Connect with us

DAKSHINA KANNADA

ವಿಟ್ಲದಲ್ಲಿ ವಿಧವೆ ನಾಪತ್ತೆ ಹಿಂದೆ ಹಲವು ಕಥೆ..! VHPಯಿಂದ ಲವ್ ಜಿ*ಹಾದ್ ಆರೋಪ…!

Published

on

ವಿಟ್ಲ: ವಿಧವೆ ಮಹಿಳೆಯೊಬ್ಬಳ ನಾಪತ್ತೆ ಪ್ರಕರಣಕ್ಕೆ ಲವ್‌ ಜಿ*ಹಾದ್ ಲಿಂಕ್‌ ಇರೋ ಬಗ್ಗೆ ಆರೋಪಿಸಿ ಸಂಘ ಪರಿವಾರದ ನಾಯಕರು ಪೊಲೀಸರಿಗೆ ದೂರು ನೀಡಿದ್ದಾರೆ. ವಿಧವೆ ನಾಪತ್ತೆಯಾದ ಐದು ದಿನಗಳ ಬಳಿಕ ಇಂತಹ ಒಂದು ಅನುಮಾನ ವ್ಯಕ್ತಪಡಿಸಿದ ವಿಹೆಚ್‌ಪಿ ಬಜರಂಗದಳ ಕಾರ್ಯಕರ್ತರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಇತ್ತ ವಿಧವೆ ನಾಪತ್ತೆ…ಅತ್ತ ಗುಜರಿ ಅಂಗಡಿಯವ ನಾಪತ್ತೆ…

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪಡೂರು ಗ್ರಾಮದಲ್ಲಿ ಕಳೆದ ಕೆಲ ದಿನಗಳ ಹಿಂದೆ ವಿಧವೆ ಮಹಿಳೆಯೊಬ್ಬಳು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ಕೂಡಾ ದಾಖಲಿಸಲಾಗಿದೆ. ಆದ್ರೆ ಇದೀಗ ಪ್ರಕರಣ ತಿರುವು ಪಡೆದುಕೊಂಡಿದ್ದು, ಇದೊಂದು ಲವ್ ಜಿಹಾದ್ ಪ್ರಕರಣ ಎಂಬ ಆರೋಪ ಕೇಳಿ ಬಂದಿದೆ. ಮಹಿಳೆ ನಾಪತ್ತೆಯಾದ ದಿನದಂದೇ ಸ್ಥಳೀಯ ಗುಜುರಿ ಅಂಗಡಿ ಕಾರ್ಮಿಕ ಅನ್ಯಕೋಮಿನ ವ್ಯಕ್ತಿ ಕೂಡಾ ನಾಪತ್ತೆಯಾಗಿದ್ದಾನೆ.

ನಾಲ್ಕು ಮಕ್ಕಳ ತಂದೆಯಾಗಿರೋ ಶರೀಫ್‌ ಗುಜುರಿ ಅಂಗಡಿಯಲ್ಲಿ ಕಾರ್ಮಿಕನಾಗಿ ವಿಟ್ಲ ಪಡೂರು ಗ್ರಾಮದಲ್ಲಿ ವಾಟರ್ ಮ್ಯಾನ್‌ ಆಗಿಯೂ ಕೆಲಸ ಮಾಡ್ತಾ ಇದ್ದ. ಇತ್ತೀಚೆಗೆ ಆತನ ಮಗ ನಾಪತ್ತೆಯಾಗಿದ್ದ ಮಹಿಳೆಯ ಮಗನಿಗೆ ತಾಯಿಯ ಅಶ್ಲೀ*ಲ ವಿಡಿಯೋ ತೋರಿಸಿದ್ದ ಅನ್ನೋ ಆರೋಪವನ್ನು ಹಿಂದೂ ಸಂಘಟನೆ ಮಾಡಿದೆ. ಹೀಗಾಗಿ ವಿಧವೆ ಮಹಿಳೆಯನ್ನು ಬ್ಲಾಕ್‌ ಮೇಲ್ ಮಾಡಿ ಅಥವಾ ವಶೀಕರಣ ಮಾಡಿ ಕರೆದುಕೊಂಡು ಹೋಗಿರುವ ಅನುಮಾನ ವ್ಯಕ್ತಪಡಿಸಿದ್ದಾರೆ.

ಪೊಲೀಸ್ ಠಾಣೆ ಮೆಟ್ಟಿಲೇರಿರುವ ಹಿಂದೂ ಸಂಘಟನೆ:

ಇದೇ ವಿಚಾರದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಹಿಂದೂ ಸಂಘಟನೆಯ ಪ್ರಮುಖರು ಪೊಲೀಸರಿಗೆ ಇದೊಂದು ಲವ್‌ ಜಿಹಾದ್ ಪ್ರಕರಣ ಎಂದು ದೂರಿದ್ದಾರೆ. ತಕ್ಷಣ ಆರೋಪಿಯನ್ನು ಹಿಡಿದು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

DAKSHINA KANNADA

ಸುರತ್ಕಲ್: ಡ್ರೆಸ್ ಅಂಗಡಿಗೆ ಆಕಸ್ಮಿಕ ಬೆಂಕಿ; ಭಾರೀ ನಷ್ಟ

Published

on

ಸುರತ್ಕಲ್: ಮೈ ಚಾಯ್ಸ್ ಬಟ್ಟೆ ವಿನ್ಯಾಸ ಹಾಗೂ ಜವಳಿ ಮಳಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಕರಕಲಾಗಿದ್ದು, ಭಾರೀ ನಷ್ಟ ಸಂಭವಿಸಿರುವ ಘಟನೆ ಸುರತ್ಕಲ್‌ನ ಪೂವ ಆರ್ಕೆಡ್‌ನಲ್ಲಿರುವ ಮಳಿಗೆಯಲ್ಲಿ ಬುಧವಾರ ತಡರಾತ್ರಿ 1 ಗಂಟೆಗೆ ಸಂಭವಿಸಿದೆ.

ಸುಟ್ಟು ಕರಕಲಾಗಿದ್ದ ಮಳಿಗೆಯು ಕೃಷ್ಣಾಪುರ ನಿವಾಸಿ ಶಮೀಮ್ ಎಂಬವರಿಗೆ ಸೇರಿದ್ದು, ಬಟ್ಟೆ ಬರೆಗಳು ಹಾಗೂ ಯಂತ್ರೋಪಕರಣಗಳು ಸೇರಿ ಕೋಟಿ ರೂ. ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಅಂಗಡಿಯ ಮೇಲ್ಛಾವಣಿಯಲ್ಲಿನ ಬಟ್ಟೆ ವಿನ್ಯಾಸ ವಿಭಾಗದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಗೆ ಕ್ಷಣಾರ್ಧದಲ್ಲಿ ಇಡೀ ಮಳಿಗೆಯನ್ನು ಸುಟ್ಟು ಭಸ್ಮ ಮಾಡಿತು.

ಇದನ್ನೂ ಓದಿ : ಸುರತ್ಕಲ್ : ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಾರು ಹೊಂಡಕ್ಕೆ ; ದಂಪತಿಗೆ ಗಾಯ

ಘಟನಾ ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಮೂರು ಮತ್ತು ಎಂಆರ್ ಪಿಎಲ್ ನ ಒಂದು ಅಗ್ನಿ ನಿರೋಧಕ ವಾಹನಗಳು ಸತತ 4 ಗಂಟೆಯವರೆಗೆ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಘಟನಾ ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

DAKSHINA KANNADA

ಮಂಗಳೂರು : ಇಂದಿನಿಂದ 3 ದಿನ ಪಾಂಡೇಶ್ವರದಲ್ಲಿ ಬೃಹತ್ ಐಸ್‌ಕ್ರೀಂ ಪರ್ಬ

Published

on

ಮಂಗಳೂರು: ನಗರದ ಪಾಂಡೇಶ್ವರದಲ್ಲಿರುವ ಫಿಝಾ ಬೈ ನೆಕ್ಸಸ್ ಮಾಲ್ ಮತ್ತು ಮಂಗಳೂರಿನ ಪ್ರಸಿದ್ಧ ಟ್ರೈ ತಿಂಡಿ ಇನ್ಸ್ಟಾ ಗ್ರಾಮ್ ಪೇಜ್ ಸಹಭಾಗಿತ್ವದಲ್ಲಿ ಫೆ.7, 8 ಮತ್ತು 9ರಂದು 3 ದಿನ 2ನೇ ಆವ್ರತ್ತಿಯ ಐಸ್ ಕ್ರೀಮ್ ಪರ್ಬವನ್ನು ಅಯೋಜಿಸಲಾಗಿದೆ.

ಈ ತಣ್ಣನೆಯ ಚಳಿಗೂ ಐಸ್‌ಕ್ರೀಂ ಎಂದಾಕ್ಷನ ಬಾಯಲ್ಲಿ ನೀರು ಬರುವವರೇ ಹೆಚ್ಚು. ಹಾಗಾಗಿ ಅಂತಹ ಐದ್‌ಕ್ರೀಂ ಪ್ರಿಯರಿಗೆ ಬಿಗ್ ಗುಡ್‌ನ್ಯೂಸ್ ಸಿಕ್ಕಿದ್ದು,  ಭರ್ಜರಿ ಐಸ್ ಕ್ರೀಮ್ ಪರ್ಬ ಇಂದಿನಿಂದ ಮೂರು ದಿನ ಬೆಳಗ್ಗೆ 11ರಿಂದ ರಾತ್ರಿ 9 ರವರೆಗೆ ನಡೆಯಲಿದೆ.

ಯಾವೆಲ್ಲಾ ಐಸ್‌ಕ್ರೀಂ ಸಂಸ್ಥೆಗಳು ಭಾಗಿಯಾಗಲಿದೆ ?

ಮಂಗಳೂರನ್ನು ‘ಐಸ್ ಕ್ರೀಮ್ ಕ್ಯಾಪಿಟಲ್ ಆಫ್ ಇಂಡಿಯಾ’ ಎಂದು ಕರೆಯುತ್ತಾರೆ. ಎಲ್ಲಾ ಐಸ್ ಕ್ರೀಮ್ ಸಂಸ್ಥೆಗಳನ್ನ ಒಂದೇ ಸೂರಿನಡಿ ಸೇರಿಸಬೇಕು ಅನ್ನುವ ಆಲೋಚನೆಯಲ್ಲಿ ಈ ಕಾರ್ಯಕ್ರಮ ಆಯೋಜಕರದ್ದು, ಈ ಬಾರಿ 14ಸಂಸ್ಥೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ. ಐಡಿಯಲ್ – ಪಬ್ಬಾಸ್ , ಹ್ಯಾಂಗ್ಯೋ, ಮ್ಯಾಂಗೋ ಬೆರ್ರಿಸ್ , ಎಂಚಿ ಕ್ರಂಚಿ – ದಿ ಮಿಲೆಟ್ ಹೌಸ್ , ಸ್ಕೂಪ್ಸೊ , ಕೈಲಾರ್ಸ್ , ಸ್ವಿರ್ಲಿಯೊ , ಎಫ್ 5, ಐಸ್ ಕ್ರೀಮ್ ಆಂಡ್ ಮೋರ್ , ಫ್ರೂಟ್ ಪೊಪ್ಜ್ , ಫ್ಲೇವರ್ಸ್ , ಹೈವ್ ಸ್ಕ್ಯೂಬ್ , ಬೊನ್ ಬೊನ್ಸ್, ಕ್ಯಾಮೆರಿ ಭಾಗವಹಿಸುವ ಐಸ್ ಕ್ರೀಮ್ ಸಂಸ್ಥೆಗಳು ಪಾಲ್ಗೊಳ್ಳಲಿದೆ.

 

Continue Reading

DAKSHINA KANNADA

ಸುರತ್ಕಲ್ : ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಾರು ಹೊಂಡಕ್ಕೆ ; ದಂಪತಿಗೆ ಗಾಯ

Published

on

ಸುರತ್ಕಲ್: ಕಾರೊಂದು ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ 5 ಅಡಿ ಆಳದ ಹೊಂಡಕ್ಕೆ ಬಿದ್ದು ದಂಪತಿ ಗಾಯಗೊಂಡಿರುವ ಘಟನೆ ಜೋಕಟ್ಟೆಯ ಕಳವಾರು ಎಂಬಲ್ಲಿ ನಿನ್ನೆ (ಫೆ.6) ಮಧ್ಯಾಹ್ನ ನಡೆದಿದೆ.

ಸುರತ್ಕಲ್ ಕಾನ ಕಾಪ್ರಿಗುಡ್ಡ ನಿವಾಸಿ ರವಿ ಹಾಗೂ ಅವರ ಪತ್ನಿ ಗಾಯಳುಗಳು ಎಂದು ಗುರುತಿಸಲಾಗಿದೆ. ಅಪಘಾತದಿಂದ ದಂಪತಿಗೆ ಗಾಯಗಳಾಗಿದ್ದು, ಅವರನ್ನು ಕಾನದ ಆಸ್ಪತ್ರೆಗೆ ರವಾನಿಸಲಾಗಿದೆ.

ತಮ್ಮ ಪತ್ನಿಯೊಂದಿಗೆ ರವಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಜೋಕಟ್ಟೆ ಕಳವಾರು ಬಳಿ ಕಾರಿನ ಬ್ರೇಕ್ ಫೇಲ್ ಆಗಿದೆ.‌ ಕಾರನ್ನು ನಿಯಂತ್ರಣಕ್ಕೆ ತರಲೆಂದು ಯತ್ನಿಸಿದಾಗ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದರ ಪರಿಣಾಮ ಒಂದು ವಿದ್ಯುತ್ ಕಂಬ ನೆಲಕ್ಕೆ ಉರುಳಿದ್ದು, ಹೈಟೆನ್ಷನ್ ವಯರ್ ರಸ್ತೆಯಲ್ಲಿ ಬಿದ್ದಿದೆ.

 

ಇದನ್ನೂ ಓದಿ : ಮಂಗಳೂರು : ಸ್ನ್ಯಾಪ್‌ನಲ್ಲಿ ಅಶ್ಲೀಲ ವಿಡಿಯೋ ಸೆಂಡ್ ಮಾಡಿ ಬೆದರಿಕೆ ಹಾಕಿದವನ ವಿರುದ್ಧ ದೂರು ದಾಖಲು

 

ಅಪಘಾತದ ರಭಸಕ್ಕೆ ಕಾರು ಜೋಕಟ್ಟೆ ಬಜ್ಪೆ ರಸ್ತೆಯಿಂದ ಎಸ್‌.ಇ.ಆರ್‌.ಝೆಡ್ ರಸ್ತೆಗೆ ಉರುಳಿದೆ ಎನ್ನಲಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸಿದ್ದಾರೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page