Connect with us

LATEST NEWS

‘ಟಿಪ್ಪು ಸುಲ್ತಾನ್ ಪ್ರತಾಪನಂತೆ ಬೆತ್ತಲೆ ಲೇಖನಿ ಸಿಂಹವಲ್ಲ’- ಕೆ.ಅಶ್ರಫ್

Published

on

ಮಂಗಳೂರು: ಬೆತ್ತಲೆ ಜಗತ್ತಿನಲ್ಲಿ ಸುಳ್ಳುಗಳನ್ನು ಪೋಣಿಸಿ ಬರೆದು ಇಸ್ಲಾಮೂ ಫೋಬಿಯಾದ ಮೂಲಕ ಈ ರಾಜ್ಯದ ಹಿಂದುಳಿದ, ದಲಿತರ, ಪರಿಶಿಷ್ಟರ ಮತ್ತು ಬುಡಕಟ್ಟು ಜನಾಂಗದ ದೃಷ್ಟಿಯಲ್ಲಿ ಈ ದೇಶದ ಮುಸ್ಲಿಮರ ಬಗ್ಗೆ ವೈರತ್ವವನ್ನು ಸೃಷ್ಟಿಸಿ,ಕೇಶವ ಕೃಪಾದಿಗಳಿಂದ ಮೆಚ್ಚಿಸಿಕೊಂಡು, ಸಂಸದ ದೀಕ್ಷೆ ಪಡೆದ ಪ್ರತಾಪ ಬೆತ್ತಲೆ ಲೇಖನಿ ಸಿಂಹನಿಗೆ ಏನು ಅರಿವಿದೆ ಟಿಪ್ಪುವಿನ ಹುಲಿಯ ಖಡ್ಗ ಘರ್ಜನೆ ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಕೆ.ಅಶ್ರಫ್ ಹೇಳಿದ್ದಾರೆ.


ಲೇಖಕ ಪ್ರತಾಪಸಿಂಹನಿಗೆ ತಿರುಗೇಟು ನೀಡಿ ಮಾತನಾಡಿದ ಅವರು ‘ಪ್ರತಾಪನು ಇಂದು ಸಲ್ಲಿಸುತ್ತಿರುವ ವೈದಿಕ ನಿಷ್ಟೆಯಂತೆಯೆ ಅಂದು ಟಿಪ್ಪುವಿನ ಆಚೆಗಿನ ಪ್ರಾಂತ್ಯ ರಾಜರು, ಪೇಶ್ವೆ ವೈದಿಕರಿಗೆ ನಿಷ್ಠೆ ಸೂಚಿಸಿದ ಕಾರಣಕ್ಕೆ ಭಾರತವು ಬ್ರಿಟಿಷರಿಂದ ಸ್ವಾತಂತ್ರ ಹೊಂದಲು ನೂರ ಐವತ್ತು ವರುಷ ತಡವಾಯಿತು.

ಟಿಪ್ಪು ಈ ನಾಡಿನ ನೈಜ ಸ್ವಾತಂತ್ರ್ಯ ಹೋರಾಟಗಾರ,ಟಿಪ್ಪು ಅನುಷ್ಟಾನ ಗೊಳಿಸಿದ ಪೊಲೀಸ್ ವ್ಯವಸ್ಥೆ, ಭೂ ಸುಧಾರಣೆ ಕಾಯ್ದೆ,ಪಾಳೇಗಾರಿಕೆ ರದ್ದತಿ,ಕೃಷಿ ಕ್ಷೇತ್ರದ ಉತ್ತೇಜನ, ಉದ್ದಿಮೆ ಪ್ರಗತಿಯಿಂದಾಗಿಯೆ, ಬಹುಷ್ಯ ಪ್ರತಾಪನ ವೈದಿಕ ಪೂರ್ವಜರಿಗೆ ಸೋಮಾರಿತನದಿಂದ ಜನರನ್ನು ಜೀತದ ಆಳುಗಳಾಗಿ ಮಾಡಿ ಅವರನ್ನು ಪೀಳಿಗೆಗಳಿಂದ ಪೀಳಿಗೆವರೆಗೆ ಲೂಟಿ ಮಾಡಿ ಭಕ್ಷಿಸುವ ವ್ಯವಸ್ಥೆ ತಪ್ಪಿ ಹೋಯಿತೆಂದು ಪರಿತಪಿಸಿ, ಪ್ರತಾಪನಲ್ಲಿ ಹೇಳಿ, ಕೇಶವ ಕೃಪಾದಿಗಳು, ಟಿಪ್ಪುವಿನ ವಿರುದ್ಧ ಹೇಳಿಕೆ ನೀಡಲು ಫರ್ಮಾನು ಹೊರಡಿಸಿರಬಹುದು.

ಅಂದು ಮೈಸೂರಿನ ಚಿಕ್ಕ ದೇವ ಅರಸುರ ವರಿಗೆ ಬೆಂಗಾವಲು ಆಗಿ ಹೈದರ್ ಆಲಿ ನಿಂತರೆ,ಆಮೇಲಿನ ಟಿಪ್ಪು ಆಡಳಿತದ ಇತಿಹಾಸದ ಅದ್ಬುತ. ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಉದ್ದೇಶಿತ ಜಲಾಶಯಕ್ಕೆ ಅಡಿಗಲ್ಲು ಹಾಕಿದ ಅಂದಿನ ಯೋಜನೆ ಟಿಪ್ಪು ಸರಕಾರದ ಕಾರ್ಯಕ್ರಮವಾಗಿದ್ದು ಬ್ರಿಟಿಷ್ ಇತಿಹಾಸಕಾರರಿಂದ ಮೇಕಿಂಗ್ ಹಿಸ್ಟರಿ’ ಆಗಿದ್ದನ್ನು ಪ್ರತಾಪ ಸರಿಯಾಗಿಯೇ ಅರಿಯಲಿ.

ಹೈದರ್ ಪುತ್ರ, ಫತೇ ಮೊಹಮ್ಮದ್ ಎಂಬ ಧೀರ ದಕ್ಷಿಣ ಏಷಿಯಾದ ಜನಪ್ರೆಮಿ ರಾಜನಿಗೆ ‘ ಮೈಸೂರಿನ ಹುಲಿ ‘ ಎಂದು ಬಿರುದು ನೀಡಿದ್ದು, ಭಾರತ ಉಪಖಂಡದ ಯಾವುದೇ ಆರ್ಯರಲ್ಲ,
ಬದಲಾಗಿ ಹದಿನೆಂಟನೇ ಶತಮಾನದಲ್ಲಿ ಒಂದು ಬೃಹತ್ ವಸಾಹತು ಶಾಹಿ ಚಕ್ರಾಧಿಪತ್ಯ ಹೊಂದಿದ್ದ, ಅಂತರ್ ಖಂಡ ಪಾರಮತ್ಯ ಹೊಂದಿದ್ದ, ಸೂರ್ಯ ಮುಳುಗದ ನಾಡಿನ ಆಳ್ವಿಕೆ ಹೊಂದಿದ್ದ,

ಲಕ್ಷ ಗಟ್ಟಲೆ ಭೂ ಕಾಲಾಳು ಸೈನ್ಯ, ಹತ್ತಾರು ಜಲ ಯುದ್ದ ನೌಕೆ,ಸಾವಿರಾರು ಯುದ್ದ ಫಿರಂಗಿಗಳನ್ನು ಹೊಂದಿದ್ದ, ತನ್ನ ಸೇನೆ ಅದೇ ಫತೇ ಮೊಹಮ್ಮದ್ ನಿಂದಾಗಿ ಎರಡು ಬಾರಿ ಸೋತು ಶರಣಾದ, ಅದೇ ಫತೇ ಮೊಹಮ್ಮದ್ ನ ಪರಾಕ್ರಮವನ್ನು ಇತರರಿಂದ ಕೇಳಿ ಬೆಚ್ಚಿ ಬೀಳುತ್ತಿದ್ದ, ಫತೇ ಮೊಹಮ್ಮದ್ ಯುದ್ದ ರಣಾಂಗಣದಲ್ಲಿ ಹೋರಾಡಿ ವೀರ ಮರಣ ಹೊಂದಿ ಹುತಾತ್ಮನಾದ ಎಂದು ನಂಬಲು ತಯಾರಿಲ್ಲದ ಆ ಬೃಹತ್ ಬ್ರಿಟಿಷ್ ಸೇನೆಯ ಉನ್ನತರು ಪ್ರಧಾನಗೈದ ಬಿರುದು ಆಗಿದೆ.

‘ದಿ ಟೈಗರ್ ಆಫ್ ಮೈಸೂರ್ ‘. ಟಿಪ್ಪು ಎಂಬುದು ಅಪೇಕ್ಷಿಸಿ ಪಡೆದ ಬಿರುದು ಅಲ್ಲ, ಬದಲಾಗಿ ಟಿಪ್ಪುವಿನ ಆಡಳಿತ ವೈರಿಗಳು ನೀಡಿದ ಬಿರುದು. ಪ್ರತಾಪ ಟಿಪ್ಪುವನ್ನು ಹುಲಿಯಲ್ಲ ಎಂದು ಹೇಳುವ ಭರದಲ್ಲಿ ಈಗಾಗಲೇ, ಅದೇ ಪ್ರತಾಪ ತನ್ನ ಬೆತ್ತಲೆ ಜಗತ್ತಿನ ತನ್ನ ಲೇಖನಿಯಲ್ಲಿ ತನ್ನ ಸಿಂಹತನವನ್ನು ಕಳೆದುಕೊಂಡು ನರಿ ಆದದ್ದು ವಿಪರ್ಯಾಸ. ಹುಲಿ, ಹುಲಿಯೆ, ನರಿ ನರಿಯೇ,ಪ್ರತಾಪ ಅರಿಯಲಿ.

LATEST NEWS

ಬೆಟ್ಟ ಹತ್ತುವಾಗ ಕಾಲು ಜಾರಿ ಬಿ*ದ್ದು ವೃದ್ಧ ಸಾ*ವು

Published

on

ಮಂಗಳೂರು/ರಾಮನಗರ : ಬೆಟ್ಟ ಹತ್ತುವಾಗ ಕಾಲು ಜಾ*ರಿ ಬಿ*ದ್ದು ವೃದ್ಧ ಸಾ*ವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ರೇವಣಸಿದ್ದೇಶ್ವರ ಬೆಟ್ಟದಲ್ಲಿ ನಡೆದಿದೆ. ಬಿಡದಿ ಹೋಬಳಿಯ ಕೆಂಪನಹಳ್ಳಿ ನಿವಾಸಿ, 65 ವರ್ಷದ ರೇವಣ್ಣ ಮೃ*ತ ದು*ರ್ದೈವಿ.

ಕುಟುಂಬ ಸಮೇತ ರೇವಣಸಿದ್ದೇಶ್ವರ ಬೆಟ್ಟಕ್ಕೆ ಬಂದಿದ್ದ ರೇವಣ್ಣ ದೇವರ ದರ್ಶನ ಮಾಡಲು ಬೆಟ್ಟ ಹತ್ತುವಾಗ ಕಾಲು ಜಾ*ರಿ ಕಂದಕಕ್ಕೆ ಬಿ*ದ್ದು, ಸ್ಥಳದಲ್ಲೇ ಕೊನೆಯು*ಸಿರೆಳೆದಿದ್ದಾರೆ.

ಇದನ್ನೂ ಓದಿ : ಹಾಲಿನ ಟ್ಯಾಂಕರ್‌ಗೆ ಡಿ*ಕ್ಕಿಯಾಗಿ ಸುಟ್ಟು ಕರಕಲಾದ ಕಾರು

ವಿಷಯ ತಿಳಿದು ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರೇವಣ್ಣ ಶ*ವ ಮೇಲಕ್ಕೆತ್ತಿದ್ದಾರೆ. ಘಟನೆ ಬಗ್ಗೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ : ಡಿಸ್ಕಸ್ ಥ್ರೋನಲ್ಲಿ ಮಂಗಳೂರಿನ ಕೃತಿ ಎನ್.ಪಿ ಪ್ರಥಮ

Published

on

ಮಂಗಳೂರು/ಬೆಂಗಳೂರು : ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ 17 ವರ್ಷದ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ 2025-2026 ನಡೆಯಿತು.

ಡಿಸ್ಕಸ್ ಥ್ರೋ ವಿಭಾಗದಲ್ಲಿ ಬಾಲವಿಕಾಸ ಇಂಗ್ಲೀಷ್ ಮೀಡಿಯಂ ಮಾಣಿಯ ವಿದ್ಯಾರ್ಥಿನಿ  ಕೃತಿ. ಎನ್.ಪಿ ಪ್ರಥಮ ಸ್ಥಾನ ಪಡೆದಿದ್ದು,  ರಾಷ್ಟ್ರಮಟ್ಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾಳೆ.

ಇದನ್ನೂ ಓದಿ : ಹಾಲಿನ ಟ್ಯಾಂಕರ್‌ಗೆ ಡಿ*ಕ್ಕಿಯಾಗಿ ಸುಟ್ಟು ಕರಕಲಾದ ಕಾರು

ಕೃತಿ ಗೋಳ್ತಮಜಲು ಗ್ರಾಮದ ನಿವಾಸಿ ದಿನೇಶ್.ಬಿ ಮತ್ತು ತೇಜಾಕ್ಷಿ ದಂಪತಿ ಪುತ್ರಿ.

Continue Reading

LATEST NEWS

ಹಾಲಿನ ಟ್ಯಾಂಕರ್‌ಗೆ ಡಿ*ಕ್ಕಿಯಾಗಿ ಸುಟ್ಟು ಕರಕಲಾದ ಕಾರು

Published

on

ಮಂಗಳೂರು/ರಾಮನಗರ : ಹಾಲಿನ ಟ್ಯಾಂಕರ್‌ ಗೆ ಹಿಂಬದಿಯಿಂದ ಡಿ*ಕ್ಕಿಯಾಗಿ ಕಾರೊಂದು ಹೊ*ತ್ತಿ ಉರಿದ ಘಟನೆ ರಾಮನಗರದ ಸಂಗಬಸವನದೊಡ್ಡಿ ಗ್ರಾಮದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಡಸ್ಟರ್ ಕಾರು ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ವೇಗವಾಗಿ ಹೋಗುತ್ತಿದ್ದ ಚಾಲಕ ಸಂಗಬಸವನದೊಡ್ಡಿ ಬಳಿ ನಿಯಂತ್ರಣ ಕಳೆದುಕೊಂಡು ಮುಂದಿನಿಂದ ಹೋಗುತ್ತಿದ್ದ ಹಾಲಿನ ಟ್ಯಾಂಕರ್‌ ಗೆ ಗು*ದ್ದಿದ್ದಾನೆ. ಕೂಡಲೇ ಕಾರಿನಲ್ಲಿ ದಟ್ಟ ಹೊಗೆ ಕಾಣಿಸಿಕೊಳ್ಳತೊಡಗಿದೆ. ಅಪಾಯ ಅರಿತ ಕಾರಿನಲ್ಲಿದ್ದವರು ತಕ್ಷಣ ಕೆಳಕ್ಕಿಳಿದು ದೂರಕ್ಕೆ ಓಡಿದ್ದಾರೆ.  ಅದಾದ ಕೆಲವೇ ಕ್ಷಣದಲ್ಲಿ ಕಾರಿನಲ್ಲಿ ಬೆಂ*ಕಿ ಕಾಣಿಸಿಕೊಂಡು ಹೊ*ತ್ತಿ ಉ*ರಿದಿದೆ.

ಇದನ್ನೂ ಓದಿ : ಇಂದೆಂಥ ದುರವಸ್ಥೆ! 108 ಆ್ಯಂಬುಲೆನ್ಸ್ ಸಿಗದೆ ಪರದಾಟ; ಗೂಡ್ಸ್ ಟೆಂಪೋ ಮೂಲಕ ರೋಗಿ ಆಸ್ಪತ್ರೆಗೆ!

ಸ್ಥಳಕ್ಕೆ ಬಂದ ಅ*ಗ್ನಿಶಾಮಕ ದಳದ ಸಿಬ್ಬಂದಿ ಬೆಂ*ಕಿ ನಂದಿಸಿದ್ದಾರೆ. ಕಾರು ಸು*ಟ್ಟು ಕರಕಲಾಗಿದ್ದು, ಟ್ಯಾಂಕರ್‌ ನ ಹಿಂಭಾಗ ಜಖಂಗೊಂಡಿದೆ.  ಘಟನೆ ಬಗ್ಗೆ ರಾಮನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page