Connect with us

BANTWAL

ವಿಟ್ಲ: ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರದ ಕಾಣಿಕೆ ಡಬ್ಬಿಯನ್ನೇ ಎಗರಿಸಿದ ದುರುಳರು…!

Published

on

ವಿಟ್ಲ: ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರಗಳಲ್ಲೊಂದಾದ ಬಂಟ್ವಾಳ ತಾಲೂಕಿನ ಕಲ್ಲಡ್ಕ- ವಿಟ್ಲ ನಡುವಣ ವೀರಕಂಬ ಗ್ರಾಮದ ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರದ ಕಾಣಿಕೆ ಡಬ್ಬಿಯನ್ನು ಕದ್ದೊಯ್ದ ಘಟನೆ ನಿನ್ನೆ ರಾತ್ರಿ ನಡೆದಿದೆ.


ಕೆಲಿಂಜ ಕ್ಷೇತ್ರಕ್ಕೆ ಬಹಳ ಪುರಾತನ ಇತಿಹಾಸವಿದ್ದು ಇಲ್ಲಿ ವರ್ಷಂಪ್ರತಿ ನಡೆಯುವ ಮೆಚ್ಚಿ ಜಾತ್ರೆಗೆ ಅಪಾರ ಮಹಿಮೆ ಇದೆ.

ಬೇರೆ ಬೇರೆ ಊರಿನ ಸಾವಿರಾರು ಭಕ್ತರು ಇಲ್ಲಿನ ಜಾತ್ರೆಯಲ್ಲಿ ಭಾಗವಹಿಸುತ್ತಾರೆ.


ಈ ಮಾರ್ಗದಿಂದ ಹಾದು ಹೋಗುವ ಅನೇಕ ಭಕ್ತರು ಕ್ಷೇತ್ರದ ಎದುರು ತಮ್ಮ ವಾಹನವನ್ನು ನಿಲ್ಲಿಸಿ ಕಾಣಿಕೆ ಹಾಕಿ ಹೋಗುತ್ತಾರೆ.

ನಿನ್ನೆ ರಾತ್ರಿ ಕಳ್ಳರು ಕಾಣಿಕೆ ಹುಂಡಿಯನ್ನು ಎಗರಿಸಿಕೊಂಡು ಹೋಗಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸರಿಗೆ ದೂರು ಸಲ್ಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.

 

BANTWAL

ತುಂಬೆ: ಚಾಲಕನಿಗೆ ಮೂರ್ಛೆ ರೋಗ ಬಂದು ಡಿವೈಡರ್ ಮೇಲೇರಿದ ಲಾರಿ

Published

on

ಬಂಟ್ವಾಳ: ಚಾಲಕನಿಗೆ ಮೂರ್ಛೆ ರೋಗ ಬಂದು ಡಿವೈಡರ್ ಮೇಲೆ ಲಾರಿ ಹತ್ತಿ ಸುಮಾರು 100 ಮೀ ನಷ್ಟು ಚಲಿಸಿ ನಿಂತಿದ್ದು, ಬಳಿಕ ಡ್ರೈವರ್ ಸೀಟಿನಲ್ಲಿ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ರಾ.ಹೆ.75ರ ತುಂಬೆ ಸಮೀಪ ನಡೆದಿದೆ.

ಲಾರಿ ಚಾಲಕನನ್ನು ಕೂಡಲೇ ಸ್ಥಳೀಯರು ತುಂಬೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇಂದು ಬೆಳಗ್ಗೆ 7.45 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಡಿವೈಡರ್ ಮೇಲೆ ಹಾಕಿದ್ದ ರಸ್ತೆ ಸೂಚಕಾ ಫಲಕಕ್ಕೆ ಹಾನಿಯಾಗುವುದು ಬಿಟ್ಟರೆ ಬೇರೆ ಯಾವೂದೇ ರೀತಿಯ ತೊಂದರೆ ಆಗಲಿಲ್ಲ.

ಲಾರಿಯು ಬೆಂಗಳೂರಿನಿಂದ ಮಂಗಳೂರು ಕಡೆಗೆ ಚಲಿಸುತ್ತಿತ್ತು. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Continue Reading

Ancient Mangaluru

ಚಿಕಿತ್ಸೆ ಫಲಕಾರಿಯಾಗದೆ ಯುವ ಪೊಲೀಸ್ ಸಿಬ್ಬಂದಿ ನಿಧನ

Published

on

ಬಂಟ್ವಾಳ : ತೀವ್ರ ಅಸೌಖ್ಯದಿಂದ ಬಳಲುತ್ತಿದ್ದ ಯುವ ಪೊಲೀಸ್ ಸಿಬ್ಬಂದಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಂಗಳವಾರ (ಫೆ.11) ನಡೆದಿದೆ.

ಮೂಲತಃ ದಾವಣಗೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿದ್ದ ಅಭಿಷೇಕ್ (26) ಮೃತಪಟ್ಟ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ಅವಿವಾಹಿತರಾಗಿದ್ದ ಅಭಿಷೇಕ್ ಅವರು 2020ರಲ್ಲಿ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯ ಎಚ್.ಸಿ.ಯಾಗಿ ನೇಮಕಗೊಂಡಿದ್ದರು. ಆ ಬಳಿಕ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರಿಗೆ ಕಳೆದ ಒಂದು ವರ್ಷದ ಹಿಂದೆ ಬೆನ್ನುಮೂಳೆಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ ಬ್ಲಡ್ ಕ್ಯಾನ್ಸರ್ ಕಂಡು ಬಂದಿತ್ತು.

ಇದನ್ನೂ ಓದಿ: ಶಾಲಾ ಬಸ್ ಸೀಟ್‌ಗಾಗಿ ನಡೆದ ಜಗಳ ಬಾಲಕನ ಸಾವಿನಲ್ಲಿ ಅಂತ್ಯ

ಆ ಬಳಿಕ ಸುಮಾರು 8 ತಿಂಗಳಿನಿಂದ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಕುಟುಂಬ ಮೂಲಗಳು ತಿಳಿಸಿವೆ. ಅಭಿಷೇಕ್ ಅವರ ತಂದೆ ಕೂಡ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಬೆಂಗಳೂರು ನಗರದಲ್ಲಿ ವಾಸವಾಗಿದ್ದಾರೆ ಎಂದು ಹೇಳಲಾಗಿದೆ.

Continue Reading

BANTWAL

ಬಂಟ್ವಾಳದಲ್ಲಿ ಭಾರೀ ಅಗ್ನಿ ಅವಘಡ; ಸುಟ್ಟು ಕರಕಲಾದ ಗೋಡೋನ್‌

Published

on

ಬಂಟ್ವಾಳ : ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಗೋಣಿಯ ಗೋಡನಿಗೆ  ಬೆಂಕಿ ಹತ್ತಿ ಗೋಡನ್ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ನಿನ್ನೆ (ಫೆ.10)  ಬಂಟ್ವಾಳ ಕರಿಯಂಗಳ ಗ್ರಾಮದ ಬಡಕಬೈಲು ಪ್ರದೇಶದಲ್ಲಿ ನಡೆದಿದೆ.

ಗೋಡೋನ್‌ಗೆ ಬೆಂಕಿ ಹತ್ತಿದ್ದು ಮಾತ್ರವಲ್ಲದೇ, ಹತ್ತಿರದ ಅಬ್ದುಲ್ ಹಮೀದ್ ಮನೆಗೆ ಬೆಂಕಿ ಬಿದ್ದಿದೆ. ಸುಲೇಮಾನ್ ಹಾಗೂ ಮಹಮ್ಮದ್ ಹನೀಪ್ ಮನೆ ಸ್ವಲ್ಪಮಟ್ಟಿಗೆ ಬೆಂಕಿಗಾಹುತಿಯಾಗಿದೆ. ಬೆಂಕಿ ಅನಾಹುತದಿಂದ ಪ್ರಾಣಹಾನಿ ಉಂಟಾಗಿಲ್ಲ. ರಾತ್ರಿ ಸುಮಾರು 11 ಗಂಟೆಗೆ ಬೆಂಕಿ ಬಿದ್ದಿದ್ದು, ಕೂಡಲೇ ಸ್ಥಳೀಯರು ಅಗ್ನಿ ಶಾಮಕ ಸಿಬ್ಬಂದಿಗೆ ತಿಳಿಸಿದ್ದಾರೆ.

ಇದನ್ನೂ ಓದಿ : ಪತಿಗೆ ಅನೈತಿಕ ಸಂಬಂಧವಿರುವ ಶಂಕೆ; ಜಿಮ್‌ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಪತ್ನಿ

ತಕ್ಷಣವೇ ಮೂರು ಅಗ್ನಿಶಾಮಕ ತಂಡಗಳು ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಈ ವೇಳೆ ಭಾರೀ ಜನಸ್ತೋಮವೇ ನೆರೆದಿದ್ದು, ಬೆಂಕಿ ನಂದಿಸಲು ಸಹಕರಿಸಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page