Connect with us

DAKSHINA KANNADA

ಉಡುಪಿ: ಕಾಣಿಕೆ ಡಬ್ಬಿ ಕದ್ದ ಕಳ್ಳನನ್ನು 24 ಗಂಟೆಯೊಳಗೆ ಹುಡುಕಿಕೊಟ್ಟ ದೈವ

Published

on

ಉಡುಪಿ: ಬಬ್ಬು ಸ್ವಾಮಿ ದೈವದ ಕಾರ್ಣಿಕ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕಾಣಿಕೆ ಡಬ್ಬಿ ಕದ್ದ ಕಳ್ಳನನ್ನು ದೈವ 24 ಗಂಟೆಯೊಳಗೆ ಹುಡುಕಿಕೊಟ್ಟ
ಅಚ್ಚರಿಯ ಘಟನೆ ಉಡುಪಿಯಲ್ಲಿ ನಡೆದಿದೆ.

ಚಿಟ್ಪಾಡಿ ಕಸ್ತೂರ್ಬಾ ನಗರದ ಬಬ್ಬು ಸ್ವಾಮಿ ಸನ್ನಿಧಾನದಲ್ಲಿ ಕಳ್ಳತನ ನಡೆದಿತ್ತು. ಕಳ್ಳನೊಬ್ಬ ಜು.4 ರ ನಡುರಾತ್ರಿ ದೈವಸ್ಥಾನದ ಕಾಣಿಕೆ ಡಬ್ಬಿ ಒಡೆದು ಕಳ್ಳತನ ಮಾಡಿದ್ದನು. ಜು.5 ರಂದು ಕಳ್ಳತನ ಪ್ರಕರಣ ಬೆಳಕಿಗೆ ಬಂದಿತ್ತು.

ಸಾಮೂಹಿಕ ಪ್ರಾರ್ಥನೆ

ಕಳ್ಳತನ ಬೆಳಕಿಗೆ ಬರುತ್ತಿದ್ದಂತೆ ಭಕ್ತರು ಸಾಮೂಹಿಕ ಪ್ರಾರ್ಥನೆ ಮಾಡಿದ್ದರು. ಸನ್ನಿಧಾನದಲ್ಲಿ ಕಳ್ಳತನ ಮಾಡಿದರೆ ಅಪಚಾರವಾಗುವುದಿಲ್ಲವೇ ಎಂದು ದೈವಕ್ಕೆ ಪ್ರಶ್ನಿಸಿದ್ದರು. ಮಾತ್ರವಲ್ಲದೆ, ಊರಿನ ಸಂಕಷ್ಟ ಬಗೆಹರಿಸುವ ದೈವದ ಸನ್ನಿಧಾನದಲ್ಲಿ ಕಳ್ಳತನವಾಗಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದರು.

ಭಕ್ತರ ಪ್ರಾರ್ಥನೆಯಿಂದ ಕಳ್ಳನನ್ನು 24 ಗಂಟೆಯೊಳಗೆ ಹುಡುಕಿ ಕೊಡುವುದಾಗಿ ದೈವ ಅಭಯ ನೀಡಿತ್ತು. ಅಚ್ಚರಿ ಎಂಬಂತೆ ಜು. 6ರಂದು ಬೆಳಗ್ಗೆ ಕಳ್ಳನನ್ನು ಸಿಕ್ಕಿದ್ದಾನೆ.

ಎಲ್ಲಿದ್ದ ಗೊತ್ತಾ ಕಳ್ಳ?

ನಗರದ ಕೆಎಸ್ಆರ್​​ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳ ಮಲಗಿರೋದು ಗೊತ್ತಾಗಿದೆ. ಬಸ್ ನಿಲ್ದಾಣ ಪರಿಸರದಲ್ಲಿ ಆಟೋ ಚಾಲಕರು ಕಳ್ಳನ ಗುರುತು ಪತ್ತೆ ಹಚ್ಚಿದ್ದಾರೆ. ಸಿಸಿಟಿವಿಯಲ್ಲಿ ಕಳ್ಳನ ವಿಡಿಯೋ ನೋಡಿದ್ದ ಆಟೋ ಚಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಾಗಲಕೋಟೆ ಮೂಲದ ಮುದುಕಪ್ಪ ಕಾಣೆಕೆ ಡಬ್ಬಿ ಕದ್ದು ಸಿಕ್ಕಿಬಿದ್ದ ಕಳ್ಳ. ಈತ ಬಾಗಲಕೋಟೆಗೆ ಹೋಗಬೇಕಾದವನು ಬಸ್​ ನಿಲ್ದಾಣದಲ್ಲಿಯೇ ನಿದ್ದೆ ಮಾಡಿ ಬಾಕಿಯಾಗಿದ್ದನು. ಬೆಳಿಗ್ಗೆ ಎಂಟು ಗಂಟೆಯಾದರೂ ನಿದ್ದೆ ಮಂಪರಿನಲ್ಲಿ ಮಲಗಿದ್ದನು.

ಕಳ್ಳತನವೇ ಈತನ ಚಾಳಿ

ಮುದುಕಪ್ಪ ದೈವಸ್ಥಾನಗಳಲ್ಲಿ ಕಳ್ಳತನ ಮಾಡುವ ಚಾಳಿಯನು ಹೊಂದಿದ್ದನು. ಚಿಟ್ಪಾಡಿಯ ನಂತರ ಉದ್ಯಾವರ ಪರಿಸರದಲ್ಲೂ ಕಳ್ಳತನ ಮಾಡಿದ್ದನು. ದೋಚಿದ ಹಣದೊಂದಿಗೆ ಬಾಗಲಕೋಟೆಗೆ ಹೋಗಲು ತಯಾರಿ ನಡೆಸಿದ್ದನು. ಬಸ್ ಸಿಗದ ಕಾರಣ ಮಲಗಿದ್ದಲ್ಲೇ ಬಾಕಿಯಾಗಿದ್ದನು. ಆದರೀಗ ಕಳ್ಳ ಸಿಕ್ಕಿಬಿದ್ದಿದ್ದಾನೆ. ಇತ್ತ ಭಕ್ತರು ಬಬ್ಬು ಸ್ವಾಮಿ ದೈವದ ಕಾರ್ಣಿಕಕ್ಕೆ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಮತ್ತೊಂದು ಪವಾಡ

ಇನ್ನು ವರ್ಷದ ಹಿಂದೆ ಸನ್ನಿಧಾನದಲ್ಲಿ ಇದೇ ರೀತಿಯ ಪವಾಡ ನಡೆದಿತ್ತು. ಸನ್ನಿಧಾನದ ಬೋರ್​ವೆಲ್ ನಲ್ಲಿ ನೀರು ಸಿಗದೇ ಹೋದಾಗ ಸಾಮೂಹಿಕ ಪ್ರಾರ್ಥನೆ ನಡೆದಿತ್ತು. ಪ್ರಾರ್ಥನೆ ನಡೆದ ಬೆನ್ನಲ್ಲೇ ನೀರು ಆಕಾಶದೆತ್ತರಕ್ಕೆ ಚಿಮ್ಮಿತ್ತು.

BELTHANGADY

ಮಾಲಾಡಿ ಮನೆಯ ದೆವ್ವದ ರಹಸ್ಯವೇನು ಗೊತ್ತಾ..?

Published

on

ಬೆಳ್ತಂಗಡಿ ತಾಲೂಕಿನ ಮಾಲಾಡಿ ಎಂಬ ಗ್ರಾಮದಲ್ಲಿ ಭೂತದ ಕಾಟ ನಡೆಯುತ್ತಿರುವುದು ಈಗ ಕುತೂಹಲ ಮೂಡಿಸಿದೆ. ಕಳೆದ ಮೂರು ತಿಂಗಳಿನಿಂದ ಮನೆಯಲ್ಲಿ ವಿಚಿತ್ರ ಘಟನೆಗಳು ನಡೆಯುತ್ತಿದ್ದು, ಇದು ಭೂತದ ಚೇಷ್ಟೆ ಎಂದು ಮನೆಯವರು ಹೇಳಿಕೊಂಡಿದ್ದಾರೆ.

ಏಕಾಏಕಿ ಬೆಂಕಿ ತಗುಲಿ ಹೊತ್ತಿ ಉರಿಯುವ ಬಟ್ಟೆಗಳು.. ಇದ್ದಕ್ಕಿದ್ದಂತೆ ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗುವ ಜೋಡಿಸಿಟ್ಟ ಅಡುಗೆ ಪಾತ್ರೆಗಳು… ಕತ್ತಲಾಗುತ್ತಿದ್ದಂತೆ ಮನೆಯಲ್ಲಿ ಇನ್ಯಾರೋ ಓಡಾಡಿದಂತೆ ಆಗುವ ಅನುಭವ. ಹೌದು ಇಂತಹ ಒಂದು ಘಟನೆ ಮನೆಯೊಂದರಲ್ಲಿ ನಡೆಯುತ್ತಿದ್ದು ಕಳೆದ ಮೂರು ತಿಂಗಳಿನಿಂದ ಮನೆಯವರು ನಿದ್ರೆಯನ್ನೇ ಕಳೆದುಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಉಮೇಶ್ ಶೆಟ್ಟಿ ಎಂಬವರ ಮನೆಯಲ್ಲಿ ಈ ರೀತಿಯ ಘಟನೆಗಳು ನಡೆಯುತ್ತಿದೆಯಂತೆ.

ಮೊಬೈಲ್‌ನಲ್ಲಿ ದೆವ್ವದ ಫೋಟೊ ಸೆರೆ

ಕತ್ತಲು ಆವರಿಸುತ್ತಿದ್ದಂತೆ ನಡೆಯುವ ಈ ವಿಚಿತ್ರಕಾರಿ ಘಟನೆಯಿಂದ ಮಾಲಾಡಿಯ ಈ ಮನೆ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಉಮೇಶ್ ಶೆಟ್ಟಿ ಹಾಗೂ ಅವರ ಪತ್ನಿ ಮತ್ತು ಇಬ್ಬರು ಮಕ್ಕಳು ಈ ಮನೆಯಲ್ಲಿ ವಾಸವಾಗಿದ್ದು, ಕಳೆದ ಮೂರು ತಿಂಗಳಿನಿಂದ ಈ ಅನುಭವ ಆಗುತ್ತಿದೆ ಎಂದು ಹೇಳಿದ್ದಾರೆ. ವಿಶೇಷ ಅಂದ್ರೆ ಉಮೇಶ್ ಶೆಟ್ಟಿ ಅವರ ಮಗಳು ತನ್ನ ಮೊಬೈಲ್ ಮೂಲಕ ಈ ವಿಚಿತ್ರ ಘಟನೆಗಳನ್ನು ಚಿತ್ರೀಕರಿಸಿಕೊಂಡಿದ್ದಾರೆ. ಈ ವೇಳೆ ಮಹಿಳೆಯ ಮುಖವನ್ನು ಹೋಲುವ ಆಕೃತಿಯೊಂದು ಮೊಬೈಲ್ ಫೋನ್‌ನಲ್ಲಿ ಸೆರೆಯಾಗಿದೆ. ಹೀಗಾಗಿ ಇದು ಭೂತದ ಚೇಷ್ಟೆ ಅಂತ ಹೇಳಲಾಗಿದ್ದು, ಗ್ರಾಮದ ಜನರು ಇದರ ಪರಿಶೀಲನೆ ನಡೆಸಲು ಈ ಮನೆಗೆ ಬರ್ತಾ ಇದ್ದಾರೆ.

ಕೇವಲ ಮನೆಯವರಷ್ಟೇ ಇರುವಾಗ ಇಂತಹ ವಿಚಿತ್ರಕಾರಿ ಘಟನೆಗಳು ನಡೆದಿದೆ ಅನ್ನುವುದು ಇಲ್ಲಿ ಅನುಮಾನಕ್ಕೆ ಕಾರಣವಾಗಿದೆ. ಊರಿನ ಜನರು ಬಂದು ಇದರ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ನಡೆಸಿದ್ದಾರೆಯಾದ್ರೂ ಯಾರಿಗೂ ಇಂತಹ ಅನುಭವ ಉಂಟಾಗಿಲ್ಲ. ಹಾಗಂತ ಉಮೇಶ್ ಅವರ ಪತ್ನಿಗೆ ಉಸಿರುಗಟ್ಟಿದಂತಹ ಅನುಭವ ಹೊರತು ಪಡಿಸಿದ್ರೆ ಬೇರೆ ಏನು ಇಲ್ಲಿ ಕಂಡು ಬಂದಿಲ್ಲ. ಆದ್ರೆ ಅವರ ಉಸಿರುಗಟ್ಟುವಿಕೆಗೂ ಭೂತಕ್ಕೂ ಸಂಬಂಧ ಇದೆಯಾ ಅನ್ನೋದು ಕೂಡಾ ಖಚಿತವಾಗಿಲ್ಲ.

ಯಾವಾಗ ಇವರು ಮೊಬೈಲ್‌ನಲ್ಲಿ ವಿಚಿತ್ರ ಆಕೃತಿಯ ಫೋಟೊ ತೆಗೆದು ಊರ ಜನರಿಗೆ ತೋರಿಸಿದ್ರೋ ಆವಾಗಿನಿಂದ ಇಲ್ಲಿಗೆ ಪ್ರತಿ ನಿತ್ಯ ರಾತ್ರಿಯಾಗುತ್ತಿದ್ದಂತೆ ಜನರು ಬರಲು ಆರಂಭಿಸಿದ್ದಾರೆ. ಆದ್ರೆ ಊರವರ ಮುಂದೆ ಭೂತ ಪ್ರತ್ಯಕ್ಷವಾಗದೇ ಇರೋ ಕಾರಣ ಈ ಕಥೆಯ ಬಗ್ಗೆಯೇ ಜನರಿಗೆ ಅನುಮಾನ ಆರಂಭವಾಗಿದೆ. ಅಸಲಿಗೆ ಇಲ್ಲಿ ನಡೆಯುತ್ತಿರುವುದು ಭೂತದ ಚೇಷ್ಟೆಯೋ ಅಥವಾ ಮನುಷ್ಯ ನಿರ್ಮಿತ ಚೇಷ್ಟೆಯೋ ಅನ್ನೋ ಅನುಮಾನಗಳು ಜನರಿಗೆ ಕಾಡಿದೆ.

ಭಯದ ವಾತವಾರಣರದಲ್ಲಿ ಕತ್ತಲಲ್ಲಿ ಮೊಬೈಲ್ ಹಿಡಿದು ಭೂತದ ಫೋಟೊ ಹೇಗೆ ತೆಗೆದರು ಎಂಬ ಪ್ರಶ್ನೆಗೆ ಇದುವರೆಗೂ ಉತ್ತರ ಸಿಕ್ಕಿಲ್ಲ. ಹಾಗಂತ ಈ ರೀತಿ ಭೂತ ಇದೆ ಅಂತ ಸುಳ್ಳು ಹೇಳುವುದರಿಂದಲೂ ಇವರಿಗೇನು ಸಿಗುತ್ತದೆ ಎಂಬ ಪ್ರಶ್ನೆ ಕೂಡಾ ಎದುರಾಗಿದೆ. ಈ ವಿಚಾರದಲ್ಲಿ ನೂರಾರು ಪ್ರಶ್ನೆಗಳು ಹುಟ್ಟಿಕೊಂಡಿದ್ದು, ಭೂತದ ಹುಟುಕಾಟಕ್ಕೆ ಜನರು ಮುಂದಾಗಿದ್ದಾರೆ. ಕೆಲವರು ಇದು ಹೌದು ಅಂದ್ರೆ ಇನ್ನೂ ಕಲವರು ಇದು ಸುಳ್ಳು ಅಂದಿದ್ದು, ಇದರ ಹಿಂದೆ ಏನೋ ಮಸಲತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಆದ್ರೆ ಇದರ ಅಸಲಿ ಸತ್ಯ ಏನು ಅನ್ನೋ ಬಗ್ಗೆ ಈ ಮನೆಯವರ ಕೌನ್ಸಿಲಿಂಗ್ ಮಾಡಿದ್ರಷ್ಟೇ ಗೊತ್ತಾಗಬಹುದು ಅನ್ನೋದು ಹಲವರ ಅಭಿಪ್ರಾಯ.

Continue Reading

DAKSHINA KANNADA

ಮಂಗಳೂರು: ಕೊಡಿಯಾಲ್ ತೇರಿನ ಬಳಿಕ ಭಕ್ತರಿಂದ ಸಂಭ್ರಮದ ಓಕುಳಿ

Published

on

ಮಂಗಳೂರು: ರಥಬೀದಿಯ ವೆಂಕಟರಮಣ ದೇವರ ಜಾತ್ರೋತ್ಸವ ಫೆಬ್ರವರಿ ನಾಲ್ಕರಂದು ಸಂಪನ್ನಗೊಂಡಿದೆ. ಕೊಡಿಯಾಲ ತೇರು ಎಂದೇ ಪ್ರಸಿದ್ದಿಯಾಗಿರುವ ವೆಂಕಟರಮಣ ರಥೋತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗಿಯಾಗಿ ಪುನೀತರಾಗಿದ್ದಾರೆ.

ಕೊಡಿಯಾಲ್‌ ತೇರಿನ ಮರುದಿನ ದೇವರ ಅವಭೃತ ಸ್ನಾನ ನೆರವೇರಿದ್ದು, ಸಾವಿರಾರು ಭಕ್ತರು ಓಕುಳಿ ಆಡಿ ಸಂಭ್ರಮಿಸಿದ್ದಾರೆ. ಮಂಗಳೂರು ರಥಬೀದಿ ಸೇರಿದಂತೆ ಪ್ರತಿ ಮನೆಯಲ್ಲೂ ಓಕುಳಿ ಸಂಭ್ರಮ ಕಂಡು ಬಂದಿದೆ. ಒಬ್ಬರಿಗೊಬ್ಬರು ಬಣ್ಣ ಹಚ್ಚಿ ಬಣ್ಣದ ನೀರು ಎರಚಿ ಸಂಭ್ರಮಿಸಿದ್ದು, ನಾಸಿಕ್ ಬ್ಯಾಂಡ್‌ ಸದ್ದು ಇವರ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.

ಗಂಡು ಮಕ್ಕಳು, ಹೆಣ್ಣು ಮಕ್ಕಳು, ವೃದ್ಧರು ಎಂಬ ಬೇಧವಿಲ್ಲದೆ ಎಲ್ಲರೂ ಬಣ್ಣ ಹಚ್ಚಿ ಸಂಭ್ರಮಿಸುತ್ತಿದ್ದರೆ, ಸುಡುವ ಬಿಸಿಲಿಗೆ ತಂಪು ನೀಡಲು ಟ್ಯಾಂಕರ್ ನಲ್ಲಿ ನೀರು ಸ್ಪ್ರೇ ಮಾಡುವ ಮೂಲಕ ಮೈ ತಂಪಾಗಿಸುವ ಕೆಲಸವನ್ನು ಕೆಲವು ಯುವಕರು ಮಾಡಿದ್ದಾರೆ.

ದೇವರ ಅವಭೃತ ಸ್ನಾನಕ್ಕೆ ದೇವಸ್ಥಾನದಿಂದ ದೇವರು ಹೊರಟು ಅವಭೃತ ಸ್ನಾನ ಮುಗಿಸಿ ಬರುವವರೆಗೂ ಈ ಓಕುಳಿ ಆಟ ನಡೆದಿದೆ. ಸಾವಿರಾರು ಜನರು ಈ ಸಂಭ್ರಮದ ಓಕುಳಿಯಲ್ಲಿ ಭಾಗಿಯಾಗಿ ಖುಷಿ ಪಟ್ಟಿದ್ದಾರೆ. ಶಾಸಕ ವೇದವ್ಯಾಸ್ ಕಾಮತ್ ಕೂಡಾ ಭಾಗಿಯಾಗಿ ಬಣ್ಣ ಹಚ್ಚಿ ಯುವಕರ ಜೊತೆ ಎಂಜಾಯ್ ಮಾಡಿದ್ದಾರೆ.

Continue Reading

BELTHANGADY

ಬೆಳ್ತಂಗಡಿಯಲ್ಲಿ ದೆವ್ವದ ಕಾಟಕ್ಕೆ ಕಂಗಾಲಾದ ಕುಟುಂಬ; ಮೊಬೈಲ್‌ನಲ್ಲಿ ಭೂತದ ಫೋಟೊ ಸೆರೆ

Published

on

ಬೆಳ್ತಂಗಡಿ: ದೆವ್ವ, ಆತ್ಮ, ಪ್ರೇತಗಳು ಇವೆಯಾ…? ಇದೊಂದು ಉತ್ತರ ಇಲ್ಲದ ಪ್ರಶ್ನೆ. ನಂಬುವವರು ಇದಕ್ಕೆ ಹೌದು ಎನ್ನುತ್ತಾರೆ. ನಂಬದೇ ಇರುವವರು ಇದನ್ನು ಭ್ರಮೆ ಎನ್ನುತ್ತಾರೆ. ಇದರ ಜತೆಗೆ, ಕೆಲವೊಮ್ಮೆ ಕೆಲವೊಂದು ದೃಶ್ಯಗಳು, ಫೋಟೊ, ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಲೇ ಇರುತ್ತವೆ. ಸದ್ಯ ಅಂತಹದ್ದೇ ದೃಶ್ಯವೊಂದು ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ವೈರಲ್ ಆಗುತ್ತಿದೆ.

ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಮನೆಯೊಂದರಲ್ಲಿ ಭೂತದ ಚೇಷ್ಟೆಯಿಂದ ಕುಟುಂಬವೊಂದು ಕಂಗಾಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಮೂರು ತಿಂಗಳಿನಿಂದ ಈ ಕುಟುಂಬ ಭೂತದ ಕಾಟದಿಂದ ನಿದ್ದೆ ಇಲ್ಲದೆ ಕಳೆಯುತ್ತಿದೆ ಎನ್ನಲಾಗಿದೆ. ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಉಮೇಶ್ ಶೆಟ್ಟಿ ಎಂಬವರ ಕುಟುಂಬ ಈ ಸಮಸ್ಯೆಗೆ ಸಿಲುಕಿದೆ.

ಪತ್ನಿ ಹಾಗೂ ಇಬ್ಬರು ಮಕ್ಕಳ ಜೊತೆ ವಾಸವಾಗಿರುವ ಉಮೇಶ್ ಶೆಟ್ಟಿ ಅವರ ಮನೆಯಲ್ಲಿ ನಿತ್ಯ ವಿಚಿತ್ರ ಘಟನೆಗಳು ನಡೆಯುತ್ತಿದ್ದು, ಸಂಜೆಯಾಗುತ್ತಿದ್ದಂತೆ ಮನೆಯವರು ಭಯ ಭೀತರಾಗುತ್ತಿದ್ದಾರೆ. ಮಲಗಿದ್ದ ವೇಳೆ ಕುತ್ತಿಗೆ ಹಿಡಿದಂತಾಗುವುದು, ಪಾತ್ರೆಗಳನ್ನು ಎಸೆಯುವುದು, ಬಟ್ಟೆಗೆ ಬೆಂಕಿ ತಗಲುವುದು ಮೊದಲಾದ ಘಟನೆಗಳು ನಡೆಯುತ್ತಿದೆ ಎನ್ನಲಾಗಿದೆ.

ಈ ಸುದ್ದಿ ತಿಳಿದ ಹಲವಾರು ಜನರು ಉಮೇಶ್ ಶೆಟ್ಟಿ ಅವರ ಮನೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆಯಾದ್ರೂ ಅವರಿಗೆ ಯಾರಿಗೂ ಈ ಅನುಭವ ಆಗಿಲ್ಲ. ಉಮೇಶ್ ಶೆಟ್ಟಿ ಅವರ ಪುತ್ರಿ ತನ್ನ ಶಿಕ್ಷಣದ ಸಲುವಾಗಿ ಮೊಬೈಲ್ ನೋಡುತ್ತಿರುವ ಸಂದರ್ಭದಲ್ಲಿ ಇಂತಹ ಅನುಭವ ಉಂಟಾಗಿ ಫೋಟೋ ತೆಗೆದಾಗ ಒಂದು ಆಕೃತಿ ಮೊಬೈಲ್ ಫೋಟೋದಲ್ಲಿ ಸೆರೆಯಾಗಿದೆ. ಇದರ ಜೊತೆಗೆ ಬಟ್ಟೆಗೆ ಬೆಂಕಿ ಬಿದ್ದಿರುವ ಫೋಟೊವನ್ನು ಕೂಡಾ ಅವರು ತೆಗೆದಿದ್ದಾರೆ.

ಒಟ್ಟಾರೆ ಈ ಮನೆಯಲ್ಲಿ ಕಾಡುವ ಸಮಸ್ಯೆಯ ಬಗ್ಗೆ ಜನರು ತಲೆಗೊಂದು ಮಾತನಾಡುತ್ತಿದ್ದು, ಭೂತ ಇದೆಯಾ ಇಲ್ಲವೋ ಎಂಬ ಕುತೂಹಲದಿಂದ ಪರೀಕ್ಷೆ ನಡೆಸಲು ಹಲವಾರು ಜನರು ಇವರ ಮನೆಗೆ ಬರುತ್ತಾ ಇದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page