Connect with us

LATEST NEWS

ಹೋಟೆಲ್ ಎದುರು ನಿಲ್ಲಿಸಿದ್ದ ಕಾರಿನ ಚಕ್ರವನ್ನು ಕದ್ದ ಕಳ್ಳರು

Published

on

ಬೆಂಗಳೂರು: ಹೋಟೆಲ್ ಬಳಿ ರಾತ್ರಿಯ ವೇಳೆ ನಿಲ್ಲಿಸಿದ್ದ ಕ್ರೇಟಾ ಕಾರಿನ ಚಕ್ರವನ್ನು ಕಳ್ಳರು ಕದ್ದ ಘಟನೆ ಬೆಂಗಳೂರಿನ ಗಾಂಧಿನಗರದಲ್ಲಿ ನಡೆದಿದೆ. ಇದೀಗ ಕಳ್ಳರು ಟೈಯರ್ ಕದಿಯುತ್ತಿರುವ ವಿಡಿಯೋ ಸೋಷಿಯಾಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬೆಂಗಳೂರಿಗೆ ತಮ್ಮ ವೈಯಕ್ತಿಕ ಕೆಲಸದ ಕಾರಣಕ್ಕಾಗಿ ವಿಜಯಪುರ ಮೂಲದ ಗೋವಿಂದಗೌಡ ಎನ್ನುವವರು ಬಂದಿದ್ದರು. ಹಾಗೆಯೇ ಹೋಟೆಲ್ ಬಳಿ ಕಾರು ನಿಲ್ಲಿಸಿದ್ದರು. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಇನ್ನೋವಾ ಕಾರಿನಲ್ಲಿ ಬಂದಿದ್ದ ಮೂವರು, ಕಾರಿಗೆ ಜಾಕ್ ಹಾಕಿ ನಾಲ್ಕು ಚಕ್ರಗಳನ್ನ ಬಿಚ್ಚಿ, ಚಕ್ರಗಳಿಗೆ ಸಿಮೆಂಟ್ ಕಲ್ಲುಗಳನ್ನು ಇಟ್ಟು ಪರಾರಿಯಾಗಿದ್ದಾರೆ.

ತಮಿಳುನಾಡು ಮೂಲದ ಓರ್ವ, ಟೈಯರ್‌ ಕದಿಯುತ್ತಿರುವ ವಿಡಿಯೋ ರೆಕಾರ್ಡ್‌ ಮಾಡಿಕೊಂಡಿದ್ದು, ಪೊಲೀಸರು ಬಂದಾಗ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು. ಸದ್ಯ ಕಾರು ಮಾಲೀಕ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಚಕ್ರಗಳನ್ನು ಕದ್ದ ಕಳ್ಳರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

BELTHANGADY

ಪ್ರಜ್ವಲ್ ರೇವಣ್ಣನನ್ನು ಮೀರಿಸಿದ ವಾಲಿಬಾಲ್ ಪ್ಲೇಯರ್ ..! ಏನಿದು ಘಟನೆ ..?

Published

on

ಮಂಗಳೂರು : ಆತ ಸಾಮಾನ್ಯನಲ್ಲ, ರಸಿಕರ ರಾಜ. ಕೆಲ ತಿಂಗಳುಗಳ ಹಿಂದೆ ಪೋಕ್ಸೋ ಕೇಸ್‌ನಡಿ ಸಿಕ್ಕಿಬಿದ್ದಿದ್ದ ಪ್ರಜ್ವಲ್‌ ರೇವಣ್ಣನಿಗಿಂತಲೂ ಒಂದು ಕೈ ಮೇಲೆ ಇದ್ದಾನೆ. ಇದೀಗ,  ಆತನ ಕಾಮಕಾಂಡ ಬಯಲಾಗಿದೆ. ಯಾರು ಆತ ? ಏನದು ಘಟನೆ ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ವಾಲಿಬಾಲ್ ಆಟಗಾರನಾಗಿದ್ದ ಮೂಲತಃ ಕಾರ್ಕಳ ನಿವಾಸಿ ಸೈಯ್ಯದ್ ಎಂಬಾತ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ವಿಷಯ ಬಯಲಾಗಿದೆ. ಈ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ ಮಾಡಿ ಮೊಬೈಲ್ ಕಿತ್ತುಕೊಂಡು ನೋಡಿದಾಗ ನೂರಾರು ಹುಡುಗಿಯರ ಜೊತೆಗಿನ ಸರಸ ಸಲ್ಲಾಪದ ವಿಡಿಯೋಗಳು ಪತ್ತೆಯಾಗಿವೆ.

ಇನ್ನು ಈ ಘಟನೆ ವೇಳೆ ಸೈಯದ್​​ ಮೊಬೈಲ್ ಕಿತ್ತುಕೊಂಡು ನೋಡಿದಾಗ ಹಿಂದೂ ಸಂಘಟನೆ ಕಾರ್ಯಕರ್ತರು ಒಂದು ಕ್ಷಣ ಶಾಕ್​ ಆಗಿದ್ದಾರೆ. ಆತನ ಮೊಬೈಲ್​ ತುಂಬಾ ನೂರಾರು ಹುಡುಗಿಯರ ಜೊತೆಗಿನ ಸರಸ-ಸಲ್ಲಾಪದ ವಿಡಿಯೋಗಳೇ ತುಂಬಿದೆ. ಮೂಲತಃ ಕಾರ್ಕಳ ನಿವಾಸಿಯಾಗಿರುವ ಸೈಯದ್ ವಾಲಿಬಾಲ್ ಆಟಗಾರ ಕೂಡ ಹೌದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಏ.26 ರಂದು ಆರೋಪಿಯನ್ನು ಬಂಧಿಸಿರುವ ಪೊಲೀಸರು ಮಂಗಳೂರು ಫೋಕೋ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ರಾತ್ರಿ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ.

ಆರೋಪಿ ಸೈಯ್ಯದ್ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಉಜಿರೆಯ ಪ್ರಜ್ವಲ್ ಹಾಗೂ ಇತರರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಉಜಿರೆಯ ಹಿಂದೂ ಸಂಘಟನೆ ಕಾರ್ಯಕರ್ತರು ಸೈಯ್ಯದ್ ನನ್ನು ಹಿಗ್ಗಾಮುಗ್ಗ ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದರು. ಇದೀಗ ಹಲ್ಲೆಗೆ ಒಳಗಾಗಿರುವ ಸೈಯ್ಯದ್ ನೀಡಿದ ದೂರಿನಂತೆ ಪೊಲೀಸರು ಉಜಿರೆಯ ಪ್ರಜ್ವಲ್ ಹಾಗೂ ಇತರ ಹತ್ತಕ್ಕೂ ಹೆಚ್ಚು ಮಂದಿಯ ವಿರುದ್ದ ಪ್ರಕರಣ ದಾಖಲಿಸಿದ್ದಾರೆ

Continue Reading

LATEST NEWS

ಸಿಡಿಲು ಬಡಿದು ಕೂಲಿ ಕಾರ್ಮಿಕ ಸಾವು

Published

on

ಹರಪನಹಳ್ಳಿ: ಸಿಡಿಲು ಬಡಿದು ಕೂಲಿ ಕಾರ್ಮಿಕನೊಬ್ಬ ಸಾವನ್ನಪ್ಪಿದ ಘಟನೆ ಹರಪನಹಳ್ಳಿಯ ತೆಲಿಗಿ ಗ್ರಾಮದ ಚೆನ್ನಗಿರಿಯಲ್ಲಿ ನಡೆದಿದೆ.

ಹಾಲೇಶಪ್ಪ (48) ಮೃತಪಟ್ಟ ಕಾರ್ಮಿಕ. ಜೊತೆಗೆ ಆತನೊಂದಿಗಿದ್ದ ಆಕಳು ಕೂಡ ಸಿಡಿಲು ಬಡಿದು ಸತ್ತು ಹೋಗಿದೆ.

ಜಮೀನೊಂದರಲ್ಲಿ ಹಾಲೇಶಪ್ಪನು ಆಕಳನ್ನು ಮೇಯಿಸುತ್ತಿದ್ದ. ಈ ವೇಳೆ ಗುಡುಗು ಮಿಂಚು ಸಹಿತ ಸುರಿದ ಭಾರೀ ಮಳೆಗೆ ಹಾಲೇಶಪ್ಪನಿಗೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ತಹಶೀಲ್ದಾರ ಬಿ ವಿ ಗಿರೀಶ್ ಬಾಬು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಲುವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

ಕ್ರಿಕೆಟಿಗ ಅಖ್ತರ್ ಸೇರಿದಂತೆ ಪಾಕಿಸ್ತಾನದ 16 ಯೂಟ್ಯೂಬ್‌ ಚಾನೆಲ್‌ಗಳು ಬ್ಯಾನ್

Published

on

ಮಂಗಳೂರು/ನವದೆಹಲಿ : ಪಹಲ್ಗಾಮ್‌ನಲ್ಲಿ ನಡೆದ ಉಗ್ರ ದಾಳಿಯಿಂದ ಭಾರತ  ಹಾಗೂ ಪಾಕ್ ನಡುವಿನ ಸಂಬಂಧ ಇನ್ನಷ್ಟು ಹದಗೆಟ್ಟಿದೆ. ಭಾರತ ಪಾಕ್ ವಿರುದ್ಧ ಹಲವು ಕ್ರ,ಮಕ್ಕೆ ಮುಂದಾಗಿದೆ.  ಈ ನಡುವೆ ಭಾರತದ ವಿರುದ್ಧ ದ್ವೇಷ ಹಾಗೂ ನಕಲಿ ಸುದ್ದಿ ಪ್ರಸಾರ ಮಾಡುತ್ತಿರುವ ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ ಎಂದು ವರದಿಯಾಗಿದೆ.

ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುವ, ಸೇನೆಯ ವಿರುದ್ಧ ಪ್ರಚೋದನಕಾರಿ, ಭಾರತದ ಸಾರ್ವಭೌಮತ್ವ ಮತ್ತು ಭದ್ರತೆಯನ್ನು ದುರ್ಬಲಗೊಳಿಸುವ ಗುರಿಯನ್ನು ಹೊಂದಿರುವ ಸುಳ್ಳು ಸುದ್ದಿಗಳನ್ನು ಹರಡಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.

ಪಾಕಿಸ್ತಾನದ ಪ್ರಮುಖ ಸುದ್ದಿ ಸಂಸ್ಥೆಗಳು ಮತ್ತು ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಸೇರಿದಂತೆ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಶಿಕ್ಷಕನಾಗಿದ್ದ ಆದಿಲ್ ಹುಸೇನ್ ಉಗ್ರನಾಗಿದ್ದು ಹೇಗೆ?

ದಿ ಪಾಕಿಸ್ತಾನ್ ರೆಫರೆನ್ಸ್, ಸಮಾ ಸ್ಪೋರ್ಟ್ಸ್, ಉಜೈರ್ ಕ್ರಿಕೆಟ್. ರಾಜಿ ನಾಮಾ, ಡಾನ್ ನ್ಯೂಸ್, ಸಮಾ ಟಿವಿ, ಎಆರ್‌ವೈ ನ್ಯೂಸ್, ಬೋಲ್ ನ್ಯೂಸ್, ಜಿಯೋ ನ್ಯೂಸ್, ರಫ್ತಾರ್ ಮತ್ತು ಸುನೋ ನ್ಯೂಸ್‌ನಂತಹ ಪ್ರಮುಖ ಪಾಕಿಸ್ತಾನಿ ಸುದ್ದಿವಾಹಿನಿಗಳನ್ನು ನಿಷೇಧಿಸಲಾಗಿದೆ.

 

 

 

Continue Reading
Advertisement

Trending

Copyright © 2025 Namma Kudla News

You cannot copy content of this page