Connect with us

FILM

ನಟ ಅನಿರುದ್ಧ್‌ಗೆ 2 ವರ್ಷ ಕಿರುತೆರೆಯಲ್ಲಿ ಅವಕಾಶವಿಲ್ಲ: ನಿರ್ಮಾಪಕ ಸಂಘ

Published

on

ಬೆಂಗಳೂರು: ಕನ್ನಡ ಕಿರುತೆರೆಯ ಧಾರಾವಾಹಿ ‘ಜೊತೆ ಜೊತೆಯಲಿ’ ಸೀರಿಯಲ್​ನ ನಾಯಕ ನಟ ಅನಿರುದ್ಧ್​ ಅವರನ್ನು 2 ವರ್ಷಗಳ ಕಾಲ ಕಿರುತೆರೆಯ ಯಾವುದೇ ಕಾರ್ಯಕ್ರಮಗಳಲ್ಲಿ ಅವಕಾಶ ನೀಡದಂತೆ ನಿರ್ಮಾಪಕರ ಸಂಘ ನಿರ್ಧರಿಸಿದೆ.


ಕಿರುತೆರೆಯ ಯಾವುದೇ ಕಾರ್ಯಕ್ರಮಗಳಲ್ಲಿ ಅನಿರುದ್ಧ್​ಗೆ ಅವಕಾಶ ಕೊಡದಂತೆ ನಿರ್ಧರಿಸಲಾಗಿದೆ’ ಎಂದು ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ತಿಳಿಸಿದ್ದಾರೆ.
ಸಂಚಿಕೆ ನಿರ್ದೇಶಕರಾದ ಉತ್ತಮ್​ ಮಧು ಅವನ್ನು ಶೂಟಿಂಗ್​ ಸೆಟ್​ನಲ್ಲಿ ಅನಿರುದ್ಧ್ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಹೀಗಾಗಿ ಅವರನ್ನು ಸೀರಿಯಲ್​ನಿಂದ ಕೈ ಬಿಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ನಟ ಅನಿರುದ್ಧ್, ನನ್ನ ವಿರುದ್ಧದ ನಿರ್ಮಾಪಕರ ಸಂಘದ ಆರೋಪ ಸುಳ್ಳು. ಅವರ ಮಕ್ಕಳ ಮೇಲೆ ಪ್ರಮಾಣ ಮಾಡಿ ನನ್ನ ವಿರುದ್ಧ ಆರೋಪ ಮಾಡಲಿ, ನಾನೂ ನನ್ನ ಮಕ್ಕಳ ತಲೆ ಮೇಲೆ ಕೈ ಇಟ್ಟು ಅದಕ್ಕೆಲ್ಲ ಉತ್ತರಗಳನ್ನು ಕೊಡುತ್ತೇನೆ ಎಂದು ತನ್ನ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

BIG BOSS

ಬಿಗ್ ಬಾಸ್ ಸೀಸನ್ 1  ಟು 12 : ಇಲ್ಲಿದೆ ಗೆದ್ದವರ ವಿವರ!

Published

on

BBK12 : ಬಿಗ್ ಬಾಸ್ ಸೀಸನ್ 12ಕ್ಕೆ ಅದ್ದೂರಿ ತೆರೆ ಬಿದ್ದಿದೆ. ಗಿಲ್ಲಿ ನಟ ಈ ಬಾರಿಯ‘ಬಿಗ್ ಬಾಸ್ ಕನ್ನಡ 12’ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ.  ಕರಾವಳಿಯ ರಕ್ಷಿತಾ ರನ್ನರ್ ಅಪ್ ಆಗಿದ್ದಾರೆ. ಅಶ್ವಿನಿ ಗೌಡ  ಎರಡನೇ ರನ್ನರ್ ಅಪ್ ಆಗಿದ್ದಾರೆ. ಸದ್ಯ ಗೆದ್ದವರ ಅಭಿಮಾನಿಗಳು ಫುಲ್ ಖುಷಿಯಲ್ಲಿದ್ದಾರೆ.

ಬಿಗ್ ಬಾಸ್ ಗೆದ್ದವರ ವಿವರ :

BBK 1  : ಬಿಗ್ ಬಾಸ್ ಕನ್ನಡ ಮೊದಲ ಶೋ ಆರಂಭವಾಗಿದ್ದು 2013ರಲ್ಲಿ. ಈಟಿವಿಯಲ್ಲಿ ಈ ಶೋ ಆರಂಭಗೊಂಡಿತ್ತು. ಮೊದಲ ಸೀಸನ್‌ನಲ್ಲಿ ವಿಜಯ್ ರಾಘವೇಂದ್ರ ಗೆದ್ದಿದ್ದರು. ಅರುಣ್ ಸಾಗರ್ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದರು.

BBK2 : ಬಿಗ್ ಬಾಸ್ ಸೀಸನ್ 2 2014ರಲ್ಲಿ ನಡೆಯಿತು. ಜೂನ್ 29 ರಿಂದ ಅಕ್ಟೋಬರ್ 5ರ ವರೆಗೆ ಈ ಸೀಸನ್ ನಡೆಯಿತು. ನಿರೂಪಕ ಅಕುಲ್ ಬಾಲಾಜಿ ವಿಜೇತರಾಗಿದ್ದರು.  ಮತ್ತೊಬ್ಬ ನಿರೂಪಕ ಸೃಜನ್ ಲೋಕೇಶ್ ರನ್ನರ್ ಅಪ್ ಆಗಿದ್ದರು.

BBK3:  ಬಿಗ್ ಬಾಸ್ ಸೀಸನ್ 3 ರಲ್ಲಿ 18 ಸ್ಪರ್ಧಿಗಳಿದ್ದರು. 2015 – 16ನೇ ಸಾಲಿನಲ್ಲಿ ನಡೆದಿದ್ದ ಈ ಶೋನಲ್ಲಿ ನಟಿ ಶ್ರುತಿ ಗೆದ್ದು ಬೀಗಿದ್ದರು. ಚಂದನ್ ರನ್ನರ್ ಆಪ್ ಆಗಿ ಮಿಂಚಿದ್ದರು.

BBk 4 : 2016-17ರಲ್ಲಿ ನಡೆದಿದ್ದ ಸೀಸನ್ 4ನಲ್ಲಿ ಒಳ್ಳೆ ಹುಡುಗ ಪ್ರಥಮ್‌ ಗೆಲುವಿನ ನಗೆ ಬೀರಿದ್ದರು. ಕಿರಿಕ್ ಕೀರ್ತಿ ರನ್ನರ್ ಅಪ್ ಆಗಿದ್ದರು.

BBK5 : ಬಿಗ್ ಬಾಸ್ ಸೀಸನ್ 5 ರಲ್ಲಿ ರ್ಯಾಪರ್ ಚಂದನ್ ಶೆಟ್ಟಿ ವಿಜೇತರಾಗಿ ಹೊಮ್ಮಿದ್ದರು. ದಿವಾಕರ್ ರನ್ನರ್ ಅಪ್ ಆಗಿದ್ದರು.

BBK6 : 2018 – 19 ರಲ್ಲಿ ಬಿಗ್ ಬಾಸ್ ಸೀಸನ್ 6 ನಡೆಯಿತು. ರೈತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಶಶಿಕುಮಾರ್ ಬಿಗ್ ಬಾಸ್ ಟ್ರೋಫಿ ಗೆದ್ದಿದ್ದರು. ಗಾಯಕ, ಸಂಗೀತ ನಿರ್ದೇಶಕ ನವೀನ್ ಸಜ್ಜು ರನ್ನರ್ ಅಪ್ ಆಗಿದ್ದರು.

BBK7 : 2019 – 20 ರಲ್ಲಿ ಬಿಗ್ ಬಾಸ್ ಸೀಸನ್ 7 ನಡೆಯಿತು. ಶೈನ್ ಶೆಟ್ಟಿ ಗೆದ್ದಿದ್ದರು. ಹಾಸ್ಯ ನಟ ಕುರಿ ಪ್ರತಾಪ್ ರನ್ನರ್ ಅಪ್ ಆಗಿದ್ದರು.

BBK8 : ಸೀಸನ್ 8 ಕೋವಿಡ್ ಕಾರಣದಿಂದ ಅರ್ಧಕ್ಕೆ ನಿಂತು ಮತ್ತೆ ಆರಂಭವಾಯಿತು. ಈ ಶೋನ ವಿನ್ನರ್ ಆಗಿ ಮಂಜು ಪಾವಗಡ ಹೊರಹೊಮ್ಮಿದ್ದರು.  ಅರವಿಂದ್ ಕೆ.ಪಿ ರನ್ನರ್ ಅಪ್ ಆಗಿದ್ದರು.

BBK9 : ಹಳೆಯ ಸೀಸನ್‌ನ ಸ್ಪರ್ಧಿಗಳು ಸೀಸನ್‌ 9ರಲ್ಲಿ ಬಂದಿದ್ದರು. ಒಟಿಟಿ ಶೋ ಕೂಡ ಇತ್ತು. ರೂಪೇಶ್ ಶೆಟ್ಟಿ ಗೆದ್ದರೆ, ರಾಕೇಶ್ ಅಡಿಗ ರನ್ನರ್ ಅಪ್ ಆದರು.

BBK10 : ಭಾರೀ ಕುತೂಹಲ ಕೆರಳಿಸಿದ್ದ ಸೀಸನ್ 10. ಕಾರ್ತಿಕ್ ಮಹೇಶ್‌ ಗೆದ್ದಿದ್ದರು. ಡ್ರೋನ್ ಪ್ರತಾಪ್ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದರು.

BBK 11 : ‘ಬಿಗ್ ಬಾಸ್‌ ಕನ್ನಡ 1!ರ ವಿನ್ನರ್‌ ಟ್ರೋಫಿ ಹನುಮಂತ ಲಮಾಣಿ ಗೆದ್ದಿದ್ದರು. ರನ್ನರ್‌ ಅಪ್‌ ಆಗಿ ತ್ರಿವಿಕ್ರಮ್‌ ,  ಮೂರನೇ ಸ್ಥಾನ ರಜತ್‌ ಪಡೆದುಕೊಂಡರು.

Continue Reading

BIG BOSS

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಗೆದ್ದ ಗಿಲ್ಲಿ; ನುಡಿದಂತೆ ನಡೆದ ‘ಆ’ ವ್ಯಕ್ತಿ!

Published

on

BBK12 : ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರಲ್ಲಿ ಗಿಲ್ಲಿ ನಟ ಗೆದ್ದು ಬೀಗಿದ್ದಾರೆ. ರಕ್ಷಿತಾ ಶೆಟ್ಟಿ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಗಿಲ್ಲಿ ಮತ್ತು ರಕ್ಷಿತಾ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಮತ್ತೊಂದೆಡೆ ಚಾಲೆಂಜ್ ಮಾಡಿರುವ ವ್ಯಕ್ತಿ ತಾನು ನುಡಿದಂತೆ ನಡೆದಿದ್ದಾರೆ.

ಗಿಲ್ಲಿ ಗೆದ್ದರೆ ಅರ್ಧ ಗಡ್ಡ ಮತ್ತು ಮೀಸೆ ತೆಗೆಯುತ್ತೇನೆಂದು ಚಾಲೆಂಜ್‌ ಮಾಡಿದ್ದ ವ್ಯಕ್ತಿಯೊಬ್ಬರು ತಾನು ಹೇಳಿದಂತೆ ಮಾಡಿದ್ದಾರೆ. ಅಬ್ದುಲ್ ರಜಾಕ್ ಎಂಬ ವ್ಯಕ್ತಿ ಈ ಸವಾಲು ಹಾಕಿದ್ದರು. ಗಿಲ್ಲಿ ಗೆಲುವು ದಾಖಲಿಸುತ್ತಿದ್ದಂತೆ, ಅರ್ಧ ಗಡ್ಡ ಮತ್ತು ಮೀಸೆಯನ್ನು ತೆಗೆದಿದ್ದಾರೆ. ಇದನ್ನು ವೀಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

ಒಂದು ವೇಳೆ ಗಿಲ್ಲಿ ಬಿಗ್‌ ಬಾಸ್‌ನಲ್ಲಿ ವಿನ್ನರ್‌ ಆದ್ರೆ ಅರ್ಧ ಗಡ್ಡ ಮತ್ತು ಮೀಸೆಯನ್ನು ತೆಗೆಯುತ್ತೇನೆಂದು ಚಾಲೆಂಜ್‌ ಮಾಡಿದ್ದೆ. ಅವರು ಗೆದ್ದಿದ್ದಾರೆ. ಗಿಲ್ಲಿನ ಫ್ಯಾನ್ಸ್‌ ಗೆಲ್ಲಿಸಿದ್ದಾರೆ. ಅದಕ್ಕಾಗಿ ಗಡ್ಡ, ಮೀಸೆ ತೆಗೆಯುತ್ತಿದ್ದೇನೆ ಎಂದು ವೀಡಿಯೋದಲ್ಲಿ ವ್ಯಕ್ತಿ ಹೇಳಿದ್ದಾರೆ.

ಇದನ್ನೂ ಓದಿ : ‘ನಿಮ್ಮನ್ನು ಕಳಿಸಿಯೇ ನಾನು ಹೋಗೋದು’; ಅಶ್ವಿನಿ ವಿರುದ್ಧ ರಕ್ಷಿತಾ ಹಾಕಿದ್ದ ಸವಾಲು ಕೊನೆಗೂ ನಿಜವಾಯ್ತು!

ಬಿಗ್ ಬಾಸ್ ಸೀಸನ್ 12ಕ್ಕೆ ಅದ್ದೂರಿ ತೆರೆ ಬಿದ್ದಿದೆ. ಗಿಲ್ಲಿ ನಟ ಈ ಬಾರಿಯ‘ಬಿಗ್ ಬಾಸ್ ಕನ್ನಡ 12’ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ಅವರಿಗೆ ಬರೋಬ್ಬರಿ 40 ಕೋಟಿಗೂ ಅಧಿಕ ವೋಟ್ ಸಿಕ್ಕಿರೋದು ವಿಶೇಷ. ಕರಾವಳಿಯ ರಕ್ಷಿತಾ ರನ್ನರ್ ಅಪ್ ಆಗಿದ್ದಾರೆ. ಅಶ್ವಿನಿ ಗೌಡ  ಎರಡನೇ ರನ್ನರ್ ಅಪ್ ಆಗಿದ್ದಾರೆ. ಗಿಲ್ಲಿಗೆ 50 ಲಕ್ಷ ರೂಪಾಯಿ ಕ್ಯಾಶ್‌ ಪ್ರೈಸ್‌ ಜೊತೆ ಭರ್ಜರಿ ಗಿಫ್ಟ್‌  ಸಿಕ್ಕಿದೆ. ಮಾರುತಿ ಸುಜುಕಿ ವಿಕ್ಟೋರಿಸ್‌ ಕಾರು ಉಡುಗೊರೆಯಾಗಿ ಕೊಡಲಾಗಿದೆ.  ಸುದೀಪ್ ಕಡೆಯಿಂದ ಗಿಲ್ಲಿಗೆ 10 ಲಕ್ಷ ರೂಪಾಯಿ ಸಿಗುತ್ತಿದೆ.

Continue Reading

BIG BOSS

ಅಂತ್ಯ ಅಲ್ಲ….ಇದು ಹೊಸ ಆರಂಭ..ಧ್ರುವಂತ್ ಗೆಟಪ್ ಚೇಂಜ್

Published

on

ಮಂಗಳೂರು/ಬೆಂಗಳೂರು : ಬಿಗ್ ಬಾಸ್ ಸೀಸನ್ 12 ಮುಕ್ತಾಯದ ಹಂತದಲ್ಲಿದೆ. ಒಬ್ಬೊಬ್ಬರೇ ಹೊರ ನಡೆದಿದ್ದಾರೆ. ಈಗ ಉಳಿದಿರೋದು ಕೇವಲ ಐದು ಮಂದಿ. ಮಿಡ್ ವೀಕ್ ಎಲಿಮಿನೇಷನ್‌ ಮೂಲಕ ಧ್ರುವಂತ್ ಹೊರಬಂದಿದ್ದಾರೆ. ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಲೇ ಧ್ರುವಂತ್ ಬದಲಾಗಿದ್ದಾರೆ.

ಬದಲಾಯ್ತು ಗೆಟಪ್:

ಬಿಗ್ ಬಾಸ್ ಮನೆಯೊಳಗಿದ್ದಾಗ ತಮ್ಮದೇ ಆದ ರೀತಿಯಲ್ಲಿ ಆಟವಾಡಿದ್ದರು ಧ್ರುವಂತ್. ಚರ್ಚೆ, ಜಗಳ, ವಾದದಲ್ಲೂ ಧ್ರುವಂತ್ ಇದ್ದರು. ಎಲ್ಲರೊಂದಿಗೆ ಜಗಳವಾಡುತ್ತಿದ್ದ ಧ್ರುವಂತ್‌ರನ್ನು ಕಿಚ್ಚ ಕ್ಲಾಸ ತೆಗೆದುಕೊಂಡಿದ್ದೂ ಇದೆ. ದೊಡ್ಮನೆಯೊಳಗೆ ‘ಜೈ ಮಹಾಕಾಳ್’ ಎನ್ನುತ್ತಾ ಖ್ಯಾತರಾಗಿದ್ದ ಧ್ರುವಂತ್ ಸೀಕ್ರೆಟ್ ರೂಮಿಗೂ ಹೋಗಿದ್ದರು. ಅಲ್ಲೂ ರಕ್ಷಿತಾ ಶೆಟ್ಟಿ ಜೊತೆ ಅವರ ಜಗಳ ಸಿಕ್ಕಾಪಟ್ಟೆ ಸದ್ದು ಮಾಡಿತ್ತು.

ಬಿಗ್ ಬಾಸ್ ಮನೆಯಲ್ಲಿ ತನ್ನ ಉದ್ದ ಕೂದಲನ್ನು ಜುಟ್ಟು ಕಟ್ಟಿಕೊಂಡು ವಿಭಿನ್ನವಾಗಿ ಕಾಣಿಸಿಕೊಳ್ಳುತ್ತಿದ್ದ ಧ್ರುವಂತ್, ಇದೀಗ ಜುಟ್ಟಿಗೆ ಕತ್ತರಿ ಹಾಕಿಸಿಕೊಂಡಿದ್ದಾರೆ. ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಕಣ್ಣು ಬಣ್ಣದ ಥಾರ್‌ನಲ್ಲಿ ಬಂದಿಳಿದ ಧ್ರುವಂತ್, ಅಭಿಮಾನಿಗಳನ್ನು ಭೇಟಿಯಾಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಬಳಿಕ ಸೆಲೂನ್‌ಗೆ ಹೋದ ಅವರು ಕೂದಲು ಕತ್ತರಿಸಿಕೊಂಡಿದ್ದಾರೆ. ಸ್ಟೈಲಿಷ್ ಹೇರ್ ಸ್ಟೈಲ್ ಮಾಡಿಕೊಂಡು ಡಿಫರೆಂಟ್ ಲುಕ್‌ನಲ್ಲಿ ಕಂಗೊಳಿಸಿದ್ದಾರೆ. ಅಂತ್ಯ ಅಲ್ಲ….ಇದು ಹೊಸ ಆರಂಭ ಎಂಬುದಾಗಿ ಟ್ಯಾಗ್ ಲೈನ್‌ನೊಂದಿಗೆ ವೀಡಿಯೋ ಹಂಚಿಕೊಂಡಿದ್ದು, ಅವರ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ : ‘ಅಶ್ವಿನಿ ಗೌಡಗೆ ಕನ್ನಡ ಬರೆಯೋಕೆ ಬರಲ್ಲ’ ಎಂಬ ಟೀಕೆಗೆ ಸ್ಪಷ್ಟೀಕರಣ ಕೊಟ್ಟ ಕರವೇ ನಾರಾಯಣ ಗೌಡ!

ಅಂದಹಾಗೆ, ಇಂದು(ಜ.17) ಬಿಗ್ ಬಾಸ್ ಪ್ರಿ ಫಿನಾಲೆ ನಡೆಯಲಿದೆ. ನಾಳೆ(ಜ.18) ಗ್ರ್ಯಾಂಡ್ ಫಿನಾಲೆ ನಡೆಯಲಿದೆ. ರಕ್ಷಿತಾ ಶೆಟ್ಟಿ, ಗಿಲ್ಲಿ ನಟ, ಕಾವ್ಯಾ,ರಘು, ಧನುಷ್, ಅಶ್ವಿನಿ ಗೌಡರಲ್ಲಿ ಯಾರು ಬಿಗ್ ಬಾಸ್ ಟ್ರೋಫಿ ಗೆಲ್ತಾರೆ ಅನ್ನೋದು ಸದ್ಯದ ಕುತೂಹಲ.

Continue Reading
Advertisement

Trending

Copyright © 2025 Namma Kudla News

You cannot copy content of this page