Connect with us

DAKSHINA KANNADA

ಉಡುಪಿ ಕೊರೊನಾ ಹೆಚ್ಚಳ ನಡುವೆ ನಡೆದ ಸಂತೆ :ನಗರಸಭೆಯಿಂದ13 ಮಂದಿಗೆ  ದಂಡ..!

Published

on

ಉಡುಪಿ:ಸರಕಾರದ ಆದೇಶದ ಮಧ್ಯೆಯೂ ಇಂದು ಬೆಳಗ್ಗೆ ಸಂತೆಕಟ್ಟೆ ಸಂತೆ ಮಾರುಕಟ್ಟೆಯ ಹೊರಗಡೆ ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಗಳಿಗೆ ಉಡುಪಿ ನಗರಸಭೆ ಅಧಿಕಾರಿಗಳು ದಂಡ ವಿಧಿಸುವ ಮೂಲಕ ತೆರವುಗೊಳಿಸಿದ್ದಾರೆ. ಮೇ 1ರಂದು ಹೊರಡಿಸಲಾದ ಪರಿಷ್ಕೃತ ಕೋವಿಡ್ ಮಾರ್ಗಸೂಚಿಯಂತೆ ವಾರದ ಸಂತೆಗಳಿಗೆ ನಿರ್ಬಂಧ ವಿಧಿಸಲಾಗಿತ್ತು. ಆದರೆ ನಗರಸಭೆ ಯವರು ಲಾಕ್‌ಡೌನ್ ಹಿನ್ನೆಲೆಯಲ್ಲಿ ಈ ಹಿಂದೆಯೇ ಸಂತೆಕಟ್ಟೆ ಸಂತೆ ಮಾರುಕಟ್ಟೆಯನ್ನು ಬಂದ್ ಮಾಡಿದ್ದರು. ಆದರೂ ಕಳೆದ ವಾರದಂತೆ ಇಂದು ಕೂಡ ಬೆಳಗಿನ ಜಾವ 6ಗಂಟೆಯಿಂದ ತರಕಾರಿ ಸೇರಿದಂತೆ ವಿವಿಧ ವ್ಯಾಪಾರಸ್ಥರು ಮಾರುಕಟ್ಟೆಯ ರಸ್ತೆ ಬದಿಯಲ್ಲಿ ನಿಂತು ವ್ಯಾಪಾರ ನಡೆಸುತ್ತಿದ್ದರು.

ಕೆಲವರು ರಸ್ತೆ ಬದಿ ರಾಶಿ ಹಾಕಿ ವ್ಯಾಪಾರ ನಡೆಸಿದರೆ ಇನ್ನು ಕೆಲವರು ವಾಹನಗಳಲ್ಲಿಯೇ ತರಕಾರಿಗಳನ್ನು ಮಾರಾಟ ಮಾಡುತ್ತಿದ್ದರು. ಇದರಿಂದ ಜನ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ತರಕಾರಿ ಸೇರಿದಂತೆ ವಿವಿಧ ಅಗತ್ಯ ವಸ್ತು ಗಳನ್ನು ಖರೀದಿಸಲು ನೆರೆದಿದ್ದರು.ಈ ಹಿನ್ನೆಲೆಯಲ್ಲಿ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಕೂಡ ಉಂಟಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಡುಪಿ ನಗರಸಭೆ ಪೌರಾಯುಕ್ತ ಡಾ. ಉದಯ ಶೆಟ್ಟಿ ನೇತೃತ್ವದ ತಂಡ ವಾಹನದಲ್ಲಿ ಧ್ವನಿವರ್ಧಕದ ಮೂಲಕ ಜನರಿಗೆ ಎಚ್ಚರಿಕೆಯನ್ನು ನೀಡಲಾಯಿತು.

ವ್ಯಾಪಾರಸ್ಥರಿಗೆ ಕೂಡಲೇ ತೆರವುಗೊಳಿಸು ವಂತೆ ಸೂಚನೆ ನೀಡಲಾಯಿತು. ಆದರೂ ವ್ಯಾಪಾರ ಮುಂದುವರೆಸಿದ ಸುಮಾರು 13 ಮಂದಿ ವ್ಯಾಪಾರಸ್ಥರಿಗೆ ನಗರಸಭೆಯವರು ತಲಾ 200ರೂ. ನಂತೆ ದಂಡ ವಿಧಿಸಿದರು. ಬೆಳಗ್ಗೆ 10ಗಂಟೆ ಸುಮಾರಿಗೆ ಎಲ್ಲ ವ್ಯಾಪಾರಸ್ಥರನ್ನು ಸ್ಥಳದಿಂದ ತೆರವುಗೊಳಿಸಲಾಯಿತು.

DAKSHINA KANNADA

ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ಐಟಿಐ ವಿದ್ಯಾರ್ಥಿಗಳ ಮಧ್ಯೆ ಚೂರಿ ಇರಿತ-ಇಬ್ಬರಿಗೆ ಗಾಯ

Published

on

ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮಧ್ಯೆ ಪರಸ್ಪರ ವಾಗ್ವಾದ ನಡೆದು ಚೂರಿ ಇರಿತ ಸಂಭವಿಸಿದ ಘಟನೆ ವಿಟ್ಲದ ಖಾಸಗಿ ಐಟಿಐ ಕಾಲೇಜೊಂದರಲ್ಲಿ ಇಂದು ನಡೆದಿದೆ.


ವಿಟ್ಲದ ಖಾಸಗಿ ಐಟಿಐ ಒಂದರಲ್ಲಿ ವಿದ್ಯಾರ್ಥಿಗಳ ನಡುವೆ ಚೂರಿ ಇರಿತ ನಡೆದಿದೆ. ಆರಂಭದಲ್ಲಿ ಇಬ್ಬರ ಮಧ್ಯೆ ವಾಗ್ವಾದ ನಡೆದು ಬಳಿಕ ಚೂರಿ ಇರಿತ ಸಂಭವಿಸಿದ್ದು, ಘಟನೆಯಿಂದಾಗಿ ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಜೋರಾಗಿ ಕೆಮ್ಮಿದ ಎಂಬ ಕಾರಣಕ್ಕೆ ನೆರೆಮನೆಯವರಿಂದಲೇ ಯುವಕನ ಕೊಲೆ

ಇದೇ ವೇಳೆ ಗಲಾಟೆ ಬಿಡಿಸಲು ಹೋದ ವಿದ್ಯಾರ್ಥಿಗೂ ಗಾಯವಾಗಿರುವುದಾಗಿ ಮಾಹಿತಿ ಲಭಿಸಿದೆ. ಈ ಪೈಕಿ ಇಬ್ಬರು ವಿದ್ಯಾರ್ಥಿಗಳನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ವಿಟ್ಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಪ್ರಕಾಶ್ ದೇವಾಡಿಗರವರ ನೇತೃತ್ವದ ಪೊಲೀಸರ ತಂಡ ಆಗಮಿಸಿ ಮಾಹಿತಿ ಸಂಗ್ರಹಿಸಿದೆ.

Continue Reading

DAKSHINA KANNADA

ಪುತ್ತೂರು: ಎಂ.ಡಿ.ಎಂ.ಎ. ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

Published

on

ಪುತ್ತೂರು: ಉಪ್ಪಿನಂಗಡಿ ಗ್ರಾಮದ ಪಂಜಳ ಎಂಬಲ್ಲಿ ಮಾದಕ ದ್ರವ್ಯ ಎಂ.ಡಿ.ಎಂ.ಎ. ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಮೂರು ಸಾವಿರ ರೂಪಾಯಿ ಮೌಲ್ಯದ 2.16 ಗ್ರಾಂ ಎಂ.ಡಿ.ಎಂ.ಎ., 45 ಸಾವಿರ ರೂಪಾಯಿ ಮೌಲ್ಯದ ಐಪೋನ್ ಮತ್ತು ಒಂದು ಸಾವಿರ ರೂಪಾಯಿ ಮೌಲ್ಯದ ಸ್ಯಾಮ್ಸಂಗ್ ಕೀ-ಪ್ಯಾಡ್ ಮೊಬೈಲ್ ಸೇರಿದಂತೆ ಒಟ್ಟು 49 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.


ಕೊಕ್ಕಡ ನಿವಾಸಿ ಯಾಹ್ಯಾ (48) ಬಂಧಿತ ಆರೋಪಿಯಾಗಿದ್ದಾನೆ. ಉಪ್ಪಿನಂಗಡಿ ಪೊಲೀಸರು ಪಂಜಳ ಎಂಬಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಅನುಮಾನಾಸ್ಪದವಾಗಿ ಕಂಡು ಬಂದಿದ್ದ ಯಾಹ್ಯಾ ಕೊಕ್ಕಡನನ್ನು ವಿಚಾರಿಸಿದಾಗ ಆತ ಎಂ.ಡಿ.ಎಂ.ಎ. ಹೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಜೋರಾಗಿ ಕೆಮ್ಮಿದ ಎಂಬ ಕಾರಣಕ್ಕೆ ನೆರೆಮನೆಯವರಿಂದಲೇ ಯುವಕನ ಕೊಲೆ

ಉಪ್ಪಿನಂಗಡಿ ಪೊಲೀಸರು ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

ಫೆ.11-14: ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ-ಕುಂಭ ಮಹೋತ್ಸವ

Published

on

ಮಂಗಳೂರಿನ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಕುಂಭ ಮಹೋತ್ಸವ ಫೆ.11ರಿಂದ ಆರಂಭಗೊಂಡು ಫೆ.14ರವರೆಗೆ ಜರುಗಲಿದೆ.

ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಸ್ವಾಮೀಜಿ ಇವರ ಆಶೀರ್ವಾದದೊಂದಿಗೆ ಕ್ಷೇತ್ರದ ತಂತ್ರಿ ಅನಂತ ಉಪಾಧ್ಯಾಯರ ನೇತೃತ್ವದಲ್ಲಿ ಪ್ರಧಾನ ಅರ್ಚಕ ಜನಾರ್ದನ ಭಟ್ಟರ ಉಪಸ್ಥಿತಿಯಲ್ಲಿ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಜರುಗಲಿರುವುದು.

ಫೆ.11ರಂದು ದೀಪಪ್ರಜ್ವಲನೆ ಮೂಲಕ ಭಜನಾ ಸಂಕೀರ್ತಣೆ ಸಂಜೆ 3 ಗಂಟೆಗೆ ಆರಂಭಗೊಳ್ಳಲಿದೆ. ಫೆ.12ರಂದು ಬೆಳಿಗ್ಗೆ ಗಣಪತಿ ಹೋಮ, ಕಲಶಾಭಿಷೇಕ ಇತ್ಯಾದಿ ನಡೆದು ಮಧ್ಯಾಹ್ನ ಮಹಾರಥೋತ್ಸವ ಬಳಿಕ ಮಹಾಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಭಜನಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಭರತನಾಟ್ಯ ಆಯೋಜನೆ ಮಾಡಲಾಗಿದೆ. 

6 ಗಂಟೆಗೆ ನಡೆಯುವ ಧಾರ್ಮಿಕ ಸಭೆಯಲ್ಲಿ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಯೋಗಾನಂದ ಸರಸ್ವತಿ ಸ್ವಾಮೀಜಿ ಭಾಗವಹಿಸಲಿದ್ದು, ವಿವಿಧ ಕ್ಷೇತ್ರದ ಗಣ್ಯರು ಅತಿಥಿಗಳಾಗಿ ಆಗಮಿಸಲಿರುವರು ಎಂದು ಕ್ಷೇತ್ರದ ಆಡಳಿತ ಸಮಿತಿ ಪ್ರಕಟಣೆ ತಿಳಿಸಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page