Connect with us

DAKSHINA KANNADA

ಉಳ್ಳಾಲ: ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆಯೊಡ್ಡಿ ಜಾನುವಾರು ಕಳವು-ಮೂವರ ಬಂಧನ

Published

on

ಉಳ್ಳಾಲ: ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆಯೊಡ್ಡಿ ಜಾನುವಾರು ಕಳವುಗೈದ ಮೂವರು ಆರೋಪಿಗಳನ್ನು ಉಳ್ಳಾಲದ ಮಾಡೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ಕಸಬಾ ಗ್ರಾಮದ ಟಿಪ್ಪುನಗರ ದ ಜಾಬೀರ್ (24), ಫರಂಗಿಪೇಟೆ ಅಮ್ಮೆಮ್ಮಾರ್ ಮಸೀದಿ ಬಳಿಯ ಹೈದರಾಲಿ(24), ಬಂಟ್ವಾಳ ಸಿದ್ದಕಟ್ಟೆಯ ಸಂಗಬೆಟ್ಟುವಿನ ಮುಹಮ್ಮದ್ ಆರೀಫ್(30) ಬಂಧಿತರು.


ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಮಾಡೂರು ಸೈಟ್‌ನಲ್ಲಿ ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆ ಹಾಕಿ ಜಾನುವಾರು ಕಳ್ಳತನ ಮಾಡಿದ ಘಟನೆಗೆ ಸಂಬಂಧಿಸಿದಂತೆ ಎಸಿಪಿ ದಿನಕರ್ ಶೆಟ್ಟಿ ಮಾರ್ಗದರ್ಶನದಲ್ಲಿ ಠಾಣಾಧಿಕಾರಿ ಸಂದೀಪ್ ಜಿ.ಎಸ್ ನೇತೃತ್ವದ ಪೊಲೀಸ್ ತಂಡ ಆರೋಪಿಗಳನ್ನು ಬಂಧಿಸಿದೆ.

ಮಾಡೂರು ಸೈಟ್ ನಿವಾಸಿ ಸತೀಶ್ ಎಂಬವರಿಗೆ ಸೇರಿದ ರೂ. 30,000 ಬೆಲೆಬಾಳುವ 4 ವರ್ಷ ಪ್ರಾಯದ ಹೋರಿ ಎತ್ತನ್ನು ಆರೋಪಿಗಳು ಕಳವು ನಡೆಸಿದ್ದರು.

ಆ.22. ರಂದು ಮಾಡೂರು ವನದುರ್ಗ ಅಯ್ಯಪ್ಪ ಮಂದಿರದ ಅಶ್ವತ್ಥಕಟ್ಟೆಯ ಬಳಿ ಕಟ್ಟಿ ಹಾಕಲಾಗಿದ್ದ ಹೋರಿಯನ್ನು ನಸುಕಿನ ಜಾವ 4.25 ಕ್ಕೆ ಇಬ್ಬರು ಆರೋಪಿಗಳು ಬಲಾತ್ಕಾರವಾಗಿ ಹಿಂಸಾತ್ಮಕವಾಗಿ ಎಳೆದೊಯ್ಯುವಾಗ ಜೋರಾಗಿ ಕೂಗುವುದನ್ನು ಗಮನಿಸಿ ಮಾಲೀಕ ಸತೀಶ್ ಅವರು ಓಡಿಬಂದಿದ್ದರು.

ಈ ವೇಳೆ ತಲವಾರು ಮತ್ತು ದೊಣ್ಣೆ ತೋರಿಸಿದ ದುಷ್ಕರ್ಮಿಗಳು, ಅಡ್ಡಿಪಡಿಸಿದರೆ ಕೊಲ್ಲುವುದಾಗಿ ಜೀವಬೆದರಿಕೆಯೊಡ್ಡಿ ಜಾನುವಾರನ್ನು ಕಾರಿನೊಳಗಡೆ ತುಂಬಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ‌.

ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ತನಿಖೆ ನಡೆಸಿದ ಎಸಿಪಿ ನೇತೃತ್ವದ ಉಳ್ಳಾಲ ಪೊಲೀಸ್ ತಂಡ ಮೂವರನ್ನು ಬಂಧಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯ ಬಂಧನ ಇನ್ನಷ್ಟೇ ಆಗಬೇಕಿದ್ದು, ಆತ ಪರಾರಿಯಾಗಿದ್ದಾನೆ.

DAKSHINA KANNADA

ಕಾರ್ಕಳ: ಗೋಶಾಲೆಯಿಂದ 10,000 ರೂ. ಬೆಲೆಯ 3 ದನ ಕಳವು

Published

on

ಕಾರ್ಕಳ: ಗೋಶಾಲೆಯಿಂದ ಮೂರು ದನಗಳನ್ನು ಕಳವು ಮಾಡಿರುವ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಬಜಗೋಳಿಯಲ್ಲಿ ನಡೆದಿದೆ.

 

ಬಜಗೋಳಿಯಲ್ಲಿ ಅಹಿಂಸಾ ಅನಿಮಲ್‌ ಕೇರ್‌ ಟ್ರಸ್ಟ್‌ ನಡೆಸುತ್ತಿರುವ ಗೋಶಾಲೆಯಿಂದ ಜೂನ್‌ 16ರಂದು ಮುಂಜಾನೆ 4 ಗಂಟೆ ಸುಮಾರಿಗೆ ಮೂರು ದನಗಳು ಕಳವಾಗಿವೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

READ IN ENGLISH : https://www.nammakudlaenglish.com/karkala-three-cows-worth-%e2%82%b910000-stolen-from-goshala/

ಇದನ್ನೂ ಓದಿ: ಮಂಗಳೂರು: ಭೀಕರ ಕಾರು ಅಪಘಾತದಲ್ಲಿ NSUI ಮುಖಂಡ ಸಹಿತ ಇಬ್ಬರು ಸಾವು

ಕಳವಾದ ದನಗಳ ಮೌಲ್ಯ ಸುಮಾರು 10 ಸಾವಿರ ರೂಪಾಯಿ ಆಗ ಬಹುದೆಂದು ಟ್ರಸ್ಟ್ ಸಂಚಾಲಕ ಎಂ.ಕೆ. ವಿರಂಜಯ್‌ ಅವರು ದೂರಿನಲ್ಲಿ ತಿಳಿಸಿದ್ದಾರೆ. ಬಜಗೋಳಿಯಲ್ಲಿ ಅಹಿಂಸಾ ಅನಿಮಲ್‌ ಕೇರ್‌ ಟ್ರಸ್ಟ್‌ ಗೋಶಾಲೆಯನ್ನು ನಡೆಸುತ್ತಿದ್ದು, ಇಲ್ಲಿ ಗಾಯಗೊಂಡ, ಕಾಯಿಲೆಗೊಳಗಾದ, ಬೀದಿ ಪಾಲಾದ ಬೆಕ್ಕು, ನಾಯಿ ಮತ್ತು ದನಗಳನ್ನು ತಂದು ಆರೈಕೆ ಮಾಡಲಾಗುತ್ತಿದೆ ಎಂದು ಎಂ.ಕೆ. ವಿರಂಜಯ್‌ ವಿವರಿಸಿದ್ದಾರೆ.

Continue Reading

DAKSHINA KANNADA

ಮಂಗಳೂರು: ಭೀಕರ ಕಾರು ಅಪಘಾತದಲ್ಲಿ NSUI ಮುಖಂಡ ಸಹಿತ ಇಬ್ಬರು ಸಾವು

Published

on

ಮಂಗಳೂರು: ಕಾರೊಂದು ಡಿವೈಡರ್‌ ಗೆ ಢಿಕ್ಕಿ ಹೊಡೆದು ಇಬ್ಬರು ಯುವಕರು ಮೃತ ಪಟ್ಟ ದಾರುಣ ಘಟನೆ ಮಂಗಳೂರಿನ ಜಪ್ಪಿನಮೊಗರು ನಡು ಮೊಗೇರ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಿನ್ನೆ (ಜೂ.17) ರಾತ್ರಿ ಸಂಭವಿಸಿದೆ.

ಕದ್ರಿ ಮಲ್ಲಿಕಟ್ಟೆಯ ನಿವಾಸಿ ಅಮನ್ ರಾವ್‌ (23) ಮತ್ತು ಕೊಂಚಾಡಿಯ ಓಂ ಶ್ರೀ ಪೂಜಾರಿ (24) ಮೃತ ಯುವಕರು ಎಂದು ಗುರುತಿಸಲಾಗಿದೆ. ಕಾರು ಡಿವೈಡರಿಗೆ ಢಿಕ್ಕಿಯಾಗಿ ಬಳಿಕ ಮೋರಿಗೆ ಬಡಿದು ಅವಘಡ ಸಂಭವಿಸಿದೆ.

ಓಂ ಶ್ರೀ ಪೂಜಾರಿ ಅವರು ಎನ್.ಎಸ್.ಯು.ಐ. ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾಗಿದ್ದರು. ಕಾರಿನಲ್ಲಿ 4- 5 ಮಂದಿ ಪ್ರಯಾಣಿಸುತ್ತಿದ್ದು, ಅಮನ್ ರಾವ್‌ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ. ತಲಪಾಡಿ ಕಡೆಯಿಂದ ಪಂಪ್‌ವೆಲ್‌ ಕಡೆಗೆ ಬರುತ್ತಿದ್ದ ಕಾರು ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಸರ್ಕಾರಿ ನಿವಾಸದ ಮುಂದೆ ಧರೆಗುರುಳಿದ ಬೃಹತ್ ಮರ

ವಂಶಿ ಮತ್ತು ಅಶಿಕ್‌ಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಐಸಿಯುವಿನಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೊಬ್ಬ ಗೆಳೆಯ ಇಟಲಿ ಮೂಲದ ಜೆರ್ರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಟ್ರಾಫಿಕ್‌ ದಕ್ಷಿಣ ಠಾಣೆಯ ಪೊಲೀಸರು ಕೇಸ್ ದಾಖಲಿಸಿದ್ದಾರೆ.

Continue Reading

DAKSHINA KANNADA

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ದಶಮಾನೋತ್ಸವ

Published

on

ಮಂಗಳೂರು/ದುಬೈ: ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಜೂನ್ 29 ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ದುಬೈ ಘಟಕದ ಸಹಯೋಗದೊಂದಿಗೆ ಕರಾಮದ ಇಂಡಿಯನ್ ಹೈಸ್ಕೂಲ್ ನ ಶೇಖ್ ರಷೀದ್ ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಕೇಂದ್ರದ ಸಂಚಾಲಕ ದಿನೇಶ್ ಶೆಟ್ಟಿ ಕೊಟ್ಟಿಂಜ ತಿಳಿಸಿದ್ದಾರೆ.


ದಶಮ ಸಂಭ್ರಮದ ಪ್ರಯುಕ್ತ ಯುಎಇಯ ಏಳು ಮಂದಿ ಸಾಧಕರಿಗೆ ಮತ್ತು ಮೂರು ಸಾಧಕ ಸಂಸ್ಥೆಗಳಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

ಸಂಘಟನೆ ಕ್ಷೇತ್ರದಲ್ಲಿ ಸರ್ವೋತ್ತಮ ಶೆಟ್ಟಿ, ಕಲಾ ಪೋಷಕ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ, ಉದ್ಯಮ ಕ್ಷೇತ್ರದಲ್ಲಿ ಪುತ್ತಿಗೆ ವಾಸುದೇವ ಭಟ್, ಸಮಾಜ ಸೇವಾ ಕ್ಷೇತ್ರದಲ್ಲಿ ಬಾಲಕೃಷ್ಣ ಸಾಲಿಯಾನ್, ಮಾಧ್ಯಮ ಕ್ಷೇತ್ರದ ಬಿ. ಕೆ. ಗಣೇಶ ರೈ, ನಾಟಕ ಕ್ಷೇತ್ರದಲ್ಲಿ ಡೋನಿ ಕೊರೆಯಾ, ಭರತನಾಟ್ಯ ಕ್ಷೇತ್ರದಲ್ಲಿ ರೂಪ ಕಿರಣ್ ಹಾಗೂ ಶ್ರೀ ರಾಜರಾಜೇಶ್ವರಿ ಭಜನಾ ತಂಡ, ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿಯನ್ನು ಗೌರವಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page