Connect with us

DAKSHINA KANNADA

ಮಂಗಳೂರು: ನಾಳೆ ಮತ್ತೆ ದಸರಾಕ್ಕೆ ರಂಗು ನೀಡಲಿದೆ “ಪಿಲಿನಲಿಕೆ-7″ ಸ್ಪರ್ಧೆ

Published

on

ಮಂಗಳೂರು: ಪಿಲಿನಲಿಕೆ ಪ್ರತಿಷ್ಠಾನ (ರಿ.) ಮಂಗಳೂರು ಇದರ ಸಾರಥ್ಯದಲ್ಲಿ ನಮ್ಮ ಟಿವಿಯ ಸಹಯೋಗದಲ್ಲಿ “ಪಿಲಿನಲಿಕೆ-7″ ಮಂಗಳೂರಿನ ಮಂಗಳಾ ಕ್ರೀಡಾಂಗಣದ ಬಳಿ ಕರಾವಳಿ ಉತ್ಸವ ಮೈದಾನದಲ್ಲಿ ನಾಳೆ ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಮಿಥುನ್ ರೈ ತಿಳಿಸಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು ‘ತುಳುನಾಡಿನ ಅದ್ಭುತ ಕಲಾ ಪರಂಪರೆ ಮತ್ತು ಇಂದು ಇಡೀ ವಿಶ್ವದ ಗಮನವನ್ನು ಸೆಳೆದಿರುವ ಹುಲಿವೇಷ ಕುಣಿತದ ಮೂಲ ಸ್ವರೂಪವನ್ನು ಉಳಿಸುತ್ತಾ ಅದನ್ನು ಬೆಳೆಸುವ ನಿಟ್ಟಿನಲ್ಲಿ ಆರಂಭಿಸಿದ ಪಿಲಿನಲಿಕೆ ಸ್ಪರ್ಧೆ ಯಶಸ್ವಿಯಾಗಿ 6 ಆವೃತ್ತಿಗಳನ್ನು ಪೂರೈಸಿದ್ದು, ಕೋವಿಡ್ ಕಾರಣದಿಂದ ಕಳೆದೆರಡು ವರ್ಷಗಳಿಂದ ಅದನ್ನು ಮುಂದುವರೆಸಲು ಅಸಾಧ್ಯವಾಗಿತ್ತು.

ಇದೀಗ ಪಿಲಿನಲಿಕೆ-7 ಸ್ಪರ್ಧಾಕಣದಲ್ಲಿ ತುಳುನಾಡಿನ ಪ್ರತಿಷ್ಠಿತ ಮತ್ತು ಆಹ್ವಾನಿತ 12 ತಂಡಗಳು ಭಾಗವಹಿಸಲಿದ್ದು ಬಹುಮಾನ ರೂಪದಲ್ಲಿ ಪ್ರಥಮ ರೂ.3,00,000/- ಮತ್ತು ಫಲಕ, ದ್ವಿತೀಯ ರೂ.2,00,000/- ಮತ್ತು ಫಲಕ, ತೃತೀಯ ರೂ.1,00,000/- ಮತ್ತು ಫಲಕ ನೀಡಲು ನಿರ್ಧರಿಸಿದ್ದೇವೆ.

ಹಾಗೆಯೇ ವೈಯಕ್ತಿಕ ವಿಭಾಗದಲ್ಲಿ ಅತ್ಯುತ್ತಮ ಮರಿಹುಲಿ, ಕರಿಹುಲಿ, ಮುಡಿ ಹಾರಿಸುವುದು, ತಾಸೆ, ಬಣ್ಣಗಾರಿಕೆ, ಅತ್ಯುತ್ತಮ ಹುಲಿ ಕುಣಿತಕ್ಕೆ ತಲಾ ರೂ. 50,000/- ನಗದು ಬಹುಮಾನಗಳನ್ನು ನೀಡಲಾಗುವುದು, ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿ ತಂಡಕ್ಕೂ ರೂ.50,000/- ವನ್ನು ಪ್ರೋತ್ಸಾಹಕ ರೂಪದಲ್ಲಿ ನೀಡಲಾಗುವುದು.

ಈ ಬಾರಿಯ ಪಿಲಿನಲಿಕೆ-7ಕ್ಕೆ ಬಾಲಿವುಡ್‌ನ ಖ್ಯಾತ ತಾರೆಯರಾದ ಸುನಿಲ್ ಶೆಟ್ಟಿ, ಪೂಜಾ ಹೆಗ್ಡೆ ಹಾಗೂ ಹೆಸರಾಂತ ನಟ, ಇತ್ತೀಚಿನ ಕಾಂತಾರ ಚಲನಚಿತ್ರದ ನಿರ್ದೇಶಕ ರಿಷಬ್‌ ಶೆಟ್ಟಿ ಸೇರಿದಂತೆ ಹಲವಾರು ನಟ ನಟಿಯರು, ತುಳು ರಂಗಭೂಮಿಯ ಹೆಸರಾಂತ ಕಲಾವಿದರು ತಾರಾ ಮೆರುಗನ್ನು ನೀಡಲಿದ್ದಾರೆ ಎಂದು ಮಿಥುನ್ ರೈ ತಿಳಿಸಿದ್ದಾರೆ.

ಪಿಲಿನಲಿಕೆಗೆ ರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ದೊರಕಿಸಿಕೊಡಲು ಗಣರಾಜ್ಯೋತ್ಸವದ ಪೆರೇಡ್ ನಲ್ಲಿ ಕೂಡಾ ಅವಕಾಶ ನೀಡಲು ಮನವಿ ಮಾಡುವುದಾಗಿ ಮಿಥುನ್ ರೈ ಮಾಹಿತಿ ನೀಡಿದ್ದಾರೆ.

ಗಲ್ಫ್ ರಾಷ್ಟ್ರಗಳಲ್ಲಿ ಪಿಲಿನಲಿಕೆ ತಂಡದಿಂದ ಕಾರ್ಯಕ್ರಮ ನೀಡಲು ಆಹ್ವಾನವಿದೆ. ರಾಜಕೀಯರಹಿತವಾಗಿ ಈ ಕಲೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕಲೆಗೆ ಮತ್ತು ಅಶಕ್ತ ಕಲಾವಿದರಿಗೆ ವೇದಿಕೆ ನೀಡುವುದು.

ತುಳುವರ ಸಾಂಪ್ರದಾಯಿಕ ಕಲೆಯನ್ನು ಉಳಿಸುವ ನಿಟ್ಟಿನಲ್ಲಿ ಪಿಲಿನಲಿಕೆ -7 ಕಾರ್ಯಕ್ರಮ ಪಿಲಿನಲಿಕೆ ಪ್ರತಿಷ್ಠಾನದಿಂದ ಹಮ್ಮಿಕೊಂಡಿರುವುದಾಗಿ ಮಿಥುನ್ ರೈ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಡಾ|ಶಿವಶರಣ್ ಶೆಟ್ಟಿ , ನವೀನ್ ಶೆಟ್ಟಿ ಎಡ್ಮೆಮಾರ್, ಅವಿನಾಶ್, ವಿಕಾಸ್ ಶೆಟ್ಟಿ ಉಪಸ್ಥಿತರಿದ್ದರು.

DAKSHINA KANNADA

ಪ್ರಚೋದನಕಾರಿ ಪೋಸ್ಟ್: 4 ಇನ್ಸ್ಟಾಗ್ರಾಂ, 1 ಪೇಸ್ಬುಕ್ ಪೇಜ್ ರದ್ದು

Published

on

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ 4 ಇನ್‌ಸ್ಟಾಗ್ರಾಂ ಹಾಗೂ 1 ಪೇಸ್‌ಬುಕ್ ಪೇಜ್‌ಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ, ಈ ಪೇಜ್‌ಗಳನ್ನು ಡಿಆ್ಯಕ್ಟಿವೇಟ್ ಮಾಡಲಾಗಿದೆ.

“ವಿಎಚ್‌ಪಿ ಬಜರಂಗದಳ ಅಶೋಕನಗರ’ ಮತ್ತು “ಶಂಖನಾದ’ ಇನ್‌ ಸ್ಟಾಗ್ರಾಂ ಪೇಜ್ ವಿರುದ್ಧ ಉರ್ವ ಪೊಲೀಸ್ ಠಾಣೆ, “ಡಿಜೆ ಭರತ್ 2008” ಇನ್‌ಸ್ಟಾಗ್ರಾಂ ಪೇಜ್ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ, “ಕರಾವಳಿ ಅಫೀಶಿಯಲ್ ಇನ್‌ಸ್ಟಾಗ್ರಾಂ ಪೇಜ್” ವಿರುದ್ಧ ಪಾಂಡೇಶ್ವರ ಠಾಣೆ ಮತ್ತು “ಆಶಿಕ್ ಮೈಕಾಲ’ ಫೇಸ್‌ಬುಕ್ ಪೇಜ್ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: WATCH : ಸಿನಿಮೀಯ ರೀತಿಯಲ್ಲಿ ನಡೆದಿತ್ತು ಕಾರ್ ಚೇಸಿಂಗ್! ಸುಹಾಸ್ ಹ*ತ್ಯೆಯ ಮತ್ತೊಂದು ಸಿಸಿ ಟಿವಿ ವೀಡಿಯೋ ವೈರಲ್

ಈ ಪ್ರಕರಣಗಳ ತನಿಖೆಯನ್ನು ಸೆನ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಈವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ಉದ್ರೇಕಕಾರಿ ಮತ್ತು ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ 6 ಇನ್‌ಸ್ಟಾಗ್ರಾಂ ಹಾಗೂ 1 ಪೇಸ್‌ಬುಕ್ ಪೇಜನ್ನು ರದ್ದುಗೊಳಿಸಲಾಗಿದೆ.

Continue Reading

DAKSHINA KANNADA

ಮಂಗಳೂರು: ಬೈಕ್ ಸ್ಕಿಡ್ ಆಗಿ ಸವಾರ ಸಾ*ವು

Published

on

ಮಂಗಳೂರು: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಗಂ*ಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾ*ವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಲ್ಯದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಮೃತರನ್ನು ಸೋಮೇಶ್ವರ ಗ್ರಾಮದ ಪಿಲಾರು ಅಂಬಿಸಾದಿ ನಿವಾಸಿ ಮನೋಜ್ ಗಟ್ಟಿ ಎಂದು ಗುರುತಿಸಲಾಗಿದೆ. ಇಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದ ಮನೋಜ್ ಶುಕ್ರವಾರ ರಾತ್ರಿ ಕೋಟೆಕಾರಿನ ಕೊಂಡಾಣ ಕ್ಷೇತ್ರದ ಕಡೆಯ ಬಂಡಿ ಉತ್ಸವಕ್ಕೆ ತನ್ನ ಬೈಕಲ್ಲಿ ತೆರಳಿದ್ದರು. ರಾತ್ರಿ ವೇಳೆ ವಾಪಸ್ ಆಗುತ್ತಿದ್ದಾಗ ಕೊಲ್ಯದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದಿದೆ.

ಇದನ್ನೂ ಓದಿ: WATCH : ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಹೃದಯಾ*ಘಾತ; ಯುವಕ ಸಾ*ವು

ಇದರಿಂದ ರಸ್ತೆಗೆಸೆಯಲ್ಪಟ್ಟ ಮನೋಜ್ ಅವರು ಗಂ*ಭೀರ ಗಾಯಗೊಂಡಿದ್ದು ಅವರನ್ನು ಸ್ಥಳೀಯರು ತಕ್ಷಣವೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.

Continue Reading

DAKSHINA KANNADA

WATCH : ಸಿನಿಮೀಯ ರೀತಿಯಲ್ಲಿ ನಡೆದಿತ್ತು ಕಾರ್ ಚೇಸಿಂಗ್! ಸುಹಾಸ್ ಹ*ತ್ಯೆಯ ಮತ್ತೊಂದು ಸಿಸಿ ಟಿವಿ ವೀಡಿಯೋ ವೈರಲ್

Published

on

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹ*ತ್ಯೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಬೆಚ್ಚಿ ಬೀಳಿಸಿತ್ತು. ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಈ ನಡುವೆ ಹ*ತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಂದು ಸಿಸಿಟಿವಿ ವೀಡಿಯೋ ವೈರಲ್ ಆಗುತ್ತಿದೆ.

ಸಿನಿಮೀಯ ರೀತಿಯಲ್ಲಿ ಕಾರ್ ಚೇಸಿಂಗ್ : 

ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದ್ದ ಸುಹಾಸ್ ಶೆಟ್ಟಿ ಹತ್ಯೆಯ ವೀಡಿಯೋ, ಸಿಸಿ ಕ್ಯಾಮೆರಾದ ವೀಡಿಯೋ ಈಗಾಗಲೇ ವೈರಲ್ ಆಗಿವೆ. ಇದೀಗ ಮತ್ತೊಂದು ವೀಡಿಯೋ ವೈರಲ್ ಆಗಿದೆ.

ಸಿನಿಮೀಯ ರೀತಿಯಲ್ಲಿ ಕಾರ್ ಚೇಸಿಂಗ್ ಮಾಡಿ ಭೀಕರವಾಗಿ ಸುಹಾಸ್ ಶೆಟ್ಟಿ ಹ*ತ್ಯೆ ಮಾಡಲಾಗಿದೆ. ಕೊ*ಲೆ ಆರೋಪಿ ಸಫ್ವಾನ್ ಚಲಾಯಿಸುತ್ತಿದ್ದ ಮೀನು ಸಾಗಾಟದ ಪಿಕಪ್ ವಾಹನ ಕಾರನ್ನು ಚೇಸ್ ಮಾಡಿ ಡಿ*ಕ್ಕಿ ಹೊಡೆಯುವ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.

ಮೀನು ಸಾಗಾಟದ ವಾಹನ ಓವರ್ ಟೇಕ್ ಮಾಡುತ್ತಿದ್ದಂತೆಯೇ ಅಲ್ಲಿ ಜನ ಸೇರಿದ್ದರು. ವಾಹನ ಡಿ*ಕ್ಕಿ ಹೊಡೆದು ಅಟ್ಟಾಡಿಸಿಕೊಂಡು ಹೋಗುವಾಗಲೂ ಜನರು ಮೂಕ ಪ್ರೇಕ್ಷಕರಂತೆ ನಿಂತಿದ್ದರು.

ನಾಳೆ(ಮೇ.25) ಬಜಪೆ ಚಲೋ :

ಮೇ 1 ರಂದು ಸಂಜೆ 7 ಗಂಟೆಗೆ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಈಗಾಗಲೇ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೊಂದು ಪಕ್ಕಾ ಪ್ರೀ ಪ್ಲ್ಯಾನ್ಡ್ ಮರ್ಡರ್ ಎಂದು ಹಿಂದೂ ಸಂಘಟನೆಗಳು ಹೇಳಿದ್ದು, ಈ ಕೃ*ತ್ಯದಲ್ಲಿ ಮೂವತ್ತಕ್ಕೂ ಅಧಿಕ ಜನ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಕಾಂಕ್ರೀಟ್‌ ಮಿಕ್ಸಿಂಗ್‌ ವಾಹನದಡಿಗೆ ಬಿದ್ದು ಮಹಿಳೆ ಸಾ*ವು

ಸುಹಾಸ್ ಪ್ರಕರಣವನ್ನು ಎನ್ ಐ ಎ ಗೆ ಒಪ್ಪಿಸಲು ಹಿಂದೂ ಸಂಘಟನೆಗಳ ಆಗ್ರಹಿಸುತ್ತಿದೆ. ಮತ್ತೊಂದೆಡೆ, ನಾಳೆ ಮಧ್ಯಾಹ್ನ ಮೂರು ಗಂಟೆಗೆ ಬಜಪೆ ಚಲೋ  ಹಮ್ಮಿಕೊಳ್ಳಲಾಗಿದೆ. ಬಜ್ಪೆ ಶಾರಾದ ಮಂಟಪದಲ್ಲಿ ಹಕ್ಕೊತ್ತಾಯ ಸಭೆ ನಡೆಯಲಿದ್ದು,  ಜಿಲ್ಲೆಯಾದ್ಯಂತ ಸಾವಿರಾರು ಜನ ಸೇರುವ ನಿರೀಕ್ಷೆಯಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page