Connect with us

LATEST NEWS

ದಿನದಲ್ಲಿಎರಡು ಬಾರಿ ಕಣ್ಮರೆಯಾಗುತ್ತೆ ಈ ದೇವಾಲಯ..! ಇಲ್ಲಿಗೆ ಬಂದ್ರೆ ಆಗುತ್ತೆ ಪಾಪ ವಿಮೋಚನೆ!

Published

on

ಗುಜರಾತ್ : ಈ ದೇವಸ್ಥಾನ ದಿನದಲ್ಲಿ ಎರಡು ಬಾರಿ ಕಣ್ಮರೆಯಾಗುತ್ತೆ. ಭಕ್ತಾದಿಗಳು ದೇವರ ದರ್ಶನಕ್ಕಾಗಿ ಕೆಲವೊಮ್ಮೆ ಗಂಟೆಗಟ್ಟಲು ಕಾದು ಕುಳಿತಿರುತ್ತಾರೆ. ಹೌದು, ನಿಮಗೆ ಇದನ್ನು ಕೇಳಿದ್ರೆ ಆಶ್ಚರ್ಯ ಆದ್ರು ಇದು ಸತ್ಯ!

ಹೇಗಿದೆ ಈ ದೇವಸ್ಥಾನ?

ಗುಜರಾತ್‌ನ  ಜಂಬೂಸರ್‌ನ ಕವಿ ಕಾಂಬೋಯಿ ಗ್ರಾಮದಲ್ಲಿರುವ ಶ್ರೀ ಸ್ತಂಭೇಶ್ವರ ಮಹಾದೇವ ದೇವಾಲಯ ದಿನಕ್ಕೆ ಎರಡು ಬಾರಿ ಮಾತ್ರ ಗೋಚರಿಸುತ್ತದೆ. ಇದು ಮಹಾದೇವನಿಗೆ ಅರ್ಪಿತವಾದ ದೇವಾಲಯವಾಗಿದೆ. ಇಲ್ಲಿ ಶಿವನ ಮೂರ್ತಿಯ ಜೊತೆ ಶಿವಲಿಂಗವನ್ನು ಸ್ಥಾಪನೆ ಮಾಡಲಾಗಿದೆ. ಸ್ತಂಭಗಳ ಮೇಲೆ ಶಿವನಿರುವುದರಿಂದ ಈ ದೇವಾಲಯವನ್ನು ಸ್ತಂಭೇಶ್ವರ ದೇವಾಲಯ ಎಂದು ಕರೆಯುತ್ತಾರೆ. ಸಮುದ್ರದ ಉಬ್ಬರ ಹೆಚ್ಚಾದಾಗ ದೇವಾಲಯ ನೀರಿನಲ್ಲಿ ಮುಳುಗಿ ಕಣ್ಮರೆಯಾಗುತ್ತದೆ. ಇದನ್ನು ಕಣ್ಮರೆಯಾಗುವ ಶಿವನ ದೇವಾಲಯ ಅಂತಾನೂ ಕರೀತಾರೆ.

ಸಮುದ್ರದ ಮಧ್ಯದಲ್ಲಿದೆ ಈ  ಶಿವಾಲಯ :
ಹೌದು, ಈ ದೇವಾಲಯ ಹಲವು ವಿಶಿಷ್ಟತೆಗಳಿಂದ ಗಮನ ಸೆಳೆಯುತ್ತಿದೆ. ಇದು ಪುರಾತನ ದೇವಾಲಯವಾಗಿದ್ದು, ಸುಮಾರು 150 ವರ್ಷಗಳಷ್ಟು ಹಳೆಯದು ಎಂಬ ಉಲ್ಲೇಖವಿದೆ. ಈ ದೇವಾಲಯವು ದಿನಕ್ಕೆ ಎರಡು ಬಾರಿ ಮಾತ್ರ ಗೋಚರಿಸುತ್ತದೆ ಎಂದು ಹೇಳಲಾಗುತ್ತದೆ. ಈ ದೇವಾಲಯವನ್ನು ಸಮುದ್ರದ ಮಧ್ಯದಲ್ಲಿ ನಿರ್ಮಿಸಲಾಗಿದೆ. ಆದ್ದರಿಂದ ಸಮುದ್ರದ ನೀರಿನ ಮಟ್ಟ ಹೆಚ್ಚಾದಾಗಲೆಲ್ಲಾ ಈ ದೇವಾಲಯವು ಗೋಚರಿಸುವುದಿಲ್ಲ. ಅದೇ ಸಮಯದಲ್ಲಿ, ನೀರಿನ ಮಟ್ಟ ಕಡಿಮೆಯಾದಾಗ, ದೇವಾಲಯವು ಗೋಚರಿಸುತ್ತದೆ ಎಂದು ಹೇಳಲಾಗಿದೆ. ಈ ವೇಳೆ ಶಿವನಿಗೆ ಅಭಿಷೇಕವನ್ನು ಸಮುದ್ರ ರಾಜನೇ ಮಾಡುತ್ತೇನೆ. ಈ ದೇವಾಲಯವು ಅರಬ್ಬಿ ಸಮುದ್ರ ಹಾಗೂ ಕ್ಯಾಂಬೆ ಕೊಲ್ಲಿಯ ನಡುವೆ ಇದೆ. ತೀರದಿಂದ ಕೆಲವೇ ಮೀಟರ್ ದೂರದಲ್ಲಿದೆ. ದೇವಾಲಯದ ವಾಸ್ತುಶೈಲಿಯಿಂದಲ್ಲದೇ ಇದ್ದರೂ, ಅದರ ವಿಶಿಷ್ಟ ಸ್ಥಳದಿಂದಾಗಿ ಭಾರತದ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಒಂದಾಗಿದೆ.

ತಾರಕಾಸುರನಿಗೂ ಈ ದೇವಾಲಯಕ್ಕೂ ಇದೆ ಸಂಬಂಧ :

ಈ ಪುರಾತನ ದೇವಾಲಯದ ಸುತ್ತ ಹಲವು ದಂತಕತೆಗಳಿವೆ. ತಾರಕಾಸುರನಿಗೂ ಈ ದೇಗುಲಕ್ಕೂ ಸಂಬಂಧವಿದೆ ಎನ್ನಲಾಗಿದೆ.  ತಾರಕಾಸುರ ಒಬ್ಬ ರಾಕ್ಷಸ. ಆದರೆ ಶಿವ ಭಕ್ತ. ಅವನ ಅಚಲವಾದ ಭಕ್ತಿಯನ್ನು ಭಗವಾನ್ ಶಿವ ಮೆಚ್ಚುತ್ತಾನೆ. ಒಮ್ಮೆ ಶಿವ ದೇವರಲ್ಲಿ ರಾಕ್ಷಸ ವರವನ್ನು ಕೇಳಿದಾಗ, ಶಿವನು ತನ್ನ ಆರು ದಿನದ ಮಗನಿಂದ ಮಾತ್ರ ನಿನ್ನ ಜೀವವನ್ನು ಕೊನೆಗೊಳಿಸಲು ಸಾಧ್ಯ ಎಂದು ವರ ನೀಡುತ್ತಾನೆ. ಭಗವಾನ್ ಶಿವನ ಮೂರನೇ ಕಣ್ಣಿನ ಜ್ವಾಲೆಯಿಂದ ಭಗವಾನ್ ಕಾರ್ತಿಕೇಯನ ಸೃಷ್ಟಿಯಾಗುತ್ತದೆ. ಕಾರ್ತಿಕೇಯ ತಾರಕಾಸುರನ ವಧಿಸುವ ವೇಳೆ ರಾಕ್ಷಸನ ಭಕ್ತಿಗೆ ಪ್ರೇರೇಪಿತನಾಗುತ್ತಾನಂತೆ. ಹಾಗಾಗಿ ಶಿವನ ಅಪ್ಪಟ ಭಕ್ತನನ್ನು ವಧಿಸಿದ್ದಕ್ಕಾಗಿ ಪಶ್ಚಾತ್ತಾಪ ಪಟ್ಟು ಶಿವನ ಧ್ಯಾನವನ್ನು ಮಾಡುತ್ತಾನೆ. ಬಳಿಕ ಇದೇ ಸ್ಥಳದಲ್ಲಿ ಶಿವಲಿಂಗವನ್ನು ಸ್ಥಾಪನೆ ಮಾಡುತ್ತಾನೆ ಎಂದು ಪುರಾಣ ಹೇಳುತ್ತದೆ.

READ MORE..; ಅರ್ಚಕರಿಂದಲೇ ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ..!! ವಿಡಿಯೋ ವೈರಲ್

ಮೋಕ್ಷ ಪ್ರಾಪ್ತಿ :

ಶಿವನ ಅನುಮತಿಯಿದ್ದರೆ ಮಾತ್ರ ಈ ದೇವಾಲಯವನ್ನು ನೋಡಲು ಸಾಧ್ಯ ಎಂಬ ನಂಬಿಕೆ ಇದೆ. ಇಲ್ಲಿಗೆ ಬಂದವರು ತಮ್ಮ ಪಾಪ ವಿಮೋಚನೆಯನ್ನು ಮಾಡಿಕೊಳ್ಳುತ್ತಾರೆ ಎನ್ನಲಾಗಿದೆ. ಇಲ್ಲಿಗೆ ಬಂದರೆ ತಮಗೆ ಮೋಕ್ಷ ಕೂಡಾ ಲಭಿಸುತ್ತೆ ಎಂದು ಹೇಳಲಾಗುತ್ತದೆ. ಆದರೆ, ಈ ದೇವಾಲಯಕ್ಕೆ ಪ್ರವಾಸಿಗರು ಮಧ್ಯಾಹ್ನ 2 ರಿಂದ 3 ಗಂಟೆವಯರೆಗೆ ಮಾತ್ರ ಭೇಟಿ ಕೊಡಬಹುದಾಗಿದೆ. ಉಳಿದ ಸಮಯ ಸಮುದ್ರದ ಉಬ್ಬರ ಹೆಚ್ಚಿರುವುದರಿಂದ ಪ್ರವಾಸಿಗರಿಗೆ ದೇವಾಲಯದ ಒಳಗೆ ಪ್ರವೇಶ ನೀಡಲಾಗುವುದಿಲ್ಲ.

 

DAKSHINA KANNADA

ಕಲ್ಲರ್ಪೆಯಲ್ಲಿ ಮತ್ತೊಂದು ಅಪಘಾತ; ಕಾರು ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ

Published

on

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಕಾರು ಬೈಕ್ ಮುಖಾಮುಖಿ ಡಿಕ್ಕಿಯೂ ಆ ಭಾಗದಲ್ಲಿನ ರಸ್ತೆ ಸುರಕ್ಷ ತಾ ಕ್ರಮಗಳ ವೈಫಲ್ಯವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ಈ ದುರ್ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರನ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿಯೂ ಇದೇ ಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾಗಿತ್ತು. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದರು.

ಇದನ್ನೂ ಓದಿ: ಗೂಗಲ್ ಮ್ಯಾಪ್ ನಂಬಿ ಪ್ರಯಾಣಿಸುವವರೇ ಎಚ್ಚರ; ಗದ್ದೆಗೆ ಬಿತ್ತು ಟಿಟಿ

ಇದೀಗ ಮತ್ತೊಂದು ಘಟನೆ ನಡೆದಿದ್ದು, ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಕಲ್ಲರ್ಪೆ ವಲಯವು ಅಪಘಾತಗಳ ಕೇಂದ್ರಬಿಂದುವಾಗಿ ಪರಿವರ್ತನೆಯಾಗುತ್ತಿರುವುದು ಸ್ಥಳಿಯರಲ್ಲಿ ಆತಂಕ ಮೂಡಿಸಿದೆ.

Continue Reading

LATEST NEWS

ಪೂಜಾ ಖೇಡ್ಕರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್

Published

on

ಮಂಗಳೂರು/ನವದೆಹಲಿ: ನಕಲಿ ಪ್ರಮಾಣಪತ್ರ ಬಳಸಿ ನಾಗರಿಕ ಸೇವಾ ಪರೀಕ್ಷೆಯ ಲಾಭ ಪಡೆದುಕೊಂಡ ಆರೋಪ ಎದುರಿಸುತ್ತಿರುವ ಮಾಜಿ ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ.

2022ರ ನಾಗರಿಕ ಸೇವೆಗಳ ಪರೀಕ್ಷೆಗೆ ಅರ್ಹತೆ ಪಡೆಯಲು ದಾಖಲೆಗಳನ್ನು ನಕಲಿ ಮಾಡಿದ ಆರೋಪ ಹೊತ್ತಿರುವ ಮಾಜಿ ಐಎಎಸ್ ತರಬೇತಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ.

ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಸುಪ್ರೀಂ ಕೋರ್ಟ್ ಪೀಠವು, ವಂಚನೆ ಪ್ರಕರಣದ ತನಿಖೆಗೆ ಸಹಕರಿಸುವಂತೆ ಖೇಡ್ಕರ್ ಅವರಿಗೆ ನಿರ್ದೇಶನ ನೀಡಿದೆ. ಆದಾಗ್ಯೂ, ದೆಹಲಿ ಪೊಲೀಸರ ವಕೀಲರು ಖೇಡ್ಕರ್ ಅವರಿಗೆ ನಿರೀಕ್ಷಣಾ ಜಾಮೀನು ನೀಡುವುದನ್ನು ತೀವ್ರವಾಗಿ ವಿರೋಧಿಸಿದರು. ತನಿಖೆಯಲ್ಲಿ ಅವರು ಸಹಕರಿಸದಿರುವುದು ಮತ್ತು ಅವರ ವಿರುದ್ಧದ ಆರೋಪಗಳು ಗಂಭೀರವಾಗಿವೆ ಎಂದು ಹೇಳಿದರು.

ಆಕೆ ಮಾದಕ ದ್ರವ್ಯ ವ್ಯಸನಿಯಲ್ಲ..!
ಇದನ್ನು ಆಲಿಸಿದ ಪೀಠ ಖೇಡ್ಕರ್ ಅಂತದ್ದೇನು ಗಂಭೀರ ಅಪರಾಧ ಮಾಡಿದ್ದಾರೆ “ಆಕೆ ಮಾದಕ ದ್ರವ್ಯ ವ್ಯಸನಿಯಲ್ಲ ಅಥವಾ ಭಯೋತ್ಪಾದಕಿ ಅಲ್ಲ. ಆಕೆ ಕೊಲೆ ಮಾಡಿಲ್ಲ. ಆಕೆ ಎನ್‌ಡಿಪಿಎಸ್ ಅಪರಾಧಿಯೂ ಅಲ್ಲ. ನಿಮಗೆ ಒಂದು ವ್ಯವಸ್ಥೆ ಅಥವಾ ಸಾಫ್ಟ್‌ವೇರ್ ಇರಬೇಕು. ನೀವು ತನಿಖೆಯನ್ನು ಪೂರ್ಣಗೊಳಿಸಿ. ಆಕೆ ಎಲ್ಲವನ್ನೂ ಕಳೆದುಕೊಂಡಿದ್ದಾಳೆ ಇನ್ನು ಎಲ್ಲಿಯೂ ಆಕೆಗೆ ಸಿಗುವುದಿಲ್ಲ” ಎಂದು ನ್ಯಾಯಪೀಠ ಮೌಖಿಕವಾಗಿ ಹೇಳಿದೆ. “ಪ್ರಕರಣದ ವಾಸ್ತವಾಂಶ ಮತ್ತು ಸನ್ನಿವೇಶಗಳನ್ನು ಪರಿಗಣಿಸಿ, ದೆಹಲಿ ಹೈಕೋರ್ಟ್ ಅರ್ಜಿದಾರರಿಗೆ ಜಾಮೀನು ನೀಡಬೇಕಾಗಿದ್ದ ಸೂಕ್ತ ಪ್ರಕರಣ ಇದು ಎಂದು ಪೀಠ ಹೇಳಿದೆ.

ಇದನ್ನೂ ಓದಿ: ಕನ್ನಡ ಮಾತನಾಡುವುದಿಲ್ಲ ಎಂದಿದ್ದ ಬ್ಯಾಂಕ್ ಮ್ಯಾನೇಜರ್ ರಾತ್ರೋರಾತ್ರಿ ಎತ್ತಂಗಡಿ

2023ರ ಬ್ಯಾಚ್‌ನ ಐಎಎಸ್ ಪ್ರೊಬೇಷನರಿ ಅಧಿಕಾರಿಯಾಗಿದ್ದ ಪೂಜಾ ತನ್ನ ಆಯ್ಕೆಗಾಗಿ ಒಬಿಸಿ ಕೋಟಾ ಮತ್ತು ಅಂಗವಿಕಲರ ಕೋಟಾವನ್ನು ದುರುಪಯೋಗಪಡಿಸಿಕೊಂಡು ಸೌಲಭ್ಯಗಳನ್ನು ಪಡೆದಿದ್ದರು ಎಂದು ಆರೋಪಿಸಲಾಗಿದೆ.

ಜುಲೈನಲ್ಲಿ ಆಕೆಯ ವಿರುದ್ಧ ದೆಹಲಿ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಜುಲೈ 31ರಂದು ಆಕೆಯ ನೇಮಕಾತಿ ಆದೇಶವನ್ನು ಯುಪಿಎಸ್‌ಸಿ ರದ್ದುಗೊಳಿಸಿತ್ತು. ಜೊತೆಗೆ ಭವಿಷ್ಯದ ಎಲ್ಲ ಪರೀಕ್ಷೆಗಳು ಮತ್ತು ಆಯ್ಕೆಗಳಿಂದ ಡಿಬಾರ್ ಮಾಡಲಾಗಿದೆ.

 

 

 

Continue Reading

LATEST NEWS

ಗೂಗಲ್ ಮ್ಯಾಪ್ ನಂಬಿ ಪ್ರಯಾಣಿಸುವವರೇ ಎಚ್ಚರ; ಗದ್ದೆಗೆ ಬಿತ್ತು ಟಿಟಿ

Published

on

ಚಿಕ್ಕಮಗಳೂರು: ರಾತ್ರಿ ವೇಳೆ ಗೂಗಲ್ ಮ್ಯಾಪ್ ನೋಡಿಕೊಂಡು ಪ್ರಯಾಣಿಸುವಾಗ ಸ್ವಲ್ಪ ಜಾಗರೂಕರಾಗಿರಬೇಕು. ಮ್ಯಾಪ್ ದಾರಿ ತೋರಿಸುತ್ತದೆ ಎಂದು ಅದು ಹೇಳಿದ ದಾರಿಯಲ್ಲಿ ಹೋದರೆ ಅಪಾಯ ಕಟ್ಟಿಟ್ಟ ಬುತ್ತಿ.

ಇಂತಹದ್ದೇ ಘಟನೆ ಒಂದು ಚಿಕ್ಕಮಗಳೂರಿನ ಆಲ್ದೂರು ಬಳಿ ಬೆಳಕಿಗೆ ಬಂದಿದೆ. ಗೂಗಲ್ ಮ್ಯಾಪ್ ನಂಬಿ ಬಂದಿದ್ದ ಪ್ರವಾಸಿಗರು, ವಾಹನವನ್ನು ಗದ್ದೆಗೆ ಇಳಿಸಿಕೊಂಡು ಪರದಾಡಿದ್ದಾರೆ.

ಹೌದು.. ಬೆಂಗಳೂರು ಮೂಲದ ಪ್ರವಾಸಿಗರು ಬಾಳೆಹೊನ್ನೂರು ಕಡೆಯಿಂದ ಮೂಡಿಗೆರೆಗೆ ತೆರಳುತ್ತಿದ್ದರು. ಈ ವೇಳೆ, ಗೂಗಲ್ ಮ್ಯಾಪ್ ಕೈ ಕೊಟ್ಟಿದ್ದು, ವಾಹನ ಗದ್ದೆ ಬಳಿ ಹೋಗಿ ಸಿಕ್ಕಿ ಹಾಕಿಕೊಂಡಿದೆ. ಇದರಿಂದ ವಾಹನ ವಾಪಸ್ ತೆಗೆಯಲಾಗದೆ ಪ್ರವಾಸಿಗರು ಕೆಲವು ಕಾಲ ಅಲ್ಲೇ ಪರದಾಡಿದ್ದಾರೆ.

ಇದನ್ನೂ ಓದಿ: ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ

ಪ್ರವಾಸಿಗರ ಪರದಾಟ ನೋಡಿ, ಸ್ಥಳೀಯರು ಟ್ರ್ಯಾಕ್ಟರ್‌ಗೆ ಟಿಟಿಯನ್ನು ಕಟ್ಟಿ, ರಸ್ತೆಯ ಬಳಿ ತಂದು ಬಿಟ್ಟಿದ್ದಾರೆ. ಬಳಿಕ ಸ್ಥಳಿಯರಿಂದ ರಸ್ತೆಯ ಬಗ್ಗೆ ಮಾಹಿತಿ ಪಡೆದು, ಗೂಗಲ್ ಮ್ಯಾಪ್ ಆಫ್ ಮಾಡಿ ಪ್ರವಾಸಿಗರು ಅಲ್ಲಿಂದ ತೆರಳಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page