Connect with us

DAKSHINA KANNADA

Udupi: ಎನ್‌ಸಿಸಿ ನೇವಲ್ ಕೆಡೆಟ್‌ಗಳಿಗೆ ಓಶಿಯನ್‌ ಸೈಲಿಂಗ್‌ ಎಕ್ಸ್ಪೆಡಿಶನ್‌

Published

on

ಮಂಗಳೂರು ನೇವಲ್ ಎನ್‌ಸಿಸಿ ಗ್ರೂಪ್ ಆಶ್ರಯದಲ್ಲಿ ಕರ್ನಾಟಕ ಹಾಗೂ ಗೋವಾ ರಾಜ್ಯದ 72 ಎನ್‌ಸಿಸಿ ನೇವಲ್  ಕೆಡೆಟ್‌ಗಳಿಗೆ ಓಶಿಯನ್ ಸೈಮಲಿಂಗ್ ಎಕ್ಸ್ಪೆಡಿಶನ್ ಸೆ. 13ರಿಂದ 22ರವರೆಗೆ ಉಡುಪಿ ಉದ್ಯಾವರದ ಹಿನ್ನೀರಿನಲ್ಲಿ ನಡೆಯಿತು.

ಮಂಗಳೂರು: ಮಂಗಳೂರು ನೇವಲ್ ಎನ್‌ಸಿಸಿ ಗ್ರೂಪ್ ಆಶ್ರಯದಲ್ಲಿ ಕರ್ನಾಟಕ ಹಾಗೂ ಗೋವಾ ರಾಜ್ಯದ 72 ಎನ್‌ಸಿಸಿ ನೇವಲ್  ಕೆಡೆಟ್‌ಗಳಿಗೆ ಓಶಿಯನ್ ಸೈಮಲಿಂಗ್ ಎಕ್ಸ್ಪೆಡಿಶನ್ ಸೆ. 13ರಿಂದ 22ರವರೆಗೆ ಉಡುಪಿ ಉದ್ಯಾವರದ ಹಿನ್ನೀರಿನಲ್ಲಿ ನಡೆಯಿತು.

100 ವರ್ಷಕ್ಕೂ ಅಧಿಕ ಹಳೆಯ ಡಿಕೆ ವೇಲರ್ ಬೋಟ್‌ನಲ್ಲಿ  5 ಪುಲ್ಲರ್ ಹಾಗೂ ಅವರನ್ನು ನಿಯಂತ್ರಿಸುವ ಕ್ಯಾಪ್ಟನ್‌ಗಳು ಉದ್ಯಾವರದ 21ನೇ ಕರ್ನಾಟಕ ನೇವಲ್ ಎನ್‌ಸಿಸಿ ಯುನಿಟ್‌ನ ಬೋಟ್ ಪೂಲ್‌ನಲ್ಲಿ ಈ ಸೈಲಿಂಗ್ ತರಬೇತಿ ಪಡೆಯುತ್ತಿದ್ದಾರೆ.

72ಮಂದಿ ಕೆಡೆಟ್‌ಗಳು ಈ ತರಬೇತಿ ಪಡೆದರು.

ನೇವಲ್ ಎನ್‌ಸಿಸಿಯಲ್ಲಿ ವಿಶೇಷ ತರಬೇತಿ ಆಗಿರುವ ಈ ಓಶಿಯನ್ ಸೈಲಿಂಗ್ ಎಕ್ಸ್ಪೆಡಿಶನ್ ಶಿಬಿರದಲ್ಲಿ ರಾಜ್ಯದ ಉಡುಪಿ, ದ.ಕ., ಮೈಸೂರು, ಬೆಂಗಳೂರು, ಕಾರವಾರ ಹಾಗೂ ಗೋವಾದ 6 ನೇವಲ್ ಎನ್‌ಸಿಸಿ ಯುನಿಟ್‌ನ 36 ಮಂದಿ ಹುಡುಗಿಯರು ಹಾಗೂ 36 ಮಂದಿ ಹುಡುಗರು ಸೇರಿದಂತೆ ಒಟ್ಟು 72 ಮಂದಿ ಭಾಗವಹಿಸಿದ್ದಾರೆ.

ಅವಘಡ ಸಂಭವಿಸಿದಾಗ ಜೀವ ರಕ್ಷಣೆ, ಸಮುದ್ರದ ದೈತ್ಯ ಅಲೆಗಳನ್ನು ಬೇಧಿಸಿಕೊಂಡು ಬೋಟನ್ನು ನಡೆಸುವುದು, ದೈಹಿಕ ಹಾಗೂ ಮಾನಸಿಕ ಕ್ಷಮತೆಯನ್ನು ಬೆಳೆಸುವುದಲ್ಲದೆ ಈ ತರಬೇತಿ ಪಡೆದ ಕೆಡೆಟ್ ಇತರರಿಗಿಂತ ಹೆಚ್ಚಿನ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬಲ್ಲ ತರಬೇತಿ ನೀಡಲಾಗುತ್ತಿದೆ.

ಪ್ರಸ್ತುತ 10 ದಿನಗಳ ಈ ಶಿಬಿರದಲ್ಲಿ ಕೆಡೆಟ್‌ಗಳು ಸೈಲಿಂಗ್ ಅಲ್ಲದೆ ಇತರ ಸಾಮಾಜಿಕ ಕಾರ್ಯಕ್ರಮಗಳಲ್ಲೂ ಭಾಗವಹಿಸಲಿದ್ದಾರೆ.

ಬೀಚ್ ಸ್ವಚ್ಛತೆ, ಗ್ರಾಮಗಳಿಗೆ ತೆರಳಿ ಪರಿಸರ ಸ್ವಚ್ಛತೆ, ಟ್ರೆಕ್ಕಿಂಗ್, ಪ್ರಥಮ ಚಿಕಿತ್ಸೆ, ಅಗ್ನಿ ಆಕಸ್ಮಿಕ ಪ್ರಾತ್ಯಕ್ಷಿಕೆ, ರಸ್ತೆ ಸುರಕ್ಷತೆ, ಕಾಲೇಜುಗಳಿಗೆ ತೆರಳಿ ಮಾದಕ ದ್ರವ್ಯ ವಿರೋಧಿ ಅಭಿಯಾನ ನಡೆಸುವುದು, ಸೈಬರ್ ಕ್ರೈಂ, ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ, ಸಾಂಸ್ಕೃತಿಕ ವಿನಿಮಯ ಮೊದಲಾದ ಚಟುವಟಿಕೆಗಳನ್ನು ನಡೆಸಲಿದ್ದಾರೆ.

DAKSHINA KANNADA

ಆಸ್ಪತ್ರೆಯಿಂದ ಜೈಲಿಗೆ ಶಿಫ್ಟ್‌ ಆದ ಕೋಟೆಕಾರ್ ಬ್ಯಾಂಕ್ ದರೋಡೆ ಆರೋಪಿ

Published

on

ಉಳ್ಳಾಲದ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿ ಮುರುಗನ್ ಡಿ ಇದೀಗ ಆಸ್ಪತ್ರೆಯಿಂದ ಜೈಲು ಸೇರಿದ್ದಾನೆ.

ಪೊಲೀಸರ ವಶದಲ್ಲಿದ್ದ ವೇಳೆ ಸ್ಥಳ ಮಹಜರು ವೇಳೆ ಬಾಲ ಬಿಚ್ಚಲು ಹೋಗಿ ಪೊಲೀಸರ ಗುಂಡೇಟು ತಿಂದು ಆಸ್ಪತ್ರೆ ಸೇರಿದ್ದ. ಕರ್ನಾಟಕ ಕೇರಳ ಗಡಿ ಭಾಗದ ಗ್ರಾಮವಾಗಿರುವ ಅಜ್ಜಿನಡ್ಕ ಎಂಬಲ್ಲಿ ಸ್ಥಳ ಮಹಜರು ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ ಉಳ್ಳಾಲ ಠಾಣಾಧಿಕಾರಿ ತಪ್ಪಿಸಿಕೊಳ್ಳುತ್ತಿದ್ದ ಆರೋಪಿ ಮುರುಗನ್ ಡಿ ಕಾಲಿಗೆ ಗುಂಡು ಹಾರಿಸಿದ್ದರು.

ಇದೀಗ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಆರೋಪಿ ಮುರುಗನ್ ಡಿ ಯನ್ನು ಜಿಲ್ಲಾ ಕಾರಾಗ್ರಹಕ್ಕೆ ಕಳುಹಿಸಲಾಗಿದೆ. ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಇನ್ನೂ ಆರೋಪಿಗಳ ಬಂಧನವಾಗಬೇಕಾಗಿದ್ದು, ಆರೋಪಿಗಳಿಗೆ ಸಹಕರಿಸಿದ ಸ್ಥಳೀಯ ವ್ಯಕ್ತಿ ಯಾರು ಎಂಬುವುದು ಕೂಡಾ ಬಯಲಾಗಬೇಕಾಗಿದೆ.

Continue Reading

DAKSHINA KANNADA

ಹರಿಪಾದೆ ಜಾರಂದಾಯ ವಾರ್ಷಿಕ ನೇಮೋತ್ಸವದಲ್ಲಿ ಭಾಗಿಯಾದ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್

Published

on

ಮುಲ್ಕಿ : ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ತುಳುನಾಡಿನ ನೇಮೋತ್ಸವದಲ್ಲಿ ಭಾಗಿಯಾದರು.

ಮಂಗಳವಾರ ರಾತ್ರಿ ಪಕ್ಷಿಕೆರೆ ಸಮೀಪದ ಹರಿಪಾದೆ ಜಾರಂದಾಯ ವಾರ್ಷಿಕ ನೇಮ ನಡೆದಿದ್ದು, ದೈವಕ್ಕೆ ಮಲ್ಲಿಗೆ ಹೂವು ಅರ್ಪಿಸಿ, ಸುಮಾರು ಮೂರು ಗಂಟೆಗಳ ಕಾಲ ಭಕ್ತಿಯಿಂದ ಜಾರಂದಾಯ ನೇಮವನ್ನು ವೀಕ್ಷಿಸಿದರು.

ವಿಶಾಲ್ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು, ಇದಕ್ಕಾಗಿ ದೈವಕ್ಕೆ ಪ್ರಾರ್ಥನೆ ಸಲ್ಲಿಸಿದ್ದು, ಸಂಪೂರ್ಣ ಗುಣಮುಖವಾಗಿ ಬಂದು ಶ್ರೀ ಕ್ಷೇತ್ರದಲ್ಲಿ ತುಲಾಭಾರ ಸೇವೆ ಕೊಡಲು ಅರ್ಚಕರು ಸೂಚಿಸಿದ ಹಿನ್ನೆಲೆಯಲ್ಲಿ ಅವರು ಒಪ್ಪಿಕೊಂಡರು. ಮಾದ್ಯಮದೊಂದಿಗೆ ಮಾತನಾಡಿದ ವಿಶಾಲ್ ಕಾಂತಾರ ನಿನಿಮಾದಲ್ಲಿ ದೈವ ಮತ್ತು ಇಲ್ಲಿನ ನೇಮೋತ್ಸವದ ಬಗ್ಗೆ ತಿಳಿದಿದ್ದೇನೆ.

ಇದನ್ನೂ ಓದಿ: ಅಯೋಧ್ಯೆ ಶ್ರೀರಾಮ ಮಂದಿರದ ಪ್ರಧಾನ ಅರ್ಚಕ ನಿಧನ

ಇದೀಗ ಪ್ರಥಮ ಬಾರಿಗೆ ತುಳುನಾಡಿನ ನೇಮೋತ್ಸವವನ್ನು ನೋಡುತ್ತಿದ್ದೇನೆ ತುಂಬಾ ಖುಷಿ ನೀಡಿದೆ. ನಿನ್ನೆ ಕೊಲ್ಲೂರು ಮುಕಾಂಬಿಕೆ ದರ್ಶನ ಪಡೆದು ಇದೀಗ ಇಲ್ಲಿಗೆ ಭೇಟಿ ನೀಡಿದ್ದೇನೆ, ಬೆಳೆಯುತ್ತಿರುವ ತುಳು ಚಿತ್ರರಂಗದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ತಮಿಳಿನಲ್ಲಿ ಹಲವು ಸಿನಿಮಾಗಳ ಮಾತುಕಥೆ ನಡೆಯುತ್ತಿದೆ ಎಂದರು.

Continue Reading

BANTWAL

ತುಂಬೆ: ಚಾಲಕನಿಗೆ ಮೂರ್ಛೆ ರೋಗ ಬಂದು ಡಿವೈಡರ್ ಮೇಲೇರಿದ ಲಾರಿ

Published

on

ಬಂಟ್ವಾಳ: ಚಾಲಕನಿಗೆ ಮೂರ್ಛೆ ರೋಗ ಬಂದು ಡಿವೈಡರ್ ಮೇಲೆ ಲಾರಿ ಹತ್ತಿ ಸುಮಾರು 100 ಮೀ ನಷ್ಟು ಚಲಿಸಿ ನಿಂತಿದ್ದು, ಬಳಿಕ ಡ್ರೈವರ್ ಸೀಟಿನಲ್ಲಿ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ರಾ.ಹೆ.75ರ ತುಂಬೆ ಸಮೀಪ ನಡೆದಿದೆ.

ಲಾರಿ ಚಾಲಕನನ್ನು ಕೂಡಲೇ ಸ್ಥಳೀಯರು ತುಂಬೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇಂದು ಬೆಳಗ್ಗೆ 7.45 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಡಿವೈಡರ್ ಮೇಲೆ ಹಾಕಿದ್ದ ರಸ್ತೆ ಸೂಚಕಾ ಫಲಕಕ್ಕೆ ಹಾನಿಯಾಗುವುದು ಬಿಟ್ಟರೆ ಬೇರೆ ಯಾವೂದೇ ರೀತಿಯ ತೊಂದರೆ ಆಗಲಿಲ್ಲ.

ಲಾರಿಯು ಬೆಂಗಳೂರಿನಿಂದ ಮಂಗಳೂರು ಕಡೆಗೆ ಚಲಿಸುತ್ತಿತ್ತು. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page