Connect with us

LATEST NEWS

ಚಾರ್ಜರ್ ಕೇಬಲ್ ಗೆ ಗಮ್ ಟೇಪ್ ಸುತ್ತಿ ಚಾರ್ಜ್ ಮಾಡುವವರು ಇದನ್ನು ಓದಲೇ ಬೇಕು !

Published

on

ಮಂಗಳೂರು: ಕೆಲವರೆಲ್ಲಾ ಲಕ್ಷ-ಲಕ್ಷ ಕೊಟ್ಟು ಮೊಬೈಲ್ ತೆಗೆದುಕೊಳ್ಳುತ್ತಾರೆ. ಆದ್ರೆ, ಅದಕ್ಕಿಂತ ಕಡಿಮೆಯಲ್ಲಿ ಸಿಗುವ ಚಾರ್ಜರ್ ತೆಗೆದುಕೊಳ್ಳಲು ಜಿಪುಣತನ ತೋರಿಸುತ್ತಾರೆ. ಹಳೇ ಚಾರ್ಜರ್ ಗಳಿಗೆ ಗಮ್ ಟೇಪ್, ಪ್ಲಾಸ್ಟರ್ ಅಥವಾ ರಬ್ಬರ್ ಹಾಕಿ ಮೊಬೈಲ್ ಚಾರ್ಜ್ ಮಾಡುವುದರಿಂದ ಅಪಘಾತಗಳು ಸಂಭವಿಸುತ್ತಿವೆ ಎಂದು ಅಧ್ಯಯನ ಒಂದು ದೃಢ ಪಡಿಸಿದೆ.


ಇದು ತುಂಬಾ ಮನೆಗಳಲ್ಲಿ ಸಾಮಾನ್ಯವಾಗಿ ಕಂಡು ಬರುವ ದೃಶ್ಯವಾಗಿದೆ. ಯುನೈಟೆಡ್ ಕಿಂಗ್ ಡಮ್ ನ ಎಲೆಕ್ಟ್ರಿಕಲ್ ಸೇಫ್ಟಿ ಇನ್ ಸ್ಟಿಟ್ಯೂಟ್ ಈ ಬಗ್ಗೆ ಅಧ್ಯಯನ ನಡೆಸಿದೆ. ಕಳಪೆ ಗುಣಮಟ್ಟದ ಚಾರ್ಜರ್ ಹಾಗೂ ಚೈನೀಸ್ ಚಾರ್ಜರ್ ಗಳಿಂದಲೂ ಅಪಘಾತಗಳು ಸಂಭವಿಸುತ್ತಿವೆ. ಕಳೆದ ಐದು ವರ್ಷಗಳಲ್ಲಿ, ಅಪಘಾತಗಳಿಗೆ ಗುರಿಯಾಗುವ ಎಲೆಕ್ಟ್ರಾನಿಕ್ ಯಂತ್ರೋಪಕರಣಗಳ ಕುರಿತು ವಿವಿಧ ದೇಶಗಳಲ್ಲಿ ಅಧ್ಯಯನಗಳನ್ನು ನಡೆಸಿದೆ.
ನೀವು ಎಷ್ಟೇ ದುಬಾರಿ ಮೊಬೈಲ್ ತೆಗೆದುಕೊಂಡರು ಕೂಡ, ಕಡಿಮೆ ಬೆಲೆಯ ಚಾರ್ಜರ್ ನಿಮ್ಮ ಮೊಬೈಲ್ ಹಾಳು ಮಾಡುತ್ತವೆ. ಇನ್ನೂ, ಚಾರ್ಜರ್ ಖರೀದಿಸುವಾಗ ತೂಕವಿಲ್ಲದೆ ಹಗುರವಾಗಿ ಕಂಡರೆ ಅದು ಒಳ್ಳೆಯದಲ್ಲ. ಬದಲಾಗಿ ಅದು ಉತ್ತಮ ಗುಣಮಟ್ಟದಿಂದ ಕೂಡಿರುವುದಿಲ್ಲ. ಉತ್ತಮವಾದ ಚರ್ಜಾರ್ ಗಳು ಸ್ವಲ್ಪ ಭಾರವಾಗಿರುತ್ತದೆ.

ಇದನ್ನೂ ಓದಿ: ಮದ್ಯಪ್ರಿಯರಿಗೆ ಅಬಕಾರಿ ಇಲಾಖೆಯಿಂದ ಸಿಹಿಸುದ್ಧಿ !!
ಇತ್ತೀಚೆಗೆ, ಪ್ರಪಂಚದಾದ್ಯಂತ ಸೆಲ್ ಫೋನ್ ಗಳು ಸ್ಪೋಟಗೊಳ್ಳುವುದನ್ನು ಕೇಳಿರಬಹುದು. ಇದಕ್ಕೆ ಮುಖ್ಯ ಕಾರಣ ಚಾರ್ಜರ್ ಗಳು ಎಂದು ಹೇಳಿದರೆ ನೀವು ನಂಬಲೇ ಬೇಕು. ಹಳೆಯ ಚಾರ್ಜರ್ ಗಳನ್ನು ಜನರು ಬಳಸಲು ಇನ್ನೊಂದು ಕಾರಣ, ಮೊಬೈಲ್ ಕಂಪನಿಗಳು ಫೋನ್ ಜೊತೆ ಚಾರ್ಜರ್ ಕೊಡುವುದನ್ನು ನಿಲ್ಲಿಸಿದೆ. ಇದರಿಂದ ಹಳೆಯ ಚಾರ್ಜರ್ ಗಳಿಗೆ ಗಮ್ ಟೇಪ್, ಪ್ಲಾಸ್ಟರ್ ಸುತ್ತಿ ಅಥವಾ ಲಬ್ಬರ್ ಸುತ್ತಿ ಮತ್ತೆ ಮತ್ತೆ ಉಪಯೋಗಿಸುತ್ತಾರೆ. ಇಂತಹ ಚಾರ್ಜರ್ ಗಳನ್ನು ಬಳಸುವುದರಿಂದ ವಿದ್ಯುತ್ ಅಪಘಾತ ಸಂಭವಿಸಬಹುದು ಎಂದು ಅಧ್ಯಯನ ಹೇಳಿದೆ.
ಗಮ್ ಟೇಪ್ ಅಥವಾ ಪ್ಲಾಸ್ಟರ್ ಸುತ್ತಿದ ಚಾರ್ಜಿಂಗ್ ಕೇಬಲ್ ವೈರ್ ಗಳಿಂದ ಶಾರ್ಟ್ ಸರ್ಕ್ಯೂಟ್ ಉಂಟಾದ ಘಟನೆಗಳು ನಡೆದಿವೆ. ಒಂದು ವೇಳೆ ಚಾರ್ಜಿಂಗ್ ಕೇಬಲ್ ಎಲ್ಲಿಯಾದರೂ ಕತ್ತರಿಸಲ್ಪಟ್ಟರೆ ಮತ್ತು ಅದರ ಒಳ ಭಾಗವು ತುಂಬಾ ಕಾಣುತ್ತಿದ್ದರೆ, ಅದನ್ನು ಬಳಸುವುದನ್ನು ನಿಲ್ಲಿಸಿ.


ಈ ಕತ್ತರಿಸಲ್ಪಟ್ಟ ಚಾರ್ಜಿಂಗ್ ಕೇಬಲ್ ವೈರ್ ಗಳಿಂದ ಶಾರ್ಟ್ ಸರ್ಕ್ಯೂಟ್ ಗಳಂತಹ ಘಟನೆಗಳು ಸಂಭವಿಸಿದೆ. ಮೊಬೈಲ್ ಫೋನ್ ಗಳು ಮಾತ್ರವಲ್ಲದೆ, ಟ್ಯಾಬ್, ಲ್ಯಾಪ್ ಟಾಪ್, ಟ್ರಿಮ್ಮರ್ ಹಾಗೂ ಇನ್ನಿತರೆ ಯಂತ್ರೋಪಕರಣಗಳಲ್ಲಿಯೂ ಹಾನಿಗೊಳಗಾದ ಕೇಬಲ್ ಗಳಿರುವ ಹಳೆಯ ಚಾರ್ಜರ್ ಗಳನ್ನು ಉಪಯೋಗಿಸಬಾರದು.
ಆದಷ್ಟು ಉತ್ತಮ ಚಾರ್ಜರ್ ಕೇಬಲ್ ಗಳನ್ನು ಬಳಸುವುದರಿಂದ ಮೊಬೈಲ್ ಸುರಕ್ಷಿತವಾಗಿರುತ್ತದೆ ಮತ್ತು ಜಾಸ್ತಿ ಬಾಳಿಕೆ ಬರುತ್ತದೆ. ಎಲ್ಲಕ್ಕಿಂತಲೂ ಮುಖ್ಯವಾಗಿ ನೀವು ಸುರಕ್ಷಿತವಾಗಿರುತ್ತಿರ.

BANTWAL

ಕಸ ತಂದು ಹಾಕುವ ದಿವ್ಯ ಆತ್ಮಗಳಿಗೆ ಶ್ರದ್ಧಾಂಜಲಿ ಅರ್ಪಣೆ-ಕಲ್ಲಡ್ಕದಲ್ಲಿ ಬ್ಯಾನರ್ ಕಂಡು ಶಾಕ್ ಆದ ಜನತೆ

Published

on

ಬಂಟ್ವಾಳ: ಇಲ್ಲಿ ಕಸ ತಂದು ಹಾಕುವ ದಿವ್ಯ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ, ಈ ಕಸದಂತೆಯೇ ನಿಮ್ಮ ಜೀವನವೂ ಆದಷ್ಟು ಬೇಗನೇ ಕೊಳೆತು ಹೋಗಲಿ…..ಹೀಗೊಂದು ಬ್ಯಾನರ್ ರಾರಾಜಿಸುತ್ತಿರುವುದು ಕಲ್ಲಡ್ಕ ಪೇಟೆಯಲ್ಲಿ. ಕಲ್ಲಡ್ಕ ಜಂಕ್ಷನ್ ನ ಕಮಲಾ ಕಾಂಪ್ಲೆಕ್ಸ್ ನ ಮುಂಭಾಗದಲ್ಲಿ ಇರುವ ವಿದ್ಯುತ್ ಕಂಬಕ್ಕೆ ಇಂಥದ್ದೊಂದು ಬ್ಯಾನರನ್ನು ಕಟ್ಟಿ ಹಾಕಲಾಗಿದೆ.

ಜನನಿಬಿಡ ಪ್ರದೇಶವಾಗಿರುವ ಕಲ್ಲಡ್ಕ ಕಮಲಾ ಕಾಂಪ್ಲೆಕ್ಸ್ ನಲ್ಲಿರುವ ಕೆ.ಟಿ.ಹೋಟೆಲ್ ನ ಮುಂಭಾಗದಲ್ಲಿ ಕಸವನ್ನು ತಂದು ಹಾಕಿ ಹೋಗುತ್ತಿದ್ದರು. ಕಮಲಾ ಕಾಂಪ್ಲೆಕ್ಸ್ ‌ನಲ್ಲಿ ಚಿಕಿತ್ಸಾಲಯ, ಹೋಟೆಲ್, ಬ್ಯಾಂಕ್ ಹಾಗೂ ಹತ್ತಿರದಲ್ಲಿ ಶ್ರೀರಾಮಮಂದಿರ ಇದ್ದು  ನಿತ್ಯ ಬೆಳಿಗ್ಗೆ ಇಲ್ಲಿ ಕಸದ ರಾಶಿ ಕೊಳೆತು ವಾಸನೆ ಬರುತ್ತಿತ್ತು.

ಜನರು ನಿತ್ಯ ಓಡಾಡುವ ಜಾಗದಲ್ಲಿ ಕಸವನ್ನು ಹಾಕಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದನ್ನು ಕಂಡು ಸಾರ್ವಜನಿಕರೇ ಬ್ಯಾನರ್ ಅಳವಡಿಸಿದ್ದಾರೆ. ಕಸ ತಂದು ಹಾಕುವವರನ್ನು ತಡೆಯಲು ಸಾಧ್ಯವಾಗದೆ ಅತ್ಯಂತ ನೋವಿನಿಂದ ಇಲ್ಲಿ‌ನ‌ ಸಾರ್ವಜನಿಕರು ನೋವು ತರುವ ಬರಹವನ್ನು ಬ್ಯಾನರ್ ನಲ್ಲಿ ಮುದ್ರಿಸಿ ಹಾಕಿದ್ದಾರೆ. ಬ್ಯಾನರ್ ಬರಹ ನೋಡಿದ ಜನರು  ಒಂದು ಕ್ಷಣ ನಿಬ್ಬೆಗೆರಗಾಗುವುದು ಮಾತ್ರ ಅಷ್ಟೇ ಸತ್ಯ.

Continue Reading

LATEST NEWS

ಪರ್ಯಾಯ ಮೆರವಣಿಗೆಗೆ ಭಗವಾಧ್ವಜ ಮೂಲಕ ಚಾಲನೆ ಕೊಟ್ಟಿದ್ದು, ಪಾಕಿಸ್ತಾನ ಧ್ವಜ ಹಿಡಿದಲ್ಲ-ಶಾಸಕ ಯಶ್ಪಾಲ್

Published

on

ಉಡುಪಿ: ಉಡುಪಿ ಪರ್ಯಾಯ ಮಹೋತ್ಸವಕ್ಕೆ ಜಿಲ್ಲಾಧಿಕಾರಿಗಳು ಕೇಸರಿ ಧ್ವಜ ತೋರಿಸಿ ಚಾಲನೆ ನೀಡಿರುವ ವಿಚಾರ ವಿವಾದವಾಗಿ ಮಾರ್ಪಟ್ಟಿದೆ. ಇದಕ್ಕೆ ಈಗಾಗಲೇ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ನಗರಸಭೆಯ ಆಡಳಿತ ಅಧಿಕಾರಿಯಾಗಿದ್ದ ಹಿನ್ನೆಲೆಯಲ್ಲಿ ತಾನು ಭಾಗಿಯಾಗಿದ್ದೇನೆ ವಿನಃ ಯಾವುದೇ ರಾಜಕೀಯ ಕಾರಣಗಳಿಗೆ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೀಗ ಜಿಲ್ಲಾಧಿಕಾರಿ ಕೈಗೆ ಕೇಸರಿ ಧ್ವಜ ಕೊಟ್ಟಿರುವ ಉಡುಪಿ ಶಾಸಕ ಯಶಪಾಲ್  ಸುವರ್ಣ ಅವರು ಜಿಲ್ಲಾಧಿಕಾರಿ ಸ್ವರೂಪ ಪರ ಮಾತನಾಡಿದ್ದಾರೆ.

ಈ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಆಕ್ಷೇಪಕ್ಕೆ ಅರ್ಥ ಇಲ್ಲ, ಪರ್ಯಾಯ ಮೆರವಣಿಗೆ ಭಗವಾಧ್ವಜ ಮೂಲಕ ಚಾಲನೆ ಕೊಟ್ಟಿದ್ದಾರೆ. ಹಿಂದೆಯೂ ಕೂಡ ಇದೇ ರೀತಿ ಚಾಲನೆ ನೀಡಲಾಗುತ್ತಿತ್ತು. ಒಂದು ವೇಳೆ ಅವರು ಪಾಕಿಸ್ತಾನ ಧ್ವಜ ಕೊಟ್ಟಿದ್ದರೆ ಟೀಕೆ ಮಾಡಬೇಕಿತ್ತು. ಡಿಸಿ ಅವರ ಸ್ಥಾನದಲ್ಲಿ ಅಂದು ನಮಗೆ ಉಸ್ತುವಾರಿ ಸಚಿವರು ಲಭಣ್ಯವಿರುತ್ತಿದ್ದರೆ ಅವರಿಮದಲೇ ಭಗವಾಧ್ವ ಹಜ ಮೂಲಕ ಚಾಲನೆ ನೀಡುತ್ತಿದ್ದೆವು. ಆವಾ್ಗಲೂ ಇವರು ಇದೇ ರೀತಿ ಅವರನ್ನು ರಾಜೀನಾಮೆಗೆ ಒಒತ್ತಾಯಿಸುತ್ತಿದ್ರಾ ಎಂಬುವುದು ಪ್ರಶ್ನೆಯಾಗಿದೆ.

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂದವರ ಮೇಲೆ ಕ್ರಮ ಕೈಗೊಂಡಿಲ್ಲ. ಬೇರೆ ಬೇರೆ ಸಂದರ್ಭದಲ್ಲಿ ಪಾಕಿಸ್ತಾನ ಧ್ವಜ ಹರಿದಾಗ ಕಣ್ಣು ಮುಚ್ಚಿ ಕೂರುತ್ತಾರೆ.   ಕಾಂಗ್ರೆಸ್ ಈ ಬಗ್ಗೆ ಸ್ಪಷ್ಟನೆಯನ್ನು ಕೊಡಲಿ. ಇಲ್ಲವಾದರೆ ಅದೆಷ್ಟೇ ದೊಡ್ಡ ರಾಜಕೀಯ ನಾಯಕ ಬಂದ್ರೂ ಕೂಡಾ ಇನ್ಮುಂದೆ ನಾವು ಭಗವಾಧ್ವಜ ಮೂಲಕವೇ ಸ್ವಾಗತ ಕೊಡುತ್ತೇವೆ ಇದು ಅವರಿಗೆ ನನ್ನ ಓಪನ್ ಚಾಲೆಂಜ್.  ಪರ್ಯಾಯದ  ಯಶಸ್ಸನ್ನು ಇವರಿಗೆ ಸಹಿಸಲು ಆಗಲ್ಲ ಎಂದು ಟೀಕಿಸಿದ್ದಾರೆ. ಇನ್ನು ಉಡುಪಿ ಪರ್ಯಾಯಕ್ಕೆ ಎಷ್ಟು ಅನುದಾನ ಕೊಟ್ಟಿದ್ದಾರೆ ಎಂಧೂ ಅವರು ಪ್ರಶ್ನಿಸಿ ವಾಗ್ದಾಳಿ ಮಾಡಿದ್ದಾರೆ.

 

Continue Reading

LATEST NEWS

ಉಡುಪಿ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಾಲಕಿ, ಕಾರಣ ನಿಗೂಢ

Published

on

ಉಡುಪಿ: ಪ್ರೌಢ ಶಾಲೆಯ ವಿದ್ಯಾರ್ಥಿನಿಯೊಬ್ಬಳು ವಾಸವಾಗಿದ್ದ ಬಿಡಾರದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಉಡುಪಿಯ ಬೀಡಿನಗುಡ್ಡೆಯಲ್ಲಿ ನಡೆದಿದೆ.

ಬೋರ್ಡ್ ಹೈಸ್ಕೂಲಿನಲ್ಲಿ ವ್ಯಾಸಂಗ ಮಾಡುತ್ತಿದ್ದ 15 ವರ್ಷದ ಬರ್ಮವ್ವ ಮೃತ ಬಾಲಕಿ. ಖಾಸಗಿ ನಿವೇಶನದಲ್ಲಿದ್ದ ಜೋಪಡಿಯನ್ನು ಬಾಡಿಗೆ ಪಡೆದುಕೊಂಡು ಮೃತ ಬಾಲಕಿಯ ಹೆತ್ತವರು‌ ವಾಸವಾಗಿದ್ದರು. ಮನೆ ಮಂದಿ ಬೆಳಿಗ್ಗೆ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಬಾಲಕಿಯಿಂದ ಈ ಕೃತ್ಯ ನಡೆದಿದೆ.

ನಗರ ಪೋಲಿಸ್  ಠಾಣೆಯ ಎಸ್ ಐ ಗಂಗಪ್ಪ, ಮುಖ್ಯ ಆರಕ್ಷಕಿಯರಾದ ಆಶಾ ಲತಾ, ಜಾಸ್ವ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದ್ದಾರೆ. ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ಮೃತ ದೇಹವನ್ನು ನೇಣು ಕುಣಿಕೆಯಿಂದ ತೆರವುಗೊಳಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ನೆರವಾದರು.

Continue Reading
Advertisement

Trending

Copyright © 2025 Namma Kudla News

You cannot copy content of this page