Connect with us

UDUPI

ಉಡುಪಿ : ಅಂತಾರಾಷ್ಟ್ರೀಯ ಮಟ್ಟದ ಅಂಗಾಗ ಕಸಿ ತಜ್ಞಗೆ ಹುಟ್ಟೂರ ಅಭಿನಂದನೆ

Published

on

ಉಡುಪಿ : ಮಾನವ ದೇಹದ ಅಮೂಲ್ಯ – ಅತ್ಯಗತ್ಯ “ಅಂಗಾಂಗ ಕಸಿ ಶಸ್ತ್ರಚಿಕಿತ್ಸೆ” ತಜ್ಞತೆಯಲ್ಲಿ  ಹೃದಯ ಹಾಗೂ ಶ್ವಾಸಕೋಶ  ವಿಭಾಗದಲ್ಲಿ ಅಂತಾರಾಷ್ಟ್ರೀಯ ಶ್ರೇಷ್ಠತೆಯನ್ನು ಸುಮಾರು  ನಾಲ್ನೂರು ಯಶಸ್ವಿ ಶಸ್ತ್ರಚಿಕಿತ್ಸೆಗಳ ಮೂಲಕ ಪ್ರಮಾಣಪಡಿಸಿದ ಡಾ.ಕೆ.ಜಿ.ಸುರೇಶ ರಾವ್‌ರಿಗೆ ಹುಟ್ಟೂರು‌ ಕೆಮುಂಡೇಲಿನಲ್ಲಿ‌ ಅಭಿಮಾನ ಪೂರ್ವಕ ಗೌರವಾರ್ಪಣೆ ನೆರವೇರಿತು.

ಕೆಮುಂಡೇಲಿನ‌ ಶ್ರೀ ಪಾಂಡುರಂಗ ಭಜನಾ ಮಂಡಳಿ,ಕೆಮುಂಡೇಲು ಅನುದಾನಿತ ಹಿ. ಪ್ರಾಥಮಿಕ ಶಾಲೆ ಹಾಗೂ ಹಳೆವಿದ್ಯಾರ್ಥಿ ಸಂಘ ಮತ್ತು ಕೆಮುಂಡೇಲು, ಉಳ್ಳೂರು ಗ್ರಾಮಸ್ಥರು ಈ ಕಾರ್ಯಕ್ರಮವನ್ನು  ಕೆಮುಂಡೇಲು ಭಜನಾ ಮಂಡಳಿಯಲ್ಲಿ ಸಂಘಟಿಸಿದ್ದರು.

ಮಹತ್ತನ್ನು ಸಾಧಿಸುವ ಸಂಕಲ್ಪ ವ್ಯಕ್ತಿಜೀವನವನ್ನು ಸುಸಂಪನ್ನಗೊಳಿಸಿ ದೇಶದ ಆಸ್ತಿಯನ್ನಾಗಿಸಿ ಸಮಾಜದಲ್ಲಿ ಬಹುಮಾನ್ಯತೆಯನ್ನು ಪಡೆಯುವ ಎತ್ತರಕ್ಕೆ ಏರಿಸುತ್ತದೆ ಎಂಬುದಕ್ಕೆ ನಮ್ಮ ಸುರೇಶ ರಾವ್ ಪ್ರತ್ಯಕ್ಷ ಸಾಕ್ಷಿ, ಯುವ ಸಂದಣಿಗೆ ಇವರ ಜೀವನ ವಿಧಾನ ಒಂದು ಆದರ್ಶ‌ – ಮಾರ್ಗದರ್ಶಿ ಎಂದು ಹುಟ್ಟೂರಿನ ಕುವರನನ್ನು ಶ್ಲಾಘಿಸಿ “ಅಭಿನವ ಧನ್ವಂತರಿ” ಉಪಾದಿಯನ್ನಿತ್ತು ಸಮ್ಮಾನಿಸಲಾಯಿತು. ಸುರೇಶ ರಾವ್ ಪತ್ನಿ ನೇತ್ರತಜ್ಞೆ ಡಾ.ಕಲ್ಪನಾ ಜೊತೆಗಿದ್ದರು.

‌ಭಜನಾ ಮಂಡಳಿಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿಗಾರ್ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರಿನ‌ ಯುಎಸ್ ಎಎಂಎಸ್ ಅಕಾಡೆಮಿಕ್ಸ್ ಆ್ಯಂಡ್ ಟ್ರೈನಿಂಗ್ ನ ನಿರ್ದೇಶಕ ಡಾ.ಸಿ.ಕೆ.ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿದರು. ನಿವೃತ್ತ ಪ್ರಾಂಶುಪಾಲ ರಮೇಶ ಹಂದೆ, ಎನ್ಎಸ್‌ಯುಎಂ ಪ.ಪೂ.ಕಾಲೇಜಿನ‌ ಪ್ರಾಚಾರ್ಯ ಪ್ರಕಾಶ ಶೆಣೈ ಅವರು ಡಾ.ಸುರೇಶ ರಾವ್ ಅವರ ಸಾಧನೆಗಳನ್ನು ವಿವರಿಸಿ ವಿದ್ಯಾರ್ಥಿ ಜೀವನದ ದಿನಗಳನ್ನು ನೆನಪಿಸಿಕೊಂಡು ಅಭಿನಂದಿಸಿದರು. ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಆಶೀರ್ವದಿಸಿದರು. ನಿವೃತ್ತ ಪಾಂಶುಪಾಲ ಬಿ.ಆರ್. ನಾಗರತ್ನ,ಕೆಮುಂಡೇಲು ಶಾಲೆಯ ಮುಖೋಪಾಧ್ಯಾಯ ಜಗನ್ನಾಥ ಶೆಟ್ಟಿ, ಭಜನಾ ಮಂಡಳಿಯ ಅರ್ಚಕ ಶ್ರೀಪತಿ ಆಚಾರ್ಯ, ಬಾಲಕೃಷ್ಣ ರಾವ್, ಕೆ.ಎಲ್.ಕುಂಡಂತಾಯ ಉಪಸ್ಥಿತರಿದ್ದರು.

ಇದನ್ನೂ ಓದಿ : ಇಲೆಕ್ಟ್ರಿಕ್‌ ಆಟೋ ಚಾಲಕರಿಗೂ ಇನ್ಮುಂದೆ ಪರ್ಮಿಟ್ ಕಡ್ಡಾಯ

ಭಜನಾ ಮಂಡಳಿಯ ಕಾರ್ಯದರ್ಶಿ ಕೃಷ್ಣಾನಂದ ರಾವ್ ಪ್ರಸ್ತಾವಿಸಿ,ಸ್ವಾಗತಿಸಿದರು. ಹರೀಶ ಕೋಟ್ಯಾನ್ ಡಾ.ಸುರೇಶ ರಾವ್ ಅವರಿಗೆ ನೀಡಲಾದ “ಅಭಿನಂದನೆಯ ಆಲೇಖ”ವನ್ನು ವಾಚಿಸಿದರು. ಪ್ರಾಧ್ಯಾಪಕ ದೇವಿಪ್ರಸಾದ ಬೆಳ್ಳಿಬೆಟ್ಟು  ಕಾರ್ಯಕ್ರಮ ನಿರೂಪಿಸಿದರು. ಹರೀಶ್ ವಂದಿಸಿದರು.

DAKSHINA KANNADA

‘ಎಲ್ಲಾ ಆದ ಮೇಲೆ ಶಾಂತಿಸಭೆ’: ಸಂಸದ ಕೋಟ

Published

on

ಉಡುಪಿ: ಚರ್ಚೆ, ವಾದ-ವಿವಾದ, ಪ್ರಕರಣಗಳು ಆದ ಬಳಿಕ ಶಾಂತಿ ಸಭೆ ಇಷ್ಟು ದಿನಗಳ ನಂತರವಾ.. ಎಂಬ ಚರ್ಚೆ ಸಮಾಜದಲ್ಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿಯಲ್ಲಿ ನಿನ್ನೆ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಇವತ್ತು ಎಲ್ಲಾ ಶಾಂತಿ ಸಭೆಗಳು, ಪೊಲೀಸ್ ಕ್ರಮಗಳು ಹಾಗೂ ಪೊಲೀಸ್ ಫೋರ್ಸ್‌ಗಳು ಎಲ್ಲವೂ ಕೂಡ ಈ ಸಮಾಜದ ಮುಖ್ಯ ವಾಹಿನಿಯಿಂದ ಬದುಕುತ್ತಿರುವಂತಹ ಹಿಂದೂಗಳ ಮೇಲೆ ಗಧಾ-ಪ್ರಹಾರ ಮಾಡಲು ರೂಪಿಸಿದ್ದಾರೆಯೇ ಎಂಬ ಭಾವನೆ ಮೂಡುತ್ತಿದೆ. ಇಂದು ಯಾವ ರೀತಿಯ ವಾತಾವರಣ ಇದೆ ಎಂದರೆ ಯಾರೇ ಒಬ್ಬ ಕಾರ್ಯಕರ್ತ ಅದು ಬಿಜೆಪಿ ಕಾರ್ಯಕರ್ತನೋ, ಹಿಂದೂತ್ವದ ಬಗ್ಗೆ ಮಾತನಾಡುವ ಸಾಮಾನ್ಯ ಕಾರ್ಯಕರ್ತ ಆಗಿರಬಹುದು, ಅವನ ಬದುಕಿನ ಹಕ್ಕನ್ನೇ ಮೊಟಕುಗೊಳಿಸುವಂತಹ ಪ್ರಯತ್ನಗಳು, ರೌಡಿಶೀಟರ್ ಹಾಕುವಂತಹ ಕೆಲಸಗಳು ನಡೆಯುತ್ತಿವೆ. ಪರಮೇಶ್ವರ್ ಅವರು ತಿಳುವಳಿಕೆ ಇರುವಂತಹ ಮಂತ್ರಿ. ಒಂದು ಸಮಾಜವನ್ನು ಒಡೆಯುವ, ಸಮಾಜದ ಮೇಲೆ ಗಧಾಪ್ರಹಾರ ಮಾಡುವ, ಸಮಾಜದ ಮೇಲೆ ದೌರ್ಜನ್ಯ ಮಾಡುವ ಕೆಲಸಗಳನ್ನು ಮಾಡಬಾರದು ಎಂದು ಹೇಳಿದ್ದಾರೆ.

WATCH VIDEO

Continue Reading

DAKSHINA KANNADA

ಮಿಸ್ ಆ್ಯಂಡ್ ಮಿಸಸ್ ಮಂಗಳೂರು ದಿವಾ ಮಿಡ್ಲ್‌ ಈಸ್ಟ್- 2025; ತುಳುನಾಡಿನ ಮಹಿಳೆಯರಿಗಾಗಿ ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆ

Published

on

ಉಡುಪಿ: ಘೋಷನ್ ಇವೆಂಟ್ಸ್ ಮೀಡಿಯಾ ಮತ್ತು ಪ್ರಿಯಾ ಫ್ಯಾಶನ್ ದುಬೈ ಇದರ ಆಶ್ರಯದಲ್ಲಿ ತುಂಬೆ ಮೆಡಿ ಸಿಟಿ ಅಜ್ಮನ್ ಇದರ ಸಹಯೋಗದಲ್ಲಿ “ಮಿಸ್ ಆ್ಯಂಡ್ ಮಿಸಸ್ ಮಂಗಳೂರು ದಿವಾ ಮಿಡಲ್ ಈಸ್ಟ್- 2025” ಅಂತಾರಾಷ್ಟ್ರೀಯ ಸೌಂದರ್ಯ ಪ್ರದರ್ಶನ ಸ್ಪರ್ಧೆಯನ್ನು ನವೆಂಬರ್ ತಿಂಗಳಲ್ಲಿ ದುಬೈನಲ್ಲಿ ಆಯೋಜಿಸಲಾಗಿದೆ.


ಈ ಸ್ಪರ್ಧೆಯ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ. ಘೋಷನ್ ಇವೆಂಟ್ಸ್ ಮೀಡಿಯಾದ ದೆಚಮ್ಮ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ತುಳುನಾಡಿನ ಮಹಿಳೆಯರಿಗೆ ವೇದಿಕೆ‌ ಒದಗಿಸುವ ನಿಟ್ಟಿನಲ್ಲಿ ಈ ಸೌಂದರ್ಯ ಪ್ರದರ್ಶನ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಸ್ಪರ್ಧೆ ಎರಡು ವಿಭಾಗಗಳಲ್ಲಿ ನಡೆಯಲಿದೆ. “ಮಿಸ್ ಮಂಗಳೂರು ದಿವಾ” ಸ್ಪರ್ಧೆಯಲ್ಲಿ 18ರಿಂದ 35ವರ್ಷದೊಳಗಿನ ಅವಿವಾಹಿತ ಮಹಿಳೆಯರು ಭಾಗವಹಿಸ ಬಹುದು. ಮಿಸಸ್ ಮಂಗಳೂರು ದಿವಾ ಸ್ಪರ್ಧೆಯಲ್ಲಿ ಎಲ್ಲ ವಯೋಮಿತಿಯ ವಿವಾಹಿತ ಮಹಿಳೆಯರು ಪಾಲ್ಗೊಳ್ಳಬಹುದು ಎಂದರು. ಆಗಸ್ಟ್ ಅಂತ್ಯಕ್ಕೆ ನೋಂದಣಿ ಪ್ರಕ್ರಿಯೆ ಅಂತ್ಯಗೊಳ್ಳಲಿದೆ. ಆ ಬಳಿಕ ಮಂಗಳೂರಿನಲ್ಲಿ ಅಡಿಷನ್ ನಡೆಯಲಿದ್ದು, ಅಲ್ಲಿ ಆಯ್ಕೆಯಾಗುವ ಸ್ಪರ್ಧಿಗಳು ನವೆಂಬರ್ ತಿಂಗಳು ದುಬೈನಲ್ಲಿ ನಡೆಯಲಿರುವ ಫೈನಲ್ ಸ್ಪರ್ಧೆಯಲ್ಲಿ ಪ್ರದರ್ಶನ ನೀಡಲಿದ್ದಾರೆ.

ಫೈನಲ್ ಗೆ ಆಯ್ಕೆಯಾಗುವ ಸ್ಪರ್ಧಿಗಳಿಗೆ ವಿಸಾ, ವಿಮಾನ ಟಿಕೆಟ್, ಮೂರು ದಿನಗಳ ವಾಸ್ತವ್ಯವನ್ನು ಒದಗಿಸಲಾಗುವುದು. ಅಲ್ಲದೆ, ಊಟ, ಪ್ರಯಾಣ, ಫೋಟೋ ಶೂಟ್‌, ರ್ಯಾಂಪ್ ವಾಕ್ ತರಬೇತಿ, ಮೇಕಪ್ ಹಾಗೂ ಕಾಸ್ಟ್ಯೂಮ್ ಅನ್ನು ಉಚಿತವಾಗಿ ಆಯೋಜಕರು ಒದಗಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ತಲೆ ಸಿಮಿಯಾ ರೋಗಿಗಳಿಗೆ ನ್ಯೂಟ್ರಿಶಿಯನ್‌ ಬಾರ್‌ ಕೊಡುಗೆ ನೀಡಿದ ಎಂಆರ್‌ಪಿಎಲ್‌

ಘೋಷನ್ ಇವೆಂಟ್ಸ್ ಮೀಡಿಯಾದ ಸಬಿತಾ ಕರ್ಲೋ ಮಾತನಾಡಿ, ಫೈನಲ್ ನಲ್ಲಿ ಮೂರು ಸುತ್ತುಗಳಲ್ಲಿ ಸ್ಪರ್ಧೆ ನಡೆಯಲಿದೆ. ಮೊದಲ ಸುತ್ತಿನಲ್ಲಿ ಸಾಂಪ್ರದಾಯಿಕ ವಸ್ತ್ರ ಧರಿಸಿ ಪ್ರದರ್ಶನ ನೀಡಬೇಕು. ಎರಡನೇ ಸುತ್ತಿನಲ್ಲಿ ಫಿಜನ್ ಹಾಗೂ ಮೂರನೇ ಸುತ್ತಿನಲ್ಲಿ ಗೌನ್ ಧರಿಸಿ ವಾಕ್ ಮಾಡಬೇಕು. ಮೂರನೇ ಸುತ್ತಿನ ಬಳಿಕ ಪ್ರಶ್ನಾವಳಿ ಸುತ್ತು ನಡೆಯಲಿದೆ. ಟಾಪ್ ಮೂವರು ವಿಜೇತರಿಗೆ ನಗದು ಬಹುಮಾನ ಹಾಗೂ ಟ್ರೋಫಿಯನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಪ್ರಿಯಾ ಫ್ಯಾಶನ್ ಮಾಲಕಿ ಪ್ರಿಯಾ ಫೆರ್ನಾಂಡಿಸ್, ಮಿಸ್ಟರ್ ಯುಎಇ ವಿನ್ನರ್ ಗೌತಮ್ ಬಂಗೇರ, ವಿಷ್ಣುವರ್ಧನ್ ಭಟ್ ಇದ್ದರು.

Continue Reading

LATEST NEWS

ಆರ್ ಎಸ್ ಎಸ್ ಕುರಿತು ಯಾರೂ ಲಘುವಾಗಿ ಮಾತನಾಡುವುದು ಬೇಡ: ಸಂಸದ ಕೋಟ ಶ್ರೀನಿವಾಸ ಪೂಜಾರಿ

Published

on

ಉಡುಪಿ: ಆರ್ ಎಸ್ ಎಸ್ ಕುರಿತಂತೆ ಯಾರೂ ಕೂಡಾ ಲಘುವಾಗಿ ಮಾತನಾಡುವುದು ಸರಿಯಲ್ಲ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆಲೋಚನೆ, ರಾಷ್ಟ್ರೀಯತೆ, ರಾಷ್ಟ್ರ ಭಕ್ತಿಯ ಬಗ್ಗೆ ಶಾಖೆಗೆ ಬಂದು ಗಮನಿಸಿ ಬಳಿಕ ಮಾತನಾಡ ಬೇಕು. ಕಾಂಗ್ರೆಸ್‌ ನಾಯಕರು ಆರೆಸ್ಸೆಸ್‌ ಶಾಖೆಗೆ ಬಂದು ವಿಷಯ ತಿಳಿದುಕೊಳ್ಳಲಿ ಎಂದು ಸಂಸದ ಕೊಟ ಶ್ರೀನಿವಾಸ ಪೂಜಾರಿ ಆಹ್ವಾನ ನೀಡಿದ್ದಾರೆ.

ಉಡುಪಿಯಲ್ಲಿ ನಿನ್ನೆ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಆರ್ ಎಸ್ ಎಸ್ ನಿಷೇಧಿಸುವ ಕುರಿತಂತೆ ದಿನಕ್ಕೊಂದು ಹೇಳಿಕೆ ಕೇಳಿ ಬರುತ್ತಿದೆ. ಜವಾಹರಲಾಲ್‌ ನೆಹರೂ ಅವರೇ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಬರುವಂತೆ ಆರ್ ಎಸ್ ಎಸ್ ಗೆ ಆಹ್ವಾನ ನೀಡಿದ್ದರು.

ಇದನ್ನೂ ಓದಿ: ಸುಳ್ಳು ಸುದ್ದಿ, ದ್ವೇಷ ಭಾಷಣಗಳ ವಿರುದ್ದ ಮಸೂದೆ ಮಂಡನೆ ಮಾಡ್ತೇವೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇನ್ನು ಅಂಬೇಡ್ಕರ್ ಅವರು ಆರ್ ಎಸ್ ಎಸ್ ಅಸ್ಪೃಶ್ಯತೆ- ಜಾತೀಯತೆ ಇಲ್ಲದ ಸಂಘಟನೆ ಎಂದಿದ್ದರು. ಆರ್ ಎಸ್ ಎಸ್ ನಿಷೇಧಕ್ಕೆ ಸ್ವತಃ ನೆಹರೂ ಅವರೇ ಒಮ್ಮೆ ಪ್ರಯತ್ನ ಮಾಡಿದ್ದರೂ ಪ್ರಯತ್ನ ಕೈಗೂಡದೇ ಇದ್ದಾಗ ನೆಹರೂ ಅವರೇ ಆರೆಸ್ಸೆಸ್‌ ನ್ನು ಸ್ವಾಗತಿಸಿದ್ದರು. ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಅವರಿಂದಲೂ ಆರೆಸ್ಸೆಸ್‌ ನಿಷೇಧಿಸುವ ಪ್ರಯತ್ನ ಫಲಿಸಿಲ್ಲ. ರಾಹುಲ್ ಗಾಂಧಿ ಕೂಡಾ ಅದೇ ಮಾತನ್ನ ಆಡಿದ್ದಾರೆ. ಇನ್ನು ಪ್ರಿಯಾಂಕಾ ಗಾಂಧಿ ಅವರಿಂದಲೂ ಸಾಧ್ಯವಾಗದು. ಹಾಗಾಗಿ ಇಂತಹ ಗೊಂದಲಗಳ ಬಗ್ಗೆ ಸಮಯ ವ್ಯರ್ಥ ಮಾಡುವ ಬದಲು ಕಾಂಗ್ರೆಸ್ ಮುಖಂಡರು ತಮ್ಮ ಇಲಾಖೆಗಳ ಅಭಿವೃದ್ಧಿ, ಬಡವರ ಕಲ್ಯಾಣದ ಕಡೆಗೆ ಗಮನ ಹರಿಸಲಿ ಎಂದು ಸಲಹೆ ಮಾಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page