Connect with us

FILM

ಮದುವೆ ಬಳಿಕದ ಭಿನ್ನಾಭಿಪ್ರಾಯ ಡೈವೋರ್ಸ್ ಪಡೆದ ಮಂಗಳೂರು ಮೂಲದ ಟಾಲಿವುಡ್ ನಟಿ ಎಸ್ತರ್ ನೊರೊನ್ಹಾ

Published

on

ಮಂಗಳೂರು: ಮಂಗಳೂರು ಮೂಲದ ಖ್ಯಾತ ಟಾಲಿವುಡ್ ನಟಿ ಎಸ್ತೆರ್‌‌ ನೊರೊನ್ಹಾ ಮತ್ತು ನಟ ನೋಯೆಲ್‌ ಸೀನ್‌‌ ವಿಚ್ಛೇದನ ಘೋಷಿಸಿದ್ದಾರೆ. ಈ ಕುರಿತಂತೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಎಸ್ತರ್ ನೊರೊನ್ಹಾ ಕಳೆದ ವರ್ಷವೇ ನಾವು ಪ್ರತ್ಯೇಕವಾಗಿದ್ದೇವೆ. ಬಳಿಕ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದೇವೆ. ಸೋಮವಾರ ವಿಚ್ಛೇದನ ಪಡೆದುಕೊಂಡಿದ್ದು, ನ್ಯಾಯಾಲಯದ ತೀರ್ಮಾನಕ್ಕಾಗಿ ಕಾಯುತ್ತಿದ್ದೇವೆ ಎಂದು ನೋಯೆಲ್‌‌‌ ಸೀನ್‌ ಹಾಗೂ ಎಸ್ತೆರ್‌ ನೊರೊನ್ಹಾ ತಿಳಿಸಿದ್ದಾರೆ.


ಮಂಗಳೂರು ಮೂಲದ ನಟಿ ಎಸ್ತರ್ ನೊರೊನ್ಹಾ ಹಾಗೂ ತೆಲುಗಿನ ನಟ ನೊರೊನ್ಹಾ ಸೀನ್ ಕಳೆದ ವರ್ಷ ಜನವರಿಯಲ್ಲಿ ಮದುವೆಯಾಗಿದ್ದರು. ಆದರೆ ಮದುವೆಯಾದ 6 ತಿಂಗಳಲ್ಲಿ ಇಬ್ಬರು ಡೈವೋರ್ಸ್ ಗೆ ಅರ್ಜಿ ಸಲ್ಲಿಸಿದ್ದರು. ಈ ವಿಚ್ಛೇದನಕ್ಕೆ ನಮ್ಮಲ್ಲಿನ ಭಿನ್ನಾಭಿಪ್ರಾಯ ಕಾರಣವಾಗಿದ್ದು, ಅಂತಿಮವಾಗಿ ಈ ಸುಂದರವಾದ ಸಂಬಂಧವನ್ನು ನಾವು ಕೊನೆಗೊಳಿಸಲು ನಾವು ನಿರ್ಧರಿಸಿದ್ದೇವೆ. ಈ ವೇಳೆ ಇದಕ್ಕೆ ಬೆಂಬಲ ನೀಡುವಂತೆ ನಾನು ವಿನಂತಿಸಿಕೊಳ್ಳುತ್ತೇನೆ. ಇದು ಯಾವಾಗಲೂ ನನ್ನ ಜೀವನದ ಒಂದು ಸುಂದರವಾದ ಹಂತವಾಗಿದ್ದು, ನಾನು ದೇವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ನೋಯೆಲ್‌‌ ಬರೆದುಕೊಂಡಿದ್ದಾರೆ.


ಎಸ್ತೆರ್‌‌ ನೊರೊನ್ಹಾ‌ ಅವರೇ ನಿಮಗೆ ದೇವರು ಒಳಿತು ಮಾಡಲಿ. ನಿಮ್ಮ ಕನಸೆಲ್ಲಾ ನನಸಾಗಲಿ ಎಂದು ನೋಯೆಲ್‌ ತಿಳಿಸಿದ್ದಾರೆ.
ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿರುವ ಎಸ್ತೆರ್‌‌‌ ನೊರೆನ್ಹಾ ಅವರು, ನಾವು ಅಧಿಕೃತವಾಗಿ ವಿಚ್ಛೇದನ ಪಡೆದುಕೊಂಡಿದ್ದೇವೆ. ನಾವೆಲ್ಲರೂ ಮಾನವರಾಗಿದ್ದು, ಪ್ರತಿಯೊಬ್ಬರ ಜೀವನದಲ್ಲಿ ಏರಿತಗಳು ಇದ್ದೇ ಇದೆ.ಅಲ್ಲದೇ, ನಮ್ಮ ಜೀವನದಲ್ಲಿ ಹಲವು ಏರಿಳಿತಗಳನ್ನು ಎದುರಿಸುತ್ತೇವೆ. ಒಂದು ಸಂಬಂಧವನ್ನು ನಿಭಾಯಿಸುವುದು ಎಷ್ಟು ಕಷ್ಟ ಎಂದು ನಮಗೆ ತಿಳಿದಿದೆ. ಈ ಸಮಸ್ಯೆಗಳನ್ನು ನಮಗೆ ಪರಿಹರಿಸಲು ಆಗದೇ ಇದಲ್ಲಿ ನಾವು ತೀರ್ಪಿನ ಮೂಲಕ ಈ ಸಮಸ್ಯೆಗಳಿಗೆ ಪರಿಗಾರ ಕಂಡುಕೊಳ್ಳಬೇಕಾಗುತ್ತದೆ ಎಂದು ಬರೆದುಕೊಂಡಿದ್ದಾರೆ.


ನೋಯೆಲ್‌ ಅವರು ಸಂಭವಾಮಿ ಯುಗೆ ಯುಗೆ ಎನ್ನುವ ತೆಲುಗು ಚಲನಚಿತ್ರದ ಮೂಲಕ ಟಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದರು. ಎಸ್ತೆರ್‌ ನೊರೊನ್ಹಾ ಅವರು, ತೆಲುಗು, ಕೊಂಕಣಿ ಹಾಗೂ ಕನ್ನಡ ಭಾಷೆಯ ಚಲನಚಿತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ನೋಯೆಲ್‌ ಸೀನ್‌ ಅವರ ಡೆಸ್ಪಾಸಿಟೊದ ಕೊಂಕಣಿ ಹಾಡಿನಲ್ಲಿ ಈಸ್ಟರ್‌ ಕಾಣಿಸಿಕೊಂಡಿದ್ದರು. ಈ ಹಾಡು ಇತ್ತೀಚೆಗೆ ನಾಲ್ಕು ಮಿಲಿಯನ್‌‌‌ ವೀಕ್ಷಣೆ ದಾಟಿದ್ದು, ಇದು ಯೂಟ್ಯೂಬ್‌ನಲ್ಲಿ ಅತ್ಯಂತ ಜನಪ್ರಿಯ ಕೊಂಕಣಿ ಹಾಡಾಗಿದೆ.

Advertisement
Click to comment

Leave a Reply

Your email address will not be published. Required fields are marked *

FILM

ತುಳು ಚಿತ್ರ “ಧರ್ಮ ಚಾವಡಿ” ಜುಲೈ 11 ಕ್ಕೆ ಬಿಡುಗಡೆ

Published

on

ಮಂಗಳೂರು: ಕೃಷ್ಣವಾಣಿ ಪಿಚ್ಚರ್ಸ್‌ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದಲ್ಲಿ ನಿತಿನ್ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ತಯರಾದ “ಧರ್ಮ ಚಾವಡಿ” ತುಳು ಚಿತ್ರ ಜುಲೈ 11 ರಂದು ಬಿಡುಗಡೆಗೊಳ್ಳಲಿದೆ ಎಂದು ರಮೇಶ್ ರೈ ಕುಕ್ಕುವಳ್ಳಿ ತಿಳಿಸಿದ್ದಾರೆ.


ಚಿತ್ರದ ಬಗ್ಗೆ ಸುದ್ದಿಗಾರರಿಗೆ ಮಾಹಿತಿನೀಡಿದ ಅವರು, ಚಿತ್ರದ ಟೀಸರ್ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮುಂಬೈಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಮುಂಬೈ ಮತ್ತು ಪುತ್ತೂರಿನಲ್ಲಿ ನಡೆದ ಪ್ರೀಮಿಯರ್ ನೋಡಿದ ಜನ ಬಹಳಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು. ಪ್ರಸಾದ್ ಕೆ ಶೆಟ್ಟಿ ಸಂಗೀತ ನೀಡಿದ್ದಾರೆ.

ಶ್ರೀನಾಥ್ ಪವಾರ್ ಸಂಕಲನ ಅರುಣ್ ರೈ ಪುತ್ತೂರು ಛಾಯಾಗ್ರಹಣ ಚಿತ್ರಕ್ಕಿದ್ದು ರಜಾಕ್ ಪುತ್ತೂರು ಚಿತ್ರಕಥೆ ಬರೆದಿದ್ದಾರೆ. ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು ರವಿ ಸ್ನೇಹಿತ್, ಚೇತನ್ ರೈ ಮಾಣಿ, ಸುರೇಶ್ ರೈ, ಪ್ರಕಾಶ್ ಧರ್ಮ ನಗರ, ದೀಪಕ್ ರೈ ಪಾಣಾಜೆ, ಸುಂದರ್ ರೈ ಮಂದಾರ, ರಂಜನ್ ಬೋಲೂರು, ಮನೀಶ್ ಶೆಟ್ಟಿ ಸಿದ್ದಕಟ್ಟೆ, ರಕ್ಷಣ್ ಮಾಡೂರು ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ ಎಂದರು.

ಇದನ್ನೂ ಓದಿ: ಮಿಸ್ ಆ್ಯಂಡ್ ಮಿಸಸ್ ಮಂಗಳೂರು ದಿವಾ ಮಿಡ್ಲ್‌ ಈಸ್ಟ್- 2025; ತುಳುನಾಡಿನ ಮಹಿಳೆಯರಿಗಾಗಿ ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆ

ಪತ್ರಿಕಾಗೋಷ್ಠಿಯಲ್ಲಿ ಜಗದೀಶ್ ಅಮೀನ್, ನಿತೀನ್ ರೈ ಕುಕ್ಕುವಳ್ಳಿ, ಪ್ರಸಾದ್ ಕೆ.ಶೆಟ್ಟಿ, ಅರುಣ್ ರೈ ಪುತ್ತೂರು, ಧನ್ಯಾ ಪೂಜಾರಿ, ನೇಹ ಕೋಟ್ಯಾನ್ ಉಪಸ್ಥಿತರಿದ್ದರು.

Continue Reading

FILM

ರಾಕ್ ಸ್ಟಾರ್ ರೂಪೇಶ್ ಶೆಟ್ಟಿಯ ‘ಜೈ’ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್

Published

on

ಮಂಗಳೂರು: ನಟ, ನಿರ್ದೇಶಕ ರಾಕ್ ಸ್ಟಾರ್ ರೂಪೇಶ್ ಶೆಟ್ಟಿಯವರ ಬಹುನಿರೀಕ್ಷಿತ ಸಿನಿಮಾ ‘ಜೈ’. ಗಿರಿಗಿಟ್, ಗಮ್ಜಾಲ್, ಸರ್ಕಸ್ ನಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ರೂಪೇಶ್ ಶೆಟ್ಟಿ ಇದೀಗ ‘ಜೈ’ ಮೂಲಕ ಎಂಟ್ರಿ ಕೊಡುತ್ತಿದ್ದಾರೆ.

ಬಿಗ್ ಬಜೆಟ್ ಸಿನಿಮಾವಾಗಿರುವ ‘ಜೈ’ ಚಿತ್ರ ಯಾವಾಗ ತೆರೆಗೆ ಬರುತ್ತೋ ಎಂದು ಕಾದವರಿಗೆ ಸಿಹಿ ಸುದ್ದಿ ಕೊಟ್ಟಿದೆ ಚಿತ್ರತಂಡ. ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದಾರೆ.

ನವೆಂಬರ್ 14 ರಂದು ಚಿತ್ರ ತುಳು ಹಾಗೂ ಕನ್ನಡ ಎರಡೂ ಭಾಷೆಗಳಲ್ಲೂ ತೆರೆಗೆ ಅಪ್ಪಳಿಸಲಿದೆ. ಅಂದಹಾಗೆ, ಈ ಚಿತ್ರದಲ್ಲಿ ರೂಪೇಶ್ ಶೆಟ್ಟಿ ನಟನಾಗಿದ್ದು, ಜೊತೆಗೆ ನಿರ್ದೇಶನದ ಹೊಣೆಯನ್ನೂ ಹೊತ್ತಿದ್ದು, ಅದ್ವಿತಿ ಶೆಟ್ಟಿ ನಾಯಕಿಯಾಗಿ ಮಿಂಚಿದ್ದಾರೆ. ಇನ್ನು ಬಾಲಿವುಡ್ ನಟ ಸುನಿಲ್ ಶೆಟ್ಟಿ ಈ ಚಿತ್ರದ ಮೂಲಕ ಕೋಸ್ಟಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದು ಸುದ್ದಿಯಾಗಿತ್ತು. ಇವರೊಂದಿಗೆ ದೇವದಾಸ್ ಕಾಪಿಕಾಡ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ ವಾಮಂಜೂರ್ ಮೊದಲಾದವರು ಪಾತ್ರವಾಗಿದ್ದಾರೆ.

ಕತೆ, ಸಂಭಾಷಣೆ ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದು, ವಿನುತ್ ಕೆ. ಕ್ಯಾಮರಾ ವರ್ಕ್, ಲೊಯ್ ವೆಲೆಂಟಿನ್ ಸಲ್ದಾನ ಸಂಗೀತ ಚಿತ್ರಕ್ಕಿದೆ. ಆರ್. ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಡಿ ಚಿತ್ರ ನಿರ್ಮಾಣವಾಗಿದೆ.

Continue Reading

FILM

ಕುಂದಾಪುರದಲ್ಲಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ನಟ ರಿಷಬ್ ಶೆಟ್ಟಿ

Published

on

ಕುಂದಾಪುರ: ಕಾಂತಾರ’ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ರಿಷಬ್ ಶೆಟ್ಟಿ ಅವರು ಇಂದು (ಜುಲೈ 7) ತಮ್ಮ 42ನೇ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಂಡಿದ್ದಾರೆ.

‘ಕಾಂತಾರ ಅಧ್ಯಾಯ-1 ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿ ಇರುವ ಅವರು, ಸದ್ಯ ಕುಂದಾಪುರದಲ್ಲೇ ಬೀಡುಬಿಟ್ಟಿದ್ದಾರೆ. ಅಲ್ಲಿಯೇ ಅವರು ಹುಟ್ಟುಹಬ್ಬ ಆಚರಣೆಯನ್ನು ಮಾಡಿಕೊಂಡಿದ್ದಾರೆ. ಪ್ರೀತಿಯ ಮಡದಿ ಪ್ರಗತಿ ಶೆಟ್ಟಿ ಅವರು ಪತಿ ರಿಷಬ್ ಕೇಕ್ ತಿನ್ನಿಸಿ, ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಹುಟ್ಟುಹಬ್ಬ ಆಚರಿಸಿಕೊಂಡ ರಿಷಬ್ ಅವರಿಗೆ ದುರ್ಗಾಸ್ತಮಾನ ಮತ್ತು ಸೀತಾ ಪುಸ್ತಕಗಳನ್ನು ಗಿಫ್ಟ್ ನೀಡಲಾಯಿತು.

ಇದನ್ನೂ ಓದಿ: ಮದುವೆಯಾದ 6 ತಿಂಗಳಿಗೆ ಪೊಲೀಸ್ ಪೇದೆ ಹಣದಾಸೆಗೆ ಬಲಿಯಾದ್ಲು ಪತ್ನಿ?

ನಟ ರಿಷಬ್ ಶೆಟ್ಟಿ ಬರ್ತ್ ಡೇಯಲ್ಲಿ ವಿಜಯ್ ಕಿರಗಂದೂರು, ಚೆಲುವೇಗೌಡ ಸೇರಿದಂತೆ ಟೀಮ್ ಸದಸ್ಯರು ಭಾಗಿಯಾಗಿದ್ದಾರೆ. ಅಲ್ಲದೇ ನಟ ರಿಷಬ್ ಶೆಟ್ಟಿ ಹುಟ್ಟು ಹಬ್ಬದ ನಿಮಿತ್ತ ಹೊಂಬಾಳೆ ಸಂಸ್ಥೆಯು ಕಾಂತಾರ ಚಾಪ್ಟರ್ 1 ಸ್ಪೆಷಲ್ ಪೋಸ್ಟರ್ ರಿಲೀಸ್ ಮಾಡಿ ಅಭಿಮಾನಿಗಳಿಗೆ ಸರ್‌ಪ್ರೈಸ್ ಕೊಟ್ಟಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page