Connect with us

LATEST NEWS

ಟ್ರಕ್‌ನಲ್ಲಿ ಕೊಂಡೊಯ್ಯತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ; ತಪ್ಪಿದ ಅನಾಹುತ

Published

on

ಉತ್ತರ ಪ್ರದೇಶ: ಗ್ಯಾಸ್ ಸಿಲಿಂಡರ್‌ ಅನ್ನು ಕೊಂಡೊಯ್ಯುತ್ತಿದ್ದ ಟ್ರಕ್‌ ಗೆ ಬೆಂಕಿ ತಗುಲಿ ಭಾರೀ ಸ್ಫೋಟವಾದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ದೆಹಲಿ-ವಜೀರಾಬಾದ್ ರಸ್ತೆಯ ಭೋಪುರ ಚೌಕ್‌ನಲ್ಲಿ ನಡೆದಿದೆ.

ಬೆಳಿಗ್ಗೆ 4 ಗಂಟೆಗೆ ಈ ಘಟನೆ ಸಂಭವಿಸಿದ್ದು, ಟ್ರಕ್‌ನಲ್ಲಿದ್ದ ಸುಮಾರು 60 ಕ್ಕೂ ಹೆಚ್ಚು ಗ್ಯಾಸ್ ಸಿಲಿಂಡರ್‌ಗಳಿಗೆ ಬೆಂಕಿ ತಗುಲಿದೆ. ಸ್ಫೋಟಗೊಂಡ ರಭಸಕ್ಕೆ ಸ್ಥಳದಲ್ಲಿದ್ದ ಕೆಲವು ಪೀಠೋಪಕರಣಗಳ ಮಳಿಗೆಗಳು, ಕಾರುಗಳು ಬೆಂಕಿಗಾಹುತಿಯಾಗಿದೆ.

ಟ್ರಕ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಡ್ರೈವರ್ ಗಾಡಿ ನಿಲ್ಲಿಸಿ ಓಡಿದ್ದಾನೆ. ಬಳಿಕ ಸ್ವಲ್ಫ ಸಮಯದ ನಂತರ ಸಿಲಿಂಡರ್ ಸ್ಫೋಟವಾಗಿದೆ. ಸಿಲಿಂಡರ್ ಸ್ಫೋಟವಾದ ಶಬ್ಧವು ಸುತ್ತಮುತ್ತಲಿನ ಪ್ರದೇಶದ ಹಲವಾರು ಕಿಲೋಮೀಟರ್‌ವರೆಗೆ ಕೇಳಿತ್ತು. ಶಬ್ಧ ಕೇಳಿದ ಕೂಡಲೇ ಜನರು ದಿಕ್ಕಾಪಾಲಾಗಿ ಓಡಲು ಪ್ರಯತ್ನಿಸಿದ್ದಾರೆ.

ಬಳಿಕ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಘಟನೆಯಲ್ಲಿ ಯಾವೂದೇ ರೀತಿಯ ಸಾವು-ನೋವುಗಳು ಸಂಭವಿಸಿಲ್ಲ.

LATEST NEWS

PUC, SSLC ನಕಲಿ ಅಂಕಪಟ್ಟಿ ನೀಡುತ್ತಿದ್ದ ಆರೋಪಿಗಳು ಅರೆಸ್ಟ್

Published

on

ಬೆಂಗಳೂರು: PUC, SSLC ನಕಲಿ ಅಂಕಪಟ್ಟಿ ನೀಡುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಬೆಂಗಳೂರು, ಬೆಳಗಾವಿ, ಧಾರವಾಡದಲ್ಲಿಂದ್ದುಕೊಂಡು ಈ ಅಕ್ರಮ ದಂಧೆ ನಡೆಸುತ್ತಿದ್ದರು. ಅಲ್ಲದೇ ಧಾರವಾಡದಲ್ಲಿ ಮತ್ತು ಬೆಂಗಳೂರಿನಲ್ಲಿ ಅಂಕಪಟ್ಟಿ ಪ್ರಿಂಟ್ ಮಾಡಿರುವುದು ಪತ್ತೆಯಾಗಿದೆ.

ಸುಮಾರು 350 ಜನರಿಗೆ ನಕಲಿ ಅಂಕಪಟ್ಟಿ ನೀಡಿರುವುದು ತಿಳಿದುಬಂದಿದೆ. ಇವರಿಂದ ನಕಲಿ ಅಂಕಪಟ್ಟಿ ಪಡೆದ ಜನರು ಸಾರಿಗೆ ಇಲಾಖೆ, ಶಿಶು ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಕೆಲಸಕ್ಕೆ ಸೇರಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿಗಳು 5 ರಿಂದ 10 ಸಾವಿರ ಹಣ ಪಡೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು. ಅಲ್ಲದೇ ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂದು ಸಂಸ್ಥೆಯನ್ನು ಹುಟ್ಟುಹಾಕಿದ್ದರು.

Continue Reading

LATEST NEWS

ಅಪ*ಘಾತದಲ್ಲಿ ಮಗನ ದುರ್ಮ*ರಣ; ಕೋಮಾಕ್ಕೆ ಜಾರಿದ್ದ ತಾಯಿಯೂ ಸಾ*ವು

Published

on

ಮಂಗಳೂರು/ಶಿರ್ವ: ಪುತ್ರ ಶೋಕಂ ನಿರಂತರಂ ಎನ್ನುವ ಹಾಗೆ, ಅಪ*ಘಾತದಲ್ಲಿ ಮೃ*ತಪಟ್ಟ ಮಗನ ಸಾವಿನ ಸುದ್ದಿ ತಿಳಿದು ಆಘಾತಗೊಂಡು ಕೋಮಾಕ್ಕೆ ತೆರಳಿದ್ದ ತಾಯಿಯೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟ ಘಟನೆ ಶಿರ್ವ ಕೊಲ್ಲಬೆಟ್ಟು ಬಳಿ ನಡೆದಿದೆ.


ಮೃ*ತ ಬೈಕ್‌ ಸವಾರನನ್ನು ಶಿರ್ವ ಕೊಲ್ಲಬೆಟ್ಟು ಬಳಿಯ ನಿವಾಸಿ ರಮೇಶ್ ಮೂಲ್ಯ (51). ಪುತ್ರನ ಸಾವಿನ ಶೋಕದಿಂದ ಸಾವನ್ನಪ್ಪಿದ ಇಂದಿರಾ ಮೂಲ್ಯ (74) ಮೃತ ತಾಯಿ. ಮೃತ ರಮೇಶ್ ಪತ್ನಿ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಅಷ್ಟಕ್ಕೂ ಮಾ.23 ರಂದು ಬಂಟಕಲ್ಲಿನಿಂದ ಬಿ ಸಿ ರೋಡ್-ಪಾಂಬೂರು ಮಾರ್ಗವಾಗಿ ತೆರಳುತ್ತಿದ್ದ ಬೈಕ್‌ಗೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಪಾಂಬೂರು ಬಳಿ ಡಿ*ಕ್ಕಿ ಹೊಡೆದು ಬೈಕ್ ಸವಾರ ರಮೇಶ್ ಮೂಲ್ಯ ತೀವ್ರ ಗಾಯಗೊಂಡು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಾ. 24ರಂದು ರಾತ್ರಿ ಅವರು ಮೃ*ತಪಟ್ಟಿದ್ದರು.

ಇದನ್ನೂ ಓದಿ: ಆಟವಾಡುತ್ತಿದ್ದಾಗ ಟ್ರ್ಯಾಕ್ಟರ್‌ ಹರಿದು 5 ವರ್ಷದ ಮಗು ಸಾವು

ಪುತ್ರನ ಸಾವಿನ ಸುದ್ದಿ ಕೇಳಿ ಆಘಾತಗೊಂಡ ತಾಯಿ
ಬೈಕ್ ಅಪ*ಘಾತದಲ್ಲಿ ಮೃ*ತಪಟ್ಟ ರಮೇಶ್ ಅವರ ಮೃತ ದೇಹವನ್ನು ಅಂತಿಮ ಸಂಸ್ಕಾರಕ್ಕಾಗಿ ಮಂಗಳವಾರ ಶಿರ್ವ ಕೊಲ್ಲಬೆಟ್ಟುವಿನ ಮನೆಗೆ ತರಲಾಗಿತ್ತು. ಪುತ್ರನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಘಾತಗೊಂಡ ತಾಯಿ ಇಂದಿರಾ ಮೂಲ್ಯ (74) ತೀವ್ರ ಅಸ್ವಸ್ಥರಾಗಿ ಕೋಮಾಕ್ಕೆ ತೆರಳಿದ್ದು, ಮಂಗಳವಾರ ಉಡುಪಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಇಂದಿರಾ ಮೂಲ್ಯ ಅವರು ಮೃ*ತಪಟ್ಟಿದ್ದಾರೆ. ದಿನದ ಅಂತರದಲ್ಲಿ ತಾಯಿ-ಮಗ ಇಬ್ಬರೂ ಮೃ*ತಪಟ್ಟಿದ್ದು, ಮೃ*ತರ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

Continue Reading

LATEST NEWS

ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ ಹೊಸ ಟೋಲ್ ರೇಟ್ ..! ಎಷ್ಟು ಹೆಚ್ಚಾಗಲಿದೆ ಗೊತ್ತಾ ?

Published

on

ಮಂಗಳೂರು/ನವದೆಹಲಿ : ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ  ಸರ್ಕಾರ ಮತ್ತೊಂದು ಶಾ*ಕ್ ಕೊಟ್ಟಿದೆ. ಟೋಲ್ ದರದಲ್ಲಿ ಏರಿಕೆ ಮಾಡುವ ಬಗ್ಗೆ ಪರಿಷ್ಕರಣೆ ನಡೆಸಲಾಗಿದೆ. ಏಪ್ರಿಲ್ 1 ರಿಂದ ಈ ಹೊಸ ದರ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ.

ಬೆಲೆ ಏರಿಕೆ, ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಮಾಡುವ ದರ ಪರಿಷ್ಕರಣೆ ಪ್ರಕ್ರಿಯೆ ಇದಾಗಿದ್ದು, ಕನಿಷ್ಠ ಶೇ.3 ರಿಂದ ಗರಿಷ್ಠ 5 ರಷ್ಟು ಏರಿಕೆಯಾಗಲಿವೆ.

ಎಲ್ಲೆಲ್ಲಿ ಹೆಚ್ಚಳ ?

ಕರ್ನಾಟಕದಲ್ಲಿ ಒಟ್ಟು 66 ಟೋಲ್ ಪ್ಲಾಜಾಗಳಿವೆ. ಬೆಂಗಳೂರು – ಮೈಸೂರು ಮಾರ್ಗದ ಕನಮಿಣಿಕೆ ಮತ್ತು ಶೇಷಗಿರಿಹಳ್ಳಿ, ಬೆಂಗಳೂರು – ತಿರುಪತಿ ಮಾರ್ಗದ ನಂಗ್ಲಿ, ಬೆಂಗಳೂರು-ಹೈದರಾಬಾದ್ ಮಾರ್ಗದ ಬಾಗೇಪಲ್ಲಿ, ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯ ಸಾದಹಳ್ಳಿ, ಮತ್ತು ಹುಲಿಕುಂಟೆ ಹಾಗೂ ನಲ್ಲೂರು ದೇವನಹಳ್ಳಿ (ಸ್ಯಾಟಲೈಟ್ ಟೌನ್ ರಿಂಗ್ ರೋಡ್) ಟೋಲ್ ಪ್ಲಾಜಾಗಳಲ್ಲಿ ದರಗಳು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ : ಅಮೆರಿಕದ ಮಿಲಿಟರಿಯಲ್ಲೇ ಭಾರಿ ದೊಡ್ಡ ಭದ್ರತಾ ಲೋಪ!

ದೇಶದಾದ್ಯಂತ ಒಟ್ಟು 323 ರಾಜ್ಯ ಹೆದ್ದಾರಿ ಟೋಲ್ ಫ್ಲಾಜಾ ಸೇರಿದಂತೆ, ದೇಶದಲ್ಲಿ ಒಟ್ಟು 1,181 ಟೋಲ್ ಗಳಿವೆ. 2023-24 ರಲ್ಲಿ 42,196 ಕೋಟಿ ರೂ, 2024-25 ರಲ್ಲಿ 64,809 ಕೋಟಿ ರೂ. ಟೋಲ್‌ ಸಂಗ್ರಹವಾಗಿದೆ. 2019-20 ರಲ್ಲಿ ಟೋಲ್ ಶುಲ್ಕ ಸಂಗ್ರಹವು 27,503 ಕೋಟಿ ರೂ.ಗಳಷ್ಟಿತ್ತು. ಈ ವರ್ಷ 1 ಲಕ್ಷ ಕೋಟಿಗೆ ಏರಿಕೆ ಮಾಡುವ ಗುರಿ ಹೊಂದಲಾಗಿದೆ.  ಕರ್ನಾಟಕದಲ್ಲಿ 66 ಟೋಲ್ ಫ್ಲಾಜಾಗಳಿದ್ದು, ಕಳೆದ 5 ವರ್ಷಗಳಲ್ಲಿ ಈ ಟೋಲ್‌ಗಳಿಂದ 13,702 ಕೋಟಿ ಸಂಗ್ರಹವಾಗಿದೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page