Connect with us

LATEST NEWS

ಮೆಗಾ ಹರಾಜಿನಲ್ಲಿ ಅನ್‌ಸೋಲ್ಡ್; ನಿವೃತ್ತಿ ಘೋಷಿಸಿದ ಆರ್‌ಸಿಬಿ ಮಾಜಿ ಆಟಗಾರ

Published

on

ಮಂಗಳೂರು/ಮುಂಬೈ : ಐಪಿಎಲ್ 2025ರ ಮೆಗಾ ಹರಾಜು ಪ್ರಕ್ರಿಯೆ ನವೆಂಬರ್ 23 ಹಾಗೂ 24 ರಂದು ನಡೆದಿದೆ.  ಈ ಹರಾಜಿನಲ್ಲಿ ಅನೇಕ ಸ್ಟಾರ್ ಆಟಗಾರರಿಗೆ ಫ್ರಾಂಚೈಸಿಗಳು ಮಣೆ ಹಾಕಿಲ್ಲ. ಅವರಲ್ಲಿ ಟೀಂ ಇಂಡಿಯಾದ ವೇಗಿ ಸಿದ್ಧಾರ್ಥ್ ಕೌಲ್ ಕೂಡ ಒಬ್ಬರು. ಮೆಗಾ ಹರಾಜಿನಲ್ಲಿ ಅನ್ ಸೋಲ್ಡ್ ಆದ 3 ದಿನಗಳ ಬಳಿಕ ಸಿದ್ಧಾರ್ಥ್ ಕೌಲ್ ತಮ್ಮ ಕ್ರಿಕೆಟ್ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಭಾವನಾತ್ಮಕತ ಪೋಸ್ಟ್‌ವೊಂದನ್ನು ಅವರು ಹಂಚಿಕೊಂಡಿದ್ದಾರೆ.

ಸಿದ್ಧಾರ್ಥ್ ಕೌಲ್ ಅವರು ಭಾರತ ಪರ 2018 ಮತ್ತು 2019ರ ನಡುವೆ 3 ಏಕದಿನ ಮತ್ತು 3 ಟಿ 20 ಪಂದ್ಯಗಳನ್ನು ಆಡಿದ್ದಾರೆ. ಆದರೆ ಭಾರತ ಪರ ಆಡಿದ ಮೂರು ಏಕದಿನ ಪಂದ್ಯಗಳಲ್ಲಿ ಒಂದು ವಿಕೆಟ್ ಪಡೆಯಲು ಸಾಧ್ಯವಾಗಿಲ್ಲ. ಆದರೆ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 4 ವಿಕೆಟ್​​ ಪಡೆದಿದ್ದಾರೆ.

ಸಿದ್ಧಾರ್ಥ್ ಕೌಲ್ ಪೋಸ್ಟ್ ಏನು ?

ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಸಿದ್ಧಾರ್ಥ್ ಕೌಲ್ ಈ ಬಗ್ಗೆ ಬರೆದುಕೊಂಡಿದ್ದಾರೆ. ಬಾಲ್ಯದಲ್ಲಿ ನಾನು ಪಂಜಾಬ್‌ನ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ, ನನಗೆ ಒಂದು ಕನಸು ಇತ್ತು. ನನ್ನ ದೇಶವನ್ನು ಪ್ರತಿನಿಧಿಸುವ ಕನಸು. 2018 ರಲ್ಲಿ, ದೇವರ ಕೃಪೆಯಿಂದ, ನಾನು T20i ತಂಡದಲ್ಲಿ ನನ್ನ ಭಾರತ ಕ್ಯಾಪ್ ನಂಬರ್ 75 ಮತ್ತು ODI ತಂಡದಲ್ಲಿ ಕ್ಯಾಪ್ ನಂಬರ್ 221 ಅನ್ನು ಸ್ವೀಕರಿಸಿದ್ದೇನೆ.  ನನ್ನ ನಿವೃತ್ತಿಯನ್ನು ಘೋಷಿಸುವ ಸಮಯ ಈಗ ಬಂದಿದೆ. ನನ್ನ ವೃತ್ತಿಜೀವನದ ಎಲ್ಲಾ ಏರಿಳಿತಗಳ ವೇಳೆ ನಾನು ಪಡೆದ ಪ್ರೀತಿ ಮತ್ತು ಬೆಂಬಲಕ್ಕಾಗಿ ನನ್ನ ಕೃತಜ್ಞತೆಯನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ನನಗಾಗಿ ಒಂದು ದಾರಿ ತೋರಿದಕ್ಕಾಗಿ ನಾನು ದೇವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಅಂತ್ಯವಿಲ್ಲದ ಬೆಂಬಲಕ್ಕಾಗಿ ಅಭಿಮಾನಿಗಳಿಗೆ ಧನ್ಯವಾದ.  ಪೋಷಕರು ಮತ್ತು ಕುಟುಂಬ ವರ್ಗ ನನಗಾಗಿ ಮಾಡಿದ ತ್ಯಾಗ, ನನ್ನ ಮೇಲಿಟ್ಟ ವಿಶ್ವಾಸಕ್ಕೆ ಧನ್ಯವಾದ.

ಇದನ್ನೂ ಓದಿ : ಬೆಂಗಳೂರಿನಲ್ಲಿ ನಡೆಯಲಿದೆ ಡಬ್ಲ್ಯುಪಿಎಲ್ ಮಿನಿ ಹರಾಜು

ಡ್ರೆಸ್ಸಿಂಗ್ ರೂಮ್ ನೆನಪುಗಳು ಮತ್ತು ನನ್ನ ತಂಡದ ಸದಸ್ಯರೊಂದಿಗಿನ ಸ್ನೇಹ… ಭಾರತವನ್ನು ಪ್ರತಿನಿಧಿಸುವ ಮತ್ತು 2008 ರ ಅಂಡರ್-19 ವಿಶ್ವಕಪ್ ಗೆಲ್ಲುವ ಮತ್ತು 2018 ರಲ್ಲಿ ನನ್ನ T20i ಮತ್ತು ODI ಕ್ಯಾಪ್‌ಗಳನ್ನು ಸ್ವೀಕರಿಸುವ ಚಿಕ್ಕ ಮಗುವಾಗಿದ್ದಾಗಿನ ಕನಸನ್ನು ಈಡೇರಿಸಿದ BCCI… ಕೋಲ್ಕತ್ತಾ ನೈಟ್ ರೈಡರ್ಸ್ , ಡೆಲ್ಲಿ ಡೇರ್‌ಡೆವಿಲ್ಸ್, ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು, IPL ಫ್ರಾಂಚೈಸಿಗಳು ನನಗೆ ಜೀವಮಾನದ ನೆನಪುಗಳು… 2007 ರಲ್ಲಿ ಪ್ರಥಮ ದರ್ಜೆಗೆ ಪದಾರ್ಪಣೆ ಮಾಡಲು ಅವಕಾಶವನ್ನು ನೀಡಿದ್ದಕ್ಕಾಗಿ ಮತ್ತು ನನ್ನ ವೃತ್ತಿಜೀವನದುದ್ದಕ್ಕೂ ನನಗೆ ಬೆಂಬಲ ನೀಡಿದ್ದಕ್ಕಾಗಿ @pcacricketassociation ಗೆ ಧನ್ಯವಾದ.

ನಿಮ್ಮೆಲ್ಲರ ಬೆಂಬಲವಿಲ್ಲದಿದ್ದರೆ ನಾನು ಇಷ್ಟೊಂದು ಸಾಧನೆ ಮಾಡಲಾಗುತ್ತಿರಲಿಲ್ಲ. ಭವಿಷ್ಯವು ಏನಾಗುತ್ತದೆ ಎಂದು ನನಗೆ ತಿಳಿದಿಲ್ಲ ಆದರೆ ನಾನು ಈ ಅಧ್ಯಾಯದ ಸವಿನೆನಪುಗಳೊಂದಿಗೆ  ಮುಂದಿನ ಅಧ್ಯಾಯಕ್ಕೆ ಹೋಗುತ್ತೇನೆ. ಎಲ್ಲರಿಗೂ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.

LATEST NEWS

WATCH : ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಹೃದಯಾ*ಘಾತ; ಯುವಕ ಸಾ*ವು

Published

on

ಮಂಗಳೂರು/ವಿಜಯಪುರ : ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ವಿಜಯಪುರದಲ್ಲಿ ಯುವಕನೋರ್ವ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ.  ಡ್ಯಾನ್ಸ್ ಮಾಡುವಾಗಲೇ ಯುವಕನೊಬ್ಬ ಹೃದಯಾ*ಘಾತದಿಂದ ಸಾ*ವನ್ನಪ್ಪಿದ್ದಾನೆ. ವಿಜಯಪುರ ನಗರದ ಚಪ್ಪರಬಂದ ಕಾಲೋನಿಯಲ್ಲಿ ಈ ದು*ರಂತ ಸಂಭವಿಸಿದೆ.

28 ವರ್ಷದ ಮಹಮ್ಮದ್ ಪೈಗಂಬರ್ ಗಂಗನಹಳ್ಳಿ ಮೃ*ತ ಯುವಕ. ಮಹಮ್ಮದ್ ಪೈಗಂಬರ್ ಆಲ್ಯೂಮೀನಿಯಂ ಕಿಟಕಿ, ಬಾಗಿಲು ಕೆಲಸ ಮಾಡುತ್ತಿದ್ದ. ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ  ಹೃ*ದಯಾಘಾತಕ್ಕೊಳಗಾಗಿ ಕು*ಸಿದು ಬಿದ್ದಿದ್ದಾನೆ.

ಇದನ್ನೂ ಓದಿ : ಕೋವಿಡ್‌ ಕುರಿತು ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ

ಕೂಡಲೇ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟುಹೊತ್ತಿಗಾಗಲೇ ಆತ ಮೃತಪಟ್ಟಿದ್ದಾನೆ. ಯುವಕನ ಕೊನೆಯ ಕ್ಷಣದ ವೀಡಿಯೋ ಮೊಬೈಲ್‌ ನಲ್ಲಿ ಸೆರೆಯಾಗಿದ್ದು, ವೈರಲ್ ಆಗುತ್ತಿದೆ.

 

Continue Reading

LATEST NEWS

ಕೋವಿಡ್‌ ಕುರಿತು ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ

Published

on

ಮಂಗಳೂರು/ಬೆಳಗಾವಿ: ಮಹಾಮಾರಿ ಕೋವಿಡ್ ಕುರಿತು ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮಿಜಿಯವರು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ಕೊವಿಡ್ ಕುರಿತು ಸ್ವಾಮೀಜಿ ಅವರು, ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರಿ. ಉಸಿರಾಟಕ್ಕೆ ತೊಂದರೆಯಾಗಿ ಸಾ*ವು ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ಅವರು, ‘ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿರೋದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ. ಲೋಕಕ್ಕೆ ವಾಯು, ಜಲದಿಂದ ಐದು ವರ್ಷ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪಲಿದೆ. ಮೇಘಸ್ಪೋಟ ಆಗುವ ಸಾಧ್ಯತೆಗಳಿವೆ. ಭೂಕಂಪ ಸಂಭವಿಸಲಿದೆ. ಮತೀಯ ಗಲಭೆಗಳು ಹೆಚ್ಚಾಗಲಿವೆ’ ಎಂದರು.

ಇದನ್ನೂ ಓದಿ: ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮಿಲ್ಕಿ ಬ್ಯೂಟಿ ರಾಯಭಾರಿ; ಮೋಹಕ ತಾರೆ ಬೇಸರ

‘ಯುದ್ಧದ ಭೀತಿ ಮತ್ತೆ ಪ್ರಾರಂಭ ಆಗಲಿದೆ. ಜನರಲ್ಲಿ ಅಶಾಂತಿ ಇದೆ. ಕೆಲವು ದೇಶಗಳು ಅಳಿದು ಹೋಗಲಿವೆ. ಹೊಸ ಹೊಸ ದೇಶಗಳು ಉತ್ಪತ್ತಿಯಾಗುತ್ತವೆ. ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ. ಸಂಕ್ರಾಂತಿಯವರೆಗೂ ರಾಜ್ಯ ಸರ್ಕಾರಕ್ಕೆ ಅಪಾಯವಿಲ್ಲ. ಸಂಕ್ರಾಂತಿಯ ನಂತರ ಎನಾಗುತ್ತೆ ನೋಡಬೇಕು’ ಎಂದು ಸ್ವಾಮೀಜಿ ಹೇಳಿದ್ದಾರೆ.

Continue Reading

FILM

ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮಿಲ್ಕಿ ಬ್ಯೂಟಿ ರಾಯಭಾರಿ; ಮೋಹಕ ತಾರೆ ಬೇಸರ

Published

on

ಮಂಗಳೂರು/ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್‌ಗೆ ತೆಲುಗು ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಿರುವುದರಿಂದ ಎದ್ದಿರುವ ವಿವಾದದ ಬೆನ್ನಲ್ಲೇ, ಮೋಹಕ ತಾರೆ ರಮ್ಯಾ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿ ಹಂಚಿಕೊಳ್ಳುವ ಮೂಲಕ ಬೇಸರ ಹಂಚಿಕೊಂಡಿದ್ದಾರೆ.

ಕರ್ನಾಟಕ ಡಿಟರ್ಜೆಂಟ್ಸ್ ಕಂಪನಿಯು ತನ್ನ ಉತ್ಪನ್ನಗಳತ್ತ ಗ್ರಾಹಕರನ್ನು ಸೆಳೆಯುವ ನಿಟ್ಟಿನಲ್ಲಿ ತೆಲುಗು ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಲಾಗಿತ್ತು. ಅದಕ್ಕಾಗಿ ಅವರಿಗೆ ಎರಡು ವರ್ಷಗಳಿಗೆ 6.2 ಕೋಟಿ ರೂ. ಸಂಭಾವನೆಯನ್ನು ಗೊತ್ತುಪಡಿಸಿದೆ. ತಮನ್ನಾ, ಸಂಸ್ಥೆಯ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ನಟಿ ರಮ್ಯಾ ಕೂಡ ಪೋಸ್ಟ್‌ ಮಾಡಿದ್ದು, ಸಂಚಲನ ಮೂಡಿಸಿದೆ.

ಇದನ್ನೂ ಓದಿ: ಮೈಸೂರು ಸ್ಯಾಂಡಲ್‌ ಸೋಪ್ ರಾಯಭಾರಿಯಾಗಿ ಬಾಲಿವುಡ್ ನಟಿ! ಸಂಭಾವನೆ ಎಷ್ಟು?

‘ರಾಯಭಾರಿಗಳನ್ನು ನೇಮಿಸುವುದು ಹಳೆಯ ಸಂಪ್ರದಾಯ. ಇದರಿಂದ ತೆರಿಗೆ ಪಾವತಿದಾರರ ಹಣ ವ್ಯರ್ಥಮಾಡಿದಂತಾಗುತ್ತದೆ. ಒಂದು ಉತ್ಪನ್ನಕ್ಕೆ ಜನ ಗ್ರಾಹಕರಾಗಲು, ಆ ಉತ್ಪನ್ನ ಉತ್ತಮವಾಗಿರಬೇಕು. ನಮ್ಮ ಮೈಸೂರು ಸ್ಯಾಂಡಲ್‌ ಸೋಪ್ ಉತ್ತಮ ಉತ್ಪನ್ನವಷ್ಟೇ ಅಲ್ಲ, ಅದು‌ ನಮ್ಮ ಪರಂಪರೆಯಾಗಿದೆ. ಮೈಸೂರು ಸ್ಯಾಂಡಲ್ ಸೋಪ್ ಬಳಸಿದ ಪ್ರತಿಯೊಬ್ಬ ವ್ಯಕ್ತಿಯು ಅದರ ರಾಯಭಾರಿ. ಪ್ರತಿಯೊಬ್ಬ ಕನ್ನಡಿಗ ಸಹ ಅದರ ರಾಯಭಾರಿ, ಅದನ್ನು ಪ್ರತಿಯೊಬ್ಬ ಕನ್ನಡಿಗನು ಉಚಿತವಾಗಿ ಜಗತ್ತಿಗೆ ಪರಿಚಯ ಮಾಡಿಕೊಡುವ ಕೆಲಸ ಮಾಡುತ್ತಾನೆ’ ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

‘ಜಗತ್ತಿನ ಯಶಸ್ವಿ ಬ್ರಾಂಡ್‌ಗಳಲ್ಲಿ ಒಂದಾದ ಆ್ಯಪಲ್ ಸಂಸ್ಥೆ ಬ್ರಾಂಡ್ ಅಂಬಾಸಿಡರ್ ಹೊಂದಿಲ್ಲ. ರಾಯಭಾರಿಗಾಗಿ ಆ ಕಂಪನಿ ಹಣ ವ್ಯಯಿಸುವುದಿಲ್ಲ. ಹಾಗೆಯೇ, ಡವ್‍ ಸೋಪ್‍ ಪ್ರಚಾರ ಬಹಳ ಚೆನ್ನಾಗಿರುತ್ತದೆ’ ಎಂದು ಹೇಳಿಕೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page