Connect with us

BANTWAL

Vitla: 40 ಅಡಿ ಎತ್ತರದ ಮರವೇರಿ ವ್ಯಕ್ತಿ ಆತ್ಮಹತ್ಯೆ..!

Published

on

ವಿಟ್ಲ: ವಿಟ್ಲ ಪಡೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ಕಾರ್ಮಿಕರೊಬ್ಬರು 40 ಅಡಿ ಎತ್ತರದ ಮರವೇರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಕೂಲಿ ಕಾರ್ಮಿಕ ಸ್ಥಳೀಯ ನಿವಾಸಿ ಜಾರಪ್ಪನಾಯ್ಕ (60) ಎಂದು ಗುರುತಿಸಲಾಗಿದೆ. ಜಾರಪ್ಪನಾಯ್ಕ ಅವರು ಮನೆಯಿಂದ ಎಂದಿನಂತೆ ಸ್ಥಳೀಯ ರಘುರಾಮ ತಂತ್ರಿಯವರ ತೋಟದ ಕೆಲಸಕ್ಕೆ ಹೋಗಿದ್ದರು. ಆದರೆ ಅಲ್ಲಿಗೆ ತಲುಪಿಲ್ಲ, ಕೆಲಸಕ್ಕೆ ಬಂದಿಲ್ಲದ ಕಾರಣ ಮನೆಯವರಲ್ಲಿ ವಿಚಾರಿಸಿದಾಗ ಬೆಳಿಗ್ಗೆಯೇ ಹೋಗಿದ್ದಾರೆ ಎಂದು ತಿಳಿಸಿದ್ದರು. ಈ ಕಾರಣದಿಂದ ಅವರನ್ನು ಎಲ್ಲೆಡೆಯೂ ಹುಡುಕಾಡಿದ್ದು, ತೋಟದೊಳಗಿನ ಸುಮಾರು 40 ಅಡಿ ಎತ್ತರದ ಮರದಲ್ಲಿ ನೇಣಿಗೆ ಶರಣಾಗಿರುವುದು ಕಂಡುಬಂದಿದೆ. ಅವರ ಮೃತದೇಹವನ್ನು ವಿಟ್ಲ ಪೊಲೀಸರು ಆಗಮಿಸಿದ ನಂತರ ಕೆಳಕ್ಕಿಳಿಸಲಾಯಿತು. ಈ ಘಟನೆಯ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BANTWAL

ಅಪ್ರಾಪ್ತೆಯ ಜೊತೆ ಅನುಚಿತ ವರ್ತನೆ ಪ್ರಕರಣ; ಆರೋಪಿಯ ಬಂಧಿಸುವಂತೆ ಒತ್ತಾಯ

Published

on

ಬಂಟ್ವಾಳ : ಪ್ರಮುಖ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಹಾಗೂ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕನಾಗಿದ್ದ ವ್ಯಕ್ತಿಯೊಬ್ಬರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಆರೋಪಿತನ ಮನೆಯಲ್ಲಿ ಕೆಲಸಕ್ಕಿದ್ದ ದಲಿತ ಬಾಲಕಿಯ ಜೊತೆ ಅನುಚಿತವಾಗಿ ವರ್ತಿಸಿ ದೈಹಿಕ ಕಿರುಕುಳ ನೀಡಿದ ಆರೋಪ ಮಾಡಲಾಗಿದೆ. ಕಳೆದ ಎರಡು ತಿಂಗಳಿನಿಂದ ಬಾಲಕಿ ಶಾಲೆಗೆ ಹೋಗದ ಹಿನ್ನೆಲೆಯಲ್ಲಿ ಶಿಕ್ಷಕರು ವಿಚಾರಿಸಲು ಬಂದಿದ್ದರು. ಈ ವೇಳೆ ಆರೋಗ್ಯ ಸರಿ ಇಲ್ಲ ಎಂದು ಬಾಲಕಿಯ ಬೇಟಿಗೂ ಅವಕಾಶ ನೀಡದೆ ವಾಪಸ್ ಕಳುಹಿಸಿದ್ದರು.

ಆದರೆ ಇದೀಗ ಈ ವಿಚಾರವಾಗಿ ಆರೋಪಿತನ ಗ್ರಾಮದ ಜನರೇ ಘಟನೆಯ ತನಿಖೆಗೆ ಒತ್ತಾಯಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಆರೋಪಿತ ಹೆಸರಿನಲ್ಲಿ ಪೋಕ್ಸೋ ಹಾಗೂ ದಲಿತ ದೌರ್ಜನ್ಯ ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಆರೋಪಿತ ಪ್ರಭಲ ರಾಜಕೀಯ ಪಕ್ಷದವನಾಗಿದ್ದು, ಬ್ರಾಹ್ಮಣ ಸಮೂದಾಯಕ್ಕೆ ಸೇರಿದವನಾಗಿರುವ ಕಾರಣ ಹಲವರು ತಲೆ ತಗ್ಗಿಸುವಂತಾಗಿದೆ.

Continue Reading

BANTWAL

ಎರಡನೇ ವರ್ಷದ ಮೂಳೂರು-ಅಡ್ಡೂರು ಕಂಬಳದ ಆಹ್ವಾನ ಪತ್ರಿಕೆ ಬಿಡುಗಡೆ

Published

on

ಮಂಗಳೂರು: ಎರಡನೇ ವರ್ಷದ ಮೂಳೂರು-ಅಡ್ಡೂರು ಜೋಡು ಕರೆ ಕಂಬಳ ಎಪ್ರಿಲ್ 12 ರ ಶನಿವಾರ ನಡೆಯಲಿದೆ.


ಸಮಾಜ ಸೇವಕ ಹಾಗೂ ರಾಜಕೀಯ ನಾಯಕ ಇನಾಯತ್ ಅಲಿಯವರ ನೇತೃತ್ವದಲ್ಲಿ ಈ ಕಂಬಳ ಆಯೋಜನೆಯಾಗಿದೆ. ವಿಜೃಂಭಣೆಯಿಂದ ನಡೆಯುವ ಮೂಳುರು-ಅಡ್ಡೂರು ಜೋಡುಕರೆ ಕಂಬಳದ ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಲಾಗಿದೆ.

ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರ ಸಮಕ್ಷಮದಲ್ಲಿ ಅಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಗಿದೆ. ಎರಡನೇ ವರ್ಷದ ಕಂಬಳವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಮಾಡಲಿದ್ದಾರೆ.

ಇದನ್ನೂ ಓದಿ: ಈ ದಿನದಂದು ನಿಮ್ಮ ಖಾತೆಗೆ ಸೇರಲಿದೆ 2 ತಿಂಗಳ ಗೃಹಲಕ್ಷ್ಮೀ ಹಣ 

ಸರ್ವ ಧರ್ಮಗಳ ಪ್ರಮುಖರ ಶುಭಾಶೀರ್ವಾದದೊಂದಿಗೆ ಕಾರ್ಯಕ್ರಮ ಉದ್ಘಾಟನೆಯಾಗಲಿದ್ದು, ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸ್ಪೀಕರ್ ಯು.ಟಿ. ಖಾದರ್, ಸಚಿವ ದಿನೇಶ್ ಗುಂಡೂರಾವ್ ಅವರು ಭಾಗವಹಿಸಲಿದ್ದಾರೆ. ಹಲವಾರು ಚಲನ ಚಿತ್ರ ನಟ ನಟಿಯರು ಕೂಡಾ ಸಂಜೆಯ ಸಭಾ ಕಾರ್ಯಕ್ರಮಕ್ಕೆ ಆಗಮಿಸಲಿರುವುದಾಗಿ ಕಂಬಳ ಸಮಿತಿಯ ಅಧ್ಯಕ್ಷ ಇನಾಯತ್ ಅಲಿ ಮಾಹಿತಿ ನೀಡಿದ್ದಾರೆ.

Continue Reading

BANTWAL

ಮಂಗಳೂರು : ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದ ಬಸ್ ಪೊಲೀಸರ ವಶಕ್ಕೆ

Published

on

ಮಂಗಳೂರು : ವಿಟ್ಲ -ಮುಡಿಪು ಮಧ್ಯೆ 2 ದಿನಗಳಿಂದ ಅಪಾಯಕಾರಿ ಸ್ಥಿತಿಯಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದನ್ನು ತಡೆದು ಸಾರ್ವಜನಿಕರು ನಿನ್ನೆ (ಮಾ.23) ವಿಟ್ಲ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.

ಒಂದೇ ಟಯರಲ್ಲಿ ವಿಟ್ಲ-ಮುಡಿಪು-ಮಂಗಳೂರು ಮಧ್ಯೆ ಸಂಚರಿಸುವ ಖಾಸಗಿ ಬಸ್ಸೊಂದು ಹಿಂದಿನ ಎಡಬದಿ ಟಯರ್‌ನಲ್ಲಿ ಮಾತ್ರ ಸಂಚರಿಸುತ್ತಿತ್ತು‌. ಇನ್ನೊಂದು ಟಯರ್ ಒಡೆದು ಕರ್ಕಶ ಶಬ್ದ ಬರುತ್ತಿತ್ತು.ಬಸ್‌ನ ಚಾಲಕ, ಕಂಡಕ್ಟರ್ ಮುಂಜಾಗ್ರತೆ ವಹಿಸಿಲ್ಲ ಎಂದು ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದೆ.

ಶನಿವಾರ (ಮಾ.22) ಮಧ್ಯಾಹ್ನದಿಂದ ನಿನ್ನೆ (ಮಾ.23) ಮಧ್ಯಾಹ್ನ ತನಕ ವಿಟ್ಲ – ಮುಡಿಪು – ಮಂಗಳೂರು ಮಧ್ಯೆ ಅಪಾಯಕಾರಿ ರೀತಿಯಲ್ಲಿ ಸಂಚರಿಸುತ್ತಾ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದರೆಂದು ಪ್ರಯಾಣಿಕರೇ ಆರೋಪಿಸಿದ್ದಾರೆ. ಈ ಕುರಿತು ಮಾಹಿತಿ ಪಡೆದ ಸಾರ್ವಜನಿಕರು ಸಾಲೆತ್ತೂರು ಪೇಟೆಯಲ್ಲಿ ಬಸ್ಸನ್ನು ತಡೆ ಹಿಡಿದು ವಿಟ್ಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಬಂಟ್ವಾಳ ಸಾರಿಗೆ ಅಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ. ಆದಷ್ಟು ಶೀಘ್ರವೇ ಈ ನಿರ್ಲಕ್ಷ್ಯದ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ದೂರುದಾರರು ಒತ್ತಾಯಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page