Connect with us

LATEST NEWS

ಕಡೆಗೋಲು ಕೃಷ್ಣನ ರಥೋತ್ಸವಕ್ಕೆ ಲಕ್ಷ ಲಕ್ಷ ಹಣತೆ ಬೆಳಕಿನ ಚಿತ್ತಾರ..

Published

on

ಕಡೆಗೋಲು ಕೃಷ್ಣನ ರಥೋತ್ಸವಕ್ಕೆ ಲಕ್ಷ ಲಕ್ಷ ಹಣತೆ ಬೆಳಕಿನ ಚಿತ್ತಾರ..!

ಉಡುಪಿ: ಅಪರೂಪದ ಸಂಪ್ರದಾಯಗಳಿಗೆ ಹೆಸರಾದ ಉಡುಪಿಯ ಕೃಷ್ಣಮಠ‌ದಲ್ಲಿ ಲಕ್ಷದೀಪಗಳಿಂದ ಸಂಭ್ರಮ. ಕಡಗೋಲು ಕೃಷ್ಣನ ಮೊದಲ ರಥೋತ್ಸವಕ್ಕೆ ಅಷ್ಟಮಠಗಳ ರಥಬೀದಿ ಅಲಂಕಾರಗೊಂಡು ಹಣತೆಯ ದೀಪಗಳಿಂದ ಕಂಗೊಳಿಸುತ್ತಿದೆ..ಮಠಾಧೀಶರ ಉಪಸ್ಥಿತಿಯಲ್ಲಿ ವೈಭವದ ನಡುವೆ ಕೃಷ್ಣನ ದೇವರ ಮೆರವಣಿಗೆ ನಡೆಸಲಾಯ್ತು. ರಥಬೀದಿಯಲ್ಲಿ ಲಕ್ಷದೀಪೋತ್ಸವ ಕಂಡು ಭಕ್ತರು ಪುಳಕಿತರಾದರು.  ಮಠಗಳ ರಥಬೀದಿ ದೀಪಗಳಿಂದ ಕಂಗೊಳಿಸುತ್ತಿದ್ದು, ಭಕ್ತರು ಕೃಷ್ಣನಿಗೆ ಹಣತೆಯಲ್ಲಿ ದೀಪ ಬೆಳಗಿ ಸಂಭ್ರಮಿಸಿದ್ರು .. ಕೃಷ್ಣ ದೇವರು ಯೋಗ ನಿದ್ರೆಯಲ್ಲಿರ್ತಾನೆ ಅನ್ನೋದು ನಂಬಿಕೆ.ಉತ್ಥಾನ ದ್ವಾದಶಿಯ ದಿನ ಯೋಗ ನಿದ್ರೆ ಪೂರೈಸಿ ರಥಬೀದಿಗೆ ಬರುವ ದೇವರನ್ನು ಬರಮಾಡಿಕೊಳ್ಳಲು ನಡೆದಿರುವ ತಯಾರಿ ಇದು. ಈ ಮಹೋತ್ಸವವನ್ನು ಲಕ್ಷದೀಪೋತ್ಸವ ಎನ್ನುತ್ತಾರೆ.ಇಳಿ ಹೊತ್ತಿನಲ್ಲಿ ಭಕ್ತರೆಲ್ಲರೂ ರಥಬೀದಿಯಲ್ಲಿ ಸೇರಿ ಸಾವಿರಾರು ದೀಪ ಬೆಳಗಿದರು. ಮಧ್ವ ಸರೋವರದಲ್ಲಿ ಕ್ಷೀರಾಬ್ದಿ ಪೂಜೆ ನಡೆಯಿತು.ಆ ಬಳಿಕ ಮಠದಿಂದ ಹೊರ ಬರುವ ಕೃಷ್ಣ ದೇವರ ಉತ್ಸವ ಮೂರ್ತಿಯನ್ನು ಮಧ್ವ ಸರೋವರಕ್ಕೆ ಕೊಂಡೊಯ್ಯಲಾಯ್ತು . ಸಾಲು ಸಾಲು ದೀಪಗಳ ನಡುವೆ ಕೃಷ್ಣ ದೇವರ ಮೆರವಣಿಗೆ ನಡೆಯಿತು. ರಥದ ಮುಂಭಾಗದಲ್ಲಿ ಚಂಡೆಗಳ ನಾದ ವೈಭವ ಮೇಳೈಸಿತು.

ಈ ಬಾರಿಯ ಲಕ್ಷ ದೀಪೋತ್ಸವದಲ್ಲಿ ಪರ್ಯಾಯ ಅದಮಾರು ಶ್ರೀಗಳ ಸಹಿತ ಉಳಿದ ಮಠಗಳ ಯತಿಗಳು ಭಾಗವಹಿಸಿದ್ರು.. ನೂರಾರು ಭಕ್ತರು ಸೇರಿ ಎರಡೂ ರಥಗಳನ್ನು ಎಳೆದರು. ಕೋವಿಡ್ ಕಾರಣದಿಂದ ಅಷ್ಟಮಿಯಂದು ಕೃಷ್ಣ ಮಠಕ್ಕೆ ಬರಲು ಸಾಧ್ಯವಾಗದ ಭಕ್ತರು ಲಕ್ಷದೀಪೋತ್ಸವದಲ್ಲಿ ಪಾಲ್ಗೋಂಡು ಸಂತೋಷಗೊಂಡರು.ಮುಂದಿನ ಮೂರು ದಿನಗಳ ಕಾಲ ಸಮಾನ ವೈಭವದಿಂದ ಲಕ್ಷ ದೀಪೋತ್ಸವ ನಡೆಯುತ್ತೆ. ಲಕ್ಷದೀಪೋತ್ಸವದೊಂದಿಗೆ ಆರಂಭವಾಗುವ ಕೃಷ್ಣ ದೇವರ ರಥೋತ್ಸವ ಮುಂದಿನ ಮಳೆಗಾಲದವರೆಗೆ ನಡೆಯುತ್ತದೆ.

ಅಷ್ಟಮಠಗಳ ರಥಬೀದಿಯಲ್ಲಿ ಸೇವಾರೂಪದಲ್ಲಿ ನಡೆಯುವ ಉತ್ಸವದಿಂದ ದಿನವೂ ಹಬ್ಬದ ವಾತಾವರಣ ಇರಲಿದೆ..

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ಬಂಟ್ವಾಳ : ಹುಲ್ಲಿನಿಂದಾವೃತ ಜಾಗದಲ್ಲಿ ಆಕಸ್ಮಿಕ ಬೆಂ*ಕಿ

Published

on

ಬಂಟ್ವಾಳ : ಹುಲ್ಲಿನಿಂದಾವೃತವಾದ ಬಿ.ಸಿ.ರೋಡಿನ ಕೈಕಂಬದಲ್ಲಿರುವ ಖಾಸಗಿ  ಜಾಗವೊಂದರಲ್ಲಿ ಅ*ಗ್ನಿ ಆಕಸ್ಮಿಕ ಸಂಭವಿಸಿದ್ದು, ಸಮೀಪದ ಸಂಚಯಗಿರಿಯವರೆಗೂ ವ್ಯಾಪಿಸಿತು.

ಹುಲ್ಲಿನಿಂದಾವೃತ ಜಾಗದಲ್ಲಿ ಬೆಂ*ಕಿ ಕಾಣಿಸಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಕೂಡಲೇ ಸ್ಥಳೀಯರು ಬಂಟ್ವಾಳದ ಅ*ಗ್ನಿಶಾಮಕದಳಕ್ಕೆ ಕರೆ ಮಾಡಿದ್ದು, ಈ ವೇಳೆ ಬಂಟ್ವಾಳದಲ್ಲಿದ್ದ ಏಕೈಕ ಅ*ಗ್ನಿಶಾಮಕ ವಾಹನ ಮಂಚಿಗೆ ಕರೆಯೊಂದರ ಮೇಲೆ ತೆರಳಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನಿಂದ ವಾಹನ ಆಗಮಿಸಿದ್ದು, ಅಷ್ಟರಲ್ಲಾಗಲೇ ಸ್ಥಳೀಯರು ನಂದಿಸುವ ಕಾರ್ಯ ಆರಂಭಿಸಿದ್ದರು.

ಈ ಜಾಗದ ಹಿಂಭಾಗ ಸಂಚಯಗಿರಿ ಬಡಾವಣೆ ಇದ್ದು, ಇಲ್ಲಿಯೂ ಕೆಲ ಭಾಗಕ್ಕೆ ಬೆಂ*ಕಿ ವ್ಯಾಪಿಸಿತ್ತು. ಗ್ರಾಮ ಆಡಳಿತಾಧಿಕಾರಿ ಯಶ್ವಿತಾ, ಸಿಬ್ಬಂದಿ ಸದಾಶಿವ ಕೈಕಂಬ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಜಾಗ ಖರೀದಿಸಿ ಖಾಲಿ ಬಿಟ್ಟುಬಿಡುವವರು ಜಾಗದಲ್ಲಿ ಹುಲ್ಲು ಬೆಳೆದು ಸಮೀಪದವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ, ಅಗ್ನಿ ಆಕಸ್ಮಿಕದ ಸಂದರ್ಭ ಸ್ಥಳೀಯರು ಹರಸಾಹಸಪಡಬೇಕಾಗುತ್ತದೆ. ಈ ಕುರಿತು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಈ ಸಂದರ್ಭ ಒತ್ತಾಯಿಸಿದರು.

Continue Reading

LATEST NEWS

ಮಗನೇ ಹೋದ ಮೇಲೆ ಕಾರು ಯಾಕೆ? 6 ಕೋಟಿಯ BMW ಸಮಾಧಿ ಮಾಡಿದ ತಂದೆ!

Published

on

ಮಾಸ್ಕೋ: ಮಗನ ಅಗಲಿಕೆಯ ದುಃಖವನ್ನು ತಾಳಲಾರದೆ, ಅಹಮದಾಬಾದ್‌ನ ತಂದೆಯೊಬ್ಬರು ಮಗನ ನೆನಪಿಗಾಗಿ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ BMW ಕಾರನ್ನು ಸಮಾಧಿ ಮಾಡಿದ್ದಾರೆ.


ತಂದೆಯು ಮಗನ ಹುಟ್ಟುಹಬ್ಬದ ಅಂಗವಾಗಿ ಈ ಐಷಾರಾಮಿ BMW ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಕಾರು ಖರೀದಿಸಿದ ಕೆಲವೇ ದಿನಗಳಲ್ಲಿ ಮಗ ಅಕಾಲಿಕ ಮರಣಕ್ಕೀಡಾದನು. ಇದರ ಪರಿಣಾಮ ಮಗ ಸಮಾಧಿ ಪಕ್ಕದಲ್ಲೇ ಹೊಸ BMW ಕಾರನ್ನು ಸಮಾಧಿ ಮಾಡಿದ ವೀಡಿಯೋ ವೈರಲ್‌ ಆಗುತ್ತಿದೆ.

ಮಗನೇ ಇಲ್ಲದ ಮೇಲೆ ಈ ಕಾರು ಏಕೆ ಎಂದು ನೊಂದ ತಂದೆ, ಅದನ್ನು ಗುಂಡಿ ತೋಡಿ ಸಮಾಧಿ ಮಾಡುವ ನಿರ್ಧಾರ ಮಾಡಿದರು. ಜೆಸಿಬಿ ಮೂಲಕ ಗುಂಡಿ ತೋಡಿ, ಬೆಲೆಬಾಳುವ ಕಾರನ್ನು ಮಗನ ಸಮಾಧಿಯ ಪಕ್ಕದಲ್ಲೇ ಹೂಳುತ್ತಿರುವ ವೀಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಪತ್ನಿ ತವರು ಮನೆಯಿಂದ ಬಂದಿಲ್ಲ ಎಂದು ಮಾವನನ್ನೇ ಕೊಂದ ಅಳಿಯ!

ಈ ಘಟನೆಗೆ ಸಂಬಂಧಿಸಿದಂತೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಇದು ತಂದೆಯ ಪ್ರೀತಿಯ ಸಂಕೇತ ಎಂದರೆ, ಮತ್ತೆ ಕೆಲವರು ಹಣವನ್ನು ದಾನ ಮಾಡಬಹುದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

Continue Reading

LATEST NEWS

ಕಾರಿನಲ್ಲಿ ಪತ್ತೆಯಾಯ್ತು ಪ್ರೇಮಿಗಳ ಶ*ವ!

Published

on

ಉತ್ತರ ಪ್ರದೇಶ/ಮಂಗಳೂರು : ಪ್ರೇಮಿಗಳ ದಿನದಂದೇ ದುರಂ*ತವೊಂದು ನಡೆದಿದೆ. ಕಾರಿನಲ್ಲಿ ಪ್ರೇಮಿಗಳ ಶ*ವ ಪತ್ತೆಯಾಗಿದೆ. ಈ ಘಟನೆ ನಡೆದಿರೋದು  ಉತ್ತರ ಪ್ರದೇಶದ ನೋಯ್ಡಾದಲ್ಲಿ. ಶೂಟ್ ಮಾಡಿಕೊಂಡು ಪ್ರೇಮಿಗಳು ಕಾರಿನಲ್ಲೇ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ನಿಲ್ಲಿಸಿದ್ದ ಕಾರಿನಲ್ಲಿ ಇಬ್ಬರ ಮೃ*ತದೇಹಗಳನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ನಡೆಸಿದ್ದು, ಇಬ್ಬರೂ ಗುಂಡು ಹಾ*ರಿಸಿಕೊಂಡು ಮೃ*ತಪಟ್ಟಿರುವುದು ದೃಢವಾಗಿದೆ.

ಇಬ್ಬರಿಗೂ ಗುಂ*ಡೇಟಿನ ಗಾ*ಯಗಳಾಗಿದ್ದು, ಮೃ*ತ ಯುವಕನ ಕೈಯಲ್ಲಿ ಪಿಸ್ತೂಲ್ ಪತ್ತೆಯಾಗಿದೆ. ಯುವಕ ಮೊದಲು ಯುವತಿಗೆ ಗುಂ* ಡು ಹಾ*ರಿಸಿ, ನಂತರ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದ್ದು, ವಿಧಿವಿಜ್ಞಾನ ತಜ್ಞರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತನಿಖೆ ನಡೆಯುತ್ತಿದೆ.

 

 

Continue Reading
Advertisement

Trending

Copyright © 2025 Namma Kudla News

You cannot copy content of this page