Connect with us

LATEST NEWS

‘ನಾನು ತಪ್ಪು ಮಾಡಿದೆ, ಕ್ಷಮಿಸಿ’-ಪತ್ರ ಬರೆದು ದೇಗುಲದಿಂದ ಕದ್ದ ವಸ್ತುಗಳನ್ನು ಹಿಂದಿರುಗಿಸಿದ ಕಳ್ಳ

Published

on

ಮಧ್ಯಪ್ರದೇಶ: ದೇಗುಲದಿಂದ ಬೆಳ್ಳಿ ಮತ್ತು ತಾಮ್ರದ ವಸ್ತುಗಳನ್ನು ಕದ್ದಿದ್ದ ಕಳ್ಳ ಕ್ಷಮಾಪಣಾ ಪತ್ರದ ಜೊತೆ ಕದ್ದಿದ್ದ ಎಲ್ಲಾ ವಸ್ತುಗಳನ್ನು ದೇವಸ್ಥಾನಕ್ಕೆ ಮರಳಿಸಿರುವ ಅಚ್ಚರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.


ಕಳ್ಳತನದ ಬಳಿಕವೂ ತಾನು ಕಷ್ಟಗಳನ್ನು ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ದೇವಸ್ಥಾನದ ವಸ್ತುಗಳನ್ನು ಮರಳಿಸುತ್ತಿದ್ದೇನೆ ಎಂದು ಹೇಳಿದ್ದಾನೆ.

ಕಳ್ಳನೋರ್ವ ಅಕ್ಟೋಬರ್‌ 24ರಂದು ಇಲ್ಲಿನ ಶಾಂತಿನಾಥ ದಿಗಂಬರ್‌ ಜೈನ ಮಂದಿರದಿಂದ 10 ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಿದ್ದ.

ಶುಕ್ರವಾರ ಕಳ್ಳತನ ಮಾಡಿದ್ದ ವಸ್ತುಗಳನ್ನು ದೇವಸ್ಥಾನದ ಕಚೇರಿ ಎದುರು ಇಟ್ಟಿದ್ದಾನೆ. ಬ್ಯಾಗ್‌ನಲ್ಲಿ ಕ್ಷಮಾಪಣಾ ಪತ್ರ ಇಟ್ಟಿದ್ದು, ‘ಕೃತ್ಯದ ಬಳಿಕ ತೀವ್ರ ಕಷ್ಟಗಳನ್ನು ಅನುಭವಿಸಿದ್ದೇನೆ, ನನ್ನನ್ನು ಕ್ಷಮಿಸಿ’ ಎಂದು ಪತ್ರದಲ್ಲಿ ಬರೆದಿದ್ದಾನೆ.

“ನನ್ನ ಕೃತ್ಯಕ್ಕಾಗಿ ನಾನು ಕ್ಷಮೆಯಾಚಿಸುತ್ತಿದ್ದೇನೆ. ನಾನು ತಪ್ಪು ಮಾಡಿದೆ, ಕ್ಷಮಿಸಿ. ಕಳ್ಳತನದ ನಂತರ ನಾನು ತುಂಬಾ ಸಂಕಟ ಅನುಭವಿಸಿದೆ’’ ಎಂದು ಕಳ್ಳ ಬರೆದ ಪತ್ರ ಸಾಮಾಜಿಕ ಮಾಧ್ಯಮಗಳಲ್ಲಿ  ವೈರಲ್‌ ಆಗಿದೆ.

 

Advertisement
Click to comment

Leave a Reply

Your email address will not be published. Required fields are marked *

LATEST NEWS

ಎಸ್‌ಎಸ್‌ಎಲ್‌ಸಿ ಅಲ್ಲಿ ಈ ಬಾರಿ ಎಷ್ಟು ಗ್ರೇಸ್ ಮಾರ್ಕ್ಸ್‌ ಸಿಗಲಿದೆ ಗೊತ್ತಾ..?

Published

on

ಬೆಂಗಳೂರು: ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಗಿದಿದೆ. ಇದರ ಫಲಿತಾಂಶ ಬರುವುದಕ್ಕೆ ಇನ್ನು ಕೆಲವು ದಿನಗಳು ಮಾತ್ರ ಬಾಕಿ ಉಳಿದಿದೆ. ಇದೇ ಹೊತ್ತಲ್ಲಿ ಶಿಕ್ಷಣ ಸಚಿವರು ಬಿಗ್‌ಶಾಕ್ ಒಂದನ್ನು ನೀಡಿದ್ದರು. ಅದೇನೆಂದರೆ ಈ ವರ್ಷ ಗ್ರೇಸ್ ಮಾರ್ಕ್ಸ್‌ ಇರುವುದಿಲ್ಲ.

ಕಳೆದ ಬಾರಿ ಶಿಕ್ಷಣ ಇಲಾಖೆಯು ತೆಗೆದುಕೊಂಡಿದ್ದ ಕೆಲವೊಂದು ಕ್ರಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಪಾಸ್ ಆಗಿದ್ದರು. ಕಳೆದ ಬಾರಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ತುಸು ನಿರಾಳತೆ ಇತ್ತು. ಆದರೆ ಈ ಬಾರಿ ಅದು ಇಲ್ಲ. ಆದರೆ ಇದನ್ನು ಪರೀಕ್ಷೆಯ ಪೂರ್ವವೇ ತಿಳಿಸಲಾಗಿತ್ತು.

ಈ ಬಾರಿ ಇರಲ್ಲ ಗ್ರೇಸ್ ಮಾರ್ಕ್ಸ್

ಶಿಕ್ಷಣ ಇಲಾಖೆಯು ಕಳೆದ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಶೇ 10ರಷ್ಟು ಗ್ರೇಸ್ ಮಾರ್ಕ್ಸ್ ಕೊಟ್ಟಿತ್ತು. ಇದರಿಂದ ಕಡಿಮೆ ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಸಹ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಆದರೆ ಈ ಬಾರಿ ಕಳೆದ ಬಾರಿಯಂತೆ ಗ್ರೇಸ್ ಮಾರ್ಕ್ಸ್ ಇಲ್ಲ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದ ಸುಧಾರಣೆಗೆ ಪರಿಚಯಿಸಲಾಗಿದ್ದ ಶೇ.10ರಷ್ಟು ಹೆಚ್ಚುವರಿ ಗ್ರೇಸ್ ಮಾರ್ಕ್ಸ್ ನೀಡುವ ಪದ್ಧತಿಯನ್ನು ಈ ವರ್ಷದಿಂದ ತೆಗೆಯಲಾಗಿದೆ.

Continue Reading

LATEST NEWS

ಪ್ರೀತಿಸಿ ಮದುವೆಯಾದವರ ಬಾಳಲ್ಲಿ ವಿಧಿಯಾಟ..! ‘ನೀ ನನ್ನ ಲವ್ವರ..’ ಎನ್ನುತ್ತಲೇ ಒಬ್ಬಂಟಿಯಾದ ..!

Published

on

ಮಂಗಳೂರು/ರಾಯಚೂರು : ಪ್ರೀತಿಸಿದವರನ್ನು ಮದುವೆಯಾಗುವ ಯೋಗ ಎಲ್ಲರಿಗೂ ಇರುವುದಿಲ್ಲ. ಒಂದು ವೇಳೆ ಹಾಗಾದರೆ ಅವರಂಥ ಅದೃಷ್ಟವಂತರು ಮತ್ತಾರೂ ಇಲ್ಲ. ಎಲ್ಲಾ ಪ್ರೀತಿಯು ಗೆಲ್ಲುತ್ತದೆ ಎಂದು ಹೇಳಲು ಆಗುವುದಿಲ್ಲ. ಕೆಲವೊಂದು ಸೋಲಲೂ ಬಹುದು. ಆದರೆ ಇದೀಗ ರಾಜ್ಯದಲ್ಲಿ ವಿಭಿನ್ನ ದುರಂತ ಪ್ರೇಮಕತೆಯೊಂದು ನಡೆದಿದೆ. ನಾ ಡ್ರೈವರ.. ನೀ ನನ್ನ ಲವ್ವರ.. ಅಂತಿದ್ದವನು ಇದೀಗ ಒಂಟಿಯಾಗಿದ್ದಾನೆ. ಆರು ವರ್ಷ ಕಾದು ಮದುವೆಯಾದ ಜೋಡಿಹಕ್ಕಿ ಇದೀಗ ಬೇರೆಬೇರೆಯಾಗಿದೆ.

ಕಾಲೇಜಿನಲ್ಲಿ ಪ್ರೀತಿ ಶುರು : 

ರಮೇಶ್ ಹಾಗೂ ಯಶೋಧಾ ಹೈಸ್ಕೂಲ್ ಫ್ರೆಂಡ್ಸ್. ಅವರಿಬ್ಬರು ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಈಚನಾಳ ಗ್ರಾಮದವರು. ಕಾಲೇಜಿನಲ್ಲಿದ್ದಾಗ ಪ್ರೀತಿ ಶುರುವಾಗಿ, ಆರು ವರ್ಷದಿಂದ ಲವ್ ಮಾಡಿ, ಕೈ ಕೈ ಹಿಡಿದು ಓಡಾಡಿ, ಬೈಕ್ನಲ್ಲಿ ಸ್ಟೈಲೀಶ್ ಆಗಿ ರೀಲ್ಸ್ ಕೂಡ ಮಾಡಿದ್ದರು. ಯಶೋಧಾಗೆ 18 ವರ್ಷವಾಗಲಿ ಎಂದು ರಮೇಶ್ ಆರು ವರ್ಷ ಕಾದಿದ್ದಾನೆ. ಆಕೆಗಾಗಿ ತನ್ನ ಓದು ಅರ್ಧಕ್ಕೆ ಬಿಟ್ಟು ಕಾರು ಚಾಲಕನಾಗಿ ಕೆಲಸ ಮಾಡುವುದಕ್ಕೆ ಶುರು ಮಾಡಿದ್ದ. ಕಳೆದ 15 ದಿನಗಳ ಹಿಂದಷ್ಟೇ ಸಿಂಧನೂರಿನಲ್ಲಿ ಇಬ್ಬರೂ ಖುಷಿಖುಷಿಯಾಗಿ ರಿಜಿಸ್ಟರ್ ಮದುವೆಯಾಗಿದ್ದಾರೆ.

ಕುಟುಂಬಸ್ಥರಿಂದ ನಾಪತ್ತೆ ದೂರು : 

ಓಡಿ ಹೋಗಿ ವಿವಾಹವಾದ ಬಳಿಕ ರಮೇಶ್ ಹಾಗೂ ಯಶೋಧಾ ಬೆಂಗಳೂರಿಗೆ ಬಂದು ಜೀವನ ನಡೆಸುತ್ತಿದ್ದರು. ಈ ಮಧ್ಯೆ ಲಿಂಗಸುಗೂರು ಠಾಣೆಗೆ ಯೋಶೋಧಾ ಕುಟುಂಬಸ್ಥರಿಂದ ನಾಪತ್ತೆ ದೂರು ನೀಡಲಾಗಿದೆ. ಆ ಬಳಿಕ ರಮೇಶ್ ಗೆ ಲಿಂಗಸುಗೂರು ಪೊಲೀಸರು ಕರೆ ಮಾಡಿ ವಿಚಾರಣೆಗೆಂದು ಠಾಣೆಗೆ ಕರೆದಿದ್ದಾರೆ. ರಿಜಿಸ್ಟರ್ ಮ್ಯಾರೇಜ್ ಆದರೂ ಸಹ ಯಶೋಧಾಳನ್ನ ಆಕೆ ಪೋಷಕರ ಜೊತೆ ಕಳುಹಿಸಿಕೊಟ್ಟಿದ್ದಾರೆ. ಸ್ಥಳೀಯ ಜನಪ್ರತಿನಿಧಿಯೊಬ್ಬರ ಒತ್ತಡಕ್ಕೆ ಮಣಿದು ಪೊಲೀಸರು ಹೀಗೆ ಮಾಡಿದ್ದಾರೆ ಎಂದು ಆರೋಪ ಕೂಡ ಕೇಳಿಬಂದಿದ್ದು, ಸದ್ಯ ರಮೇಶ್ ನ್ಯಾಯಕ್ಕಾಗಿ ಅಲೆದಾಡುತ್ತಿದ್ದಾರೆ.

Continue Reading

LATEST NEWS

ಟ್ರೇಡ್‌ಮಾರ್ಕ್‌ ಅವಮಾನಿಸಿದ ಆರೋಪ; ಹೈಕೋರ್ಟ್‌ ಮೆಟ್ಟಿಲೇರಿದ ಆರ್‌ಸಿಬಿ

Published

on

ಮಂಗಳೂರು/ನವದೆಹಲಿ: “ಬ್ಯಾಡೀಸ್ ಇನ್ ಬೆಂಗಳೂರು ಅಡಿ ಟ್ರಾವಿಸ್ ಹೆಡ್” ಎಂಬ ಶೀರ್ಷಿಕೆಯ ಉಬರ್ ಮೋಟೋದ ಯೂಟ್ಯೂಬ್ ಜಾಹೀರಾತು ತನ್ನ ಟ್ರೇಡ್‌ಮಾರ್ಕ್ ಅವಮಾನಿಸಿದೆ ಎಂದು ಆರೋಪಿಸಿ ರಾಯಲ್ ಚಾಲೆಂಜರ್ಸ್‌ ಸ್ಪೋರ್ಟ್ಸ್‌ ಪ್ರೈವೇಟ್ ಲಿಮಿಟೆಡ್ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ವಿರುದ್ದ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.


ಆರ್‌ಸಿಬಿ ಸಲ್ಲಿಸಿದ ಮಧ್ಯಂತರ ತಡಯಾಜ್ಞೆಯ ಅರ್ಜಿಯ ವಾದಗಳನ್ನು ಆಲಿಸಿದ ನಂತರ ನ್ಯಾಯಮೂರ್ತಿ ಸೌರಭ್ ಬ್ಯಾನರ್ಜಿ ಅವರು ತಮ್ಮ ಆದೇಶವನ್ನು ಕಾಯ್ದಿರಿಸಿದ್ದಾರೆ.

ಅಷ್ಟಕ್ಕೂ ಜಾಹೀರಾತಿನಲ್ಲೇನಿದೆ?
ಜಾಹೀರಾತಿನ ಪ್ರಮುಖ ಪಾತ್ರಧಾರಿ ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಸ್ಪೋಟಕ ಆಟಗಾರ ಟ್ರಾವಿಸ್ ಹೆಡ್ ತನ್ನ ಟ್ರೇಡ್‌ಮಾರ್ಕ್‌ ಅನ್ನು ಅವಮಾನಿಸಿದ್ದಾರೆ ಎಂದು ಆರ್‌ಸಿಬಿ ಆರೋಪಿಸಿದೆ.

ಈ ಜಾಹೀರಾತಿನಲ್ಲಿ ಟ್ರಾವಿಸ್ ಹೆಡ್ ಕಳ್ಳಹೆಜ್ಜೆಯೊಂದಿಗೆ ಕ್ರೀಡಾಂಗಣದೊಳಗೆ ಕಾಲಿಟ್ಟು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಹೈದರಬಾದ್ ತಂಡದ ನಡುವಿನ ಪಂದ್ಯದ ಫಲಕದಲ್ಲಿ ಸ್ಪ್ರೇ ಪೇಯಿಂಟ್ ಬಳಸಿ ‘ರಾಯಲಿ ಚಾಲೆಂಜರ್ಸ್ ಬೆಂಗಳೂರು’ ಎಂದು ಬದಲಿಸುತ್ತಾರೆ.

ಇದನ್ನೂ ಓದಿ: ಇಂದು ಆರ್‌ಸಿಬಿ-ಪಂಜಾಬ್ ಕದನ; ಆಟಕ್ಕೆ ಅಡ್ಡಿಯಾಗುತ್ತಾ ಮಳೆ?

ಆ ಹೊತ್ತಿಗೆ ಭದ್ರತಾ ಸಿಬ್ಬಂದಿ ಇವರನ್ನು ಬೆನ್ನಟುತ್ತಾರೆ. ಈ ಸಂದರ್ಭದಲ್ಲಿ ಉಬರ್‌ನ ಮೂರು ನಿಮಿಷಗಳಲ್ಲಿ ವಾಹನ ಸೌಲಭ್ಯವನ್ನು ಪಡೆದು ಬೈಕ್‌ನಲ್ಲಿ ಹೆಡ್ ಪರಾರಿಯಾಗುತ್ತಾರೆ. ಮೂರು ನಿಮಷಗಳಲ್ಲಿ ತನ್ನ ಸೇವೆ ಲಭ್ಯ ಎಂಬ ಜಾಹೀರಾತು ಸಿದ್ದಪಡಿಸಿದ್ದರಲ್ಲಿ ತನ್ನ ತಂಡದ ಹೆಸರನ್ನು ಅವಹೇಳನ ಮಾಡಲಾಗಿದೆ ಎಂದು ಉಬರ್ ವಿರುದ್ದ ಆರ್‌ಸಿಬಿ ನ್ಯಾಯಾಲಯದ ಮೆಟ್ಟಿಲೇರಿದೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page