Connect with us

LATEST NEWS

ಈ ಬಾರಿಯೂ ರಾಜ್ಯಲ್ಲಿ ಬಿಜೆಪಿಗೆ ಸ್ಪಷ್ಟವಾದ ಬಹುಮತ ನಿಶ್ಚಿತ : ಸಿಎಂ ಬೊಮ್ಮಾಯಿ

Published

on

ಈ ಬಾರಿ ಕೂಡ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟವಾದ ಬಹುಮತ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಬೆಂಗಳೂರು : ಈ ಬಾರಿ ಕೂಡ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟವಾದ ಬಹುಮತ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ದೇವಾಲಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಹಳಷ್ಟು ಚುನಾವಣಾ ಸಮೀಕ್ಷೆಗಳು ನಡೆದಿದ್ದು, ಪೈಪೋಟಿ ಯನ್ನೇ ತೋರಿಸುತ್ತಿದೆ. ಕಾಂಗ್ರೆಸ್ ಪರವಾಗಿ ಇಲ್ಲ. ಚುನಾವಣೆಗೆಇನ್ನೂ ಒಂದೂವರೆ ತಿಂಗಳಿದ್ದು, ಬಹಳಷ್ಟು ಬದಲಾವಣೆಗಳು ಕಾಣುತ್ತಿವೆ ಎಂದರು.

ಪಟ್ಟಿ ತಯಾರು ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ಇನ್ನೊಂದು ವಾರದಲ್ಲಿ ಬಿಡುಗಡೆ ಮಾಡಲಾಗುವುದು ಎಂದರು.

ಸಂಭಾವ್ಯ ಅಭ್ಯರ್ಥಿಗಳ ಅಭಿಪ್ರಾಯ ಸಂಗ್ರಹ ಸಭೆ ನಡೆಯುತ್ತಿರುವ ಬಗ್ಗೆ ಮಾತನಾಡಿ ತಳಮಟ್ಟದ ಕ್ಷೇತ್ರ ಮಟ್ಟದ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹ ಮಾಡುತ್ತಿದ್ದು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪಾರಾಮರ್ಶಿಸಿ ಸಂಸದೀಯ ಮಂಡಳಿಗೆ ಸಲ್ಲಿಸಲಾಗುವುದು ಎಂದರು.

ಸಿದ್ದರಾಮಯ್ಯ ಹತಾಶರಾಗಿದ್ದಾರೆ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹತಾಶರಾಗಿದ್ದಾರೆ. 2013 ರಲ್ಲಿ ಕೊನೆ ಚುನಾವಣೆ ಎಂದರು. 2018 ರಲ್ಲಿ ಮತ್ತೆ ಸ್ಪರ್ಧಿಸಿದರು. ಈಗ ಪುನಃ ಕನಸು ಕಾಣುತ್ತಿದ್ದಾರೆ. ವ್ಯಕ್ತಿಯೊಬ್ಬರು ಮುಖ್ಯ ಮಂತ್ರಿಯಾಗುವುದು ಮುಖ್ಯ ವಲ್ಲ. ಮುಖ್ಯ ಮಂತ್ರಿಯಾಗಿ ರಾಜ್ಯದ ಜನಕ್ಕೇನು ಮಾಡಬಲ್ಲರು ಎನ್ನುವುದು ಮುಖ್ಯ ಎಂದರು. 2018 ರಲ್ಲಿ ಜನ ತಿರಸ್ಕರಿಸಿದ್ದಾರೆ ಈ ಬಾರಿಯೂ ತಿರಸ್ಕರಿಸಲಿದ್ದಾರೆ ಎಂದರು.

ಮೀಸಲಾತಿ ಚುನಾವಣಾ ಗಿಮಿಕ್ ಎಂದಿರುವ ವಿರೋಧ ಪಕ್ಷಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಇದನ್ನು ಅವರಿದಾಗ ಮಾಡಬಹುದಿತ್ತು. ಇದು 30 ವರ್ಷಗಳ ಬೇಡಿಕೆ. ಬದ್ಧತೆ ಇರದ ಕಾರಣ ಅವರು ಈ ಸಾಹಸಕ್ಕೆ ಹೋಗಲಿಲ್ಲ. ಜನರನ್ನು ಮತ ಬ್ಯಾಂಕ್ ಆಗಿ ಕಾಣುತ್ತಾರೆ. ಅವರಿಗೆ ಅಸಾಧ್ಯವಾದುದನ್ನು ಮಾವು ಮಾಡಿದ್ದೇವೆ. ಹೀಗಾಗಿ ಅವರಿಗೆ ತಳಮಳ ಶುರುವಾಗಿದ್ದು, ಎಲ್ಲ ದರಲ್ಲಿಯೂ ರಾಜಕೀಯ ಮಾಡುತ್ತಾರೆ ಎಂದರು.

ವರುಣಾದಲ್ಲಿ ಪ್ರಬಲ ಪೈಪೋಟಿ
ವರುಣಾ ಕ್ಷೇತ್ರದಲ್ಲಿ ಸಮೀಕ್ಷೆ ನಡೆಸಿದ ಬಳಿಕ ಬಿಎಸ್ ವೈ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ವರುಣಾದಲ್ಲಿ ನಾವು ಖಂಡಿತವಾಗಿ ಪ್ರಬಲವಾದ ಪೈಪೋಟಿ ನೀಡುತ್ತೇವೆ.
ವಿಜಯೇಂದ್ರ ಅವರು ಸ್ಪರ್ಧೆ ಮಾಡಬೇಕು ಎಂದು ಜನರ ಅಭಿಪ್ರಾಯವಿದೆ. ಅಂತಿಮವಾಗಿ ಎಲ್ಲಿ‌ ನಿಲ್ಲಬೇಕು ಎಂಬುದನ್ನ ಯಡಿಯೂರಪ್ಪ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.

LATEST NEWS

ಬೆಟ್ಟ ಹತ್ತುವಾಗ ಕಾಲು ಜಾರಿ ಬಿ*ದ್ದು ವೃದ್ಧ ಸಾ*ವು

Published

on

ಮಂಗಳೂರು/ರಾಮನಗರ : ಬೆಟ್ಟ ಹತ್ತುವಾಗ ಕಾಲು ಜಾ*ರಿ ಬಿ*ದ್ದು ವೃದ್ಧ ಸಾ*ವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ರೇವಣಸಿದ್ದೇಶ್ವರ ಬೆಟ್ಟದಲ್ಲಿ ನಡೆದಿದೆ. ಬಿಡದಿ ಹೋಬಳಿಯ ಕೆಂಪನಹಳ್ಳಿ ನಿವಾಸಿ, 65 ವರ್ಷದ ರೇವಣ್ಣ ಮೃ*ತ ದು*ರ್ದೈವಿ.

ಕುಟುಂಬ ಸಮೇತ ರೇವಣಸಿದ್ದೇಶ್ವರ ಬೆಟ್ಟಕ್ಕೆ ಬಂದಿದ್ದ ರೇವಣ್ಣ ದೇವರ ದರ್ಶನ ಮಾಡಲು ಬೆಟ್ಟ ಹತ್ತುವಾಗ ಕಾಲು ಜಾ*ರಿ ಕಂದಕಕ್ಕೆ ಬಿ*ದ್ದು, ಸ್ಥಳದಲ್ಲೇ ಕೊನೆಯು*ಸಿರೆಳೆದಿದ್ದಾರೆ.

ಇದನ್ನೂ ಓದಿ : ಹಾಲಿನ ಟ್ಯಾಂಕರ್‌ಗೆ ಡಿ*ಕ್ಕಿಯಾಗಿ ಸುಟ್ಟು ಕರಕಲಾದ ಕಾರು

ವಿಷಯ ತಿಳಿದು ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರೇವಣ್ಣ ಶ*ವ ಮೇಲಕ್ಕೆತ್ತಿದ್ದಾರೆ. ಘಟನೆ ಬಗ್ಗೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ : ಡಿಸ್ಕಸ್ ಥ್ರೋನಲ್ಲಿ ಮಂಗಳೂರಿನ ಕೃತಿ ಎನ್.ಪಿ ಪ್ರಥಮ

Published

on

ಮಂಗಳೂರು/ಬೆಂಗಳೂರು : ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ 17 ವರ್ಷದ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ 2025-2026 ನಡೆಯಿತು.

ಡಿಸ್ಕಸ್ ಥ್ರೋ ವಿಭಾಗದಲ್ಲಿ ಬಾಲವಿಕಾಸ ಇಂಗ್ಲೀಷ್ ಮೀಡಿಯಂ ಮಾಣಿಯ ವಿದ್ಯಾರ್ಥಿನಿ  ಕೃತಿ. ಎನ್.ಪಿ ಪ್ರಥಮ ಸ್ಥಾನ ಪಡೆದಿದ್ದು,  ರಾಷ್ಟ್ರಮಟ್ಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾಳೆ.

ಇದನ್ನೂ ಓದಿ : ಹಾಲಿನ ಟ್ಯಾಂಕರ್‌ಗೆ ಡಿ*ಕ್ಕಿಯಾಗಿ ಸುಟ್ಟು ಕರಕಲಾದ ಕಾರು

ಕೃತಿ ಗೋಳ್ತಮಜಲು ಗ್ರಾಮದ ನಿವಾಸಿ ದಿನೇಶ್.ಬಿ ಮತ್ತು ತೇಜಾಕ್ಷಿ ದಂಪತಿ ಪುತ್ರಿ.

Continue Reading

LATEST NEWS

ಹಾಲಿನ ಟ್ಯಾಂಕರ್‌ಗೆ ಡಿ*ಕ್ಕಿಯಾಗಿ ಸುಟ್ಟು ಕರಕಲಾದ ಕಾರು

Published

on

ಮಂಗಳೂರು/ರಾಮನಗರ : ಹಾಲಿನ ಟ್ಯಾಂಕರ್‌ ಗೆ ಹಿಂಬದಿಯಿಂದ ಡಿ*ಕ್ಕಿಯಾಗಿ ಕಾರೊಂದು ಹೊ*ತ್ತಿ ಉರಿದ ಘಟನೆ ರಾಮನಗರದ ಸಂಗಬಸವನದೊಡ್ಡಿ ಗ್ರಾಮದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಡಸ್ಟರ್ ಕಾರು ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ವೇಗವಾಗಿ ಹೋಗುತ್ತಿದ್ದ ಚಾಲಕ ಸಂಗಬಸವನದೊಡ್ಡಿ ಬಳಿ ನಿಯಂತ್ರಣ ಕಳೆದುಕೊಂಡು ಮುಂದಿನಿಂದ ಹೋಗುತ್ತಿದ್ದ ಹಾಲಿನ ಟ್ಯಾಂಕರ್‌ ಗೆ ಗು*ದ್ದಿದ್ದಾನೆ. ಕೂಡಲೇ ಕಾರಿನಲ್ಲಿ ದಟ್ಟ ಹೊಗೆ ಕಾಣಿಸಿಕೊಳ್ಳತೊಡಗಿದೆ. ಅಪಾಯ ಅರಿತ ಕಾರಿನಲ್ಲಿದ್ದವರು ತಕ್ಷಣ ಕೆಳಕ್ಕಿಳಿದು ದೂರಕ್ಕೆ ಓಡಿದ್ದಾರೆ.  ಅದಾದ ಕೆಲವೇ ಕ್ಷಣದಲ್ಲಿ ಕಾರಿನಲ್ಲಿ ಬೆಂ*ಕಿ ಕಾಣಿಸಿಕೊಂಡು ಹೊ*ತ್ತಿ ಉ*ರಿದಿದೆ.

ಇದನ್ನೂ ಓದಿ : ಇಂದೆಂಥ ದುರವಸ್ಥೆ! 108 ಆ್ಯಂಬುಲೆನ್ಸ್ ಸಿಗದೆ ಪರದಾಟ; ಗೂಡ್ಸ್ ಟೆಂಪೋ ಮೂಲಕ ರೋಗಿ ಆಸ್ಪತ್ರೆಗೆ!

ಸ್ಥಳಕ್ಕೆ ಬಂದ ಅ*ಗ್ನಿಶಾಮಕ ದಳದ ಸಿಬ್ಬಂದಿ ಬೆಂ*ಕಿ ನಂದಿಸಿದ್ದಾರೆ. ಕಾರು ಸು*ಟ್ಟು ಕರಕಲಾಗಿದ್ದು, ಟ್ಯಾಂಕರ್‌ ನ ಹಿಂಭಾಗ ಜಖಂಗೊಂಡಿದೆ.  ಘಟನೆ ಬಗ್ಗೆ ರಾಮನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page