Connect with us

LATEST NEWS

WATCH VIDEO: ತರಕಾರಿ ಮಾರುವ ಮಹಿಳೆಯ ಮಗ CA ಪಾಸ್..!! ತಾಯಿಯ ಖುಷಿ ಹೇಳತೀರದು..

Published

on

ಮಹಾರಾಷ್ಟ್ರ: ತಂದೆ ತಾಯಿ ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಿ ಯಶಸ್ವಿ ಬದುಕು ಕಟ್ಟಿಕೊಳ್ಳಲು ದಾರಿ ದೀಪವಾಗುತ್ತಾರೆ. ಜೀವನದಲ್ಲಿ ಅದೆಷ್ಟೋ ಕಷ್ಟಗಳಿದ್ದರೂ ಅದನ್ನು ಮಕ್ಕಳ ಮುಂದೆ ತೋರ್ಪಡಿಸದೆ ಅವರ ಸಾಧನೆಗಾಗಿ ಜೀವನ ಮುಡಿಪಾಗಿಸುತ್ತಾರೆ. ಮಕ್ಕಳ ನೋವು ನಲಿವುಗಳಲ್ಲಿ ಪೋಷಕರೂ ಕೂಡಾ ಪಾಲು ಪಡೆದುಕೊಳ್ಳುತ್ತಾರೆ. ಇಂತಹದೊಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ತೋಂಬರೆ ಮಾವಶಿ ಧಾಣೆ ಉಪನಗರದ ಡೊಂಬಿವಿಲಿ ಪೂರ್ವ ಪ್ರದೇಶದ ಗಾಂಧಿನಗರದಲ್ಲಿ ತರಕಾರಿ ಮಾರುತ್ತಿದ್ದ ಮಹಿಳೆಯ ಮಗ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದೇನೆಂದು ತಾಯಿ ಬಳಿ ಬಂದು ಹೇಳುತ್ತಾನೆ. ಮಗನ ಸಾಧನೆಯನ್ನು ಕೇಳಿದ ತಾಯಿಯ ಮೊಗದಲ್ಲಿ ಆನಂದಭಾಷ್ಪ, ಹೇಳತೀರದಷ್ಟು ಸಾರ್ಥಕ ಭಾವ.. ಇದೆ ಅಲ್ವಾ ತಾಯಿ ಪ್ರೀತಿ ಅಂದ್ರೆ.. ತರಕಾರಿ ಮಾರುವ ಮಹಿಳೆಯೊಬ್ಬಳು ತನ್ನ ಮಗನ ಯಶಸ್ಸನ್ನು ಯಾವ ರೀತಿ ಸಂಭ್ರಮಿಸಿದ್ದಾಳೆ ಎಂಬುದನ್ನು ವೀಡಿಯೋದಲ್ಲಿ ಕಾಣಬಹುದು.

ಮಗ ತಾಯಿಯ ಬಳಿ ಬಂದು ನಾನು ಸಿಎಯಲ್ಲಿ ತೇರ್ಗಡೆಯಾಗಿದ್ದಾನೆ ಎಂದು ಹೇಳುತ್ತಾನೆ. ವಿಚಾರ ಕೇಳಿ ತಾಯಿ ಮಗನನ್ನು ಬಿಗಿದಪ್ಪಿ ಆನಂದ ಬಾಷ್ಪವನ್ನು ಸುರಿಸುತ್ತಾಳೆ. ತಾಯಿಯ ಪ್ರತಿಕ್ರಿಯೆಗೆ ಮಗ ಹೇಗೆ ಸಾಂತ್ವಾನ ಗೊಳಿಸಬೇಕು ಎಂದು ಅರಿಯದೆ ಸುಮ್ಮನೆ ನಿಂತಿದ್ದ. ಈ ವೀಡಿಯೋವನ್ನು ಮಹಾರಾಷ್ಟ್ರದ ಲೋಕೋಪಯೋಗಿ ಇಲಾಖೆ ಸಚಿವ ರವೀಂದ್ರ ಚೌಹಾಣ್ ಅವರು ಈ ಅದ್ಭುತ ದೃಶ್ಯವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

LATEST NEWS

ಏರ್‌ ಇಂಡಿಯಾ ವಿಮಾನ ದುರಂತ: ಸಹೋದರನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ವಿಶ್ವಾಸ್ ರಮೇಶ್‌

Published

on

ಮಂಗಳೂರು/ಅಹಮದಾಬಾದ್: ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬ್ರಿಟನ್ ಪ್ರಜೆ ವಿಶ್ವಾಸ್ ಕುಮಾರ್ ರಮೇಶ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಅದೇ ದುರಂತದಲ್ಲಿ ಮೃತಪಟ್ಟ ಸಹೋದರ ಅಜಯ್ ರಮೇಶ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ.


ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯಲು ಬ್ರಿಟನ್‌ನಿಂದ ದಿಯುಗೆ ಬಂದಿದ್ದ ಸಹೋದರರು ಜೂನ್ 12ರಂದು ಮರಳಿ ಲಂಡನ್‌ಗೆ ಹೊರಟಿದ್ದರು. ಈ ವೇಳೆ ವಿಮಾನ ಅಪಘಾತ ಸಂಭವಿಸಿತ್ತು.

ವಿಮಾನದಲ್ಲಿ ರಮೇಶ್ ತುರ್ತು ನಿರ್ಗಮನ ದ್ವಾರದ ಪಕ್ಕದಲ್ಲಿ 11A ನಲ್ಲಿ ಕುಳಿತಿದ್ದರು. ಅಪಘಾತದ ಸಂದರ್ಭದಲ್ಲಿ ಅವರ ಸೀಟು ಬೇರ್ಪಟ್ಟು ದೂರ ಹಾರಿತ್ತು. ಹೀಗಾಗಿ ಬೆಂಕಿಯಿಂದ ಪಾರಾಗಿದ್ದರು. ಸೀಟಿನ ಸಮೇತ ಕೆಳಗೆ ಹಾರಿದ್ದರು. ವಿಮಾನ ತುಂಡಾಗಿ ಸೀಟು ಕೂಡ ಕಳಚಿಬಂದಿತ್ತು ಎಂದು ವೈದ್ಯರಿಗೆ ರಮೇಶ್​ ತಿಳಿಸಿದ್ದರು.

ತಾನು ಇಳಿದ ಸ್ಥಳ ತಗ್ಗಾಗಿತ್ತು, ಸೀಟ್ ಬೆಲ್ಟ್​ ತೆಗೆದೆ ಒಂದು ಕ್ಷಣ ಮೈಯೆಲ್ಲಾ ಕಂಪಿಸಿತ್ತು, ಆದರೆ ನಾನು ಭೂಮಿಗೆ ತುಂಬಾ ಹತ್ತಿರವಾಗಿದ್ದೆ, ಹಾಗಾಗಿ ಹೊರಬರಲು ಪ್ರಯತ್ನಿಸಿದೆ ಎಂದು ತಿಳಿಸಿದ್ದಾರೆ. ವಿಮಾನ ಅಪಘಾತದ ಸ್ವಲ್ಪ ಸಮಯದ ನಂತರ ಅವರು ಬಿಜೆ ವೈದ್ಯಕೀಯ ಕ್ಯಾಂಪಸ್‌ನಿಂದ ಹೊರಬರುತ್ತಿರುವ ವಿಡಿಯೋ ಈ ಹಿಂದೆ ವೈರಲ್ ಆಗಿತ್ತು.

ವಿಮಾನದಲ್ಲಿ ರಮೇಶ್ ತುರ್ತು ನಿರ್ಗಮನ ದ್ವಾರದ ಪಕ್ಕದಲ್ಲಿ 11A ನಲ್ಲಿ ಕುಳಿತಿದ್ದರು. ಅಪಘಾತದ ಸಂದರ್ಭದಲ್ಲಿ ಅವರ ಸೀಟು ಬೇರ್ಪಟ್ಟು ದೂರ ಹಾರಿತ್ತು. ಹೀಗಾಗಿ ಬೆಂಕಿಯಿಂದ ಪಾರಾಗಿದ್ದರು. ಸೀಟಿನ ಸಮೇತ ಕೆಳಗೆ ಹಾರಿದ್ದರು. ವಿಮಾನ ತುಂಡಾಗಿ ಸೀಟು ಕೂಡ ಕಳಚಿಬಂದಿತ್ತು ಎಂದು ವೈದ್ಯರಿಗೆ ರಮೇಶ್​ ತಿಳಿಸಿದ್ದರು.

ಇದನ್ನೂ ಓದಿ: ಅಹಮದಾಬಾದ್ ವಿಮಾನ ದುರಂತ; ಕೊನೆಗೂ ಎರಡನೇ ಬ್ಲ್ಯಾಕ್​ಬಾಕ್ಸ್​ ಪತ್ತೆ

ತಾನು ಇಳಿದ ಸ್ಥಳ ತಗ್ಗಾಗಿತ್ತು, ಸೀಟ್ ಬೆಲ್ಟ್​ ತೆಗೆದೆ ಒಂದು ಕ್ಷಣ ಮೈಯೆಲ್ಲಾ ಕಂಪಿಸಿತ್ತು, ಆದರೆ ನಾನು ಭೂಮಿಗೆ ತುಂಬಾ ಹತ್ತಿರವಾಗಿದ್ದೆ, ಹಾಗಾಗಿ ಹೊರಬರಲು ಪ್ರಯತ್ನಿಸಿದೆ ಎಂದು ತಿಳಿಸಿದ್ದಾರೆ. ವಿಮಾನ ಅಪಘಾತದ ಸ್ವಲ್ಪ ಸಮಯದ ನಂತರ ಅವರು ಬಿಜೆ ವೈದ್ಯಕೀಯ ಕ್ಯಾಂಪಸ್‌ನಿಂದ ಹೊರಬರುತ್ತಿರುವ ವಿಡಿಯೋ ಈ ಹಿಂದೆ ವೈರಲ್ ಆಗಿತ್ತು.

ವಿಪರ್ಯಾಸವೆಂದರೆ ವಿಶ್ವಾಸ್ ಅವರ ಸಹೋದರ ಅಜಯ್ ರಮೇಶ್ ಸಾವನ್ನಪ್ಪಿದ್ದರು. ಹೀಗಾಗಿ ಅವರ ಡಿಎನ್‌ಎ ಗುರುತಿಸಲಾಗಿದ್ದು, ಇಂದು ದಿಯುವಿನಲ್ಲಿ ಬೆಳಿಗ್ಗೆ ಅಜಯ್ ಅವರ ಅಂತ್ಯಕ್ರಿಯೆ ನಡೆದಿದ್ದು, ವಿಶ್ವಾಸ್ ಕೂಡ ಅಲ್ಲಿ ಹಾಜರಿದ್ದರು ಎಂದು ವರದಿಯಾಗಿದೆ.

Continue Reading

LATEST NEWS

ಇನ್ನು ಮುಂದೆ 3 ಸಾವಿರಕ್ಕೆ ವಾರ್ಷಿಕ ಟೋಲ್‌ ಪಾಸ್‌!

Published

on

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಬುಧವಾರ ಹೆದ್ದಾರಿಯಲ್ಲಿ ತೊಂದರೆಯಿಲ್ಲದೆ ಪಯಾಣಕ್ಕೆ ಅನುಕೂಲವಾಗುವಂತೆ ಫಾಸ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಅನ್ನು ಪರಿಚಯಿಸುತ್ತಿರುವುದಾಗಿ ಘೋಷಿಸಿದೆ.

3 ಸಾವಿರ ರೂಪಾಯಿಗೆ ವಾರ್ಷಿಕ ಟೋಲ್‌ ಪಾಸ್‌ ನೀಡಲು ಸರ್ಕಾರ ಮುಂದಾಗಿದ್ದು, ಆಗಸ್ಟ್ 15 ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಹೆದ್ದಾರಿ ಖಾತೆಯ ಸಚಿವ ನಿತಿನ್‌ ಗಡ್ಕರಿ ಘೋಷಿಸಿದ್ದಾರೆ.

ಈ ಪಾಸ್ ಅನ್ನು ಕಾರುಗಳು, ಜೀಪ್‌ಗಳು ಮತ್ತು ವ್ಯಾನ್‌ಗಳಂತಹ ವಾಣಿಜ್ಯೇತರ ಖಾಸಗಿ ವಾಹನಗಳಿಗೆ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾಗಿದೆ. ನವೀಕರಣಕ್ಕಾಗಿ ಮೀಸಲಾದ ಲಿಂಕ್ ಅನ್ನು ಶೀಘ್ರದಲ್ಲೇ ರಾಜ್‌ಮಾರ್ಗ್ ಯಾತ್ರಾ ಅಪ್ಲಿಕೇಶನ್‌ನಲ್ಲಿ ಹಾಗೂ NHAI ಮತ್ತು MoRTH ನ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗುವಂತೆ ಮಾಡಲಾಗುತ್ತದೆ.

ಇದನ್ನೂ ಓದಿ: 6 ವರ್ಷದ ಮಗುವಿನ ಸಾವಿಗೆ ಕಾರಣವಾಯಿತೇ ಆನ್‌ಲೈನ್‌ನಲ್ಲಿ ತರಿಸಿದ್ದ ಕೇಕ್!?

ಈ ಪಾಸ್‌ನಿಂದ 60 ಕಿ.ಮೀ ವ್ಯಾಪ್ತಿಯೊಳಗೆ ಇರುವ ಟೋಲ್ ಪ್ಲಾಜಾಗಳಿಗೆ ಸಂಬಂಧಿಸಿದ ದೀರ್ಘಕಾಲದ ಸಮಸ್ಯೆಗಳು ಪರಿಹಾರವಾಗಲಿದೆ. ಟೋಲ್‌ಗಳಲ್ಲಿ ಕಾಯುವ ಸಮಯ ಮತ್ತು ದಟ್ಟಣೆ ಕಡಿಮೆ ಯಾಗಲಿದೆ.

Continue Reading

LATEST NEWS

ಉಡುಪಿ: ಶಾಲಾ ಬಸ್ ಗೆ ಲಾರಿ ಡಿ*ಕ್ಕಿ; ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ

Published

on

ಉಡುಪಿ: ಖಾಸಗಿ ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿ*ಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬುಧವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ತಾಲೂಕಿನ ಧರ್ಮವರ ಆಡಿಟೋರಿಯಂ ಬಳಿ ನಡೆದಿದೆ.


ಬ್ರಹ್ಮಾವರ ಜಿ.ಎಂ ವಿದ್ಯಾನಿಕೇತನ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಕುಂದಾಪುರದಿಂದ ಬಂದು ಧರ್ಮಾವರ ಆಡಿಟೋರಿಯಂ ಸರ್ಕಲ್ ಬಳಿ ಯೂ ಟರ್ನ್ ಮಾಡುವಾಗ ಹಿಂದಿನಿಂದ ಬಂದ ಲಾರಿ ಡಿ*ಕ್ಕಿಯಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ: ಮಂಗಳೂರು: ಭೀಕರ ಕಾರು ಅಪಘಾತದಲ್ಲಿ NSUI ಮುಖಂಡ ಸಹಿತ ಇಬ್ಬರು ಸಾವು

ಅಪಘಾತದ ಸಂದರ್ಭದಲ್ಲಿ ವ್ಯಾನ್‌ನಲ್ಲಿ ವಿದ್ಯಾರ್ಥಿಗಳಿದ್ದು ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page