Connect with us

DAKSHINA KANNADA

ಕಸ್ತೂರಿ ರಂಗನ್ ವರದಿ ರದ್ದುಪಡಿಸಲು ಮುಂದಾದಾಗ ಅಡ್ಡಿಪಡಿಸಿದ BJP ಈಗ ಮಾಡುತ್ತಿರುದೇನು..?-ಮಾಜಿ ಸಚಿವ ರೈ ಪ್ರಶ್ನೆ

Published

on

ಮಂಗಳೂರು: ಕಸ್ತೂರಿ ರಂಗನ್ ವರದಿ ಇನ್ನೂ ರದ್ದಾಗಿಲ್ಲ. ಆದರೆ ಬಿಜೆಪಿ ಇದನ್ನು ರದ್ದುಪಡಿಸದೇ ಈಗ ನಮ್ಮ ಮೇಲೆ ಆರೋಪ ಹೊರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಬಿ ರಮಾನಾಥ ರೈ ದೂರಿದ್ದಾರೆ.


ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗಾಡ್ಗೀಳ್ ವರದಿಯನ್ವಯ ಕಠಿಣ ಅರಣ್ಯ ಕಾಯ್ದೆ ತರಲು ಹೋದ ಸಂದರ್ಭದಲ್ಲಿ ಅರಣ್ಯ ಅಂಚಿನಲ್ಲಿರುವ ಕೆಲವರು ವಿರೋಧ ಮಾಡಿದಾಗ ಕಸ್ತೂರಿ ರಂಗನ್ ಅಧ್ಯಕ್ಷತೆಯಲ್ಲಿ ಸಮಿತಿ ಮಾಡಲಾಯಿತು. ಗಾಡ್ಗೀಳ್‌ನಲ್ಲಿದ್ದ ಸರಿ ತಪ್ಪು ಸರಿಪಡಿಸಿ ವರದಿಯನ್ನು ಕೊಡಲು ಸಭೆ ಮಾಡಿತ್ತು.

ಕಸ್ತೂರಿ ರಂಗನ್‌ ಅವರು ಇದು ಕೇವಲ ಕರ್ನಾಟಕಕ್ಕೆ ಸೀಮಿತವಾದ ವಿಚಾರವಲ್ಲ, ಕೇರಳ, ಆಂಧ್ರಪ್ರದೇಶ, ತೇಲಂಗಾಣ, ಗೋವಾ ಹೀಗೆ ಎಲ್ಲಾ ರಾಜ್ಯಗಳಿಗೆ ಸೇರಿದ ವಿಚಾರವಾಗಿದ್ದ ಕಾರಣ ಅಂದು ಎಲ್ಲ ರಾಜ್ಯಗಳಿಗೆ ಕರಡು ನೋಟಿಫಿಕೇಶನ್ ನೀಡಲಾಯಿತು. ರಾಜ್ಯಗಳ ತಕರಾರು ಇದ್ದರೆ ಸೂಚಿಸಿ ಕಳುಹಿಸಿ ಕೊಡಿ ಎಂದು ಹೇಳಲಾಗಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇದ್ದಾಗ ಈ ಬಗ್ಗೆ ವಿಸ್ತಾರ ಚರ್ಚೆಯೂ ನಡೆಯಿತು ಎಂದರು.

ಈಗಿರುವ ಅರಣ್ಯ ಕಾಯ್ದೆ ಬಹಳ ಕಠಿಣ ಇದೆ, ಇರುವ ನಿಯಮಾವಳಿಗಳು ಸಾಕು ಕಾಂಗ್ರೆಸ್ ಕಳಿಸಿತ್ತು. ನಾಲ್ಕೈದು ಬಾರಿ‌ಡ್ರಾಫ್ಟ್ ನೋಟಿಫಿಕೇಶನ್ ಬರುತ್ತಲೆ ಇತ್ತು. ಮೊದಲ ಬಾರಿ ಬಂದಾಗ ಜನರಲ್ಲಿ ಸರಿಯಾದ ಮಾಹಿತಿ ಇಲ್ಲದೆ ಗುಲ್ಲೆದ್ದಿತು.

ಎನ್‌ಡಿಎ ಬಂದ ಮೇಲೆ ಕಾಂಗ್ರೆಸ್ ವರದಿ ಸರಿಯಾಗಿ ಕೊಟ್ಟಿಲ್ಲ ಎಂದು ಅಪಪ್ರಚಾರ ಮಾಡಿದರು. ಅಂತಿಮವಾಗಿ ಕಸ್ತೂರಿ ರಂಗನ್‌ ವರದಿಯೇ ಬೇಡ ಎಂದು ನಿರ್ಧರಿಸಿದೆವು. ಮತ್ತೆ ಡ್ರಾಫ್ಟ್‌ ನೊಟಿಫಿಕೇಶನ್ ಬಂತು. ಈಗಿನ ಸರ್ಕಾರ ಕೂಡ ವರದಿ ಬೇಡ ಅಂತ ವರದಿ ಕೊಟ್ಟಿದೆ ಎಂದರು.

ಈ ವರದಿಯನ್ನು ಜಾರಿ ಮಾಡೋದು ಬಿಡೋದು ಕೇಂದ್ರ. ವಿರೋಧ ಅಂದರೆ ಸಾಲದು ರದ್ದು ಮಾಡುವಲ್ಲಿ ಏನು ಕ್ರಮ ಕೈಗೊಂಡಿದ್ದಾರೆ..? ಡಬಲ್ ಎಂಜಿನ್ ಸರಕಾರ ಇರುವಾಗ ಕೇಂದ್ರ ಜತೆ ಮಾತನಾಡಿ ಕೇಂದ್ರ ಅರಣ್ಯ ಪರಿಸರ ಇಲಾಖೆ ರದ್ದು ಮಾಡಬೇಕು ಎಂದು ಒತ್ತಾಯಿಸಿದರು.

ಇನ್ನೂ ಕಸ್ತೂರಿ ರಂಗನ್‌ ವರದಿ ರದ್ದಾಗಿಲ್ಲ. ಆ ಸಮಸ್ಯೆ ಇನ್ನೂ ಜೀವಂತ ಇದೆ. ರಾಜ್ಯ ಸರ್ಕಾರ ವಿರೋಧ ಇದೆ ಎಂದ ಮಾತ್ರಕ್ಕೆ ರದ್ದಾಗಲ್ಲ. ನಮ್ಮ ಸರ್ಕಾರದ ಮೇಲೆ ಗೂಬೆ ಕೂರಿಸಿದಿರಿ. ರದ್ದು ಮಾಡಲು ಆಗದಿದ್ದರೆ ವರದಿ ಹೆಸರು ಹೇಳಿ ರಾಜಕೀಯ ಮಾಡೋದನ್ನ ನಿಲ್ಲಿಸಿ ಎಂದರು.

ಅಂದು ಎತ್ತಿನಹೊಳೆ ಬೇಡ ಎಂದವರು ಈಗ ನಾವೇ ಅದನ್ನು ಮಾಡಿದ್ದು ಎನ್ನುತ್ತಿದ್ದಾರೆ. ಅದೇ ರೀತಿ ಇದನ್ನೂ ರದ್ದು ಮಾಡದೆ ಕೇವಲ ವಿರೋಧ ಇದೆ ಎನ್ನುವುದು ಸಂಪೂರ್ಣ ರಾಜಕೀಯವಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಶಶಿಧರ ಹೆಗ್ಡೆ, ಶಾಲೆಟ್‌ ಪಿಂಟೊ, ಶಶಿಧರ ಹೆಗ್ಡೆ, ಶಾಹುಲ್ ಹಮೀದ್, ಗಣೇಶ್ ಪೂಜಾರಿ, ಉಮೇಶ್ ದಂಡಕೇರಿ, ಅಪ್ಪಿ ಮೊದಲಾದರಿದ್ದರು.

DAKSHINA KANNADA

ಆಸ್ಪತ್ರೆಯಿಂದ ಜೈಲಿಗೆ ಶಿಫ್ಟ್‌ ಆದ ಕೋಟೆಕಾರ್ ಬ್ಯಾಂಕ್ ದರೋಡೆ ಆರೋಪಿ

Published

on

ಉಳ್ಳಾಲದ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿ ಮುರುಗನ್ ಡಿ ಇದೀಗ ಆಸ್ಪತ್ರೆಯಿಂದ ಜೈಲು ಸೇರಿದ್ದಾನೆ.

ಪೊಲೀಸರ ವಶದಲ್ಲಿದ್ದ ವೇಳೆ ಸ್ಥಳ ಮಹಜರು ವೇಳೆ ಬಾಲ ಬಿಚ್ಚಲು ಹೋಗಿ ಪೊಲೀಸರ ಗುಂಡೇಟು ತಿಂದು ಆಸ್ಪತ್ರೆ ಸೇರಿದ್ದ. ಕರ್ನಾಟಕ ಕೇರಳ ಗಡಿ ಭಾಗದ ಗ್ರಾಮವಾಗಿರುವ ಅಜ್ಜಿನಡ್ಕ ಎಂಬಲ್ಲಿ ಸ್ಥಳ ಮಹಜರು ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ ಉಳ್ಳಾಲ ಠಾಣಾಧಿಕಾರಿ ತಪ್ಪಿಸಿಕೊಳ್ಳುತ್ತಿದ್ದ ಆರೋಪಿ ಮುರುಗನ್ ಡಿ ಕಾಲಿಗೆ ಗುಂಡು ಹಾರಿಸಿದ್ದರು.

ಇದೀಗ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಆರೋಪಿ ಮುರುಗನ್ ಡಿ ಯನ್ನು ಜಿಲ್ಲಾ ಕಾರಾಗ್ರಹಕ್ಕೆ ಕಳುಹಿಸಲಾಗಿದೆ. ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಇನ್ನೂ ಆರೋಪಿಗಳ ಬಂಧನವಾಗಬೇಕಾಗಿದ್ದು, ಆರೋಪಿಗಳಿಗೆ ಸಹಕರಿಸಿದ ಸ್ಥಳೀಯ ವ್ಯಕ್ತಿ ಯಾರು ಎಂಬುವುದು ಕೂಡಾ ಬಯಲಾಗಬೇಕಾಗಿದೆ.

Continue Reading

DAKSHINA KANNADA

ಹರಿಪಾದೆ ಜಾರಂದಾಯ ವಾರ್ಷಿಕ ನೇಮೋತ್ಸವದಲ್ಲಿ ಭಾಗಿಯಾದ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್

Published

on

ಮುಲ್ಕಿ : ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ತುಳುನಾಡಿನ ನೇಮೋತ್ಸವದಲ್ಲಿ ಭಾಗಿಯಾದರು.

ಮಂಗಳವಾರ ರಾತ್ರಿ ಪಕ್ಷಿಕೆರೆ ಸಮೀಪದ ಹರಿಪಾದೆ ಜಾರಂದಾಯ ವಾರ್ಷಿಕ ನೇಮ ನಡೆದಿದ್ದು, ದೈವಕ್ಕೆ ಮಲ್ಲಿಗೆ ಹೂವು ಅರ್ಪಿಸಿ, ಸುಮಾರು ಮೂರು ಗಂಟೆಗಳ ಕಾಲ ಭಕ್ತಿಯಿಂದ ಜಾರಂದಾಯ ನೇಮವನ್ನು ವೀಕ್ಷಿಸಿದರು.

ವಿಶಾಲ್ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು, ಇದಕ್ಕಾಗಿ ದೈವಕ್ಕೆ ಪ್ರಾರ್ಥನೆ ಸಲ್ಲಿಸಿದ್ದು, ಸಂಪೂರ್ಣ ಗುಣಮುಖವಾಗಿ ಬಂದು ಶ್ರೀ ಕ್ಷೇತ್ರದಲ್ಲಿ ತುಲಾಭಾರ ಸೇವೆ ಕೊಡಲು ಅರ್ಚಕರು ಸೂಚಿಸಿದ ಹಿನ್ನೆಲೆಯಲ್ಲಿ ಅವರು ಒಪ್ಪಿಕೊಂಡರು. ಮಾದ್ಯಮದೊಂದಿಗೆ ಮಾತನಾಡಿದ ವಿಶಾಲ್ ಕಾಂತಾರ ನಿನಿಮಾದಲ್ಲಿ ದೈವ ಮತ್ತು ಇಲ್ಲಿನ ನೇಮೋತ್ಸವದ ಬಗ್ಗೆ ತಿಳಿದಿದ್ದೇನೆ.

ಇದನ್ನೂ ಓದಿ: ಅಯೋಧ್ಯೆ ಶ್ರೀರಾಮ ಮಂದಿರದ ಪ್ರಧಾನ ಅರ್ಚಕ ನಿಧನ

ಇದೀಗ ಪ್ರಥಮ ಬಾರಿಗೆ ತುಳುನಾಡಿನ ನೇಮೋತ್ಸವವನ್ನು ನೋಡುತ್ತಿದ್ದೇನೆ ತುಂಬಾ ಖುಷಿ ನೀಡಿದೆ. ನಿನ್ನೆ ಕೊಲ್ಲೂರು ಮುಕಾಂಬಿಕೆ ದರ್ಶನ ಪಡೆದು ಇದೀಗ ಇಲ್ಲಿಗೆ ಭೇಟಿ ನೀಡಿದ್ದೇನೆ, ಬೆಳೆಯುತ್ತಿರುವ ತುಳು ಚಿತ್ರರಂಗದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ತಮಿಳಿನಲ್ಲಿ ಹಲವು ಸಿನಿಮಾಗಳ ಮಾತುಕಥೆ ನಡೆಯುತ್ತಿದೆ ಎಂದರು.

Continue Reading

BANTWAL

ತುಂಬೆ: ಚಾಲಕನಿಗೆ ಮೂರ್ಛೆ ರೋಗ ಬಂದು ಡಿವೈಡರ್ ಮೇಲೇರಿದ ಲಾರಿ

Published

on

ಬಂಟ್ವಾಳ: ಚಾಲಕನಿಗೆ ಮೂರ್ಛೆ ರೋಗ ಬಂದು ಡಿವೈಡರ್ ಮೇಲೆ ಲಾರಿ ಹತ್ತಿ ಸುಮಾರು 100 ಮೀ ನಷ್ಟು ಚಲಿಸಿ ನಿಂತಿದ್ದು, ಬಳಿಕ ಡ್ರೈವರ್ ಸೀಟಿನಲ್ಲಿ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ರಾ.ಹೆ.75ರ ತುಂಬೆ ಸಮೀಪ ನಡೆದಿದೆ.

ಲಾರಿ ಚಾಲಕನನ್ನು ಕೂಡಲೇ ಸ್ಥಳೀಯರು ತುಂಬೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇಂದು ಬೆಳಗ್ಗೆ 7.45 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಡಿವೈಡರ್ ಮೇಲೆ ಹಾಕಿದ್ದ ರಸ್ತೆ ಸೂಚಕಾ ಫಲಕಕ್ಕೆ ಹಾನಿಯಾಗುವುದು ಬಿಟ್ಟರೆ ಬೇರೆ ಯಾವೂದೇ ರೀತಿಯ ತೊಂದರೆ ಆಗಲಿಲ್ಲ.

ಲಾರಿಯು ಬೆಂಗಳೂರಿನಿಂದ ಮಂಗಳೂರು ಕಡೆಗೆ ಚಲಿಸುತ್ತಿತ್ತು. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page