿಕ ಕಡಬದಲ್ಲಿ ಹೊಸ ತಾಲೂಕು ಪಂಚಾಯತ್ ರಚನೆಗೊಂಡು ಎರಡು ಮೂರು ಸಭೆಗಳು ನಡೆದಿವೆ. ಆ ಸಭೆಗೆ ಕಡಬ ತಾಲೂಕಿಗೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಭಾಗವಹಿಸಿದ್ದಾರೆ, ಇಷ್ಟಾದರೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಅಧಿಕಾರಿಗಳು ಮಾತ್ರ ಇನ್ನೂ ಸುಳ್ಯ ತಾಲೂಕಿನಲ್ಲ್ಲೇ ಬಾಕಿಯಾಗಿದ್ದಾರೆ..

ಅನಘ ವಸತಿಗೃಹ ಉದ್ಘಾಟನಾ ಕಾರ್‍ಯಕ್ರಮದಲ್ಲಿ  ಕಡಬ ತಾಲೂಕು ಪಂಚಾಯತ್ ಅಧ್ಯಕ್ಷರ ಹೆಸರು ನಾಪತ್ತೆ!

ಇಂದು(ನ.22) ಮಧ್ಯಾಹ್ನ  ನಡೆಯುವ ಕುಕ್ಕೆಶ್ರೀ ದೇವಳದ ಸಮಗ್ರ ಅಭಿವೃದ್ದಿಯ ಮಾಸ್ಟರ್ ಪ್ಲಾನ್ ಯೋಜನೆಯಡಿಯಲ್ಲಿ

ಆದಿ ಸುಬ್ರಹ್ಮಣ್ಯದಲ್ಲಿ ನಿರ್ಮಿಸಿರುವ ಅನಘ ವಸತಿಗೃಹ ಉದ್ಘಾಟನಾ ಕಾರ್ಯಕ್ರಮ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರಿಂದ ಉದ್ಘಾಟನೆಗೊಂಡಿದ್ದು, ಕ್ಷೇತ್ರದ ಶಾಸಕ ಎಸ್. ಅಂಗಾರ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಉಳಿದಂತೆ ಪ್ರೊಟೋಕಾಲ್ ಪ್ರಕಾರ ಸಂಸದರು, ಜಿ.ಪಂ. ಅಧ್ಯಕ್ಷರು ಜಿಲ್ಲಾ ಮಟ್ಟದ ಅಧಿಕಾರಿಗಳು, ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷರ ಹೆಸರುಗಳನ್ನು ಆಮಂತ್ರಣ ಪತ್ರಿಕೆಯಲ್ಲಿ ಹಾಕಲಾಗಿದೆ. ಆದರೆ ವಿಶೇಷತೆಯೆಂದರೆ ಕಡಬ ತಾಲೂಕು ಪಂಚಾಯತ್ ಅಧ್ಯಕ್ಷರ ಹೆಸರನ್ನೇ ಉಲ್ಲೇಖಿಸಲಾಗಿಲ್ಲ ಮತ್ತು ಕಾರ್ಯಕ್ರಮಕ್ಕೆ ಅವರನ್ನು ಆಮಂತ್ರಿಸಿಲ್ಲ. ಈ ಬಗ್ಗೆ ಈಗಾಗಲೇ ದೇವಸ್ಥಾನದ ಆಡಳಿತ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತವಾಗಿದ್ದು ಅಪರಾಹ್ನ ಈ ವಿಚಾರವನ್ನು ಸಚಿವರ ಗಮನಕ್ಕೂ ತರಲಾಗುತ್ತಿದೆ.

ದೇವಸ್ಥಾನದ ಮುಖ್ಯ ದ್ವಾರದಲ್ಲಿ ಅಳವಡಿಸಲಾಗಿರುವ ನಾಮಫಲಕದಲ್ಲಿ ದೇವಸ್ಥಾನ ಇನ್ನೂ ಸುಳ್ಯ ತಾಲೂಕಿನಲ್ಲಿಯೇ ಇರುವುದು ಸ್ವಷ್ಟವಾಗುತ್ತಿದೆ, ಈ ನಾಮಫಲಕದಲ್ಲಿ ತಾಲೂಕು ಹೆಸರು ಬದಲಾವಣೆ ಮಾಡಬೇಕೆಂದು  ತಾ.ಪಂ. ಸಭೆಯಲ್ಲಿ ಪ್ರಸ್ತಾಪಿಸಿ ನಿರ್ಣಯ ಕೈಗೊಳ್ಳಲಾಗಿತ್ತು, ಆದರೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಧಿಕಾರಿಗಳಿಗೆ ಮಾತ್ರ ಈ ನಿರ್ಣಯಗಳು ತಲುಪದಿರುವುದು ಮಾತ್ರ ಆಶ್ಚರ್ಯವೇ ಸರಿ

ಈ ಬಗ್ಗೆ ದೇವಸ್ಥಾನದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರವೀಂದ್ರ ಎಂ.ಎಚ್.ಅವರನ್ನು ಸಂಪರ್ಕಿಸಿದಾಗ ಕೂಡಲೇ ಮಾತನಾಡಿದ ಅವರು, ನಮ್ಮಿಂದ ತಪ್ಪಾಗಿದೆ, ಕೂಡಲೇ ಕಡಬ ತಾ.ಪಂ. ಅಧ್ಯಕ್ಷರ ಹೆಸರನ್ನು ಸೇರ್ಪಡೆಗೊಳಿಸುತ್ತೇವೆ, ಎಂದು ಉತ್ತರ ನೀಡಿ, ಬದಲಿ ಆಮಂತ್ರಣ ಪತ್ರಿಕೆಯಲ್ಲಿ ತಿದ್ದುಪಡಿ ಮಾಡಿ ಅಧ್ಯಕ್ಷರ ಹೆಸರನ್ನು ಸೇರಿಸಿದ್ದಾರೆ.

ಈ ಬಗ್ಗೆ ಆಡಳಿತಾಧಿಕಾರಿ ಎಂ.ಜೆ. ರೂಪ ಅವರಿಗೂ ಮಾಹಿತಿ ನೀಡಲಾಗಿತ್ತು ಈ ಬಗ್ಗೆ ವಿಚಾರಿಸುತ್ತೇನೆ ಎಂದಷ್ಟೆ ಉತ್ತರ ನೀಡಿದ್ದಾರೆ ಎನ್ನಲಾಗಿದೆ.

ಅಧಿಕಾರಿಗಳೇ ಎಚ್ಚೆತ್ತುಕೊಳ್ಳಿ, ಸರಕಾರದ ಆದೇಶ ಪಾಲಿಸಿ
ಸರಕಾರ ಯಾವ ಆದೇಶಗಳನ್ನು ಮಾಡಿದರೂ ಅದನ್ನು ಕಾರ್ಯರೂಪಕ್ಕೆ ತರುವವರು ಅಧಿಕಾರಿಗಳು, ಆದರೇ ಅಧಿಕಾರಿಗಳು ಇಂತಹ ಘೋರ ನಿದ್ದೆಯಲ್ಲಿದ್ದರೆ ಸರಕಾರದ ಕಾರ್ಯಕ್ರಮಗಳು ಯಾವಗ ಜಾರಿಗೆ ಬರುವುದು ಎಂಬ ಪ್ರಶ್ನೆ ಉದ್ಘವಿಸಿದೆ,

ಇನ್ನಾದರೂ ಸರಕಾರದ ಆದೇಶವನ್ನು ಪಾಲಿಸಿ ಎಂಬ ಅಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದ್ದು ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವಿಚಾರವನ್ನು ಸಚಿವರು, ಶಾಸಕರ ಗಮನಕ್ಕೆ ತರಲಾಗುತ್ತದೆ ಎಂದು ಸುಬ್ರಹ್ಮಣ್ಯ ನಾಗರಿಕರು ತಿಳಿಸಿದ್ದಾರೆ.

ಈ ಬಗ್ಗೆ ಕಡಬ ತಾಲೂಕು ಪಂಚಾಯತ್ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಅವರನ್ನು ಸಂಪರ್ಕಿಸಿದಾಗ, ಸುಬ್ರಹ್ಮಣ್ಯದ ಕಾರ್ಯಕ್ರಮದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

DAKSHINA KANNADA

15 ಫೀಟ್ ಆಳಕ್ಕೆ ಉರು*ಳಿದ ಕಾರು; ತಪ್ಪಿದ ಭಾರೀ ದುರಂ*ತ

Published

on

ಉಳ್ಳಾಲ : ಚಾಲಕನ ನಿಯಂತ್ರಣ ತಪ್ಪಿದ ಕಾರು ನದಿಯ ತೀರಕ್ಕೆ ಉ*ರುಳಿ ಬಿದ್ದ ಘಟನೆ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ನಡೆದಿದೆ. ಕಲ್ಲಾಪುವಿನ ರಾಷ್ಟ್ರೀಯ ಹೆದ್ದಾರಿಯಿಂದ ಗುಳಿಗ ಕೊರಗಜ್ಜ ಶಿಲೆಯ ಪ್ರಧಾನ ಆದಿಸ್ಥಳಕ್ಕೆ ಹೋಗುವ ದಾರಿಯಲ್ಲಿ ಈ ಘಟನೆ ನಡೆದಿದೆ.

ತಲಪಾಡಿ ಕಡೆಯಿಂದ ಮಂಗಳೂರು ಕಡೆಗೆ ಕಾರು ಚಲಿಸುತ್ತಿತ್ತು. ಅಗಲ ಕಿರಿದಾದ ರಸ್ತೆ ಇದಾಗಿದ್ದು, ಹೆದ್ದಾರಿಯಿಂದ ತಿರುವು ಪಡೆದುಕೊಂಡ ಕಾರು  15 ಫೀಟ್ ಆಳಕ್ಕೆ ಉ*ರುಳಿ ಬಿದ್ದಿದೆ. ಅದೃಷ್ಟವಶಾತ್, ನದಿಯ ನೀರಿಗೆ ಬೀಳದೆ ಕಸಕಡ್ಡಿ ತುಂಬಿದ್ದ ಜಾಗದಲ್ಲಿ ಕಾರು ಸಿ*ಲುಕಿಕೊಂಡಿದೆ. ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಆದ್ರೆ ಅಪ*ಘಾತ ನಡೆದ ತಕ್ಷಣ ಕಾರಿನಿಂದ ಹೊರಬಂದಿದ್ದಾರೆಯಾದ್ರೂ ಸ್ಥಳದಲ್ಲಿ ಕಾಣಿಸಿಕೊಂಡಿಲ್ಲ.

ಇದನ್ನೂ ಓದಿ : ಸ್ಕೂಟರ್‌ಗೆ ಅಡ್ಡ ಬಂದ ಕಾಡುಹಂದಿ; ರಸ್ತೆಗೆಸೆಯಲ್ಪಟ್ಟು ಹಿಂಬದಿ ಸವಾರೆ ಸಾ*ವು

ಕೊರಗಜ್ಜನ ದೈವಸ್ಥಾನಕ್ಕೆ ಹೋಗುವ ದಾರಿಯ ಫಲಕಕ್ಕೆ ಡಿ*ಕ್ಕಿ ಹೊಡೆದು ಕಾರು ನದಿಪಾತ್ರಕ್ಕೆ ಉರುಳಿ ಬಿದ್ದಿದೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕಾರಿನಲ್ಲಿದ್ದವರು ಗಾ*ಯಗೊಂಡ ಹಿನ್ನಲೆಯಲ್ಲಿ ಚಿಕಿತ್ಸೆಗಾಗಿ ತೆರಳಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಾಗಿದೆ.

 

Continue Reading

DAKSHINA KANNADA

ಸ್ಕೂಟರ್‌ಗೆ ಅಡ್ಡ ಬಂದ ಕಾಡುಹಂದಿ; ರಸ್ತೆಗೆಸೆಯಲ್ಪಟ್ಟು ಹಿಂಬದಿ ಸವಾರೆ ಸಾ*ವು

Published

on

ಉಳ್ಳಾಲ : ವ್ಯಕ್ತಿಯ ಸ್ಕೂಟರ್‌ಗೆ ಕಾಡು ಹಂದಿಯೊಂದು ದಿಢೀರನೆ ಅಡ್ಡ ಬಂದ ಪರಿಣಾಮ ರಸ್ತೆಗೆಸೆಯಲ್ಪಟ್ಟು ಹಿಂಬದಿ ಸವಾರೆ ಮೃ*ತಪಟ್ಟ ಘಟನೆ ಹರೇಕಳ ಗ್ರಾಮದ ಖಂಡಿಗ ಎಂಬಲ್ಲಿ ಸಂಭವಿಸಿದೆ. ಹರೇಕಳ ಗ್ರಾಮದ ಪೊಲ್ಕೆ ಮೇಗಿನಮನೆ ನಿವಾಸಿ ದೇವಕಿ ಮಾಣೈ(72) ಮೃತ ಹಿಂಬದಿ ಸವಾರೆ.

ಶನಿವಾರ ರಾತ್ರಿ(ಮಾ.15) ವರದರಾಜ್ ಮಾಣೈ ತನ್ನ ತಾಯಿ ದೇವಕಿ ಮಾಣೈ ಅವರ ಜೊತೆ ಬಜಾಲಿನ ಸಂಬಂಧಿಕರ ಮನೆಯಿಂದ ಸ್ಕೂಟರಲ್ಲಿ ಅಡ್ಯಾರು-ಪಾವೂರು ಮಾರ್ಗವಾಗಿ ಹರೇಕಳದ ಮನೆಗೆ ಮರಳುತ್ತಿದ್ದರು. ಈ  ವೇಳೆ ದಾರಿ ಮಧ್ಯೆ ಖಂಡಿಗ ಎಂಬಲ್ಲಿನ ಹಳೇ ಪಂಚಾಯತ್ ಕಚೇರಿ ಕಟ್ಟಡದ ಬಳಿಯ ಗುಡ್ಡಕಾಡು ಪ್ರದೇಶದಿಂದ ಕಾಡು ಹಂದಿಯೊಂದು ದಿಢೀರನೆ ರಸ್ತೆ ಕಡೆ ಧಾವಿಸಿದೆ.

ಈ ವೇಳೆ ಸ್ಕೂಟರ್ ಚಲಾಯಿಸುತ್ತಿದ್ದ ವರದರಾಜ್ ಅವರು ವಿಚಲಿತರಾಗಿ ಹಠಾತ್ತನೆ ಬ್ರೇಕ್ ಹಾಕಿದ ಪರಿಣಾಮ ತಾಯಿ ಮತ್ತು ಮಗ ರಸ್ತೆಗೆಸೆಯಲ್ಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ದೇವಕಿ ಅವರಿಗೆ ಹರೇಕಳದ ಕ್ಲಿನಿಕ್ ಒಂದರಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾ*ವನ್ನಪ್ಪಿದ್ದಾರೆ.

ಇದನ್ನೂ ಓದಿ  : ಒಂದೇ ವಾರದಲ್ಲಿ ಶನಿಗ್ರಹದ 124 ಹೊಸ ಉಪಗ್ರಹ ಪತ್ತೆ; ಮಾ.23 ರಂದು ನಡೆಯಲಿದೆ ವಿಸ್ಮಯ

ಮೃತ ದೇವಕಿ ಅವರ ಪತಿ ಭೋಜ ಮಾಣೈ ಅವರು ಕಳೆದ ಆರು ತಿಂಗಳ ಹಿಂದಷ್ಟೇ ಅಲ್ಪ ಕಾಲದ ಅನಾರೋಗ್ಯದಿಂದ ಮೃ*ತಪಟ್ಟಿದ್ದರು. ದೇವಕಿ ಅವರು ಓರ್ವ ಪುತ್ರ, ಇಬ್ಬರು ಪುತ್ರಿಯರು ಮತ್ತು ಮೊಮ್ಮಕ್ಕಳನ್ನ ಅಗಲಿದ್ದಾರೆ.

ಘಟನೆ ಕುರಿತು ದೇವಕಿ ಮಾಣೈ ಅವರ ಅಳಿಯ(ಮಗಳ ಗಂಡ) ರವೀಂದ್ರ ಭಂಡಾರಿ ನೀಡಿದ ದೂರಿನಂತೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Continue Reading

DAKSHINA KANNADA

ಮಲೀನವಾದ ನೇತ್ರಾವತಿಯ ಸ್ವಚ್ಚತಾ ಕಾರ್ಯ..! ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ ನೇತೃತ್ವ..!

Published

on

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಶ್ರೀ ಧ.ಮಂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಶ್ರೀ ಧ.ಮಂ. ಸ್ಪೋಟ್ಸ್ ಕ್ಲಬ್ ಉಜಿರೆ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ (ರಿ.) ಬೆಳ್ತಂಗಡಿ ಇದರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಆರಕ್ಷಕ ಠಾಣ ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ಸುಮಾರು 650 ಮಂದಿಯಿಂದ ‘ವಂದೇ ಮಾತರಂ’ ನನ್ನ ಸೇವೆಗಾಗಿ.. ನೇತ್ರಾವತಿ ನದಿ ಸಂವತ್ಸರ ಕಾರ್ಯಕ್ರಮ ಮಾ.16ರಂದು ಧರ್ಮಸ್ಥಳ ನೇತ್ರಾವತಿ ಸ್ನಾನ ಘಟ್ಟದಲ್ಲಿ ಆರಂಭಗೊಂಡಿತು.


ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ದೀಪ ಬೆಳಗಿಸಿ ಧರ್ಮಸ್ಥಳದ ನೇತ್ರಾವತಿ ನದಿ ಪ್ರವಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನೇತ್ರಾವತಿ ಪುಣ್ಯ ನದಿಯಲ್ಲಿ ತಮ್ಮ ಪಾಪವನ್ನು ಕಳೆಯಲು ಸ್ನಾನ ಮಾಡುತ್ತಾರೆ. ಆದರೆ ಬಟ್ಟೆ ಬರೆಗಳನ್ನು ನದಿಗೆ ಎಸೆದು ಅಂಧಾನುಕರಣೆ ಮಾಡುತ್ತಾರೆ. ಇದು ಸರಿಯಲ್ಲ. ಬದುಕು ಕಟ್ಟೋಣ ಬನ್ನಿ ತಂಡ ಕಾಯ೯ಕ್ರಮ ಸಮಾಜಕ್ಕೆ ಮಾದರಿ ಹೇಳಿದರು.

ಉಜಿರೆಯ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ನ ಅಧ್ಯಕ್ಷ. ಕೆ. ಧನಂಜಯ ರಾವ್ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಬಿ.ಜಿ. ಸುಬ್ಬಾಪುರ ಮಠ, ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಅರ್ಜುನ್, ಧರ್ಮಸ್ಥಳ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಕಿಶೋರ್ ಪಿ. ವೇಣೂರು ಪೊಲೀಸ್ ಠಾಣೆಯ ಉಪ ನಿರೀಕ್ಷಕಿ ಶೈಲಾ ಡಿ. ಮುರುಗೋಡು, ಬೆಳ್ತಂಗಡಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ, ಏಣಿಂಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಉಜಿರೆಯ ಎಸ್.ಡಿ.ಎಂ. ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಕೆ. ಭಾಗವಹಿಸಿ ಶುಭ ಕೋರಿದರು. ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮದ ಉದ್ದೇಶಗಳನ್ನು ಪ್ರಕಟಿಸಿದರು.

ಉಜಿರೆ ಶ್ರೀ ಧ.ಮಂ. ಕಾಲೇಜಿನ ರಾ.ಸೇ.ಯೋ. ಘಟಕದ ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್. ಸ್ವಾಗತಿಸಿದರು. ಎಸ್.ಕೆ.ಡಿ.ಆರ್.ಡಿ.ಪಿ. ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ವಂದಿಸಿದರು.

Continue Reading
Advertisement

Trending

Copyright © 2025 Namma Kudla News

You cannot copy content of this page