Connect with us

LATEST NEWS

ಉಡುಪಿ | ಚಲಿಸುತ್ತಿದ್ದ ರೈಲಿನಲ್ಲಿ ಮಣಿಪಾಲದ ಯುವತಿಗೆ ಲೈಂಗಿಕ ಕಿರುಕುಳ; ಕಾಮುಕ ಅರೆಸ್ಟ್‌ ಆಗಿದ್ದೇ ರೋಚಕ!

Published

on

ಉಡುಪಿ: ಬೆಂಗಳೂರಿನಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳ ಮಾನಭಂಗಕ್ಕೆ ಯತ್ನಿಸಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಭಟ್ಕಳ ಮೂಲದ ಮೊಹಮ್ಮದ್ ಶುರೈಮ್ (22) ಎಂಬಾತನನ್ನು ಬಂಧಿಸಲಾಗಿದೆ. ಕಳೆದ ಭಾನುವಾರ ಬೆಳಿಗ್ಗೆ ರೈಲಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮೂಲತಃ ಉಡುಪಿ ತಾಲೂಕಿನ ಮಣಿಪಾಲದ ಯುವತಿ ಬೆಂಗಳೂರಿನಲ್ಲಿ ಐಟಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಅವರು ಶನಿವಾರ ರಾತ್ರಿ ಬೆಂಗಳೂರಿನಿಂದ ಉಡುಪಿಗೆ ಹೊರಟಿದ್ದರು.

ಭಾನುವಾರ ಮುಂಜಾನೆ ರೈಲು ಸಂಚರಿಸುತ್ತಿದ್ದಾಗಲೇ ಅಸಭ್ಯ ವರ್ತನೆ ತೋರುತ್ತಿದ್ದ ಆರೋಪಿ, ಯುವತಿಯ ಖಾಸಗಿ ಅಂಗಗಳನ್ನು ಮುಟ್ಟಿ ಕಾಮಚೇಷ್ಠೆ ತೀರಿಸಿಕೊಳ್ಳುತ್ತಿದ್ದ ಎನ್ನಲಾಗಿದೆ. ಇನ್ನೇನು ಉಡುಪಿಗೆ ಅರ್ಧ ಗಂಟೆ ಇರುವಾಗ ಮಂಗಳೂರು ಹೊರವಲಯದ ಮುಲ್ಕಿ ಬಳಿ ಯುವತಿಯ ಮೇಲೆ ಎರಗಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಕೂಡಲೇ ಇದಕ್ಕೆ ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಗಾಬರಿಗೊಂಡ ಶುರೈಂ ಕ್ಷಮೆಯಾಚಿಸಿದ್ದಾನೆ. ಆದರೆ ಯುವತಿ ಆತನ ಫೋಟೊ ತೆಗೆದುಕೊಂಡಿದ್ದಾಳೆ. ಕೂಡಲೇ ಯುವತಿ ಉಡುಪಿ ರೈಲ್ವೆ ಪೊಲೀಸರಿಗೆ ಘಟನೆ ಬಗ್ಗೆ ಮಾಹಿತಿ ನೀಡಿದ್ದಾಳೆ. ರೈಲ್ವೆ ಮದದ್ ಆ್ಯಪ್ ಮೂಲಕವೂ ದೂರು ನೀಡಿದ್ದಾಳೆ. ಯುವತಿ ಮಾಹಿತಿ ಆಧರಿಸಿ ಮಣಿಪಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಯುವತಿ ತೆಗೆದ ಆರೋಪಿಯ ಫೋಟೊ ಮಾತ್ರ ಪೊಲೀಸರಿಗಿದ್ದ ಕುರುಹಾಗಿತ್ತು. ಅದರಂತೆ ಪೊಲೀಸರು ಆ ದಿನ ಬೋಗಿಯಲ್ಲಿ ಪ್ರಯಾಣಿಸಿದ್ದ ಪ್ರಯಾಣಿಕರ ಲಿಸ್ಟ್‌ ಪಡೆದುಕೊಂಡರು. ಒಟ್ಟು 1,200 ಮಂದಿ ಲಿಸ್ಟ್‌ನಲ್ಲಿದ್ದರು. ಆದರೆ ಯುವತಿಯ ಫೋಟೊದಲ್ಲಿದ್ದ ವ್ಯಕ್ತಿ ಟೋಪಿ ಹಾಕಿಕೊಂಡಿದ್ದರಿಂದ ಆತ ಮುಸ್ಲಿಂ ವ್ಯಕ್ತಿ ಎಂದುಕೊಂಡು, ಪ್ರಯಾಣಿಕರ ಲಿಸ್ಟ್‌ನಲ್ಲಿದ್ದ ಮುಸ್ಲಿಂ ಹೆಸರುಗಳ ಪಟ್ಟಿ ತಗೆದರು. ಬಳಿಕ ಸಿಎನ್‌ಆರ್‌ ನಂಬರ್‌ಗಳನ್ನು ಪಡೆದಾಗ ಅದರಲ್ಲಿದ್ದ ಎಲ್ಲರ ಮೊಬೈಲ್‌ ಸಂಖ್ಯೆ ಪೊಲೀಸರಿಗೆ ಸಿಕ್ಕಿತು. ಈ ನಡುವೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯ ಚಲನವಲನ ಕಂಡುಹಿಡಿದರು. ಆರೋಪಿ ಭಟ್ಕಳ ನಿವಾಸಿ ಎಂಬುದು ಪೊಲೀಸರಿಗೆ ದೃಢವಾಯಿತು. ಅದರಂತೆ ಭಟ್ಕಳಕ್ಕೆ ತೆರಳಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಕೇವಲ 20 ಗಂಟೆಯ ಕಾರ್ಯಾಚರಣೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯು ಭಟ್ಕಳದಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಮೈಸೂರಿನ ಜಮಾತ್‌ನಲ್ಲಿ 10 ದಿನಗಳ ಕೋರ್ಸ್‌ ಮುಗಿಸಿಕೊಂಡು ಊರಿಗೆ ಹಿಂತಿರುಗುತ್ತಿದ್ದ ಎನ್ನಲಾಗಿದೆ. ಬಂಧಿತ ಆರೋಪಿಯನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

DAKSHINA KANNADA

ಸುರತ್ಕಲ್-ನಂತೂರು ಜಂಕ್ಷನ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿ ನಿಗದಿ

Published

on

ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ತೀವ್ರವಾಗಿದ್ದು, ಈ ಹಿನ್ನೆಲೆಯಲ್ಲಿ ಸುರತ್ಕಲ್-ನಂತೂರು ಜಂಕ್ಷನ್‌ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿಯನ್ನು ಗಂಟೆಗೆ 50 ಕಿಲೋ ಮೀಟರ್‌ ಗೆ ನಿಗದಿಪಡಿಸಲಾಗಿದೆ. ಈ ಮಿತಿ ಸಪ್ಟೆಂಬರ್‌ ಅಂತ್ಯದ ವರೆಗೆ ಚಾಲ್ತಿಯಲ್ಲಿ ಇರಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

ಅತಿವೃಷ್ಟಿಯಿಂದಾಗಿ ರಾಷ್ಟ್ರೀಯ ಹೆದ್ದಾರಿಯ ಹಲವು ಭಾಗಗಳು ಕೆಟ್ಟು ಹೋಗಿವೆ. ಹಾಗಾಗಿ ಅಂತಹ ಭಾಗಗಳು ಅತಿ ವೇಗದ ಚಾಲನೆಗೆ ಸುರಕ್ಷಿತವಾಗಿಲ್ಲ. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು ಸಾಧ್ಯವಾದಷ್ಟು ಎಲ್ಲೆಲ್ಲಿ ಸರ್ವೀಸ್‌ ರಸ್ತೆಗಳಿವೆಯೋ ಅಲ್ಲಿ ಅದನ್ನೇ ಬಳಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ.

ಇದನ್ನೂ ಓದಿ: ಭಾರೀ ಮಳೆಗೆ ಕದ್ರಿ ಕೈಬಟ್ಟಲ್ ಪರಿಸರದಲ್ಲಿ ಮನೆ ಮೇಲೆ ಗುಡ್ಡ ಕುಸಿತ

ಸುರತ್ಕಲ್‌- ನಂತೂರು ನಡುವಣ ಹೆದ್ದಾರಿ ಕೆಟ್ಟು ಹೋಗಿದ್ದು, ಘನ ವಾಹನ, ಲಘುವಾಹನ, ದ್ವಿಚಕ್ರ, ತ್ರಿಚಕ್ರ ಸೇರಿದಂತೆ ಎಲ್ಲಾ ವಾಹನಗಳು ಈ ಹೆದ್ದಾರಿಯನ್ನೇ ಬಳಸುತ್ತಿವೆ. ಕೆಲವೊಮ್ಮೆ ಹೊಂಡ ತಪ್ಪಿಸಲು ವಾಹನಗಳು ಅಡ್ಡಾದಿಡ್ಡಿ ಸಂಚರಿಸಿ ಅಪಘಾತಕ್ಕೆ ಕಾರಣವಾಗುತ್ತಿವೆ.

ಈ ಕಾರಣಕ್ಕಾಗಿ ಸರ್ವೀಸ್‌ ರಸ್ತೆ ಇರುವ ಪಣಂಬೂರು, ಸುರತ್ಕಲ್‌, ಬೈಕಂಪಾಡಿ, ಕೂಳೂರು ಭಾಗಗಳಲ್ಲಿ ಈ ಸರ್ವೀಸ್‌ ರಸ್ತೆಯನ್ನೇ ಬಳಸಿ ದ್ವಿಚಕ್ರ ವಾಹನಗಳು ಸಂಚರಿಸುವುದು ಸೂಕ್ತ ಎಂದು ಎನ್ಎಚ್ಎಐ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

LATEST NEWS

ಭೀ*ಕರ ರಸ್ತೆ ಅಪ*ಘಾತ; ಇಬ್ಬರು ಡ್ಯಾನ್ಸರ್ಸ್​ ಸ್ಥಳದಲ್ಲೇ ಸಾ*ವು

Published

on

ಮಂಗಳೂರು/ನೆಲಮಂಗಲ: ಲಾರಿ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ಡ್ಯಾನ್ಸರ್ಸ್ ಸ್ಥಳದಲ್ಲೇ ಸಾ*ವನ್ನಪ್ಪಿರುವ ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್‌ನಲ್ಲಿ ನಡೆದಿದೆ.


ಮೃ*ತರನ್ನು ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್ (22) ಮತ್ತು ಕುರುಬರಹಳ್ಳಿ ನಿವಾಸಿ ಸಹನಾ(21) ಎಂದು ಗುರುತಿಸಲಾಗಿದೆ.

ಪ್ರಜ್ವಲ್ ಕೆಲವು ಸಿನಿಮಾ ಮತ್ತು ಇವೆಂಟ್​ಗಳಲ್ಲಿ ನೃತ್ಯ ಮಾಡಿದ್ದಾರೆ. ಸಹನಾ ಕೂಡ ಡ್ಯಾನ್ಸರ್​​ ಆಗಿದ್ದಾರೆ. ಇಬ್ಬರು ಮದುವೆ ಇವೆಂಟ್​​ ಒಂದನ್ನು ಮುಗಿಸಿಕೊಂಡು ಕುಣಿಗಲ್​ನಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿ ಬೈಕ್​ಗೆ ಡಿ*ಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ.

READ IN ENGLISH :https://www.nammakudlaenglish.com/horrific-road-accident-two-dancers-die-on-the-spot/

ಇದನ್ನೂ ಓದಿ: ಬೆಳ್ತಂಗಡಿ: ಹಿಟಾಚಿಗೆ ಖಾಸಗಿ ಬಸ್ ಡಿ*ಕ್ಕಿ; ಓರ್ವ ಸಾ*ವು, ಹಲವರಿಗೆ ಗಾಯ

ಅಪ*ಘಾತದ ಬೆನ್ನಲ್ಲೇ ಲಾರಿ ಸಮೇತ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಭಾರೀ ಮಳೆಗೆ ಕದ್ರಿ ಕೈಬಟ್ಟಲ್ ಪರಿಸರದಲ್ಲಿ ಮನೆ ಮೇಲೆ ಗುಡ್ಡ ಕುಸಿತ

Published

on

ಮಂಗಳೂರಿನಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಹಲವು ಕಡೆಗಳಲ್ಲಿ ಅಪಾರ ಹಾನಿಗೂ ಕಾರಣವಾಗಿದೆ. ನಗರದ ಕದ್ರಿ ಕೈಬಟ್ಟಲ್ ಎಂಬಲ್ಲಿ ಮನೆಯ ಒಂದು ಭಾಗ ಕುಸಿತಕ್ಕೊಳಗಾಗಿದೆ.

ಇದನ್ನೂ ಓದಿ: ಇಸ್ರೇಲ್-ಇರಾನ್ ಸಂಘರ್ಷ: ಅಡುಗೆ ಎಣ್ಣೆ ಬೆಲೆ 3-4ರೂ. ದಿಢೀರ್ ಹೆಚ್ಚಳ

ಉಷಾ ಅಶೋಕ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಮನೆಯ ಅಡುಗೆ ಕೋಣೆಯಲ್ಲಿ ಗೋಡೆ ಕುಸಿತಕ್ಕೊಳಗಾಗಿದೆ. ಮನೆಯ ಹಲವು ಸಾಮಾಗ್ರಿಗೆ ಹಾನಿ ಉಂಟಾಗಿದೆ.

ಮನೆಯಲ್ಲಿ ಜನರಿದ್ದ ವೇಳೆ ಅಡುಗೆ ಕೋಣೆಯಲ್ಲಿ ಗೋಡೆ ಕುಸಿತವಾಗಿದ್ದರೂ ಮನೆ ಮಂದಿ ಪ್ರಾಣಾಪಾಯದಿಂದ ಪಾರು ಆಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page