Connect with us

DAKSHINA KANNADA

ಉಳ್ಳಾಲ : ದುರ್ನಾತ ಬೀರುತ್ತಿದೆ ಉಳ್ಳಾಲ ಬೀಚ್ ರಸ್ತೆ -ಸಾಂಕ್ರಾಮಿಕ ರೋಗದ ಭೀತಿಯಲ್ಲಿ ವೀರರಾಣಿ ಅಬ್ಬಕ್ಕನ ನಾಡು..!

Published

on

ಉಳ್ಳಾಲದಲ್ಲಿ ಕಳೆದ ಹಲವು ಸಮಯಗಳಿಂದ ಕಂಡು ಬರುತ್ತಿರುವುದೇ ತ್ಯಾಜ್ಯದ ಸಮಸ್ಯೆ, ಮಂಗಳೂರಿನ ಪಚ್ಚನಾಡಿ ಡಂಪಿಂಗ್ ಯಾರ್ಡಿನಂತೆ ಉಳ್ಳಾಲದ ಪ್ರಮುಖ ಸ್ಥಳ ಸಾಂಕ್ರಾಮಿಕ ರೋಗಗಳ ಭೀತಿ ತಂದೊಡ್ಡಿದೆ. 

ಉಳ್ಳಾಲ:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ನಗರಗಳು ಅಭಿವೃದ್ಧಿ ಹೊಂದುತ್ತಿವೆ. ಶಿಕ್ಷಣ ನಗರಿ ಎಂದೇ ಪ್ರಖ್ಯಾತಿಯನ್ನು ಪಡೆದಿರುವ ಮಂಗಳೂರು ನಗರ ಜೊತೆಗೆ ಮೆಡಿಕಲ್ ಹಬ್ ಎಂದೂ ಕರೆಯಲ್ಪಡುವ ಸಮುದ್ರ ತೀರದ ಉಳ್ಳಾಲ, ವಿಶ್ವವಿದ್ಯಾನಿಲಯ ಹೊಂದಿರುವ ಕೊಣಾಜೆ ಪರಿಸರವೂ ಅಷ್ಟೇ ಜನಪ್ರಿಯವಾಗಿದೆ.

ಆದರೆ ದೇಶದ ಪ್ರಪ್ರಥಮ ಮಹಿಳಾ ಹೋರಾಗಾರ್ತಿ ಅಬ್ಬಕ್ಕ ರಾಣಿ ಆಳಿದ ಉಳ್ಳಾಲದ ಪ್ರಮುಖ ಪ್ರದೇಶ ಕಳೆದ ಹಲವು ಸಮಯಗಳಿಂದ ಹಸಿ- ಬಿಸಿ ತ್ಯಾಜ್ಯಗಳಿಂದ ಕೊಳೆಯುತ್ತಿದ್ದು ಇದರಿಂದ ಹೊರಡುವ ದುರ್ನಾತ, ವೈರಸ್ , ಬ್ಯಾಕ್ಟಿರಿಯಾಗಳು ಸ್ಥಳೀಯದ ದೈನಂದಿನ ಜೀವನವನ್ನೇ ಆಹುತಿ ಪಡೆದಿದೆ.

ಉಳ್ಳಾಲದ ಪ್ರಸಿದ್ಧ ಬೀಚ್ ವೀಕ್ಷಣೆಗೆ, ದರ್ಗಾಕ್ಕೆ ಸಾವಿರಾರು ಪ್ರವಾಸಿಗರು ದೂರದೂರುಗಳಿಂದ ಆಗಮಿಸುತ್ತಾರೆ. ಒಂದೆಡೆ ಹಲವು ಮೆಡಿಕಲ್‌ ಕಾಲೇಜು, ವಿಶ್ವವಿದ್ಯಾನಿಲಯ ಕಾಲೇಜು, ಪವಿತ್ರವಾದ ಉಳ್ಳಾಲ ಮಸೀದಿ, ಸೋಮೇಶ್ವರ ದೇವಸ್ಥಾನ, ಚರ್ಚು ಇದೆ. ಆದರೆ ಹೀಗೆ ಬರುವವರನ್ನು ಸ್ವಾಗತಿಸುವುದೇ ದುರ್ನಾತ ಬೀರುತ್ತಿರುವ ಈ ಬ್ಲ್ಯಾಕ್‌ ಸ್ಪಾಟ್‌.

ಉಳ್ಳಾಲದ ಅಬ್ಬಕ್ಕ ಸರ್ಕಲ್‌ನಿಂದ ಕೇವಲ 25 ಮೀ. ದೂರದಲ್ಲಿರುವ ಬೀಚಿಗೆ ಹೋಗುವ ಪ್ರಮುಖ ರಸ್ತೆಯ ಪಕ್ಕದಲ್ಲೇ ಭಾರೀ ಕಸವನ್ನು ತಂದು ಇಲ್ಲಿ ಸುರಿಯಲಾಗುತ್ತಿದ್ದು, ಬೀದಿನಾಯಿಗಳು, ದನ ಕರುಗಳು, ಪ್ರಾಣಿ ಪಕ್ಷಿಗಳು ಈ ಕೊಳೆತ ಪದಾರ್ಥಗಳನ್ನು ಆಹಾರವಾಗಿ ಸೇವಿಸುತ್ತಿದ್ದು ಇದು ಸ್ಥಳೀಯರಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ತಂದೊಡ್ಡಿದೆ.

ಈಗಾಗಲೇ ಇಲ್ಲಿನ ಜನತೆ ವಿವಿಧ ರೋಗರುಜಿನಗಳಿಂದ ಬಳಲುತ್ತಿದ್ದಾರೆ.ಸುತ್ತಮುತ್ತಲ ಬಾವಿಯ ನೀರು ಕೂಡಾ ಕಲುಷಿತವಾಗುತ್ತಿದೆ.

ಕಳೆದ ಹಲವು ವರ್ಷಗಳಿಂದ ಇಲ್ಲಿ ಆಯ್ಕೆಗೊಂಡು ಬರುತ್ತಿರುವ ಶಾಸಕ ಯು ಟಿ ಖಾದರ್, ಪ್ರಸ್ತುತ ವಿಧಾನ ಸಭಾ ಸಭಾಪತಿಯಾಗಿದ್ದು ಇಲ್ಲಿನ ತ್ಯಾಜ್ಯ ಸಮಸ್ಯೆ ಬಗ್ಗೆ ಕ್ರಮ ವಹಿಸಬೇಕಾಗಿದೆ.

ನಾವು ಈಗಾಗಲೇ ಶಾಸಕರಿಗೆ ಮನವಿ ನೀಡಿದ್ದೇವೆ. ಇಲ್ಲಿ ಇನ್ನೊಂದು ಪಚ್ಚನಾಡಿ ಡಂಪ್‌ ಮಾಡುವ ಮುನ್ನ ಇದನ್ನು ತೆರವುಗೊಳಿಸಿ ಉಳ್ಳಾಲ ನಗರ ಸಭೆ ಶಾಶ್ವತವಾದ ಪರಿಹಾರವನ್ನು ತೆಗೆದುಕೊಳ್ಳಲು ಕ್ರಮ ಕೈಗೊಂಡು ಉಳ್ಳಾಲದ ಜನತೆಯನ್ನು ರಕ್ಷಿಸಬೇಕಾಗಿ ಸ್ಥಳೀಯ ಜನತೆ ಆಗ್ರಹಿಸಿದ್ದಾರೆ.

DAKSHINA KANNADA

ಆಸ್ಪತ್ರೆಯಿಂದ ಜೈಲಿಗೆ ಶಿಫ್ಟ್‌ ಆದ ಕೋಟೆಕಾರ್ ಬ್ಯಾಂಕ್ ದರೋಡೆ ಆರೋಪಿ

Published

on

ಉಳ್ಳಾಲದ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿ ಮುರುಗನ್ ಡಿ ಇದೀಗ ಆಸ್ಪತ್ರೆಯಿಂದ ಜೈಲು ಸೇರಿದ್ದಾನೆ.

ಪೊಲೀಸರ ವಶದಲ್ಲಿದ್ದ ವೇಳೆ ಸ್ಥಳ ಮಹಜರು ವೇಳೆ ಬಾಲ ಬಿಚ್ಚಲು ಹೋಗಿ ಪೊಲೀಸರ ಗುಂಡೇಟು ತಿಂದು ಆಸ್ಪತ್ರೆ ಸೇರಿದ್ದ. ಕರ್ನಾಟಕ ಕೇರಳ ಗಡಿ ಭಾಗದ ಗ್ರಾಮವಾಗಿರುವ ಅಜ್ಜಿನಡ್ಕ ಎಂಬಲ್ಲಿ ಸ್ಥಳ ಮಹಜರು ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ ಉಳ್ಳಾಲ ಠಾಣಾಧಿಕಾರಿ ತಪ್ಪಿಸಿಕೊಳ್ಳುತ್ತಿದ್ದ ಆರೋಪಿ ಮುರುಗನ್ ಡಿ ಕಾಲಿಗೆ ಗುಂಡು ಹಾರಿಸಿದ್ದರು.

ಇದೀಗ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಆರೋಪಿ ಮುರುಗನ್ ಡಿ ಯನ್ನು ಜಿಲ್ಲಾ ಕಾರಾಗ್ರಹಕ್ಕೆ ಕಳುಹಿಸಲಾಗಿದೆ. ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಇನ್ನೂ ಆರೋಪಿಗಳ ಬಂಧನವಾಗಬೇಕಾಗಿದ್ದು, ಆರೋಪಿಗಳಿಗೆ ಸಹಕರಿಸಿದ ಸ್ಥಳೀಯ ವ್ಯಕ್ತಿ ಯಾರು ಎಂಬುವುದು ಕೂಡಾ ಬಯಲಾಗಬೇಕಾಗಿದೆ.

Continue Reading

DAKSHINA KANNADA

ಹರಿಪಾದೆ ಜಾರಂದಾಯ ವಾರ್ಷಿಕ ನೇಮೋತ್ಸವದಲ್ಲಿ ಭಾಗಿಯಾದ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್

Published

on

ಮುಲ್ಕಿ : ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ತುಳುನಾಡಿನ ನೇಮೋತ್ಸವದಲ್ಲಿ ಭಾಗಿಯಾದರು.

ಮಂಗಳವಾರ ರಾತ್ರಿ ಪಕ್ಷಿಕೆರೆ ಸಮೀಪದ ಹರಿಪಾದೆ ಜಾರಂದಾಯ ವಾರ್ಷಿಕ ನೇಮ ನಡೆದಿದ್ದು, ದೈವಕ್ಕೆ ಮಲ್ಲಿಗೆ ಹೂವು ಅರ್ಪಿಸಿ, ಸುಮಾರು ಮೂರು ಗಂಟೆಗಳ ಕಾಲ ಭಕ್ತಿಯಿಂದ ಜಾರಂದಾಯ ನೇಮವನ್ನು ವೀಕ್ಷಿಸಿದರು.

ವಿಶಾಲ್ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು, ಇದಕ್ಕಾಗಿ ದೈವಕ್ಕೆ ಪ್ರಾರ್ಥನೆ ಸಲ್ಲಿಸಿದ್ದು, ಸಂಪೂರ್ಣ ಗುಣಮುಖವಾಗಿ ಬಂದು ಶ್ರೀ ಕ್ಷೇತ್ರದಲ್ಲಿ ತುಲಾಭಾರ ಸೇವೆ ಕೊಡಲು ಅರ್ಚಕರು ಸೂಚಿಸಿದ ಹಿನ್ನೆಲೆಯಲ್ಲಿ ಅವರು ಒಪ್ಪಿಕೊಂಡರು. ಮಾದ್ಯಮದೊಂದಿಗೆ ಮಾತನಾಡಿದ ವಿಶಾಲ್ ಕಾಂತಾರ ನಿನಿಮಾದಲ್ಲಿ ದೈವ ಮತ್ತು ಇಲ್ಲಿನ ನೇಮೋತ್ಸವದ ಬಗ್ಗೆ ತಿಳಿದಿದ್ದೇನೆ.

ಇದನ್ನೂ ಓದಿ: ಅಯೋಧ್ಯೆ ಶ್ರೀರಾಮ ಮಂದಿರದ ಪ್ರಧಾನ ಅರ್ಚಕ ನಿಧನ

ಇದೀಗ ಪ್ರಥಮ ಬಾರಿಗೆ ತುಳುನಾಡಿನ ನೇಮೋತ್ಸವವನ್ನು ನೋಡುತ್ತಿದ್ದೇನೆ ತುಂಬಾ ಖುಷಿ ನೀಡಿದೆ. ನಿನ್ನೆ ಕೊಲ್ಲೂರು ಮುಕಾಂಬಿಕೆ ದರ್ಶನ ಪಡೆದು ಇದೀಗ ಇಲ್ಲಿಗೆ ಭೇಟಿ ನೀಡಿದ್ದೇನೆ, ಬೆಳೆಯುತ್ತಿರುವ ತುಳು ಚಿತ್ರರಂಗದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ತಮಿಳಿನಲ್ಲಿ ಹಲವು ಸಿನಿಮಾಗಳ ಮಾತುಕಥೆ ನಡೆಯುತ್ತಿದೆ ಎಂದರು.

Continue Reading

BANTWAL

ತುಂಬೆ: ಚಾಲಕನಿಗೆ ಮೂರ್ಛೆ ರೋಗ ಬಂದು ಡಿವೈಡರ್ ಮೇಲೇರಿದ ಲಾರಿ

Published

on

ಬಂಟ್ವಾಳ: ಚಾಲಕನಿಗೆ ಮೂರ್ಛೆ ರೋಗ ಬಂದು ಡಿವೈಡರ್ ಮೇಲೆ ಲಾರಿ ಹತ್ತಿ ಸುಮಾರು 100 ಮೀ ನಷ್ಟು ಚಲಿಸಿ ನಿಂತಿದ್ದು, ಬಳಿಕ ಡ್ರೈವರ್ ಸೀಟಿನಲ್ಲಿ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ರಾ.ಹೆ.75ರ ತುಂಬೆ ಸಮೀಪ ನಡೆದಿದೆ.

ಲಾರಿ ಚಾಲಕನನ್ನು ಕೂಡಲೇ ಸ್ಥಳೀಯರು ತುಂಬೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇಂದು ಬೆಳಗ್ಗೆ 7.45 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಡಿವೈಡರ್ ಮೇಲೆ ಹಾಕಿದ್ದ ರಸ್ತೆ ಸೂಚಕಾ ಫಲಕಕ್ಕೆ ಹಾನಿಯಾಗುವುದು ಬಿಟ್ಟರೆ ಬೇರೆ ಯಾವೂದೇ ರೀತಿಯ ತೊಂದರೆ ಆಗಲಿಲ್ಲ.

ಲಾರಿಯು ಬೆಂಗಳೂರಿನಿಂದ ಮಂಗಳೂರು ಕಡೆಗೆ ಚಲಿಸುತ್ತಿತ್ತು. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page