Connect with us

LATEST NEWS

ಉಡುಪಿ: ಸಿಕ್ಕ ಸಿಕ್ಕವರಿಗೆ ಕಚ್ಚಿದ ಹುಚ್ಚುನಾಯಿ..! ಆಸ್ಪತ್ರೆಗೆ ದಾಖಲು

Published

on

ಉಡುಪಿ: ಹುಚ್ಚು ನಾಯಿಯೊಂದು ಎಂಟು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಉಡುಪಿ ನಗರ ಮಾರುತಿ ವಿಥಿಕಾದಲ್ಲಿ ನಡೆದಿದೆ. ತೀರಾ ಬಸವಳಿದ ಸ್ಥಿತಿಯಲ್ಲಿದ್ದ ಈ ನಾಯಿಯು ರಸ್ತೆಯಲ್ಲಿ ಹೋಗುವಾಗ ಎದುರಿಗೆ ಸಿಕ್ಕಿದವರೆಲ್ಲರಿಗೂ ಕಚ್ಚಿಕೊಂಡು ಹೋಗಿದೆ. ಕೆಲವರ ಕಾಲಿನ ಮಾಂಸ ಕೂಡ ಕಚ್ಚಿ ತಿಂದಿದೆ ಎನ್ನಲಾಗಿದೆ. ಗಾಯಗೊಂಡ ಎಲ್ಲರು ಉಡುಪಿ ಜಿಲ್ಲಾಸ್ಪತ್ರೆಗೆ ತೆರಳಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸ್ಥಳೀಯವಲ್ಲದ ಎಲ್ಲಿಂದಲೋ ಬಂದ ಈ ನಾಯಿಗೆ ಹುಚ್ಚು ಹಿಡಿದಿ ರುವುದನ್ನು ಸ್ಥಳೀಯರು ಗಮನಿಸಿದ್ದಾರೆ.

PUTTUR : ನಾಪತ್ತೆಯಾಗಿದ್ದ ಯುವಕನ ಮೃ*ತದೇಹ ಗೌರಿ ಹೊಳೆಯಲ್ಲಿ ಪತ್ತೆ

ಹಲವು ಮಂದಿಗೆ ಕಚ್ಚಿ ಕಚ್ಚಿ ತೀರಾ ಸುಸ್ತಾದ ಈ ನಾಯಿಯು ಉಡುಪಿಯ ನಾರ್ತ್ ಶಾಲೆಯ ಆವರಣದಲ್ಲಿ ಬಂದು ಬಿದ್ದಿರುವುದನ್ನು ಸಾರ್ವಜನಿಕರು ಗುರುತಿಸಿದರು. ಈ ಕುರಿತು ಕೂಡಲೇ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದರು. ನಿತ್ಯಾನಂದ ಒಳಕಾಡು ತಕ್ಷಣ ನಗರಸಭೆ ಪೌರಾಯುಕ್ತ ರಾಯಪ್ಪ ಹಾಗೂ ಪ್ರಾಣಿ ದಯಾ ಸಂಘದವರಿಗೆ ಈ ವಿಚಾರವನ್ನು ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತರು ಹಾಗೂ ಪ್ರಾಣಿದಯಾ ಸಂಘದ ಮಂಜುಳಾ ಹಾಗೂ ಪೃಥ್ವಿ ಪರಿಶೀಲನೆ ನಡೆಸಿದರು. ಪಶು ವೈದ್ಯರನ್ನು ಕರೆಸಿ ನಾಯಿಗೆ ಚಚ್ಚುಮದ್ದು ನೀಡಲಾಯಿತು.

BELTHANGADY

ಇಂದಿನಿಂದ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

 

ಜಮಲಾಬಾದ್ ಗಡ (ಗಡಾಯಿಕಲ್ಲು), ಬಂಡಾಜೆ, ಬೊಳ್ಳೆ, ದಿಡುಪೆ ಜಲಪಾತ ಪ್ರವಾಸಿ ತಾಣಗಳಿಗೆ ಜೂ.16ರಿಂದ ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಉಡುಪಿ: ಮಲಗಿದ್ದಾತನ ಮೇಲೆ ಕತ್ತಿಯಿಂದ ಹ*ಲ್ಲೆ ನಡೆಸಿದ ದುಷ್ಕರ್ಮಿ

Continue Reading

DAKSHINA KANNADA

ಸುರತ್ಕಲ್-ನಂತೂರು ಜಂಕ್ಷನ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿ ನಿಗದಿ

Published

on

ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ತೀವ್ರವಾಗಿದ್ದು, ಈ ಹಿನ್ನೆಲೆಯಲ್ಲಿ ಸುರತ್ಕಲ್-ನಂತೂರು ಜಂಕ್ಷನ್‌ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿಯನ್ನು ಗಂಟೆಗೆ 50 ಕಿಲೋ ಮೀಟರ್‌ ಗೆ ನಿಗದಿಪಡಿಸಲಾಗಿದೆ. ಈ ಮಿತಿ ಸಪ್ಟೆಂಬರ್‌ ಅಂತ್ಯದ ವರೆಗೆ ಚಾಲ್ತಿಯಲ್ಲಿ ಇರಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

ಅತಿವೃಷ್ಟಿಯಿಂದಾಗಿ ರಾಷ್ಟ್ರೀಯ ಹೆದ್ದಾರಿಯ ಹಲವು ಭಾಗಗಳು ಕೆಟ್ಟು ಹೋಗಿವೆ. ಹಾಗಾಗಿ ಅಂತಹ ಭಾಗಗಳು ಅತಿ ವೇಗದ ಚಾಲನೆಗೆ ಸುರಕ್ಷಿತವಾಗಿಲ್ಲ. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು ಸಾಧ್ಯವಾದಷ್ಟು ಎಲ್ಲೆಲ್ಲಿ ಸರ್ವೀಸ್‌ ರಸ್ತೆಗಳಿವೆಯೋ ಅಲ್ಲಿ ಅದನ್ನೇ ಬಳಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ.

READ IN ENGLISH : https://www.nammakudlaenglish.com/speed-limit-imposed-on-surathkal-nanthur-junction-national-highway/

ಇದನ್ನೂ ಓದಿ: ಭಾರೀ ಮಳೆಗೆ ಕದ್ರಿ ಕೈಬಟ್ಟಲ್ ಪರಿಸರದಲ್ಲಿ ಮನೆ ಮೇಲೆ ಗುಡ್ಡ ಕುಸಿತ

ಸುರತ್ಕಲ್‌- ನಂತೂರು ನಡುವಣ ಹೆದ್ದಾರಿ ಕೆಟ್ಟು ಹೋಗಿದ್ದು, ಘನ ವಾಹನ, ಲಘುವಾಹನ, ದ್ವಿಚಕ್ರ, ತ್ರಿಚಕ್ರ ಸೇರಿದಂತೆ ಎಲ್ಲಾ ವಾಹನಗಳು ಈ ಹೆದ್ದಾರಿಯನ್ನೇ ಬಳಸುತ್ತಿವೆ. ಕೆಲವೊಮ್ಮೆ ಹೊಂಡ ತಪ್ಪಿಸಲು ವಾಹನಗಳು ಅಡ್ಡಾದಿಡ್ಡಿ ಸಂಚರಿಸಿ ಅಪಘಾತಕ್ಕೆ ಕಾರಣವಾಗುತ್ತಿವೆ.

ಈ ಕಾರಣಕ್ಕಾಗಿ ಸರ್ವೀಸ್‌ ರಸ್ತೆ ಇರುವ ಪಣಂಬೂರು, ಸುರತ್ಕಲ್‌, ಬೈಕಂಪಾಡಿ, ಕೂಳೂರು ಭಾಗಗಳಲ್ಲಿ ಈ ಸರ್ವೀಸ್‌ ರಸ್ತೆಯನ್ನೇ ಬಳಸಿ ದ್ವಿಚಕ್ರ ವಾಹನಗಳು ಸಂಚರಿಸುವುದು ಸೂಕ್ತ ಎಂದು ಎನ್ಎಚ್ಎಐ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

LATEST NEWS

ಭೀ*ಕರ ರಸ್ತೆ ಅಪ*ಘಾತ; ಇಬ್ಬರು ಡ್ಯಾನ್ಸರ್ಸ್​ ಸ್ಥಳದಲ್ಲೇ ಸಾ*ವು

Published

on

ಮಂಗಳೂರು/ನೆಲಮಂಗಲ: ಲಾರಿ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ಡ್ಯಾನ್ಸರ್ಸ್ ಸ್ಥಳದಲ್ಲೇ ಸಾ*ವನ್ನಪ್ಪಿರುವ ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್‌ನಲ್ಲಿ ನಡೆದಿದೆ.


ಮೃ*ತರನ್ನು ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್ (22) ಮತ್ತು ಕುರುಬರಹಳ್ಳಿ ನಿವಾಸಿ ಸಹನಾ(21) ಎಂದು ಗುರುತಿಸಲಾಗಿದೆ.

ಪ್ರಜ್ವಲ್ ಕೆಲವು ಸಿನಿಮಾ ಮತ್ತು ಇವೆಂಟ್​ಗಳಲ್ಲಿ ನೃತ್ಯ ಮಾಡಿದ್ದಾರೆ. ಸಹನಾ ಕೂಡ ಡ್ಯಾನ್ಸರ್​​ ಆಗಿದ್ದಾರೆ. ಇಬ್ಬರು ಮದುವೆ ಇವೆಂಟ್​​ ಒಂದನ್ನು ಮುಗಿಸಿಕೊಂಡು ಕುಣಿಗಲ್​ನಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿ ಬೈಕ್​ಗೆ ಡಿ*ಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ.

READ IN ENGLISH :https://www.nammakudlaenglish.com/horrific-road-accident-two-dancers-die-on-the-spot/

ಇದನ್ನೂ ಓದಿ: ಬೆಳ್ತಂಗಡಿ: ಹಿಟಾಚಿಗೆ ಖಾಸಗಿ ಬಸ್ ಡಿ*ಕ್ಕಿ; ಓರ್ವ ಸಾ*ವು, ಹಲವರಿಗೆ ಗಾಯ

ಅಪ*ಘಾತದ ಬೆನ್ನಲ್ಲೇ ಲಾರಿ ಸಮೇತ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page