Connect with us

LATEST NEWS

ಮಕರ ಸಂಕ್ರಾಂತಿ ಪ್ರಯುಕ್ತ ಬೆಂಗಳೂರು – ಕರಾವಳಿ ವಿಶೇಷ ರೈಲು ಸಂಚಾರ

Published

on

ಕುಂದಾಪುರ: ವಾರಾಂತ್ಯದ ಸರಣಿ ರಜೆ ಹಾಗೂ ಮಕರ ಸಂಕ್ರಮಣದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಉಡುಪಿ-ಕುಂದಾಪುರ ಮತ್ತು ಕಾರವಾರಕ್ಕೆ ಇಂದು (ಜ.10) ಮಧ್ಯಾಹ್ನ ಬೆಂಗಳೂರಿನಿಂದ ವಿಶೇಷ ರೈಲು ಸಂಚರಿಸಲಿದೆ.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣ ಸಮಿತಿ ಮನವಿಯಂತೆ ವಿಶೇಷ ರೈಲಿನ ವ್ಯವಸ್ಥೆ ಮಾಡಿದ್ದಾರೆ.

 

ಇದನ್ನೂ ಓದಿ : ಮಂಗಳೂರು : ಖಾಸಗಿ ಬಸ್‌ ಪ್ರಯಾಣ ದರ ಏರಿಕೆ

 

ಬೆಂಗಳೂರಿನ ಬೈಯ್ಯಪ್ಪನಹಳ್ಳಿಯ ವಿಶ್ವೇರಯ್ಯ ಟರ್ಮಿನಲ್‌ನಿಂದ ಜ.10ರ ಮಧ್ಯಾಹ್ನ 1ಕ್ಕೆ ಹೊರಡಲಿದ್ದು, ಪಡೀಲ್‌ ಬೈಪಾಸ್‌ ಮೂಲಕ ರಾತ್ರಿ 12ಕ್ಕೆ ಉಡುಪಿ, 1 ಗಂಟೆಗೆ ಕುಂದಾಪುರಕ್ಕೆ ಬಂದು, ಬಳಿಕ ಕಾರವಾರ ಕಡೆಗೆ ಸಂಚರಿಸಲಿದೆ. ಈ ರೈಲು ಜ. 11ರಂದು ಮಧ್ಯಾಹ್ನ 12 ಗಂಟೆಗೆ ಕಾರವಾರದಿಂದ ಬೆಂಗಳೂರಿಗೆ ಸಂಚರಿಸಲಿದೆ.

FILM

 ‘ಜೈ’ ಅಂದ್ರು ಪ್ರೇಕ್ಷಕರು…ತುಳು ಚಿತ್ರರಂಗದಲ್ಲಿ ಹೊಸ ದಾಖಲೆ!

Published

on

ಮಂಗಳೂರು : ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನ ಮತ್ತು ಅಭಿನಯದ ತುಳು ಚಲನ ಚಿತ್ರ ‘ಜೈ’  ಸದ್ಯ ಥಿಯೇಟರ್ ಅಂಗಳದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.  ಮಾತ್ರವಲ್ಲ, ಸಿನಿಮಾ ತುಳು ಚಿತ್ರರಂಗದಲ್ಲೇ ಹೊಸ ರೆಕಾರ್ಡ್ ಕೂಡ ಮಾಡಿದೆ. ಬಿಡುಗಡೆಯಾದ ಮೊದಲ ದಿನ ಅತಿ ಹೆಚ್ಚು ವೀಕ್ಷಣೆ ಪಡೆದ ಸಿನಿಮಾವಾಗಿ ಹೊರಹೊಮ್ಮಿದೆ. ಅಂದಹಾಗೆ, ಮೊದಲ ದಿನ ಜೈ ಚಿತ್ರ ನೋಡಿದವರ ಸಂಖ್ಯೆ 15,160ಕ್ಕೂ ಅಧಿಕ.

ವಿಶ್ವದಾದ್ಯಂತ ನವೆಂಬರ್ 14 ರಂದು ತೆರೆಗೆ ಬಂದಿರುವ ಜೈ ಸಿನಿಮಾ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ರೂಪೇಶ್ ಶೆಟ್ಟಿ ನಟನೆ, ನಿರ್ದೇಶನ ಎರಡರಲ್ಲೂ ಗೆದ್ದಿದ್ದಾರೆ.  ಅದ್ವಿತಿ ಶೆಟ್ಟಿ ಮುದ್ದಾಗಿ ಕಾಣಿಸಿಕೊಂಡಿದ್ದು, ನಟನೆಯ ಮೂಲಕವೂ ಗಮನ  ಸೆಳೆಯುತ್ತಾರೆ. ಜೊತೆಗೆ ಸಿನಿಮಾದಲ್ಲಿ ಮನೋರಂಜನಾ ರಸದೌತಣವೇ ಇದೆ. ನಿರೀಕ್ಷೆಯಂತೆಯೇ ಬಾಲಿವುಡ್ ನಟ ಸುನೀಲ್ ಶೆಟ್ಟಿ ಜಬರ್ದಸ್ತ್ ಎಂಟ್ರಿ ಕೊಟ್ಟಿದ್ದಾರೆ.

ಅಂದಹಾಗೆ, ಜೈ ಬಿಗ್ ಬಜೆಟ್‌ನ  ಚಿತ್ರ. ಮಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿತ್ರೀಕರಣಗೊಂಡಿದೆ.  ಗಿರಿಗಿಟ್, ಗಮ್ಜಾಲ್ ಮತ್ತು ಸರ್ಕಸ್ ಚಿತ್ರದ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ‘ಜೈ’  ಚಿತ್ರವನ್ನು ಪ್ರೇಕ್ಷಕರ ಮುಂದೆ ತೆರೆದಿಟ್ಟಿದ್ದಾರೆ.  ಆರ್.ಎಸ್ ಸಿನಿಮಾಸ್, ಶೂಲಿನ್ ಫಿಲಂಸ್ ಹಾಗೂ ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಆ್ಯಕ್ಷನ್, ಡ್ರಾಮಾ ಮತ್ತು ಎಮೋಷನ್‌ಗಳ ಸಮನ್ವಯವಿದೆ.

ಇದನ್ನೂ ಓದಿ : ಮಾವನ ಚಿತ್ರಕ್ಕೆ ಶುಭಹಾರೈಸಿದ ಅಳಿಯ…! ಜೈ ಅಂದ್ರು ಕೆ.ಎಲ್.ರಾಹುಲ್

ಚಿತ್ರದ ಕಥೆ ಹಾಗೂ ಸಂಭಾಷಣೆ ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ಕ್ಯಾಮೆರಾ ವಿನುತ್ ಕೆ, ಸಂಗೀತ ಲೊಯ್ ವೆಲೆಂಟಿನ್ ಸಲ್ದಾನ್ಹಾ, ಸಂಕಲನ ರಾಹುಲ್ ವಸಿಷ್ಠ ಅವರದ್ದು. ಅರವಿಂದ್ ಬೋಳಾರ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ. ಪಡೀಲ್, ದೇವದಾಸ್ ಕಾಪಿಕಾಡ್ ಮುಂತಾದವರು ನಟಿಸಿದ್ದಾರೆ.

 

Continue Reading

LATEST NEWS

ಫರೀದಾಬಾದ್ ಠಾಣೆಯಲ್ಲಿ ಸ್ಪೋ*ಟ; ಸಾವಿನ ಸಂಖ್ಯೆ 9ಕ್ಕೇರಿಕೆ

Published

on

ಮಂಗಳೂರು/ಶ್ರೀನಗರ :  ಜಮ್ಮು ಮತ್ತು ಕಾಶ್ಮೀರದ  ನೌಗಮ್ ಪೊಲೀಸ್ ಠಾಣೆಯಲ್ಲಿಉಂಟಾದ  ಸ್ಫೋ*ಟದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೇರಿದೆ. ಕಳೆದ ವಾರ ದೆಹಲಿ ಸ್ಫೋಟ ಹಿನ್ನೆಲೆಯಲ್ಲಿ ಫರೀದಾಬಾದ್ ಭಯೋತ್ಪಾದನಾ ಮಾಡ್ಯೂಲ್ ಪ್ರಕರಣದಲ್ಲಿ ವಶಪಡಿಸಿಕೊಂಡ ಸ್ಫೋ*ಟಕಗಳ ಸಂಗ್ರಹದಿಂದ ಅಧಿಕಾರಿಗಳು ಮಾದರಿಗಳನ್ನು ಹೊರತೆಗೆಯುತ್ತಿದ್ದಾಗ ಆಕಸ್ಮಿಕವಾಗಿ ಸ್ಫೋ(ಟ ಸಂಭವಿಸಿದೆ ಎಂದು ವರದಿಯಾಗಿದೆ.

ಭೀಕರ ಸ್ಫೋ*ಟ ಶಬ್ಧಕ್ಕೆ ಸುತ್ತಮುತ್ತಲಿನ ಮನೆಯವರು ಬೆಚ್ಚಿ ಬಿದ್ದಿದ್ದಾರೆ. ಹಲವು ವಾಹನಗಳು ಬೆಂ*ಕಿಗೆ ಆಹುತಿಯಾಗಿದ್ದು, ಸ್ಫೋ*ಟದ ತೀವ್ರತೆಗೆ ಅಕ್ಕಪಕ್ಕದ ಮನೆಯ ಕಿಟಕಿ ಗಾಜುಗಳು ಹಾ*ನಿಗೊಳಗಾಗಿವೆ. ಅಲ್ಲದೇ, ಮಾನವ ದೇಹದ ಅವಶೇಷಗಳು ಸುಮಾರು 300 ಅಡಿ ದೂರದಲ್ಲಿ ಬಿದ್ದಿದ್ದವು ಎನ್ನಲಾಗಿದೆ.

ಇದನ್ನೂ ಓದಿ : ಪಣಂಬೂರು ಬಳಿ ಭೀಕರ ಸರಣಿ ಅಪ*ಘಾತ; ಮೂವರ ದುರ್ಮ*ರಣ

ಶುಕ್ರವಾರ(ನ.14) ತಡರಾತ್ರಿ 11:22ರ ಸುಮಾರಿಗೆ ಈ ಸ್ಫೋ*ಟ ಸಂಭವಿಸಿದೆ. ಈವರೆಗೆ 9 ಮಂದಿ ಸಾ*ವನ್ನಪ್ಪಿರುವುದು ದೃಢಪಟ್ಟಿದೆ. ಸಾವಿನ ಸಂ*ಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು,  30ಕ್ಕೂ ಹೆಚ್ಚು ಮಂದಿ ಗಾ*ಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

Continue Reading

DAKSHINA KANNADA

ಪಣಂಬೂರು ಬಳಿ ಭೀಕರ ಸರಣಿ ಅಪ*ಘಾತ; ಮೂವರ ದುರ್ಮ*ರಣ

Published

on

ಸುರತ್ಕಲ್ : ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಭೀಕರ ಸರಣಿ ಅಪ*ಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ಪ್ರಾ*ಣ ಕಳೆದುಕೊಂಡಿದ್ದಾರೆ. ಸಿಗ್ನಲ್‌ನಲ್ಲಿ ಸರತಿಯಲ್ಲಿದ್ದ ವೇಳೆ ಎರಡು ಟ್ಯಾಂಕರ್, ಆಟೋ ಮತ್ತು ಕಾರಿನ ನಡುವೆ ಅಪ*ಘಾತವಾಗಿದೆ.

ಸಿಗ್ನಲ್‌ನಲ್ಲಿ ನಿಂತಿದ್ದ ಟ್ಯಾಂಕರ್‌ವೊಂದರ ಹಿಂಭಾಗದಲ್ಲಿ ಕಾರು ಮತ್ತು ಆಟೋ ನಿಂತಿತ್ತು. ಈ ವೇಳೆ ಹಿಂದಿನಿಂದ ಬಂದ ಇನ್ನೊಂದು ಟ್ಯಾಂಕ‌ರ್  ಆಟೋಗೆ ಡಿ*ಕ್ಕಿಯಾಗಿದೆ. ಡಿ*ಕ್ಕಿಯ ರಭಸಕ್ಕೆ ಆಟೋ ಎದುರಿನಲ್ಲಿ ನಿಂತಿದ್ದ ಕಾರಿಗೆ ಗುದ್ದಿ, ಬಳಿಕ ಅದರ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್‌ಗೆ ಡಿ*ಕ್ಕಿಯಾಗಿದೆ.

ಪರಿಣಾಮ ಆಟೋ ಎರಡು ಟ್ಯಾಂಕರ್ ಗಳ ಮಧ್ಯೆ ಸಿಲುಕಿ ಅಪ್ಪಚ್ಚಿಯಾಗಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಮತ್ತು ರಿಕ್ಷಾ ಚಾಲಕ ಸ್ಥಳದಲ್ಲೇ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಎಥನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ಬೆಂಕಿಗಾಹುತಿ; ಚಾಲಕ ಪಾರು

ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page