Connect with us

LATEST NEWS

ಕಾರ್ಕಳ ಘಟನೆ ಕರಾವಳಿಯಲ್ಲಿ ಕಾನೂನು ಇಲ್ಲ ಎಂಬುವುದಕ್ಕೆ ಉದಾಹರಣೆ: ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ

Published

on

ಉಡುಪಿ: ಕಾರ್ಕಳದಲ್ಲಿ ನಡೆದ ಘಟನೆಯಿಂದ ಕರಾವಳಿಯಲ್ಲಿ ಸರ್ಕಾರ ಇಲ್ಲ. ಕಾನೂನು ಇಲ್ಲ ಎಂಬುದಕ್ಕೆ ದೊಡ್ಡ ಉದಾಹರಣೆ.

ಏಕಾಏಕಿ ಕಾನೂನು ಕೈಗೆತ್ತಿಕೊಳ್ಳುವ ಬದಲು, ಅಲ್ಲಿ ತಪ್ಪು ನಡೆಯುತ್ತಿದ್ದರೆ ಕಾನೂನು ಪ್ರಕಾರ ಮಾಡಬೇಕಿತ್ತು ಎಂದು ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ ಆಕ್ರೋಶ ಹೊರಹಾಕಿದ್ದಾರೆ.


ಕಾರ್ಕಳದಲ್ಲಿ ಪ್ರಾರ್ಥನಾ ಕೇಂದ್ರದ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಮಾಜಿ ಸಚಿವರು, ಅಲ್ಲಿ ಕಾನೂನಿನ ವಿರುದ್ಧ ನಡೆದಿದ್ದರೆ ಕ್ರಮ ಕೈಗೊಳ್ಳಬಹುದಿತ್ತು.

ಕೇಂದ್ರ ಹಾಗೂ ರಾಜ್ಯದಲ್ಲಿ ಇವರದ್ದೇ ಸರ್ಕಾರ ಇದೆ.

ಉಸ್ತುವಾರಿ ಸಚಿವರು ಸಹ ಕಾರ್ಕಳದವರೇ ಇದ್ದಾರೆ ಎಂದರು. ಪತ್ರಿಕೆಗಳಲ್ಲಿ ಪ್ರಾರ್ಥನೆ ಸೇರಿದ್ದಾರೆ ಅಂತ ಉಲ್ಲೇಖ ಆಗಿದೆ.

ಆದ್ದರಿಂದ ವಾಸ್ತವವಾಗಿ ಏನು ನಡೆದಿದೆ ಅಂತ ವಿಮರ್ಶೆ ಮಾಡಬೇಕು. ಅದು ಬಿಟ್ಟು ಏಕಾಏಕಿ ದಾಳಿ ಮಾಡುವುದು ಸರಿ ಅಲ್ಲ ಎಂದರು.
ಇದೇ ವೇಳೆ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯಿಸಿ, ಯುಪಿಏ ಸರ್ಕಾರದ ಅವಧಿಯಲ್ಲಿ ಗ್ಯಾಸ್‌ ಬೆಲೆ 350 ರೂಪಾಯಿ ಆದಾಗ ಗ್ಯಾಸ್‌ ಸಿಲಿಂಡರ್‌ನಂತೆ ರಸ್ತೆಯಲ್ಲಿ ಹೊರಳಾಡಿದವರು ಈಗ 885 ಆದಾಗ ಒಂದು ಮಾತು ಸಹ ಆಡುವುದಿಲ್ಲ ಎಂದು ವ್ಯಂಗ್ಯವಾಡಿದರು.

ಜೊತೆಗೆ 30 ರೂಪಾಯಿಗೆ ಪೆಟ್ರೋಲ್‌ ನೀಡುತ್ತೇವೆ ಎಂದು ವಾಗ್ದಾನ ಮಾಡಿದವರು ಅಂತರರಾಷ್ಟ್ರೀಯ ತೈಲ ಬೆಲೆ ಕಡಿಮೆಯಾದರೂ ಯಾಕೆ ಪೆಟ್ರೋಲ್‌, ಡಿಸೇಲ್‌ ಬೆಲೆ ಯಾಕೆ ಕಡಿಮೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

LATEST NEWS

ಆರಿಹೋಯ್ತು 46 ವರ್ಷಗಳಿಂದ ಉರಿಯುತ್ತಿದ್ದ ದೀಪನಾಥೇಶ್ವರ ದೇವಾಲಯದ 3 ದೀಪಗಳು

Published

on

ಮಂಗಳೂರು/ಮುಂಡಗೋಡ : ಎಣ್ಣೆ, ಬತ್ತಿ ಇಲ್ಲದೇ ಸತತ 46 ವರ್ಷಗಳಿಂದ ಉರಿಯುತ್ತಿದ್ದ ಉತ್ತರಕನ್ನಡ  ಜಿಲ್ಲೆಯ ಮುಂಡಗೋಡು ತಾಲೂಕಿನ ಚಿಗಳ್ಳಿಯ ದೀಪನಾಥೇಶ್ವರ ದೇವಾಲಯದ ಮೂರು ದೀಪಗಳು ನಂದಿ ಹೋಗಿವೆ.

1979ರಲ್ಲಿ ಹಚ್ಚಿದ್ದ ದೀಪ :

ಚಿಗಳ್ಳಿ ಗ್ರಾಮದ ದೈವಜ್ಞೆ ಶಾರದಮ್ಮ ಎಂಬವರು 1979ರಲ್ಲಿ ಸೀಮೆಎಣ್ಣೆ ಹಾಕಿ ಒಂದು ಲಾಟೀನು ದೀಪವನ್ನು ಹಚ್ಚಿದ್ದರು. ಅದು ಒಂದು ದಿನ ಕಳೆದರೂ ಆರಿರಲಿಲ್ಲ. ನಿರಂತರವಾಗಿ ಉರಿಯತೊಡಗಿತು. ಒಂದು ವರ್ಷದ  ಬಳಿಕ 1980ರಲ್ಲಿ ಮತ್ತೊಂದು ದೀಪವನ್ನು ಹಚ್ಚಿದರು. 2ನೇ ದೀಪ ಕೂಡ ಆರದೇ ನಿರಂತರವಾಗಿ ಉರಿಯ ತೊಡಗಿತು.

2ನೇ ದೀಪ ಹಚ್ಚಿದ 10-15 ದಿನಗಳ ನಂತರ  3ನೇ ದೀಪ ಬೆಳಗಿಸಿದರು. ಆಶ್ವರ್ಯ ಎಂಬಂತೆ ಮೂರು ದೀಪಗಳು ನಿರಂತರವಾಗಿ ಉರಿಯ ತೊಡಗಿದವು ಎನ್ನಲಾಗಿದೆ. 1979 ರಿಂದ 2025ರ ಫೆಬ್ರವರಿ ವರೆಗೆ ನಿರಂತರವಾಗಿ ಉರಿದುಕೊಂಡು ಬಂದಿದ್ದ ದೀಪಗಳು ಈಗ ಏಕಾಏಕಿ ಆರಿ ಹೋಗಿದ್ದು ಆತಂಕ ಹುಟ್ಟಿಸಿದೆ

ಗ್ರಾಮಸ್ಥರಲ್ಲಿ ಭಯದ ಛಾಯೆ : 

ದೀಪ ಹಚ್ಚಿದ್ದ ಶಾರದಮ್ಮ ಕೆಲವು ವರ್ಷಗಳ ಬಳಿಕ ಇಹಲೋಕ ತ್ಯಜಿಸಿದರು. ಆದರೂ ದೀಪಗಳು ಇಲ್ಲಿವರೆಗೆ ಉರಿದುಕೊಂಡು ಬಂದಿದೆ. 14 ದಿನದ ಹಿಂದೆ ಈ ದೀಪದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಅರ್ಚಕ ವೆಂಕಟೇಶ್ ನಿಧನರಾದರು. ಈ ಹಿನ್ನೆಲೆಯಲ್ಲಿ ಸೂತಕವಿದ್ದ ಕಾರಣ ದೇವಸ್ಥಾನದ ಗರ್ಭಗುಡಿ ಮುಚ್ಚಲಾಗಿತ್ತು. ಫೆ.5 ರಂದು ಪೂಜೆಗಾಗಿ ಗರ್ಭಗುಡಿ ತೆರೆದಾಗ ದೀಪ ಆರಿರುವುದು ಗಮನಕ್ಕೆ ಬಂದಿದೆ.

ಇದನ್ನೂ ಓದಿ : ಮಡಿಕೇರಿಯಲ್ಲಿ ಇನ್ನು ಮುಂದಕ್ಕೆ ನೀರಿನ ಬಾಟಲ್ ಸಿಗುವುದಿಲ್ಲ

ದೀಪ ಆರಿರುವುದು ಸಹಜವಾಗಿಯೇ ಭಕ್ತರಿಗೆ ನೋವುಣಿಸಿದೆ. ಇಷ್ಟು ದಿನ ಆರದ್ದು ಈಗ ಆರಿರುವುದು ಅಪಶಕುಶ ಎಂದು ಹೇಳಲಾಗುತ್ತಿದೆ. ರಾಜ್ಯ ಆಳುವವರಿಗೂ ಕೆಡುಕಾಗಲಿದೆ. ಗ್ರಾಮಕ್ಕೂ ಕೆಡುಕು ಎಂಬ ಆತಂಕ ಮನೆಮಾಡಿದೆ. ಹಾಗಾಗಿ ಸದ್ಯ ದೇವಸ್ಥಾನವನ್ನು ಮುಚ್ಚಲಾಗಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ವಿಧಿಸಲಾಗಿದೆ.

Continue Reading

LATEST NEWS

ಗರ್ಭಿಣಿಗೆ ಲೈಂಗಿಕ ದೌರ್ಜನ್ಯ ಎಸಗಿ ಚಲಿಸುವ ರೈಲಿನಿಂದ ಎಸೆದ ಕಾಮುಕರು.. ಓರ್ವ ಆರೋಪಿ ಅರೆಸ್ಟ್

Published

on

ಚೆನ್ನೈ: 4 ತಿಂಗಳ ಗರ್ಭಿಣಿ ಮಹಿಳೆಯ ಮೇಲೆ ಇಬ್ಬರು ಕಾಮುಕರು ಲೈಂಗಿಕ ದೌರ್ಜನ್ಯ ಎಸಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ಘಟನೆ ಚೆನ್ನೈನ ತಿರುಪತ್ತೂರು ಜಿಲ್ಲೆ ಜೋಲಾರ್‌ಪೆಟ್ಟೆಯಲ್ಲಿ ನಡೆದಿದೆ. ಈ ಘಟನೆಯ ಸಂಬಂಧ ಒಬ್ಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಇನ್ನೋರ್ವ ಆರೋಪಿಯನ್ನು ಪತ್ತೆ ಹಚ್ಚುತ್ತಿದ್ದಾರೆ.

ಮಹಿಳೆಯು ರೈಲಿನಲ್ಲಿ ಶೌಚಾಲಯಕ್ಕೆ ಹೋದಂತಹ ಸಂದರ್ಭದಲ್ಲಿ ಇಬ್ಬರು ಆರೋಪಿಗಳು ಆಕೆಯನ್ನು ಹಿಂಬಾಲಿಸಿ ಆತ್ಯಾಚಾರವೆಸಗಿದ್ದಾರೆ. ಬಳಿಕ ಮಹಿಳೆಯು ಜೋರು ಕಿರುಚಾಡಿದ್ದು, ಆಕೆಯನ್ನು ರೈಲಿನಿಂದ ತಳ್ಳಿದ್ದಾರೆ. ಮಹಿಳೆಯ ಕೈ-ಕಾಲು ಹಾಗೂ ತಲೆಯ ಭಾಗಕ್ಕೆ ಗಂಭೀರವಾಗಿ ಪೆಟ್ಟು ಬಿದ್ದಿದೆ.

ಮಹಿಳೆಯು ಆಂಧ್ರಪ್ರದೇಶದಿಂದ ಚಿತ್ತೂರು ಕಡೆಗೆ ಪ್ರಯಾಣಿಸುತ್ತಿದ್ದಳು. ಜೋಲಾರಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಒರ್ವ ಆರೋಪಿಯನ್ನು ಬಂಧಿಸಿದ್ದಾರೆ. ಹೇಮರಾಜ್ ಬಂಧಿತ ಆರೋಪಿಯಾಗಿದ್ದಾನೆ. ಇನ್ನೋರ್ವ ಆರೋಪಿಯನ್ನು ಹುಡುಕುತ್ತಿದ್ದು, ಸಿಸಿಟಿವಿ ಯಲ್ಲಿ ಪರಿಶೀಲಿಸಲಾಗುತ್ತಿದೆ.

Continue Reading

LATEST NEWS

ಕುಂಭ ಮೇಳದಿಂದ ಹಿಂದಿರುಗುವಾಗ ದುರಂತ; ಕರ್ನಾಟಕದ ನಾಲ್ವರು ಸೇರಿ ಆರು ಮಂದಿ ಸಾ*ವು

Published

on

ಮಂಗಳೂರು/ಮಧ್ಯಪ್ರದೇಶ : ಕುಂಭ ಮೇಳದಿಂದ ಹಿಂದಿರುಗುವಾಗ ಸಂಭವಿಸಿದ ಅಪಘಾತದಲ್ಲಿ ಕರ್ನಾಟಕದ ನಾಲ್ವರು ಸೇರಿ ಒಟ್ಟು ಆರು ಮಂದಿ ಸಾ*ವನ್ನಪ್ಪಿದ್ದಾರೆ.

ಮಧ್ಯಪ್ರದೇಶದ ಇಂದೋರ್​ ಬಳಿ ಸಂಭವಿಸಿದ ಅಪಘಾತದಲ್ಲಿ ಬೆಳಗಾವಿಯ ನಾಲ್ವರು ಸೇರಿ ಆರು ಮಂದಿ ಸಾ*ವನ್ನಪ್ಪಿದ ಘಟನೆ ಜರುಗಿದೆ. ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಿಂದ ಹಿಂದಿರುಗುತ್ತಿದ್ದಾಗ ಈ ಅ*ವಘಡ ಸಂಭವಿಸಿದೆ.

ಮೃತರನ್ನು ಬೆಳಗಾವಿಯ ಶಹಾಪುರ ನಿವಾಸಿ ಡ್ರೈವರ್ ಸಾಗರ್ (55), ಗಣೇಶಪುರ ನಿವಾಸಿ ನಿತಿ ಪಾಟೀಲ್ (50) ಸೇರಿ ಒಟ್ಟು ಆರು ಮಂದಿ ಸಾ*ವನ್ನಪ್ಪಿದ್ದಾರೆ.

ಇದನ್ನೂ ಓದಿ: ಮಹಾಕುಂಭಮೇಳದಲ್ಲಿ ಮತ್ತೆ ಅ*ಗ್ನಿ ಅವಘ*ಡ

ಟಿಟಿ ವಾಹನದಲ್ಲಿ 19 ಮಂದಿ ವಾಪಸಾಗುತ್ತಿದ್ದರು ಆಗ ಲಾರಿಗೆ ವಾಹನ ಡಿಕ್ಕಿ ಹೊಡೆದಿದೆ. ಬೆಳಗಾವಿಯ ನಾಲ್ವರು ಇಂದೋರ್​ನ ಇಬ್ಬರು ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನ್ಪುರ ಪೊಲೀಸ್ ಠಾಣೆಯ ಪೊಲೀಸ್ ತಂಡ ಸ್ಥಳಕ್ಕೆ ತಲುಪಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.

 

 

Continue Reading
Advertisement

Trending

Copyright © 2025 Namma Kudla News

You cannot copy content of this page