Connect with us

LATEST NEWS

ಪ್ರೇಮಿಗಳ ವಾರದ ವಿಶೇಷತೆ ; ಪ್ರೇಮಿಗಳಿಗೂ, ಟೆಡ್ಡಿಗೂ ಇರುವ ಸಂಬಂಧವೇನು ?

Published

on

ಈಗಾಗಲೇ ಫೆ.7 ರಿಂದ ಫೆ.14ರವರೆಗಿನ ‘ವ್ಯಾಲೆಂಟೈನ್ಸ್ ವೀಕ್’ ಆರಂಭವಾಗಿದೆ, ಪ್ರೇಮಿಗಳ ವಾರದ ನಾಲ್ಕನೇ ದಿನವಾದ ಇಂದು (ಫೆಬ್ರವರಿ 10) ಟೆಡ್ಡಿ ಡೇ ಆಚರಿಸಲಾಗುತ್ತದೆ. ಈ ದಿನದಂದು ಜನರು ತಮ್ಮ ಸಂಗಾತಿ, ಸ್ನೇಹಿತ ಅಥವಾ ವಿಶೇಷ ವ್ಯಕ್ತಿಗೆ ಟೆಡ್ಡಿ ಬೇರ್ ಅನ್ನು ಉಡುಗೊರೆಯಾಗಿ ನೀಡುವ ಮೂಲಕ ತಮ್ಮ ಪ್ರೀತಿ ಮತ್ತು ವಾತ್ಸಲ್ಯವನ್ನು ವ್ಯಕ್ತಪಡಿಸುತ್ತಾರೆ. ಆದರೆ ಫೆಬ್ರವರಿ 10 ರಂದು ಮಾತ್ರ ಟೆಡ್ಡಿ ದಿನವನ್ನು ಏಕೆ ಆಚರಿಸಲಾಗುತ್ತದೆ ಅದರ ಇತಿಹಾಸ ಮತ್ತು ಮಹತ್ವ ಏನು ಎಂಬುದನ್ನು ತಿಳಿಯೋಣ.

ಪ್ರೀತಿ ಮತ್ತು ವಾತ್ಸಲ್ಯವನ್ನು ವ್ಯಕ್ತಪಡಿಸಲು ಟೆಡ್ಡಿ ಡೇ ಆಚರಿಸಲಾಗುತ್ತದೆ. ಟೆಡ್ಡಿ ಡೇಯಂದು ದಂಪತಿಗಳು, ಪ್ರೇಮಿಗಳು ಕ್ಯೂಟ್‌ ಟೆಡ್ಡಿ ಬೇರ್‌ಗಳನ್ನು ಉಡುಗೊರೆಯಾಗಿ ನೀಡುವ ಮೂಲಕ ತಮ್ಮ ಭಾವನೆಗಳನ್ನು ಪರಸ್ಪರ ವ್ಯಕ್ತಪಡಿಸುತ್ತಾರೆ. ಹೀಗೆ ಪ್ರೀತಿಯನ್ನು ವ್ಯಕ್ತಪಡಿಸಲು ಟೆಡ್ಡಿ ಡೇ ಆಚರಿಸಲಾಗುತ್ತದೆ.

ಟೆಡ್ಡಿ ಡೇ ವಿಶೇಷ :

ದಂಪತಿ ಮತ್ತು ಪ್ರೇಮಿಗಳು ಟೆಡ್ಡಿಯನ್ನು ಪ್ರೀತಿ ಮತ್ತು ಕಾಳಜಿಯ ಸಂಕೇತವೆಂದು ಪರಿಗಣಿಸುತ್ತಾರೆ.  ಏಕೆಂದರೆ ಟೆಡ್ಡಿಗಳು ಪ್ರೀತಿ, ವಾತ್ಸಲ್ಯ ಮತ್ತು ಬಾಲ್ಯದ ಮುಗ್ಧತೆಯನ್ನು ಪ್ರತಿನಿಧಿಸುವಂತ ಒಂದು ಮೃದು ಆಟಿಕೆ ಎಂದು ಹೇಳಬಹುದು. ಒತ್ತಡವನ್ನು ಕಡಿಮೆ ಮಾಡಲು, ಸಂತೋಷವನ್ನು ಹೆಚ್ಚಿಸಲು ಮತ್ತು ಸಂಬಂಧಗಳನ್ನು ಬಲಪಡಿಸುವ ಕೆಲಸವನ್ನು ಗೊಂಬೆಗಳು ಮಾಡುತ್ತದೆ. ಅದಕ್ಕಾಗಿಯೇ ವಿಶೇಷವಾಗಿ ಪ್ರೇಮಿಗಳು ಟೆಡ್ಡಿಗಳನ್ನು ಉಡುಗೊರೆಯಾಗಿ ನೀಡುವ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ.

ಟೆಡ್ಡಿ ಡೇ ಇತಿಹಾಸ:

ಅಮೆರಿಕದ ಅಧ್ಯಕ್ಷರಾಗಿದ್ದ ಥಿಯೋಡರ್ ರೂಸ್ವೆಲ್ಟ್ ನವೆಂಬರ್ 14, 1902 ರಂದು ಮಿಸ್ಸಿಸ್ಸಿಪ್ಪಿಯ ಕಾಡಿಗೆ ಬೇಟೆಯಾಡಲು ಹೋಗಿದ್ದರು. ಅವರೊಂದಿಗೆ ಸಹಾಯಕ ಹೋಲ್ಟ್ ಕೊಲಿಯರ್ ಕೂಡಾ ಇದ್ದ ವೇಳೆ ಕೊಲಿಯರ್ ಗಾಯಗೊಂಡ ಕರಡಿಯೊಂದನ್ನು ಹಿಡಿದು ಮರಕ್ಕೆ ಕಟ್ಟಿ, ನಂತರ ಅವರು ಕರಡಿಗೆ ಗುಂಡು ಹಾರಿಸಲು ರಾಷ್ಟ್ರಪತಿಗಳಿಂದ ಅನುಮತಿ ಕೋರಿದರು. ಆದರೆ ಗಾಯಗೊಂಡ ಕರಡಿಯನ್ನು ನೋಡಿದಾಗ ಅಧ್ಯಕ್ಷ ರೂಸ್ವೆಲ್ಟ್ ಅವರ ಹೃದಯ ಕರಗಿ, ಕರಡಿಯನ್ನು ಕೊಲ್ಲಲು ನಿರಾಕರಿಸಿದರು. ನಂತರ ನವೆಂಬರ್ 16 ರಂದು, ದಿ ವಾಷಿಂಗ್ಟನ್ ಪೋಸ್ಟ್‌ನ ವ್ಯಂಗ್ಯಚಿತ್ರಕಾರ ಕ್ಲಿಫರ್ಡ್ ಕೆ ಬೆರ್ರಿಮನ್ ಅವರು ನಡೆದ ಈ ಘಟನೆಯನ್ನು ಆಧರಿಸಿ ವ್ಯಂಗ್ಯಚಿತ್ರವನ್ನು ರಚಿಸಿದರು. ಆಟಿಕೆ ತಯಾರಿಕಾ ಉದ್ಯಮಿ ಮಾರಿಸ್ ಮಿಚ್ಟಮ್ ಪತ್ರಿಕೆಯಲ್ಲಿ ಅದನ್ನು ನೋಡಿ ಕರಡಿ ಮರಿಯ ಆಕಾರದ ಆಟಿಕೆ ಮಾಡುವ ಬಗ್ಗೆ ಯೋಚಿಸಿದರು. ಬಳಿಕ ತಮ್ಮ ಪತ್ನಿ ರೋಸ್ ಅವರೊಂದಿಗೆ ವಿನ್ಯಾಸಗೊಳಿಸಿದರು ಮತ್ತು ಆ ಆಟಿಕೆಗೆ ‘ಟೆಡ್ಡಿ ಬೇರ್‌ʼ ಎಂದು ಹೆಸರಿಟ್ಟರು. ಟೆಡ್ಡಿ ಎಂಬ ಹೆಸರು ಇಡಲು ಕಾರಣವೆಂದರೆ ಅಧ್ಯಕ್ಷ ರೂಸ್ವೆಲ್ಟ್ ಅವರ ಅಡ್ಡಹೆಸರು ಟೆಡ್ಡಿ, ಆ ಆಟಿಕೆಗೆ ಟೆಡ್ಡಿ ಎಂಬ ಹೆಸರಿಡುವ ಮೂಲಕ ಆಟಿಕೆಯನ್ನು ಅಧ್ಯಕ್ಷ ರೂಸ್ವೆಲ್ಟ್ ಅವರಿಗೆ ಸಮರ್ಪಿಸಿದರು. ನಂತರ ಅದು ಬಹಳ ಜನಪ್ರಿಯವಾಯಿತು. ಅದಲ್ಲದೆ ಟೆಡ್ಡಿ ಬೇರ್ ಪ್ರೀತಿಯ ಸಂಕೇತವಾಯಿತು ಮತ್ತು ಫೆಬ್ರವರಿ 10 ರಂದು ಟೆಡ್ಡಿ ಡೇ ಆಚರಿಸಲು ಪ್ರಾರಂಭಿಸಲಾಯಿತು.

LATEST NEWS

ಚೀನಾ: ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿ 20 ಜನ ಸಾವು

Published

on

ಚೀನಾ: ರೆಸ್ಟೋರೆಂಟ್‌ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಸುಮಾರು 20 ಮಂದಿ ಸಾವನ್ನಪ್ಪಿದ್ದು, 3 ಮಂದಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಚೀನಾದ ಉತ್ತರ ನಗರ ಲೀಯಾವೊಯಾಂಗ್‌ನ ಚುನಿಯಾಂಗ್ ರೆಸ್ಟೋರೆಂಟ್‌ನಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಬೈರನ್ ವಾನ್ ಎನ್ನುವ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ 43 ಸೆಕೆಂಡುಗಳ ವಿಡಿಯೋದಲ್ಲಿ ಅಗ್ನಿ ಜ್ವಾಲೆ ಮುಗಿಲೆತ್ತರಕ್ಕೆ ಚಿಮ್ಮುತ್ತಿರುವುದನ್ನು ಕಾಣಬಹುದು.

ಅಗ್ನಿ ವ್ಯಾಪಿಸುತ್ತಿದ್ದಂತೆ ಅಕ್ಕಪಕ್ಕದಲ್ಲಿದ್ದ ಜನರು ಕಾಲ್ಕಿತ್ತಿದ್ದಾರೆ. ಇನ್ನೂ ಕೆಲವರು ಘಟನೆಯನ್ನು ಮೊಬೈಲ್‌ನಲ್ಲಿ ಸೆರೆಹಿಡಿಯುವಲ್ಲಿ ನಿರತರಾಗಿದ್ದರು.

ಪ್ರಾಥಮಿಕ ಮೂಲಗಳ ಪ್ರಕಾರ ಮೊದಲು ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ರೆಸ್ಟೋರೆಂಟ್‌ಗೆ ವ್ಯಾಪಿಸಿದೆ. ಈ ಕುರಿತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ಬೆಂಕಿ ನಂದಿಸುವ ಪ್ರಯತ್ನ ನಡೆದಿದೆ.

Continue Reading

LATEST NEWS

ಅಮೆರಿಕದ ದೇಗುಲದಲ್ಲಿ ಪ್ರಧಾನಿ ಹೆಸರಿನಲ್ಲಿ ಪೂಜೆ ಸಲ್ಲಿಸಿದ ಅಣ್ಣಾಮಲೈ

Published

on

ಮಂಗಳೂರು : ಅಮೆರಿಕದ ದೇಗುಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ದೇಶದ ಸೈನಿಕರ ಹೆಸರಿನಲ್ಲಿ ಪೂಜೆ ಸಲ್ಲಿಸಲಾಗಿದೆ. ತಮಿಳುನಾಡು ಮಾಜಿ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ಈ ಪೂಜೆ ನೆರವೇರಿಸಿದ್ದು, ಪ್ರಧಾನಿ ಹಾಗೂ ಸೈನ್ಯಕ್ಕೆ ಶಕ್ತಿ ತುಂಬುವಂತೆ ಕೃಷ್ಣನಲ್ಲಿ ಪ್ರಾರ್ಥಿಸಿದ್ದಾರೆ.

ಅಮೆರಿಕದ ಫೀನಿಕ್ಸ್ ಮಹಾನಗರದಲ್ಲಿ ಇರುವ ಕೃಷ್ಣ ಮಂದಿರಲ್ಲಿ ಈ ಪೂಜೆ ಸಲ್ಲಿಸಿದ್ದಾರೆ. ಅಲ್ಲಿನ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ ನೀಡಲು ತೆರಳಿದ್ದ ಅಣ್ಣಾಮಲೈ, ಉಡುಪಿ ಪುತ್ತಿಗೆ ಮಠಕ್ಕೆ ಸೇರಿದ ಕೃಷ್ಣ ಮಂದಿರದಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಹಿಂದೂಗಳೇ, ನಿಮ್ಮ ಮನೆಯಲ್ಲಿ ತಲ್ವಾರ್, ಮಹಿಳೆಯರು ಬ್ಯಾಗ್‌ನಲ್ಲಿ ಚೂರಿ ಇಟ್ಕೊಳ್ಳಿ : ಕಲ್ಲಡ್ಕ ಪ್ರಭಾಕರ ಭಟ್

 

 

Continue Reading

LATEST NEWS

ಹಿಂದೂಗಳೇ, ನಿಮ್ಮ ಮನೆಯಲ್ಲಿ ತಲ್ವಾರ್, ಮಹಿಳೆಯರು ಬ್ಯಾಗ್‌ನಲ್ಲಿ ಚೂರಿ ಇಟ್ಕೊಳ್ಳಿ : ಕಲ್ಲಡ್ಕ ಪ್ರಭಾಕರ ಭಟ್

Published

on

ಮಂಗಳೂರು/ಮಂಜೇಶ್ವರ : ಹಿಂದೂ ಮುಸ್ಲಿಂ ಗಲಾಟೆ ಆದ್ರೆ ಹಿಂದೂಗಳು ಓಡುವ ಕಾಲ ಒಂದು ಇತ್ತು. ಈಗ ಕೈ ತೋರಿಸಿದ್ರೆ ಮುಸ್ಲಿಮರು ಓಡಿ ಹೋಗ್ತಾರೆ. ಹೀಗಾಗಿ ನಿಮ್ಮ ಮನೆಯಲ್ಲಿ ಒಂದು ತಲ್ವಾರ್ ಯಾವಾಗಲೂ ಇಟ್ಟುಕೊಳ್ಳಿ ಮತ್ತು ಮಹಿಳೆಯರು ಚೂರಿ ಇಟ್ಟುಕೊಳ್ಳಿ ಎಂದು ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.

ಮಂಜೇಶ್ವರದ ವರ್ಕಾಡಿಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಪೆಹಲ್ಗಾಮ್ ಘಟನೆಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ಅಲ್ಲಿ ಉಗ್ರರಿಗೆ ತಲ್ವಾರ್ ತೋರಿಸಿದ್ರೂ ಸಾಕಿತ್ತು ಓಡಿ ಹೋಗ್ತಾ ಇದ್ರು. ಮಹಿಳೆಯರು ತಮ್ಮ ಬ್ಯಾಗಿನಲ್ಲಿ ಸ್ನೋ ಪೌಡರ್ ಬಾಚಣಿಗೆ ಜೊತೆಯಲ್ಲಿ ಆರು ಇಂಚಿನ ಚೂರಿ ಇಟ್ಟುಕೊಳ್ಳಿ, ಅದಕ್ಕೆ ಲೈಸೆನ್ಸ್ ಬೇಡ.

ಇದನ್ನೂ ಓದಿ : ಅಮೆರಿಕದಲ್ಲಿ ಪತ್ನಿ, ಪುತ್ರನಿಗೆ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಮೈಸೂರು ಉದ್ಯಮಿ

ಸಂಜೆ ಆರು, ಏಳು ಗಂಟೆ ಬಳಿಕ ನಿಮ್ಮ ಮೇಲೆ ಆಕ್ರಮಣ ಮಾಡುತ್ತಾರೆ. ಆವಾಗ ಕೈ ಮುಗಿದು ಬೇಡಿಕೊಳ್ಳದೆ ಚೂರಿ ತೆಗೆದು ತೋರಿಸಿ ಎಂದು ಪ್ರಭಾಕರ್ ಭಟ್ ಕರೆ ನೀಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page