Connect with us

bengaluru

ಉಡುಪಿ ವಿಡಿಯೋ ಪ್ರಕರಣ: ಸಂತ್ರಸ್ತೆಯಿಂದ ಹೇಳಿಕೆ ದಾಖಲಿಸಿಕೊಂಡ ಸಿಐಡಿ ತಂಡ

Published

on

ಉಡುಪಿ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್‌ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣವನ್ನು ಸಿಐಡಿಗೆ ರಾಜ್ಯ ಸರಕಾರ ನೀಡಿದ ಮೇಲೆ ತನಿಖೆ ಪುನರಾರಂಭಗೊಂಡಿದ್ದು, ಸಂತ್ರಸ್ತೆಯಿಂದ ಹೇಳಿಕೆ ಪಡೆದುಕೊಂಡಿದ್ದಾರೆ. 

ಉಡುಪಿ: ಉಡುಪಿ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್‌ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣವನ್ನು ಸಿಐಡಿಗೆ ರಾಜ್ಯ ಸರಕಾರ ನೀಡಿದ ಮೇಲೆ ತನಿಖೆ ಪುನರಾರಂಭಗೊಂಡಿದ್ದು, ಸಂತ್ರಸ್ತೆಯಿಂದ ಹೇಳಿಕೆ ಪಡೆದುಕೊಂಡಿದ್ದಾರೆ.

ಇಂದು ಸಿಐಡಿ ಎಡಿಜಿಪಿ ಮನೀಶ್‌ ಕರ್ಬೀಕರ್‌ ಉಡುಪಿಗೆ ಆಗಮಿಸಿ ತನಿಖೆಗೆ ಮಾರ್ಗದರ್ಶನ ನೀಡಿದ್ದಾರೆ.

ಉಡುಪಿ ಎಸ್ಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಲಿದೆ.

ಈ ವೇಳೆ ತನಿಖಾಧಿಕಾರಿಗಳಿಂದ ಅವರು ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲಿದ್ದಾರೆ.

ಮರು ತನಿಖೆ ನಡೆಸಲು ಸಿಐಡಿ ಅಧಿಕಾರಿಗಳು ಬೊಂಬೆಯನ್ನು ಸೃಷ್ಟಿಸಿ ತನಿಖೆ ಆರಂಭಿಸಿದ್ದಾರೆ.

ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ ಎಸ್ ಪಿ ರಾಘವೇಂದ್ರ ಹೆಗಡೆ ಪ್ರಕರಣದ ತನಿಖೆ ಶುರು ಮಾಡಿದ್ದಾರೆ.

ಘಟನೆ ನಡೆದ ಕಾಲೇಜಿಗೆ ಭೇಟಿ ಕೊಟ್ಟ ಸಿಐಡಿ ತಂಡ ಮಾಹಿತಿಗಳನ್ನು ಕಲೆ ಹಾಕಿದೆ.

ಸಂತ್ರಸ್ತೆಯ ಹೇಳಿಕೆಯನ್ನು ಪಡೆದುಕೊಳ್ಳಲಾಗಿದೆ.

ಕಾಲೇಜಿನ ಆಡಳಿತ ಮಂಡಳಿ ಸಿಬ್ಬಂದಿಯನ್ನು ವಿಚಾರಣೆ ಮಾಡಿ ದಾಖಲೆಗಳನ್ನು ಸಂಗ್ರಹ ಮಾಡಿದ್ದಾರೆ.

ಜು. 18ರಂದು ನಡೆದ ಘಟನೆಯನ್ನು ಸಿಐಡಿ ಮರು ಸೃಷ್ಟಿ ಮಾಡಿದೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಎಡಿಜಿಪಿ ಮನೀಶ್ ಕರ್ಬೀಕರ್‌, ಉಡುಪಿಯಲ್ಲಿ ನಡೆದ ವಿಡಿಯೋ ಪ್ರಕರಣದ ಮಾಹಿತಿ ಪಡೆದುಕೊಂಡಿದ್ದೇನೆ.

ಉಡುಪಿ ಪೊಲೀಸರು ನಡೆಸಿದ ತನಿಖೆ ವರದಿ ಪರಿಶೀಲನೆ ಮಾಡಿದ್ದೇನೆ.

ಪೊಲೀಸ್ ಮತ್ತು ಸಿಐಡಿ ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚೆ ಮಾಡಿದ್ದೇನೆ.

ಮುಂದೇನು ತನಿಖಾ ಪ್ರಕ್ರಿಯೆ ನಡೆಸಬೇಕು ಎಂಬ ಬಗ್ಗೆ ಚರ್ಚಿಸಲಾಗಿದೆ.

ತನಿಖಾಧಿಕಾರಿಯಾಗಿ ಸಿಐಡಿ ಡಿವೈಎಸ್ಪಿ ಅಂಜುಮಾಲ ಅವರನ್ನು ನೇಮಕ ಮಾಡಲಾಗಿದೆ ಎಂದರು.

ತನಿಖೆಯ ಮೇಲ್ವಿಚಾರಣೆಯನ್ನು ಸಿಐಡಿ ಎಸ್ ಪಿ ರಾಘವೇಂದ್ರ ಹೆಗಡೆ ನಡೆಸುತ್ತಾರೆ.

ವಿಧಿವಿಜ್ಞಾನ ಪ್ರಯೋಗಾಲಯದ ವರದಿ ತನಿಖಾಧಿಕಾರಿ ಕೈ ಸೇರಲಿದೆ.

ಪ್ರಕರಣದ ತನಿಖೆ ಆದ ಬಳಿಕ ಕೋರ್ಟಿಗೆ ಮುಂದಿನ ವರದಿ ಕೊಡುತ್ತೇವೆ.

ಸಿಐಡಿ ತನಿಖೆ ಉಡುಪಿಯಲ್ಲಿ ಮುಂದುವರಿಯಲಿದೆ.

ಮೂರು ಮೊಬೈಲ್‌ ಎಫ್‌ಎಸ್‌ಎಲ್‌ ವರದಿ ತನಿಖೆಯ ಒಂದು ಭಾಗವಾಗಿ ನಾವು ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

bangalore

ಫಸ್ಟ್ ನೈಟ್ ದಿನ ತಲೆದಿಂಬು ತಬ್ಕೊಂಡು ನಿಂತ ಯಜಮಾನ ಹೀರೋ

Published

on

ಮದುವೆಯ ಮೊದಲ ರಾತ್ರಿಯ ಶಾಸ್ತ್ರವನ್ನು ಗ್ರ್ಯಾಂಡ್ ಆಗಿ ಮಾಡುವುದು ಸಾಮಾನ್ಯ. ಅಂತೆಯೇ ಜಾನ್ಸಿ ಮತ್ತು ರಾಘವೇಂದ್ರನ ಕೋಣೆಯನ್ನು ಹೂಗಳಿಂದ ಬಹಳ ಸುಂದರವಾಗಿ ಅಲಂಕರಿಸಲಾಗಿತ್ತು. ಆದರೆ, ಜಾನ್ಸಿಯು ತನ್ನನ್ನು ಮುಟ್ಟುವಂತಿಲ್ಲ ಎಂಬ ಷರತ್ತನ್ನು ಮೊದಲೇ ಹಾಕಿದ್ದಳು. ಆ ವೇಳೆ ನಿರ್ದೇಶಕರು ಹಳೆಯ ಟ್ರಿಕ್ ಬಳಸಿ ಜಾನ್ಸಿ ಮತ್ತು ರಾಘವೇಂದ್ರನನ್ನು ಒಂದು ಮಾಡಿದ್ದರು. ಏನಿದು ಕಥೆ ? ಜಾನ್ಸಿ ಹಾಗೂ ರಾಘವೇಂದ್ರ ಯಾರು ? ಅವರಿಬ್ಬರು ಹೇಗೆ ಒಂದಾದ್ರು ? ಇಲ್ಲಿದೆ ನೋಡಿ.

ಹಣದ ಬಲದಿಂದ ಮಧ್ಯಮ ವರ್ಗದ ಹುಡುಗ ರಾಘವೇಂದ್ರನನ್ನು ಬಾಡಿಗೆ ಗಂಡನನ್ನಾಗಿ ಮಾಡಿಕೊಳ್ಳುವಲ್ಲಿ ಜಾನ್ಸಿ ಯಶಸ್ವಿಯಾಗಿದ್ದಾಳೆ. ಕೇವಲ ಒಂದು ತಿಂಗಳಿನ ಒಪ್ಪಂದದ ಮೇಲೆ ರಾಘವೇಂದ್ರ ಪರಿಸ್ಥಿತಿಯ ಗೊಂಬೆಯಾಗಿ ಹಠಮಾರಿ, ಜಂಬದ ಕೋಳಿ ಜಾನ್ಸಿಯನ್ನು ಮದುವೆಯಾಗಿದ್ದಾನೆ. ಆದರೆ ಇದು ಒಂದು ತಿಂಗಳ ಒಪ್ಪಂದ ಮದುವೆ ಅನ್ನೋ ವಿಷಯ ಜಾನ್ಸಿ ಅಜ್ಜ ಸೇರಿದಂತೆ ಬಹುತೇಕ ಯಾರಿಗೂ ಗೊತ್ತಿಲ್ಲ. ಹಾಗಾಯೇ ಮದುವೆ ಪೂರ್ವ ಮತ್ತು ನಂತರದ ಶಾಸ್ತ್ರಗಳನ್ನು ಜಾನ್ಸಿ ಕುಟುಂಬಸ್ಥರು ಆಯೋಜಿಸಿದ್ದರು. ಈ ರೀತಿಯ ರೋಚಕ ತಿರುವು ನೀಡುತ್ತಿರುವ, ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಯಜಮಾನ ಧಾರಾವಾಹಿ ದಿನದಿಂದ ದಿನಕ್ಕೆ ಪ್ರೇಕ್ಷಕರಿಗೆ ಹತ್ತಿರವಾಗುತ್ತಿದೆ.

ಮೊದವೆಯ ಮೊದಲ ರಾತ್ರಿ ದಿನ ಜಾನ್ಸಿ ರಾಘವೇಮದ್ರನಿಗೆ ದೂರವಿರುವಂತೆ ಹೇಳುತ್ತಾಳೆ. ಈ ವೇಳೆ ನಿರ್ದೇಶಕರು ಹಳೆಯ ಟ್ರಿಕ್ ಬಳಸಿ ಜಾನ್ಸಿ ಮತ್ತು ರಾಘವೇಂದ್ರನನ್ನು ಒಂದು ಮಾಡಿದ್ದರು. ಅದೇ ಹಲ್ಲಿ, ಜಿರಳೆ ಕಂಡ್ರೆ ಹುಡುಗಿಯರು ನೂರು ಕಿಲೋ ಮೀಟರ್ ದೂರ ಓಡುತ್ತಾರೆ. ಇಲ್ಲಿಯೂ ನಿರ್ದೇಶಕರು ಹಲ್ಲಿ ಬಳಸಿ ಜಾನ್ಸಿಯನ್ನು ಹೆದರಿಸಿ ರೆಡಿಮೇಡ್ ಗಂಡ ರಾಘವೇಂದ್ರನನ್ನು ತಬ್ಬಿಕೊಂಡು ಒಂದಾಗುವಂತೆ ಮಾಡಿದ್ದಾರೆ.

ಧಾರಾವಾಹಿ ಎಂದರೆ ಕಲಾವಿದರು ಸೇರಿದಂತೆ ಇನ್ನುಳಿದ ಸಿಬ್ಬಂದಿ ಹಗಲು -ರಾತ್ರಿ ಅಂತ ನೋಡದೇ ಕೆಲಸ ಮಾಡುತ್ತಾರೆ. ರಾತ್ರಿಯ ದೃಶ್ಯಗಳನ್ನು ಆ ಸಮಯದಲ್ಲಿಯೇ ಶೂಟಿಂಗ್ ಮಾಡಲಿ ಪ್ಲಾನ್ ಮಾಡಲಾಗಿರುತ್ತದೆ. ಹಾಗಾಗಿ ಕೆಲವೊಮ್ಮೆ ಶೂಟಿಂಗ್ ಬೆಳಗಿನ ಜಾವ 5 ಗಂಟಯವರೆಗೂ ನಡೆಯುತ್ತಿರುತ್ತದೆ. ಯಜಮಾನ ಸೀರಿಯಲ್‌ನಲ್ಲಿ ಜಾನ್ಸಿ ಹಾಗೂ ರಾಘವೇಂದ್ರನ ಫಸ್ಟ್ ನೈಟ್ ದೃಶ್ಯವನ್ನೂ ಮದ್ಯರಾತ್ರಿ ಮಾಡಲಾಗಿದೆ. ತೆರೆ ಮೇಲೆ ದೃಶ್ಯವೊಂದು ಚೆನ್ನಾಗಿ ಮೂಡಿ ಬರಲು ತೆರೆ ಹಿಂದಿನವರ ಪ್ರಾಮುಖ್ಯತೆ ತುಂಬಾ ಇದೆ.

Continue Reading

bengaluru

ಬೆಂಗಳೂರಿನಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾ*ವು

Published

on

By

ಮಂಗಳೂರು/ಬೆಂಗಳೂರು: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬರು ಸಾ*ವನ್ನಪ್ಪಿದ ಘಟನೆ ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿರುವುದಾಗಿ ಆರೋಪ ಕೇಳಿಬಂದಿದೆ.

ಕಡೂರು ತಾಲೂಕಿನ ಗರ್ಜೆ ಗ್ರಾಮದ ನಿವಾಸಿ ಅನುಷಾ ಮೃ*ತ ಬಾಣಂತಿ ಎಂದು ಗುರುತಿಸಲಾಗಿದೆ.

ಒಂದು ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಅನುಷಾ, ಅ*ನಾರೋಗ್ಯದಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾದ ವೇಳೆ ಚಿಕಿತ್ಸೆ ಫಲಿಸದೇ ಮೃ*ತಪಟ್ಟಿದ್ದಾರೆ. ಅನುಷಾಗೆ ತರೀಕೆರೆಯ ರಾಜ್ ನರ್ಸಿಂಗ್‌ ಹೋಂನಲ್ಲಿ ಸಹಜ ಹೆರಿಗೆ ಆಗಿತ್ತು. ನಂತರ, ಸ್ಕ್ಯಾನಿಂಗ್ ಮಾಡಿ ಹೊಟ್ಟೆಯಲ್ಲಿ ಕಲ್ಲು ಇದೆ ಎಂದು ವೈದ್ಯರು ತಿಳಿಸಿದ್ದರು. ಅದೇ ವರದಿ ಆಧಾರದ ಮೇಲೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ವೈದ್ಯರು ಎ*ಡವಟ್ಟು ಮಾಡಿದ್ದಾರೆಂದು ಕುಟುಂಬದವರು ಆರೋಪ ಮಾಡಿದ್ದಾರೆ.

ಶಸ್ತ್ರಚಿಕಿತ್ಸೆ ವೇಳೆ ಕರುಳಿಗೆ ಹಾನಿಯಾಗಿತ್ತು, ಆದರೆ, ಆ ವಿಚಾರವನ್ನು ವೈದ್ಯರು ಮುಚ್ಚಿಟ್ಟಿದ್ದಾರೆ. ಶಸ್ತ್ರಚಿಕಿತ್ಸೆ ನಂತರ ಮನೆಗೆ ತೆರಳಿದಾಗ ಬಾಣಂತಿಯ ಕೈ ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಹೀಗಾಗಿ ಆಕೆಯನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರಿಶೀಲಿಸಿದ ವೈದ್ಯರು, ಆರೋಗ್ಯ ಸಹಜವಾಗಿದೆ. ಏನೂ ಸಮಸ್ಯೆ ಇಲ್ಲ ಎಂದಿದ್ದರು. ಹೀಗಾಗಿ ಮತ್ತೆ ಸ್ಥಳೀಯ ಆಸ್ಪತ್ರೆಗೆ ಅನುಷಾರನ್ನು ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು, ಅನುಷಾಗೆ ಕಾ*ಮಾಲೆ ಇದೆ ಎಂದಿದ್ದರು. ಸ್ಥಳೀಯ ಆಸ್ಪತ್ರೆ ವೈದ್ಯರ ಸಲಹೆಯಂತೆ ಅನುಷಾರನ್ನು ಕುಟುಂಬಸ್ಥರು ಬೆಂಗಳೂರಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫ*ಲಿಸದೆ ಮೃ*ತಪಟ್ಟಿದ್ದಾರೆ. ಸ್ಥಳೀಯ ಪೊಳೀಸ್ ಠಾಣೆಯಲ್ಲಿ ಕುಟುಂಬದವರು ನೀಡಿದ ದೂ*ರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

bangalore

ವಿರಾಟ್ ಕೊಹ್ಲಿಗೆ ಶಾಕ್ ಕೊಟ್ಟ ಬಿಬಿಎಂಪಿ; ನೋಟಿಸ್ ನೀಡಿದ ಅಧಿಕಾರಿಗಳು !

Published

on

By

ಮಂಗಳೂರು/ಬೆಂಗಳೂರು: ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್, ಆರ್ ಸಿಬಿ ತಂಡದ ಆಟಗಾರ ವಿರಾಟ್ ಕೊಹ್ಲಿಗೆ ಬಿಬಿಎಂಪಿ ಶಾಕ್ ಕೊಟ್ಟಿದೆ.

ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದಲ್ಲಿರುವ ಸ್ಟಾರ್‌ ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ ಬಾರ್ (One8 Commune) & ರೆಸ್ಟೋರೆಂಟ್‌ಗೆ ಬಿಬಿಎಂಪಿ ಬಿಸಿ ಮುಟ್ಟಿಸಿದೆ.

ಅಗ್ನಿ ಶಾಮಕ ದಳದಿಂದ ನಕ್ಷೆ, ಪ್ರಮಾಣ ಪತ್ರ ಎನ್‌ಒಸಿ ಪರವಾನಿಗೆ ಪಡೆಯದೇ ಕಾನೂನು ಉಲ್ಲಂಘನೆ ಮಾಡಿದ್ದಕ್ಕೆ ನೋಟಿಸ್ ನೀಡಿದೆ. ಸಾಮಾಜಿಕ ಕಾರ್ಯಕರ್ತ ಹೆಚ್‌.ಎಂ ವೆಂಕಟೇಶ್ ಅನ್ನೋರು ಈ ಬಗ್ಗೆ ಬಿಬಿಎಂಪಿಗೆ ದೂರು ಕೊಟ್ಟಿದ್ದರು. ಇದನ್ನು ಆಧರಿಸಿ ಶಾಂತಿನಗರದ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ಇದನ್ನೂ ಓದಿ: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ಅರೆಸ್ಟ್ ವಾರೆಂಟ್ ಜಾರಿ !

ಈಗಾಗಲೇ ಒಂದು ಬಾರಿ ನೋಟಿಸ್ ನೀಡಿದ್ರೂ ಕೊಹ್ಲಿ ಮಾಲೀಕತ್ವದ ಬಾರ್ ಆಂಡ್ ರೆಸ್ಟೋರೆಂಟ್‌ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಮತ್ತೆ ನೋಟಿಸ್ ಜಾರಿ ಮಾಡಿ, ಲಿಖಿತ ರೂಪದ ವಿವರಣೆ ಕೇಳಿದೆ. ಉತ್ತರ ನೀಡದೇ ಇದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page