Connect with us

FILM

ಸೌಂದರ್ಯ ಜಗದೀಶ್ ಆತ್ಮಹ*ತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಡೆ*ತ್ ನೋಟ್ ನಲ್ಲಿತ್ತು ಸ್ಫೋಟಕ ಮಾಹಿತಿ

Published

on

ಬೆಂಗಳೂರು : ಸೌಂದರ್ಯ ಜಗದೀಶ್ ಆತ್ಮಹ*ತ್ಯೆ ಪ್ರಕರಣ ಇಡೀ ಸಿನಿಮಾರಂಗವನ್ನೇ ಬೆಚ್ಚಿ ಬೀಳಿಸಿತ್ತು. ನಿರ್ಮಾಪಕನಾಗಿ ಭಾರಿ ಯಶಸ್ಸನ್ನು ಬಾಚಿಕೊಂಡಿದ್ದ ಸೌಂದರ್ಯ ಜಗದೀಶ್ ಸಾವು ಆತಂಕ ಸೃಷ್ಟಿಸಿದ್ದು ಸುಳ್ಳಲ್ಲ. ಯಾಕೆ ಸೌಂದರ್ಯ ಜಗದೀಶ್ ಇಂತಹ ನಿರ್ಧಾರ ಕೈಗೊಂಡ್ರು ಅನ್ನೋ ಪ್ರಶ್ನೆಯೊಂದು ಹುಟ್ಟುಕೊಂಡಿತ್ತು. ಇದೀಗ ಡೆ*ತ್ ನೋಟ್ ಸಿಕ್ಕಿರುವ ಬಗ್ಗೆ ಸೌಂದರ್ಯ ಜಗದೀಶ್ ಪತ್ನಿ ರೇಖಾ ತಿಳಿಸಿದ್ದಾರೆ. ಈ ಡೆ*ತ್ ನೋಟ್ ಮೂಲಕ ಕೆಲವೊಂದು ಸ್ಫೋಟಕ ಮಾಹಿತಿ ಲಭ್ಯವಾಗಿದೆ.


ತಮ್ಮ ಪತಿಯ ನಿಧ*ನಕ್ಕೆ ಅವರ ಬಿಸ್ ನೆಸ್ ಪಾರ್ಟ್ನರ್ ಗಳಾಗಿದ್ದ ಸುರೇಶ್, ಹೊಂಬಣ್ಣ ಹಾಗೂ ಸುಧೀಂದ್ರ ಅವರೇ ಕಾರಣ ಎಂದು ರೇಖಾ ಆರೋಪಿಸಿದ್ದಾರೆ.
ಸೌಂದರ್ಯ ಜಗದೀಶ್ ಇಹಲೋಕ ತ್ಯಜಿಸಿದ ಕಾರಣ ಸೌಂದರ್ಯ ಜಗದೀಶ್ ಅವರಿಗೆ ಆದ ನಷ್ಟ ಹಾಗೂ ಮೋಸ ಎಂಬುದಾಗಿ ರೇಖಾ ಹೇಳಿದ್ದಾರೆ.

ಡೆ*ತ್ ನೋಟ್ ನಲ್ಲಿ ಏನಿತ್ತು? ರೇಖಾ ಆಪಾದನೆ ಏನು?

ಈಗ ಶ್ರೀರಂಗಪಟ್ಟಣದಲ್ಲಿ ಪೂಜೆ ಮಾಡಿ ಅವರ ಬಟ್ಟೆಗಳನ್ನು ಅಲ್ಲಿ ಬಿಡಬೇಕು ಅಂತ ಅರ್ಚಕರು ಹೇಳಿದ್ದಾರೆ. ಹಾಗಾಗಿ ಹಳೇ ಬಟ್ಟೆಗಳನ್ನು ತೆಗೆಯಲು ವಾರ್ಡ್ ರೋಬ್ ತೆಗೆದಾಗ ಡೆ*ತ್ ನೋಟ್ ಸಿಕ್ಕಿದೆ ಎಂದಿದ್ದಾರೆ.

ಸುರೇಶ್‌ ಹಾಗೂ ಹೊಂಬಣ್ಣ ಮತ್ತು ಸೌಂದರ್ಯ ಜಗದೀಶ್ ಸೇರಿಕೊಂಡು ಸೌಂದರ್ಯ ಕನ್‌ಸ್ಟ್ರಕ್ಷನ್ಸ್‌ ಕಂಪೆನಿಯನ್ನು ನಡೆಸಿಕೊಂಡು ಹೋಗುತ್ತಿದ್ದರು. ಈ ವೇಳೆ ಕಂಪನಿಯು ಲಾಭದಲ್ಲಿದ್ದರೂ ನಷ್ಟದಲ್ಲಿದೆ ಎಂದು ಸುಳ್ಳು ಹೇಳಿ ತಮ್ಮ ಪತಿ ಜಗದೀಶ್‌ ಅವರಿಂದ ಹಣವನ್ನು ಹೂಡಿಕೆ ಮಾಡಿಸಿದ್ದರು. ಇಷ್ಟೇ ಅಲ್ಲದೇ, ಸುಳ್ಳು ಹೇಳಿ ಕುಟುಂಬದ ಆಸ್ತಿಗಳನ್ನು ಬ್ಯಾಂಕ್‌ ನಲ್ಲಿ ಅಡಮಾನ ಇರಿಸಿದ್ದಾರೆ. ಅದರ ಹಣವನ್ನು ವೈಯಕ್ತಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ತಮಗೆ ತುಂಬ ಕಾಟ, ಕಿರುಕುಳ ಕೊಡುತ್ತಾರೆ ಅಂತ ಈ ಮೊದಲು ಒಮ್ಮೆ ನನ್ನ ಬಳಿ ಹೇಳಿದ್ದರು. ಆದರೆ ಈ ಮಟ್ಟಕ್ಕೆ ಆಗುತ್ತೆ ಅಂತ ನಮಗೆ ಗೊತ್ತಿರಲಿಲ್ಲ. ಏನೇ ಇದ್ದರೂ ನಮ್ಮ ಜೊತೆ ಹಂಚಿಕೊಳ್ಳಿ ಅಂತ ಧೈರ್ಯ ತುಂಬಿದ್ದೆವು ಎಂದಿದ್ದಾರೆ.

ನಮಗೂ ಬೆದರಿಕೆ ಇದೆ ಎಂದ ರೇಖಾ

ನನಗೆ ಮತ್ತು ನನ್ನ ಮಗನಿಗೆ ಬೆದರಿಕೆ ಇದೆ ಎಂದಿರುವ ಅವರು, ಹುಲಿ ರೀತಿ ಇದ್ದ ಅವರನ್ನೇ ಕೊನೆ ಕೊನೆಗೆ ಇಷ್ಟು ಸೈಲೆಂಟ್​ ಆಗುವಂತೆ ಮಾಡಿ ಈ ಹಂತಕ್ಕೆ ತೆಗೆದುಕೊಂಡು ಬಂದವರು. ನಾಳೆ ನನಗೆ ಮತ್ತು ನನ್ನ ಮಗನಿಗೆ ಏನು ಮಾಡುತ್ತಾರೋ ಗೊತ್ತಿಲ್ಲ. ನನಗೆ ಆ ಭಯ ಇದೆ.
ಪತಿ ಸೌಂದರ್ಯ ಜಗದೀಶ್‌ ಆತ್ಮಹ*ತ್ಯೆ ಮಾಡಿಕೊಳ್ಳುವ ಮುಂಚೆ ಒಂದು ವಾರದ ಹಿಂದೆ ಸುರೇಶ್‌ ಹಾಗೂ ಹೊಂಬಣ್ಣ ನಿರಂತರವಾಗಿ ಫೋನ್‌ ಮಾಡಿದ್ದರು. ಅವರ ಕರೆ ಬಂದಾಗ ಸಂಪೂರ್ಣವಾಗಿ ಕುಗ್ಗಿ ಹೋಗಿದ್ದು, ಇದರಿಂದ ಮನನೊಂದು ಡೆ*ತ್‌ನೋಟ್‌ ಬರೆದಿಟ್ಟು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ ಎಂದು ಜಗದೀಶ್‌ ಪತ್ನಿ ರೇಖಾ ಆರೋಪಿಸಿದ್ದಾರೆ.

ಇದನ್ನೂ ಓದಿ : ತುಳುನಾಡನ್ನು ಹಾಡಿ ಹೊಗಳಿದ ಸುನಿಲ್ ಶೆಟ್ಟಿ.. ಮಾವನ ಪೋಸ್ಟನ್ನು ರಿ ಪೋಸ್ಟ್‌ ಮಾಡಿ ಗಮನ ಸೆಳೆದ ಕೆ.ಎಲ್ ರಾಹುಲ್

ಸದ್ಯಕ್ಕೆ ರೇಖಾ ಜಗದೀಶ್ ಅವರು ನೀಡಿದ ಡೆ*ತ್ ನೋಟ್ ಆಧರಿಸಿ ಸೌಂದರ್ಯ ಜಗದೀಶ್ ಅವರ ಪಾರ್ಟ್ನರ್ಸ್ ಸುರೇಶ್, ಹೊಂಬಣ್ಣ ಹಾಗೂ ಸುಧೀಂದ್ರ ಮೇಲೆ ಎಫ್ ಐ ಆರ್ ದಾಖಲಾಗಿದೆ.

ಏ.14ರಂದು ಬೆಂಗಳೂರಿನ ಮಹಾಲಕ್ಷ್ಮೀ ಲೇ ಔಟ್‌ನಲ್ಲಿರುವ ನಿವಾಸದಲ್ಲಿ ಸೌಂದರ್ಯ ಜಗದೀಶ್ ಜೀವಾಂತ್ಯಗೊಳಿಸಿದ್ದರು. ಇದರಿಂದ ಇಡೀ ಚಿತ್ರರಂಗ ಶಾಕ್ ಗೆ ಒಳಗಾಗಿತ್ತು. ಇದಾದ ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿ, ಅವರ ಇಚ್ಛೆಯಂತೆ ಚನ್ನರಾಯಪಟ್ಟಣದ ಹಿರಿಸಾವೆ ಗ್ರಾಮದಲ್ಲಿ ಅಂತ್ಯಕ್ರಿ*ಯೆ ನೆರವೇರಿಸಲಾಗಿತ್ತು.

FILM

ಹೆಸರು ಬದಲಿಸಿಕೊಂಡ ಆಲಿಯಾ ಭಟ್… ಏನು ಗೊತ್ತಾ..?

Published

on

ರಣಬೀರ್ ಕಪೂರ್ ಪತ್ನಿ ಆಲಿಯಾ ಭಟ್ ಮದ್ಯೆಯಾಗಿ ಹಲವು ವರ್ಷಗಳ ನಂತರ ತಮ್ಮ ಹೆಸರಿನ ಮುಂದೆ ಇರುವ ಭಟ್ ಎನ್ನುವ ಸರ್ ನೇಮ್ ತೆಗೆದು ಆಲಿಯಾ ಕಪೂರ್ ಎಂದು ಬದಲಿಸಿಕೊಂಡಿದ್ದಾರೆ.

ಆಲಿಯಾ ಭಟ್ ಅವರು ಬ್ಲಾಗ್ ಒಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರ ಹೋಟೆಲ್ ರೂಂನ ದೃಶ್ಯ ಕೂಡ ಇದೆ. ಹೋಟೆಲ್ನಲ್ಲಿ ‘ಆಲಿಯಾ ಕಪೂರ್” ಎಂದು ಬರೆಯಲಾಗಿದೆ. ಹೀಗಾಗಿ, ಆಲಿಯಾ ಭಟ್ ಅವರು ಅಧಿಕೃತವಾಗಿ ಹೆಸರು ಬದಲಿಸಿಕೊಂಡಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಆಲಿಯಾ, ಕಪೂರ್ ಕುಟುಂಬದವರನ್ನು ವಿವಾಹ ಆಗಿದ್ದಾರೆ. ಈ ಕಾರಣದಿಂದಲೇ ಆಲಿಯಾ ಕಪೂರ್ ಎಂದು ಹೋಟೆಲ್ನವರು ಬದಲಿಸಿರಬಹುದು ಎಂಬುದು ಕೆಲವರ ಊಹೆ. ಸದ್ಯ ಆಲಿಯಾ ಅವರು ಮಗಳು ರಹಾ ಆರೈಕೆಯಲ್ಲಿ ಬ್ಯುಸಿ ಇದ್ದಾರೆ.

Continue Reading

FILM

‘ಆ ವಿಷಯ ನನಗೆ ನಿಜವಾಗಿಯೂ ತಿಳಿದಿರಲಿಲ್ಲ’: ಬರ್ತ್‌ಡೇ ಪಾರ್ಟಿ ಬಗ್ಗೆ ಮಂಗ್ಲಿ ಸ್ಪಷ್ಟನೆ

Published

on

ಮಂಗಳೂರು/ಹೈದರಾಬಾದ್: ಖ್ಯಾತ ಗಾಯಕಿ ಮಂಗ್ಲಿ ಅವರ ಬರ್ತ್‌ಡೇ ಪಾರ್ಟಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಮದ್ಯ ಮತ್ತು ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿತ್ತು. ಇದರ ಬಗ್ಗೆ ಮಂಗ್ಲಿ ಕೊನೆಗೂ ಸ್ಪಷ್ಟನೆ ಕೊಟ್ಟಿದ್ದಾರೆ.


ಹೈದರಾಬಾದ್‌ನ ಚೆವೆಲ್ಲಾ ತ್ರಿಪುರಾ ರೆಸಾರ್ಟ್‌ನಲ್ಲಿ ಜೂನ್ 10ರಂದು ಗಾಯಕಿ ಮಂಗ್ಲಿಯ ಬರ್ತಡೇ ಪಾರ್ಟಿಯನ್ನು ಆಯೋಜಿಸಲಾಗಿತ್ತು. ಈ ಪಾರ್ಟಿಯಲ್ಲಿ ಹಲವರು ಭಾಗಿಯಾಗಿದ್ದರು. ಮ್ಯೂಸಿಕ್, ಡ್ರಿಂಕ್ಸ್ ಒಳಗೊಂಡಂತೆ ಬಲು ಜೋರಾಗಿ ಪಾರ್ಟಿಯನ್ನು ಆಯೋಜಿಸಲಾಗಿತ್ತು.

ಇದನ್ನೂ ಓದಿ: Watch video: ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್ಸ್‌ ಸೇವನೆ ಪ್ರಕರಣ; ಪೊಲೀಸರಿಗೆ ಗಾಯಕಿ ಅವಾಜ್

ಇದೇ ಸಂದರ್ಭದಲ್ಲಿ ತಡರಾತ್ರಿ ಪೊಲೀಸರು ಮಂಗ್ಲಿ ಅವರ ಪಾರ್ಟಿಯ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಮಾದಕ ವಸ್ತುಗಳು ಪತ್ತೆಯಾಗಿದೆ. ಇದಲ್ಲದೆ ಸ್ಥಳದಲ್ಲಿ ವಿದೇಶಿ ಮದ್ಯ ಕೂಡ ಪತ್ತೆಯಾಗಿದೆ. ವಿದೇಶಿ ಮದ್ಯವನ್ನು ವಶಕ್ಕೆ ಪಡೆದ ಬಗ್ಗೆ ಪೊಲೀಸರು ಹೇಳಿಕೆ ನೀಡಿದ್ದರು. ಆದರೆ ಈ ಬಗ್ಗೆ ಮಂಗ್ಲಿ ಕೊನೆಗೂ ಸ್ಪಷ್ಟನೆ ಕೊಟ್ಟಿದ್ದಾರೆ.

 

ಈ ಬಗ್ಗೆ ಮಾತನಾಡಿರುವ ಅವರು ‘ಆಲ್ಕೋಹಾಲ್ ನೀಡುವ ವಿಚಾರದಲ್ಲಿ ಒಪ್ಪಿಗೆ ಪಡೆಯಬೇಕು ಎನ್ನುವ ವಿಷಯ ನನಗೆ ನಿಜವಾಗಿಯೂ ತಿಳಿದಿರಲಿಲ್ಲ. ನಾನು ಹಾಗೆ ಮಾಡಲಿಲ್ಲ ಎಂಬ ಕೊರಗು ಇದೆ. ಯಾರಾದರೂ ನನಗೆ ಮಾರ್ಗದರ್ಶನ ನೀಡಿದ್ದರೆ, ನಾನು ಹಾಗೆ ಮಾಡುತ್ತಿದ್ದೆ. ಪಾರ್ಟಿಯಲ್ಲಿ ಯಾವುದೇ ವಿದೇಶಿ ಮದ್ಯ ಇರಲಿಲ್ಲ. ಲಭ್ಯವಿದ್ದದ್ದು ಸ್ಥಳೀಯ ಮದ್ಯ ಮಾತ್ರ. ಪೊಲೀಸರು ಸಹ ಇದನ್ನೇ ದೃಢಪಡಿಸಿದ್ದಾರೆ. ಯಾವುದೇ ಮಾದಕ ದ್ರವ್ಯ ಸಿಕ್ಕಿಲ್ಲ ಎಂದು ಕೂಡ ಹೇಳಿದ್ದಾರೆ’ ಎಂದು ಮಂಗ್ಲಿ ಹೇಳಿದ್ದಾರೆ.

Continue Reading

FILM

ರಾಮ್ ಚರಣ್ ನಿರ್ಮಾಣದ ಸಿನಿಮಾ ಸೆಟ್​ನಲ್ಲಿ ಅವಘ*ಡ; ಹಲವರಿಗೆ ಗಾ*ಯ

Published

on

ಮಂಗಳೂರು/ಹೈದರಾಬಾದ್ : ನಟ ರಾಮ್ ಚರಣ್ ನಿರ್ಮಿಸುತ್ತಿರುವ ‘ದಿ ಇಂಡಿಯನ್ ಹೌಸ್’ ಸಿನಿಮಾ ಸೆಟ್‌ನಲ್ಲಿ ಅವಘ*ಡವೊಂದು ಸಂಭವಿಸಿದೆ. ಸಹಾಯಕ ಕ್ಯಾಮರಾಮೆನ್ ಗಂ*ಭೀರವಾಗಿ ಗಾ*ಯಗೊಂಡಿದ್ದಾರೆ ಎಂದು ವರದಿಯಾಗಿದೆ. ಚಿತ್ರದ ಸೆಟ್‌ಗೂ ಹಾ*ನಿಯಾಗಿದೆ ಎಂದು ತಿಳಿದುಬಂದಿದೆ.

ಚಿತ್ರದ ಶೂಟ್‌ಗಾಗಿ ದೊಡ್ಡ ಟ್ಯಾಂಕರ್ ನಿರ್ಮಾಣ ಮಾಡಲಾಗಿತ್ತು. ಆದರೆ, ಟ್ಯಾಂಕರ್ ಒಡೆದು ಹೋಗಿ ಭಾರೀ ಪ್ರಮಾಣದಲ್ಲಿ ನೀರು ಹೊರ ನುಗ್ಗಿದೆ ಎನ್ನಲಾಗಿದೆ. ಪರಿಣಾಮ ಸಹಾಯಕ ಕ್ಯಾಮರಾಮೆನ್ ಗಂ*ಭೀರವಾಗಿ ಗಾ*ಯಗೊಂಡಿದ್ದಾರೆ. ಕೆಲವರಿಗೆ ಸಣ್ಣ ಪುಟ್ಟ ಗಾ*ಯಗಳಾಗಿವೆ ಎಂದು ತಿಳಿದುಬಂದಿದೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರದ ಚಿತ್ರೀಕರಣ ಹೈದರಾಬಾದ್‌ನ ಶಂಶಾಬಾದ್‌ನಲ್ಲಿ ನಡೆಯುತ್ತಿದೆ. ಈ ಚಿತ್ರದಲ್ಲಿ ನಿಖಿಲ್ ಸಿದ್ದಾರ್ಥ್ ನಾಯಕನಾಗಿ ನಟಿಸುತ್ತಿದ್ದು, ಅವರೂ ಅವ*ಘಡ ಸಂಭವಿಸುವ ವೇಳೆ ಸ್ಥಳದಲ್ಲಿದ್ದರು. ಆದರೆ, ಅವರಿಗೇನೂ ತೊಂದರೆ ಆಗಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಕಾಂತಾರ ಚಿತ್ರತಂಡಕ್ಕೆ ತಪ್ಪದ ಸಂಕಷ್ಟ; ಮತ್ತೊಬ್ಬ ಕಲಾವಿದ ಸಾ*ವು

ದಿ ಇಂಡಿಯನ್ ಹೌಸ್ ಸ್ವಾತಂತ್ರ್ಯ ಪೂರ್ವದ ಕಥಾಹಂದರವನ್ನೊಳಗೊಂಡಿದೆ ಎಂದು ಹೇಳಲಾಗಿದೆ. ರಾಮ್ ವಂಶಿ ಕೃಷ್ಣ ನಿರ್ದೇಶನ ಮಾಡುತ್ತಿದ್ದು, ಅಭಿಷೇಕ್ ಅಗರ್‌ವಾಲ್ ಹಾಗೂ ತೇಜ್ ನಾರಾಯಣ್ ಅಗರ್‌ವಾಲ್ ಬಂಡವಾಳ ಹೂಡಿದ್ದಾರೆ. ಇವರೊಂದಿಗೆ ರಾಮ್ ಚರಣ್ ಕೂಡ ಕೈ ಜೋಡಿಸಿದ್ದಾರೆ ಎಂದು ತಿಳಿದುಬಂದಿದೆ.

 

 

 

Continue Reading
Advertisement

Trending

Copyright © 2025 Namma Kudla News

You cannot copy content of this page