Connect with us

LATEST NEWS

ಐಪಿಎಲ್ ಪಂದ್ಯಾಟದಲ್ಲಿ ಸೆಂಚುರಿ ಬಾರಿಸಿ ಮೆರೆದ ವೈಭವ್ ..! ಯಾರು ಈ 14ರ ಪೋರ ..?

Published

on

IPL 2025 : ನಿನ್ನೆ (ಏ.28) ನಡೆದ ಐಪಿಎಲ್ ಪಂದ್ಯಾಟದಲ್ಲಿ 14 ವರ್ಷದ ವೈಭವ್ ಸೂರ್ಯವಂಶಿ ಸೆಂಚ್ಯುರಿ ಬಾರಿಸಿ ಇತಿಹಾಸ ಸೃಷ್ಠಿಸಿದ್ದಾನೆ. ಆ ಮೂಲಕ ‘ಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರ’ ಎಂಬ ಬಿರುದು ಪಡೆದುಕೊಂಡಿದ್ದಾನೆ. ರಾಜಸ್ಥಾನ ರಾಯಲ್ಸ್ ಪರ ಆಡುತ್ತಿದ್ದ ಈ ಹುಡುಗ ನಿನ್ನೆ ಗುಜರಾತ್ ಟೈಟಾನ್ಸ್ ವಿರುದ್ಧ ಭಾರೀ ಸಾಧನೆ ಮಾಡಿ ಈಗ ಸುದ್ಧಿಯಲ್ಲಿದ್ದಾನೆ. ಈ 14ರ ಪೋರನ ಸಾಧನೆಯ ಹಿಂದಿನ ರಹಸ್ಯವೇನು ? ಯಾರು ಈ ವೈಭವ್ ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಮಗನಿಗಾಗಿ ಜಮೀನು ಮಾರಾಟ :

ವೈಭವ್ ಇವತ್ತು ದೇಶದ ಮನೆ ಮಾತಾಗಿದ್ದಾನೆ. ವೈಭವ್‌ನ ಸಾಧನೆಯ ಹಿಂದೆ ಹೆತ್ತವರ ಪರಿಶ್ರಮ, ತ್ಯಾಗ, ಕನಸು ಅಡಗಿದೆ ಎಂದರೆ ತಪ್ಪಾಗಲಾರದು. ವೈಭವ್ ಸೂರ್ಯವಂಶಿ ಅದೃಷ್ಟದಿಂದ ಮೇಲೆ ಬಂದ ಹುಡುಗನಲ್ಲ. ಬದಲಾಗಿ ಈ ಹಂತಕ್ಕೇರಲು ರಕ್ತದಂತೆ ಬೆವರನ್ನು ಬಸಿದಿದ್ದಾನೆ. ವೈಭವ್‌ನ ತಂದೆ-ತಾಯಿ ಮಗನನ್ನು ವೃತ್ತಿಪರ ಕ್ರಿಕೆಟಿಗನನ್ನಾಗಿ ಮಾಡಲು ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ. ಬಿಹಾರದ ಸಮಸ್ತಿಪುರ ಎನ್ನುವ ಪುಟ್ಟ ಹಳ್ಳಿಯ ನಿವಾಸಿಯಾಗಿದ್ದ ವೈಭವ್‌ನಲ್ಲಿನ ಕ್ರಿಕೆಟ್ ಟ್ಯಾಲೆಂಟ್ ಗಮನಿಸಿದ ತಂದೆ – ತಾಯಿ ಮಗನನ್ನು ಕ್ರಿಕೆಟರ್ ಮಾಡಲು ತೀರ್ಮಾನಿಸಿಬಿಟ್ಟರು. ಸಾಮಾನ್ಯ ಕುಟುಂಬದ ಹಿನ್ನಲೆ ಹೊಂದಿರುವ ವೈಭವ್‌ಗಾಗಿ ಎಲ್ಲಾ ಸಮಯ, ಶ್ರಮ ಹಾಗೂ ಸಂಪತ್ತನ್ನು ಅವರ ಪೋಷಕರು ಮೀಸಲಿಡಲು ತೀರ್ಮಾನಿಸಿದರು. ಇದಕ್ಕಾಗಿ ತಮ್ಮ ಬಳಿಯಿದ್ದ ಜಮೀನನ್ನು ಮಾರಾಟ ಮಾಡಿ ಹಣ ಹೊಂದಿಸಿ ಉತ್ತಮ ತರಭೇತಿ ನೀಡಿದ್ದರು.

ಶ್ರಮಕ್ಕೆ ಸಂದ ಫಲ :

ವೈಭವ್ ತಮ್ಮ 10ನೇ ವಯಸ್ಸಿನಲ್ಲೇ ಸಮಸ್ತಿಪುರದಿಂದ 100 ಕಿಲೋಮೀಟರ್ ದೂರದಲ್ಲಿದ್ದ ಪಾಟ್ನಾಗೆ ಜರ್ನಿ ಮಾಡುತ್ತಿದ್ದ. ಪಾಟ್ನಾದಲ್ಲಿ 16-17 ವರ್ಷದ ಹುಡುಗರ ಎದುರು ಪ್ರತಿದಿನ ವೈಭವ್ ಸೂರ್ಯವಂಶಿ 600 ಬಾಲ್‌ಗಳನ್ನು ಎದುರಿಸುತ್ತಿದ್ದ. ಅವರ ತಂದೆ ಸಂಜೀವ್ ಸೂರ್ಯವಂಶಿ, ತಮ್ಮ ಮಗನ ಜತೆಗೆ ಬೌಲಿಂಗ್ ಮಾಡುವ ಆ ಹತ್ತ ಹುಡುಗರಿಗೂ ಟಿಫನ್ ಬಾಕ್ಸ್ ತರುತ್ತಿದ್ದರು. ಆ ಎಲ್ಲಾ ಶ್ರಮಕ್ಕೆ ವೈಭವ್ ಇದೀಗ ನ್ಯಾಯ ಒದಗಿಸಿದ್ದಾನೆ. ವೈಭವ್ ಸೂರ್ಯವಂಶಿ ಕಳೆದ ವರ್ಷ ತಮ್ಮ 12 ವರ್ಷ 284 ದಿನಗಳಿದ್ದಾಗ ಬಿಹಾರ ಪರ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ. ಇದಷ್ಟೇ ಅಲ್ಲದೇ ಕಳೆದ ವರ್ಷ ಚೆನ್ನೈನಲ್ಲಿ ನಡೆದ ಅಂಡರ್ 19 ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ಕೇವಲ 58 ಎಸೆತಗಳಲ್ಲಿ ಶತಕ ಸಿಡಿಸಿ ಗಮನ ಸೆಳೆದಿದ್ದ. ಸದ್ಯ ವೈಭವ್ ಸೂರ್ಯವಂಶಿ 18ನೇ ಆವೃತ್ತಿಯ ಐಪಿಎಲ್‌ನಲ್ಲಿ ಮೂರು ಪಂದ್ಯಗಳನ್ನಾಡಿ 222.05ರ ಸ್ಟ್ರೈಕ್‌ರೇಟ್‌ನಲ್ಲಿ ಒಂದು ಶತಕ ಸಹಿತ 151 ರನ್ ಬಾರಿಸಿದ್ದಾನೆ.

ಸಾಧನೆಯ ಶಿಖರದ ತುತ್ತ ತುದಿಯಲ್ಲಿ ವೈಭವ :

ಸಾಧನೆಯ ಶಿಖರದ ತುತ್ತ ತುದಿಯಲ್ಲಿರುವ 14 ವರ್ಷದ ಪೋರ ವೈಭವ್ ನಿನ್ನೆ ನಡೆದ ಪಂದ್ಯದಲ್ಲಿ ಕೇವಲ 35 ಎಸೆತಗಳನ್ನು ಎದುರಿಸಿ ಮೂರಂಕಿ ಮೊತ್ತ ದಾಖಲಿಸುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ. ಕಳೆದ ವರ್ಷದ ಕೊನೆಯಲ್ಲಿ ಸೌದಿ ಅರೆಬಿಯಾದ ಜೆದ್ದಾದಲ್ಲಿ ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು ಈ ಹಾಲುಗಲ್ಲದ ಹುಡುಗನಿಗೆ ಬರೋಬ್ಬರಿ 1.1 ಕೋಟಿ ನೀಡಿ ಖರೀದಿಸಿತ್ತು. ಇಷ್ಟು ಸಣ್ಣ ಹುಡುಗನನ್ನು ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿ ಕೇವಲ ವಾಟರ್ ಬಾಯ್ ಮಾಡಿಕೊಳ್ಳಲಿದೆ ಎಂದು ಹಲವರು ಕೊಂಕು ನುಡಿದಿದ್ದರು. ಆದರೆ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿ ಈ ಹುಡುಗನ ಮೇಲೆ ವಿಶ್ವಾಸವಿಟ್ಟು ಲಖನೌ ಸೂಪರ್ ಜೈಂಟ್ಸ್ ಎದುರು ಕಣಕ್ಕಿಳಿಸಿತು. ತಾನಾಡಿದ ಮೊದಲ ಪಂದ್ಯದ ಮೊದಲ ಎಸೆತದಲ್ಲೇ ಸಿಕ್ಸರ್ ಚಚ್ಚುವ ಮೂಲಕ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ನಾನು ಘರ್ಜಿಸಲು ರೆಡಿ ಎನ್ನುವ ಸುಳಿವು ಬಿಟ್ಟುಕೊಟ್ಟಿದ್ದ. ಆದರೆ ಇದೀಗ ತಾನಾಡಿದ ಮೂರನೇ ಐಪಿಎಲ್‌ ಪಂದ್ಯದಲ್ಲೇ ಶತಕ ಸಿಡಿಸಿ ಎಲ್ಲಾ ಟೀಕಾಕಾರರ ಬಾಯಿ ಮುಚ್ಚಿಸಿದ್ದಾನೆ.

LATEST NEWS

WATCH : ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಹೃದಯಾ*ಘಾತ; ಯುವಕ ಸಾ*ವು

Published

on

ಮಂಗಳೂರು/ವಿಜಯಪುರ : ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ವಿಜಯಪುರದಲ್ಲಿ ಯುವಕನೋರ್ವ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ.  ಡ್ಯಾನ್ಸ್ ಮಾಡುವಾಗಲೇ ಯುವಕನೊಬ್ಬ ಹೃದಯಾ*ಘಾತದಿಂದ ಸಾ*ವನ್ನಪ್ಪಿದ್ದಾನೆ. ವಿಜಯಪುರ ನಗರದ ಚಪ್ಪರಬಂದ ಕಾಲೋನಿಯಲ್ಲಿ ಈ ದು*ರಂತ ಸಂಭವಿಸಿದೆ.

28 ವರ್ಷದ ಮಹಮ್ಮದ್ ಪೈಗಂಬರ್ ಗಂಗನಹಳ್ಳಿ ಮೃ*ತ ಯುವಕ. ಮಹಮ್ಮದ್ ಪೈಗಂಬರ್ ಆಲ್ಯೂಮೀನಿಯಂ ಕಿಟಕಿ, ಬಾಗಿಲು ಕೆಲಸ ಮಾಡುತ್ತಿದ್ದ. ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ  ಹೃ*ದಯಾಘಾತಕ್ಕೊಳಗಾಗಿ ಕು*ಸಿದು ಬಿದ್ದಿದ್ದಾನೆ.

ಇದನ್ನೂ ಓದಿ : ಕೋವಿಡ್‌ ಕುರಿತು ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ

ಕೂಡಲೇ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟುಹೊತ್ತಿಗಾಗಲೇ ಆತ ಮೃತಪಟ್ಟಿದ್ದಾನೆ. ಯುವಕನ ಕೊನೆಯ ಕ್ಷಣದ ವೀಡಿಯೋ ಮೊಬೈಲ್‌ ನಲ್ಲಿ ಸೆರೆಯಾಗಿದ್ದು, ವೈರಲ್ ಆಗುತ್ತಿದೆ.

 

Continue Reading

LATEST NEWS

ಕೋವಿಡ್‌ ಕುರಿತು ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ

Published

on

ಮಂಗಳೂರು/ಬೆಳಗಾವಿ: ಮಹಾಮಾರಿ ಕೋವಿಡ್ ಕುರಿತು ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮಿಜಿಯವರು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ಕೊವಿಡ್ ಕುರಿತು ಸ್ವಾಮೀಜಿ ಅವರು, ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರಿ. ಉಸಿರಾಟಕ್ಕೆ ತೊಂದರೆಯಾಗಿ ಸಾ*ವು ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ಅವರು, ‘ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿರೋದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ. ಲೋಕಕ್ಕೆ ವಾಯು, ಜಲದಿಂದ ಐದು ವರ್ಷ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪಲಿದೆ. ಮೇಘಸ್ಪೋಟ ಆಗುವ ಸಾಧ್ಯತೆಗಳಿವೆ. ಭೂಕಂಪ ಸಂಭವಿಸಲಿದೆ. ಮತೀಯ ಗಲಭೆಗಳು ಹೆಚ್ಚಾಗಲಿವೆ’ ಎಂದರು.

ಇದನ್ನೂ ಓದಿ: ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮಿಲ್ಕಿ ಬ್ಯೂಟಿ ರಾಯಭಾರಿ; ಮೋಹಕ ತಾರೆ ಬೇಸರ

‘ಯುದ್ಧದ ಭೀತಿ ಮತ್ತೆ ಪ್ರಾರಂಭ ಆಗಲಿದೆ. ಜನರಲ್ಲಿ ಅಶಾಂತಿ ಇದೆ. ಕೆಲವು ದೇಶಗಳು ಅಳಿದು ಹೋಗಲಿವೆ. ಹೊಸ ಹೊಸ ದೇಶಗಳು ಉತ್ಪತ್ತಿಯಾಗುತ್ತವೆ. ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ. ಸಂಕ್ರಾಂತಿಯವರೆಗೂ ರಾಜ್ಯ ಸರ್ಕಾರಕ್ಕೆ ಅಪಾಯವಿಲ್ಲ. ಸಂಕ್ರಾಂತಿಯ ನಂತರ ಎನಾಗುತ್ತೆ ನೋಡಬೇಕು’ ಎಂದು ಸ್ವಾಮೀಜಿ ಹೇಳಿದ್ದಾರೆ.

Continue Reading

FILM

ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮಿಲ್ಕಿ ಬ್ಯೂಟಿ ರಾಯಭಾರಿ; ಮೋಹಕ ತಾರೆ ಬೇಸರ

Published

on

ಮಂಗಳೂರು/ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್‌ಗೆ ತೆಲುಗು ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಿರುವುದರಿಂದ ಎದ್ದಿರುವ ವಿವಾದದ ಬೆನ್ನಲ್ಲೇ, ಮೋಹಕ ತಾರೆ ರಮ್ಯಾ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿ ಹಂಚಿಕೊಳ್ಳುವ ಮೂಲಕ ಬೇಸರ ಹಂಚಿಕೊಂಡಿದ್ದಾರೆ.

ಕರ್ನಾಟಕ ಡಿಟರ್ಜೆಂಟ್ಸ್ ಕಂಪನಿಯು ತನ್ನ ಉತ್ಪನ್ನಗಳತ್ತ ಗ್ರಾಹಕರನ್ನು ಸೆಳೆಯುವ ನಿಟ್ಟಿನಲ್ಲಿ ತೆಲುಗು ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಲಾಗಿತ್ತು. ಅದಕ್ಕಾಗಿ ಅವರಿಗೆ ಎರಡು ವರ್ಷಗಳಿಗೆ 6.2 ಕೋಟಿ ರೂ. ಸಂಭಾವನೆಯನ್ನು ಗೊತ್ತುಪಡಿಸಿದೆ. ತಮನ್ನಾ, ಸಂಸ್ಥೆಯ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ನಟಿ ರಮ್ಯಾ ಕೂಡ ಪೋಸ್ಟ್‌ ಮಾಡಿದ್ದು, ಸಂಚಲನ ಮೂಡಿಸಿದೆ.

ಇದನ್ನೂ ಓದಿ: ಮೈಸೂರು ಸ್ಯಾಂಡಲ್‌ ಸೋಪ್ ರಾಯಭಾರಿಯಾಗಿ ಬಾಲಿವುಡ್ ನಟಿ! ಸಂಭಾವನೆ ಎಷ್ಟು?

‘ರಾಯಭಾರಿಗಳನ್ನು ನೇಮಿಸುವುದು ಹಳೆಯ ಸಂಪ್ರದಾಯ. ಇದರಿಂದ ತೆರಿಗೆ ಪಾವತಿದಾರರ ಹಣ ವ್ಯರ್ಥಮಾಡಿದಂತಾಗುತ್ತದೆ. ಒಂದು ಉತ್ಪನ್ನಕ್ಕೆ ಜನ ಗ್ರಾಹಕರಾಗಲು, ಆ ಉತ್ಪನ್ನ ಉತ್ತಮವಾಗಿರಬೇಕು. ನಮ್ಮ ಮೈಸೂರು ಸ್ಯಾಂಡಲ್‌ ಸೋಪ್ ಉತ್ತಮ ಉತ್ಪನ್ನವಷ್ಟೇ ಅಲ್ಲ, ಅದು‌ ನಮ್ಮ ಪರಂಪರೆಯಾಗಿದೆ. ಮೈಸೂರು ಸ್ಯಾಂಡಲ್ ಸೋಪ್ ಬಳಸಿದ ಪ್ರತಿಯೊಬ್ಬ ವ್ಯಕ್ತಿಯು ಅದರ ರಾಯಭಾರಿ. ಪ್ರತಿಯೊಬ್ಬ ಕನ್ನಡಿಗ ಸಹ ಅದರ ರಾಯಭಾರಿ, ಅದನ್ನು ಪ್ರತಿಯೊಬ್ಬ ಕನ್ನಡಿಗನು ಉಚಿತವಾಗಿ ಜಗತ್ತಿಗೆ ಪರಿಚಯ ಮಾಡಿಕೊಡುವ ಕೆಲಸ ಮಾಡುತ್ತಾನೆ’ ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

‘ಜಗತ್ತಿನ ಯಶಸ್ವಿ ಬ್ರಾಂಡ್‌ಗಳಲ್ಲಿ ಒಂದಾದ ಆ್ಯಪಲ್ ಸಂಸ್ಥೆ ಬ್ರಾಂಡ್ ಅಂಬಾಸಿಡರ್ ಹೊಂದಿಲ್ಲ. ರಾಯಭಾರಿಗಾಗಿ ಆ ಕಂಪನಿ ಹಣ ವ್ಯಯಿಸುವುದಿಲ್ಲ. ಹಾಗೆಯೇ, ಡವ್‍ ಸೋಪ್‍ ಪ್ರಚಾರ ಬಹಳ ಚೆನ್ನಾಗಿರುತ್ತದೆ’ ಎಂದು ಹೇಳಿಕೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page