Connect with us

LATEST NEWS

ಉತ್ತರಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ವಿಧಿವಶ…

Published

on

ಹೊಸದಿಲ್ಲಿ: ಸಮಾಜವಾದಿ ಸಿದ್ಧಾಂತಗಳ ಹರಿಕಾರ ಎನಿಸಿಕೊಂಡಿದ್ದ ವರಿಷ್ಠ ರಾಜಕಾರಣಿ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾದರು.


ಮುಲಾಯಂ ಸಿಂಗ್ ಯಾದವ್ (82) ಅವರು ಉಸಿರಾಟದ ಸಮಸ್ಯೆ ಹಾಗೂ ರಕ್ತದೊತ್ತಡದಿಂದಾಗಿ ಆಗಸ್ಟ್ 22ರಂದು ಆಸ್ಪತ್ರೆಗೆ ದಾಖಲಾಗಿದ್ದರು.

ಅಕ್ಟೋಬರ್ 1ರಂದು ಐಸಿಯುಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ವೈದ್ಯರ ತಂಡ ಯಾದವ್ ಅವರ ಮೇಲೆ ನಿಗಾ ಇಟ್ಟಿತ್ತಾದರೂ ಅವರ ಆರೋಗ್ಯ ದಿನೇ ದಿನೇ ಕ್ಷೀಣಿಸುತ್ತಿತ್ತು. ಕ್ರಮೇಣ ದೇಹ ಚಿಕಿತ್ಸೆಗೂ ಕೂಡಾ ಸ್ಪಂದಿಸುತ್ತಿರಲಿಲ್ಲ.

ಪರಿಣಾಮ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಇವರು ಮೂರು ಬಾರಿ 1989, 1993 ಹಾಗೂ 2003ರಲ್ಲಿ ಉತ್ತರಪ್ರದೇಶ ಸಿಎಂ ಆಗಿದ್ದರು.

DAKSHINA KANNADA

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ : ಡಿಸ್ಕಸ್ ಥ್ರೋನಲ್ಲಿ ಮಂಗಳೂರಿನ ಕೃತಿ ಎನ್.ಪಿ ಪ್ರಥಮ

Published

on

ಮಂಗಳೂರು/ಬೆಂಗಳೂರು : ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ 17 ವರ್ಷದ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ 2025-2026 ನಡೆಯಿತು.

ಡಿಸ್ಕಸ್ ಥ್ರೋ ವಿಭಾಗದಲ್ಲಿ ಬಾಲವಿಕಾಸ ಇಂಗ್ಲೀಷ್ ಮೀಡಿಯಂ ಮಾಣಿಯ ವಿದ್ಯಾರ್ಥಿನಿ  ಕೃತಿ. ಎನ್.ಪಿ ಪ್ರಥಮ ಸ್ಥಾನ ಪಡೆದಿದ್ದು,  ರಾಷ್ಟ್ರಮಟ್ಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾಳೆ.

ಇದನ್ನೂ ಓದಿ : ಹಾಲಿನ ಟ್ಯಾಂಕರ್‌ಗೆ ಡಿ*ಕ್ಕಿಯಾಗಿ ಸುಟ್ಟು ಕರಕಲಾದ ಕಾರು

ಕೃತಿ ಗೋಳ್ತಮಜಲು ಗ್ರಾಮದ ನಿವಾಸಿ ದಿನೇಶ್.ಬಿ ಮತ್ತು ತೇಜಾಕ್ಷಿ ದಂಪತಿ ಪುತ್ರಿ.

Continue Reading

LATEST NEWS

ಹಾಲಿನ ಟ್ಯಾಂಕರ್‌ಗೆ ಡಿ*ಕ್ಕಿಯಾಗಿ ಸುಟ್ಟು ಕರಕಲಾದ ಕಾರು

Published

on

ಮಂಗಳೂರು/ರಾಮನಗರ : ಹಾಲಿನ ಟ್ಯಾಂಕರ್‌ ಗೆ ಹಿಂಬದಿಯಿಂದ ಡಿ*ಕ್ಕಿಯಾಗಿ ಕಾರೊಂದು ಹೊ*ತ್ತಿ ಉರಿದ ಘಟನೆ ರಾಮನಗರದ ಸಂಗಬಸವನದೊಡ್ಡಿ ಗ್ರಾಮದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಡಸ್ಟರ್ ಕಾರು ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ವೇಗವಾಗಿ ಹೋಗುತ್ತಿದ್ದ ಚಾಲಕ ಸಂಗಬಸವನದೊಡ್ಡಿ ಬಳಿ ನಿಯಂತ್ರಣ ಕಳೆದುಕೊಂಡು ಮುಂದಿನಿಂದ ಹೋಗುತ್ತಿದ್ದ ಹಾಲಿನ ಟ್ಯಾಂಕರ್‌ ಗೆ ಗು*ದ್ದಿದ್ದಾನೆ. ಕೂಡಲೇ ಕಾರಿನಲ್ಲಿ ದಟ್ಟ ಹೊಗೆ ಕಾಣಿಸಿಕೊಳ್ಳತೊಡಗಿದೆ. ಅಪಾಯ ಅರಿತ ಕಾರಿನಲ್ಲಿದ್ದವರು ತಕ್ಷಣ ಕೆಳಕ್ಕಿಳಿದು ದೂರಕ್ಕೆ ಓಡಿದ್ದಾರೆ.  ಅದಾದ ಕೆಲವೇ ಕ್ಷಣದಲ್ಲಿ ಕಾರಿನಲ್ಲಿ ಬೆಂ*ಕಿ ಕಾಣಿಸಿಕೊಂಡು ಹೊ*ತ್ತಿ ಉ*ರಿದಿದೆ.

ಇದನ್ನೂ ಓದಿ : ಇಂದೆಂಥ ದುರವಸ್ಥೆ! 108 ಆ್ಯಂಬುಲೆನ್ಸ್ ಸಿಗದೆ ಪರದಾಟ; ಗೂಡ್ಸ್ ಟೆಂಪೋ ಮೂಲಕ ರೋಗಿ ಆಸ್ಪತ್ರೆಗೆ!

ಸ್ಥಳಕ್ಕೆ ಬಂದ ಅ*ಗ್ನಿಶಾಮಕ ದಳದ ಸಿಬ್ಬಂದಿ ಬೆಂ*ಕಿ ನಂದಿಸಿದ್ದಾರೆ. ಕಾರು ಸು*ಟ್ಟು ಕರಕಲಾಗಿದ್ದು, ಟ್ಯಾಂಕರ್‌ ನ ಹಿಂಭಾಗ ಜಖಂಗೊಂಡಿದೆ.  ಘಟನೆ ಬಗ್ಗೆ ರಾಮನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

ಇಂದೆಂಥ ದುರವಸ್ಥೆ! 108 ಆ್ಯಂಬುಲೆನ್ಸ್ ಸಿಗದೆ ಪರದಾಟ; ಗೂಡ್ಸ್ ಟೆಂಪೋ ಮೂಲಕ ರೋಗಿ ಆಸ್ಪತ್ರೆಗೆ!

Published

on

ಉಡುಪಿ : ತೀವ್ರ ಅಸ್ವಸ್ಥಗೊಂಡಿದ್ದ ವೃದ್ಧ ರೋಗಿಯೊಬ್ಬರಿಗೆ  ಸಕಾಲಕ್ಕೆ ಆ್ಯಂಬುಲೆನ್ಸ್ ಸಿಗದೆ ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿ ತನ್ನ ಗೂಡ್ಸ್ ಟೆಂಪೋದಲ್ಲಿ ಸಾಗಿಸಿ ಆಸ್ಪತ್ರೆಗೆ ದಾಖಲಿಸಿದ ಆಘಾತಕಾರಿ ಘಟನೆ ಉಡುಪಿಯ ಉದ್ಯಾವರದಲ್ಲಿ ನಡೆದಿದೆ.

ರೋಗಿಗೆ ಸಂಬಂಧಪಟ್ಟವರು ರಾತ್ರಿ 7 ಗಂಟೆಗೆ 108 ಆ್ಯಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ. ಆದರೆ, 9.30 ಆದರೂ ಆ್ಯಂಬುಲೆನ್ಸ್ ಲಭ್ಯವಾಗಿಲ್ಲ. ಹೀಗಾಗಿ ಅವರು ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿಯವರನ್ನು ಸಂಪರ್ಕಿಸಿದ್ದಾರೆ. ರೋಗಿಯ ಚಿಂತಾಜನಕ ಸ್ಥಿತಿ ಕಂಡ ವಿಶು ಶೆಟ್ಟಿ ಬೇರೆ ದಾರಿ ಕಾಣದೆ ತನ್ನ ಗೂಡ್ಸ್ ಟೆಂಪೋದಲ್ಲಿ ಮಂಚ ಇರಿಸಿ ಅದರಲ್ಲಿ ರೋಗಿಯನ್ನು ಮಲಗಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸುವಲ್ಲಿ ನೆರವಾಗಿದ್ದಾರೆ.

ಇದನ್ನೂ ಓದಿ : ಸುರತ್ಕಲ್‌: ದೇವರಿಗೆ ಕೈಮುಗಿವ ನೆಪದಲ್ಲಿ ಭಕ್ತರೊಬ್ಬರ ಬ್ಯಾಗಿಗೆ ಕನ್ನ ಹಾಕಿದ ಕಳ್ಳ

ಕಳೆದ ಒಂದು ವರ್ಷದಿಂದ 108 ಆ್ಯಂಬುಲೆನ್ಸ್  ಸಮಸ್ಯೆ ತಲೆದೋರುತ್ತಿದ್ದು, ಇನ್ನೂ ಪರಿಹಾರ ಕಂಡಿಲ್ಲ. ಇನ್ನಾದರೂ ಸರ್ಕಾರ, ಜಿಲ್ಲಾಡಳಿತ ಕ್ರಮ ಕೈಗೊಂಡು ಸಹಕರಿಸಿ.  ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡಬೇಡಿ ಎಂದು  ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಮನವಿ ಮಾಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page