Connect with us

DAKSHINA KANNADA

ಎಚ್ಚರಿಕೆ : ಕರ್ನಾಟಕ ಕರಾವಳಿಯಲ್ಲಿ ಬಿಸಿಗಾಳಿ ಬೀಸುವ ಎಚ್ಚರಿಕೆ ರವಾನಿಸಿದ ಹವಾಮಾನ ಇಲಾಖೆ..!

Published

on

ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಬಿಸಿಲಿನ ಝಳ ಏರಿಕೆಯಾಗುತ್ತಿದ್ದು, ಈ ಮಧ್ಯೆ ಹವಾಮಾನ ಇಲಾಖೆಯು ಬಿಸಿ ಗಾಳಿಯ ಮುನ್ನೆಚ್ಚರಿಕೆ ನೀಡಿದೆ.

ಮಂಗಳೂರು :  ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಬಿಸಿಲಿನ ಝಳ ಏರಿಕೆಯಾಗುತ್ತಿದ್ದು, ಈ ಮಧ್ಯೆ ಹವಾಮಾನ ಇಲಾಖೆಯು ಬಿಸಿ ಗಾಳಿಯ ಮುನ್ನೆಚ್ಚರಿಕೆ ನೀಡಿದೆ.

ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಜಿಲ್ಲೆಗಳಲ್ಲಿ ಒಂದೆರಡು ಪ್ರದೇಶಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ  ಎಚ್ಚರಿಕೆ ನೀಡಿದೆ.

ಇಂದು ಮತ್ತು ನಾಳೆ ಉತ್ತರ ಭಾರತದ ಪಶ್ಚಿಮ ಬಂಗಾಳ, ಸಿಕ್ಕಿಂ, ಪಶ್ಚಿಮ ರಾಜಸ್ತಾನ, ನಿಕೋಬರ್‌ ದ್ವೀಪ, ಪೂರ್ವ ರಾಜಸ್ತಾನ, ಪಶ್ಚಿಮ ಮಧ್ಯ ಪ್ರದೇಶ, ಮಧ್ಯ ಮಹಾರಾಷ್ಟ್ರ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇದೇ ವೇಳೆ ಕರ್ನಾಟಕ ಕರಾವಳಿಯ ಕೆಲವು ಕಡೆ ಸುಡುವ ಬಿಸಿ ಗಾಳಿ ಬೀಸುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಈಗಾಗಲೇ ಮಧ್ಯಾಹ್ನ 12 ಗಂಟೆಯಾಗುತ್ತಿದ್ದಂತೆ ಸುಡು ಬಿಸಿಲಿನ ಅನುಭವ ಉಂಟಾಗುತ್ತಿದ್ದು, ಜನರು ಬಿಸಿಲಿನ ಹೊಡೆತದಿಂದ ತತ್ತರಿಸಿ ಮನೆಯಿಂದ ಹೊರ ಬರಲಾರದ ಪರಿಸ್ಥಿತಿ ಇದೆ.

DAKSHINA KANNADA

ಹೊನಲು ಬೆಳಕಿನ ಜಯ ವಿಜಯ ಜೋಡುಕರೆ ಕಂಬಳಕ್ಕೆ ಚಾಲನೆ

Published

on

ಮಂಗಳೂರು : ಮಂಗಳೂರು ನಗರದ ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ 15 ನೇ ವರ್ಷದ ಹೊನಲು ಬೆಳಕಿನ ಜಯ ವಿಜಯ ಜೋಡುಕರೆ ಕಂಬಳಕ್ಕೆ ಇಂದು ಬೆಳಗ್ಗೆ ಚಾಲನೆ ದೊರೆತಿದೆ.

ದಿವಂಗತ ಜೆ. ಜಯಗಂಗಾಧರ ಶೆಟ್ಟಿ ಮನ್ಕುತೋಟಗುತ್ತು ಮತ್ತು ನಾಡಾಜೆಗುತ್ತು ಸ್ಮರಣಾರ್ಥ ನಡೆಯುವ ಕಂಬಳದ ಉದ್ಘಾಟನೆ ಬೆಳಗ್ಗೆ ನೆರವೇರಿತು. ಕರಾವಳಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್. ಗಣೇಶ್ ರಾವ್ ಅಧ್ಯಕ್ಷತೆಯಲ್ಲಿ ದೇರೆಬೈಲ್ ವಿಠಲದಾಸ ತಂತ್ರಿ ಅವರು 15 ನೇ ವರ್ಷದ ಜಯ ವಿಜಯ ಜೋಡುಕರೆ ಕಂಬಳವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಜಯ ವಿಜಯ ಜೋಡುಕರೆ ಕಂಬಳ ಸಮಿತಿಯ ಗೌರವ ಅಧ್ಯಕ್ಷ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ನಡೆಯುವ ಕಂಬಳಕ್ಕೆ ಪಾಲಿಕೆಯಿಂದ  ಆರ್ಥಿಕ ನೆರವು ನೀಡಲಾಗುತ್ತಿದೆ. ಕಂಬಳ ಸಂಸ್ಕೃತಿಯನ್ನು ಉಳಿಸಿ ಬೆಳೆಸ ಬೇಕು. ತನ್ನಿಂದ ಸಾಧ್ಯವಿರುವ ಎಲ್ಲಾ ಸಹಕಾರ ನೀಡುತ್ತೇನೆ ಎಂದರು.

ಪೊಲೀಸ್ ಅಧಿಕಾರಿ ಟಿ.ಡಿ. ನಾಗರಾಜ್, ಜಪ್ಪು ಬಂಟರ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಮತ್ತಿತರ ವಿವಿಧ ಕ್ಷೇತ್ರಗಳ ಪ್ರಮುಖರು ಅತಿಥಿಗಳಾಗಿ ಉಪಸ್ಥಿತರಿದ್ದರು. ಜಯ ವಿಜಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಜೆ. ಅನಿಲ್ ಶೆಟ್ಟಿ ಮನ್ಕುತೋಟ, ಮಾರ್ಗದರ್ಶಕ ಸುಧಾಕರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜೆ. ಉಮೇಶ್ ಅತಿಕಾರಿ, ಕೋಶಾಧಿಕಾರಿ ಜೆ. ಬಾಲಕೃಷ್ಣ ಶೆಟ್ಟಿ, ಪ್ರಕಾಶ್ ಮೇಲಂಟ, ಶೇಖರ ಕಿಲ್ಲೆ ಪಡುಹಿತ್ಲು, ಗುರುರಾಜ್ ಶೆಟ್ಟಿ ಮತ್ತು ಇತರ ಪದಾಧಿಕಾರಿಗಳು ಮತ್ತು ಸದಸ್ಯರು ಇದ್ದರು. ಮನೋಜ್ ಶೆಟ್ಟಿ ವಂದಿಸಿದರು. ಅಭಿಷೇಕ್ ಕಾರ್ಯಕ್ರಮ ನಿರ್ವಹಿಸಿದರು.

Continue Reading

DAKSHINA KANNADA

ಮಂಗಳೂರು: ಮಾಸ್ಟರ್ ಚೆಫ್ ಮಹಮ್ಮದ್ ಆಶಿಕ್‌ಗೆ “ಸೌತ್ ಇಂಡಿಯಾ ಯಂಗ್ ಚೆಫ್ ಆಫ್ ದಿ ಇಯರ್” ಪ್ರಶಸ್ತಿ

Published

on

ಮಂಗಳೂರು: ಭಾರತದ ಅತ್ಯುತ್ತಮ ಆಹಾರ ಮತ್ತು ಪಾನೀಯಗಳನ್ನು ಗುರುತಿಸುವ *ಫುಡ್ “ಕನೋಸರ್ಸ್ ಇಂಡಿಯಾ ಅವಾರ್ಡ್ಸ್ (FCIA)* ನ ಏಳನೇ ಆವೃತ್ತಿಯಲ್ಲಿ ಮಂಗಳೂರಿನ ಮಾಸ್ಟರ್ ಚೆಫ್ *ಮಹಮ್ಮದ್ ಆಶಿಕ್* ಅವರಿಗೆ *’ಸೌತ್ ಇಂಡಿಯಾ ಯಂಗ್ ಚೆಫ್ ಆಫ್ ದಿ ಇಯರ್’* ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಬೆಂಗಳೂರಿನ *ತಾಜ್ ಯಶವಂತಪುರ ಹೋಟೆಲ್* ಸಭಾಂಗಣದಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಬಂದ ಅತ್ಯುತ್ತಮ ಶೆಫ್ಗಳು, ರೆಸ್ಟೋರೆಂಟ್ಗಳು ಮತ್ತು ಫುಡ್ ಬ್ರಾಂಡ್ಗಳು ಪಾಲ್ಗೊಂಡಿದ್ದರು. ಮಂಗಳೂರಿನ ಪ್ರತಿಭೆ ಮಾಸ್ಟರ್ ಚೆಫ್ ಮಹಮ್ಮದ್ ಆಶಿಕ್ ಈ ಪ್ರಶಸ್ತಿ ಪಡೆಯುವ ಮೂಲಕ ಜಿಲ್ಲೆಯ ಹೆಸರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಮ್ಮೆ ಹೆಗ್ಗಳಿಸಿದ್ದಾರೆ.

ಪ್ರಶಸ್ತಿ ಪಡೆದ ನಂತರ ಮಾಸ್ಟರ್ ಚೆಫ್ ಮಹಮ್ಮದ್ ಆಶಿಕ್ ಅವರು ಮಾತನಾಡುತ್ತಾ, “ಈ ಪ್ರಶಸ್ತಿಯನ್ನು ಪ್ರಮುಖವಾಗಿ ಆಹಾರದ ಗುಣಮಟ್ಟ, ಸೃಜನಾತ್ಮಕತೆ ಮತ್ತು ಅನುಭವಗಳನ್ನು ಆಧರಿಸಿ ನೀಡಲಾಗುತ್ತದೆ. ಈ ಬಾರಿ ಕನ್ನಡನಾಡಿನ ಹಲವಾರು ರೆಸ್ಟೋರೆಂಟ್ಗಳು ಮತ್ತು ಶೆಫ್ಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನನಗೆ ಈ ಪ್ರಶಸ್ತಿ ಲಭಿಸಿದ್ದು ಗೌರವದ ಸಂಗತಿ. ಇದು ನನ್ನ ಕುಟುಂಬ, ಸ್ನೇಹಿತರು ಮತ್ತು ಜಿಲ್ಲೆಯ ಜನರ ಸಹಕಾರದ ಫಲವಾಗಿದೆ. ಈ ಪ್ರಶಸ್ತಿ ನನಗೆ ಇನ್ನಷ್ಟು ಸಾಧನೆ ಮಾಡಲು ಸ್ಪೂರ್ತಿ ನೀಡಿದೆ” ಎಂದರು.

ಈ ಕಾರ್ಯಕ್ರಮದ ಮೂಲಕ ಭಾರತದ ವೈವಿಧ್ಯಮಯ ಆಹಾರ ಸಂಸ್ಕೃತಿ ಮತ್ತು ಪ್ರತಿಭಾವಂತ ಶೆಫ್ಗಳ ಸಾಧನೆಗಳನ್ನು ಗುರುತಿಸಲಾಯಿತು. ಮಂಗಳೂರಿನ ಮಾಸ್ಟರ್ ಚೆಫ್ ಮಹಮ್ಮದ್ ಆಶಿಕ್ ಅವರ ಈ ಸಾಧನೆ ಜಿಲ್ಲೆಯ ಆಹಾರ ಕ್ಷೇತ್ರದ ಹೆಮ್ಮೆಯಾಗಿದೆ.

Continue Reading

DAKSHINA KANNADA

ಶೂಟ್ ಮಾಡಿದರೆ ಮಾತ್ರ ಗೋಹತ್ಯೆ ನಿಲ್ಲಿಸಲು ಸಾಧ್ಯ : ಡಾ. ಭರತ್ ಶೆಟ್ಟಿ ವೈ

Published

on

ಮಂಗಳೂರು: “ಗೋವುಗಳನ್ನು ವಧೆ ಮಂಗಳೂರಿನಲ್ಲಿ ನಗರ ಪ್ರದೇಶದಲ್ಲಿ ಹೆಚ್ಚಾಗುತ್ತಿದ್ದು, ಸಚಿವ ಮಂಕಾಳ ವೈದ್ಯ ಹೇಳಿದಂತೆ ಆರೋಪಿಗಳ ಮೇಲೆ ಗುಂಡಿಕ್ಕಿ ಕ್ರಮ ಕೈಗೊಂಡರೆ ಗೋ ವಧೆ ನಿಲ್ಲಿಸಲು ಸಾಧ್ಯ. ಪೊಲೀಸರು ಸಚಿವರ ಸಲಹೆ ಪಾಲನೆ ಮಾಡಲು ಮುಂದಾಗಬೇಕು” ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಹೇಳಿದ್ದಾರೆ.

“ಮಂಗಳೂರಿನ ಅಳಕೆಯಲ್ಲಿ ಅಕ್ರಮ ಗೋ ವಧೆ ಕೇಂದ್ರವನ್ನು ಮೇಯರ್ ಮನೋಜ್ ನೇತೃತ್ವದಲ್ಲಿ ಪಾಲಿಕೆ ಅಧಿಕಾರಿಗಳು ಪತ್ತೆ ಮಾಡಿದನ್ನು ಶ್ಲಾಘಿಸುತ್ತೇನೆ. ದರೋಡೆಕೋರರ ವಿರುದ್ಧ ಫೈರಿಂಗ್ ಮಾಡುವ ಪೊಲೀಸರು ಅಕ್ರಮ ಗೋ ಸಾಗಾಟಗಾರರ ವಿರುದ್ಧವು ಇಂಥ ಕ್ರಮ ಕೈಗೊಂಡರೆ ತಾನಾಗಿಯೇ ಕಡಿಮೆ ಆಗುವುದರಲ್ಲಿ ಸಂಶಯವಿಲ್ಲ. ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ ಬಿಜೆಪಿ ಸರ್ಕಾರ ಆಸ್ತಿ ಮುಟ್ಟುಗೋಲು ಕ್ರಮ ಜಾರಿಗೆ ತಂದು ಅಕ್ರಮ ಗೋ ವದೆ ಮಾಡುವವರ ವಿರುದ್ಧ ಕ್ರಮ ಕೈಗೊಂಡಿದೆ.” ಎಂದರು.

ಇದನ್ನೂ ಓದಿ : ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಜಾರಕಿಹೊಳಿ ಮಗ ಆಯ್ಕೆ

“ಇಷ್ಟರವರೆಗೆ ನನ್ನ ಕ್ಷೇತ್ರದಲ್ಲಿಯೇ ಹಲವು ಪ್ರಕರಣ ದಾಖಲಿಸಿ ಆಸ್ತಿ ಮುಟ್ಟುಗೋಲು ಹಾಕಿಸಿದ್ದೇನೆ. ಕಾಂಗ್ರೆಸ್ ಸರ್ಕಾರ ಮಾತ್ರ ಗೋ ವಧೆ ಪ್ರಕರಣಗಳನ್ನು ನಿರ್ಲಕ್ಷ್ಯ ಮಾಡಿದ್ದು ಮತ್ತೆ ಕಸಾಯಿಖಾನೆಗಳು ತಲೆ ಎತ್ತಿವೆ” ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಆರೋಪಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page