Connect with us

BIG BOSS

ವೀಕೆಂಡ್‌ನಲ್ಲಿ ಯಾವೆಲ್ಲಾ ವಿಷಯಗಳು ಚರ್ಚೆಗೆ ಬರಲಿವೆ?

Published

on

BBK12: ಎಂದರೆ ಸುದೀಪ್ ಸರ್ ಯಾವೆಲ್ಲ ವಿಷಯಗಳನ್ನು ಚರ್ಚೆಗೆ ತೆಗದುಕೊಳ್ಳುತ್ತಾರೆ ಎಂಬುದರ ಕುರಿತು ಬಿಗ್‌ಬಾಸ್ ಪ್ರಿಯರಲ್ಲಿ ಮೂಡುತ್ತದೆ. ಈ ವಾರವೂ ಅದು ಮುಂದುವರಿಯಲಿವೆ. ಈ ವೀಕೆಂಡ್‌ನಲ್ಲಿ ಚರ್ಚೆ ಮಾಡಲು ಸಾಕಷ್ಟು ವಿಷಯಗಳು ಇವೆ.


ಅಶ್ವಿನಿ ರಜತ್ ಕಿತ್ತಾಟ

ಬಿಗ್‌ಬಾಸ್ ಮನೆಯಲ್ಲಿ ಈ ವಾರ ನಾಮಿನೇಷನ್ ಪ್ರಕ್ರಿಯೆಯಲ್ಲಿ ಅಶ್ವಿನಿ ಗೌಡ ಮತ್ತು ರಜತ್ ಜಗಳ ಮಾಡಿಕೊಂಡಿದ್ದರು. ಮಾತುಗಳು ಮಿತಿ ಮೀರಿದ್ದವು. ಅಶ್ವಿನಿ ಗೌಡ ಕಚಡ ಎಂಬ ಕೆಟ್ಟ ಶಬ್ದ ಬಳಕೆ ಮಾಡಿದ್ದರು. ರಜತ್ ಕೂಡ ಆ ಸಂದರ್ಭದಲ್ಲಿ ತನ್ನ ನಾಲಿಗೆಯನ್ನು ಹರಿಬಿಟ್ಟಿದ್ದರು. ಧ್ರುವಂತ್‌ಗೂ ಬೈದಿದ್ದರು. ಅಶ್ವಿನಿ ಗೌಡ ಇಷ್ಟು ದಿನ ಸೈಲೆಂಟ್ ಆಗಿದ್ದು, ಈ ವಾರ ಅವರ ಮಾತುಗಳು ಹಿಡಿತ ತಪ್ಪಿತ್ತು. ಈ ವಿಷಯಗಳು ಪ್ರಮುಖವಾಗಿ ಚರ್ಚೆಗೆ ಬರಲಿವೆ ಎಂದೆನಿಸುತ್ತಿದೆ.

ಚೈತ್ರಾ ಕ್ಯಾಪ್ಟನ್ಸಿ

ಚೈತ್ರಾ ಉಸ್ತುವಾರಿಯಲ್ಲಿ ರಜತ್‌ಗೆ ಫೇವರಿಸಂ ಮಾಡಿದರು ಎಂಬ ಮಾತು ಕೇಳಿ ಬಂದಿತ್ತು. ಈ ವಿಷಯವನ್ನು ಅಶ್ವಿನಿ ಗೌಡ ಚರ್ಚೆಗೆ ತೆಗೆದಿದ್ದರು. ಹೀಗಾಗಿ, ಈ ವಿಷಯ ಪ್ರಸ್ತಾಪ ಆಗಬಹುದು. ಇನ್ನು ಬಜರ್ ಒತ್ತುವ ಕೊನೆಯ ರೌಂಡ್‌ನಲ್ಲಿ ಚೈತ್ರಾ ಎಡವಿದ್ದರು. ಮೊದಲು ಬಜರ್ ಒತ್ತಿದ್ದು ರಜತ್ ಆಗಿದ್ದರೂ, ಚೈತ್ರಾ ಅವಕಾಶವನ್ನು ಅಶ್ವಿನಿಗೆ ನೀಡಿದ್ದರು. ಈ ಎಡವಟ್ಟಿನ ಬಗ್ಗೆ ವೀಕೆಂಡ್‌ನಲ್ಲಿ ಚರ್ಚೆಗೆ ಪ್ರಮುಖ ವಿಷಯವಾಗಿದೆ.

ಗಿಲ್ಲಿ ಸೀಕ್ರೆಟ್ ಟಾಸ್ಕ್

ಈ ವಾರದಲ್ಲಿ ವಿಲನ್ ಗಿಲ್ಲಿಗೆ ಕೊಟ್ಟ ಸೀಕ್ರೆಟ್ ಟಾಸ್ಕ್‌ನಲ್ಲಿ ಕಾವ್ಯಾ ಶೈವ ಅವರನ್ನು ಅಳಿಸಿ ಉತ್ತಮವಾಗಿ ಆಡಿದ್ದರು. ಹಾಗೂ ಫೋಟೋಗಳನ್ನು ಕದಿಯುವ ಟಾಸ್ಕ್ ಕೂಡ ಉತ್ತಮವಾಗಿ ಮಾಡಿದ್ದಾರೆ. ಗಿಲ್ಲಿ ಭಾವನಾತ್ಮಕವಾಗಿ ಅನುಭವಿಸಿದ ಚಾಲೆಂಜ್ ಬಗ್ಗೆ ಈ ವಾರ ಚರ್ಚೆ ಆಗಬಹುದು.

ಇದನ್ನೂ ಓದಿ: ಕಾವ್ಯಾ ಅನುಮಾನ ನಿಜವಾಯ್ತು; ಎಲ್ಲರ ಮುಂದೆ ಗಿಲ್ಲಿ ಸೀಕ್ರೆಟ್‌ ರಿವೀಲ್‌!

ಅಷ್ಟೇ ಅಲ್ಲದೇ, ಮನೆಯಲ್ಲಿ ಈ ವಾರ ಎಲ್ಲರೂ ಉತ್ತಮವಾಗಿ ಟಾಸ್ಕ್ ಆಡಿದ್ದರು. ಈ ಬಗ್ಗೆ ಸುದೀಪ್ ಅವರು ಎಲ್ಲರಿಗೂ ಮೆಚ್ಚುಗೆ ಸೂಚಿಸುವ ಸಾಧ್ಯತೆಯೂ ಇದೆ. ಜತೆಗೆ ಕ್ಯಾಪ್ಟನ್ ರೂಂ ಬಾಗಿಲನ್ನು ಸುದೀಪ್ ಮುಚ್ಚಿಸಿದ್ದರು. ಈ ವಾರ ವಿಲನ್ ತೆಗಿಸಿದ್ದಾರೆ. ಈ ವಿಷಯದ ಬಗ್ಗೆ ಚರ್ಚೆ ಆಗಬಹುದು ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಲ್ಲಿದ್ದರೂ, ಇದು ಬಿಗ್‌ಬಾಸ್ ಆಟದ ಸ್ಟ್ರೆಟಜಿ ಆಗಿರುವುದರಿಂದ ಈ ವಿಷಯ ಚರ್ಚೆ ಆಗೋದು ಅನುಮಾನವೇ.

BIG BOSS

ಹನುಮಂತ ಪ್ರಕಾರ ಬಿಗ್ ಬಾಸ್ ಗೆಲ್ಲೋದು ಇವರೇ ಅಂತೆ!

Published

on

BBK12 : ಬಿಗ್ ಬಾಸ್ ಸೀಸನ್ 12 ಕೊನೆಯ ಹಂತಕ್ಕೆ ಬಂದು ನಿಂತಿದೆ. ಸದ್ಯ ಯಾರಿಗೆ ಬಿಗ್ ಬಾಸ್ ವಿನ್ನರ್ ಪಟ್ಟ ಸಿಗಲಿದೆ ಅನ್ನೋ ಕುತೂಹಲ ಬಿಗ್ ಬಾಸ್ ವೀಕ್ಷಕರದ್ದು.  ತಮ್ಮ ನೆಚ್ಚಿನ ಸ್ಪರ್ಧಿಗಳಿಗೆ ಈಗಾಗಲೇ ಬಹುತೇಕ ಮಂದಿ ವೋಟ್ ಮಾಡಿದ್ದು, ಫಿನಾಲೆಯತ್ತ ದೃಷ್ಟಿ ನೆಟ್ಟಿದ್ದಾರೆ.

ಬಿಗ್ ಬಾಸ್‌ 11ರಲ್ಲಿ ವೈಲ್ಡ್ ಕಾರ್ಡ್ ಪಡೆದಿದ್ದವರು ಗಾಯಕ ಹನುಮಂತ ಲಮಾಣಿ. ಆ ಸೀಸನ್‌ನ ವಿಜೇತರಾಗಿ ಹೊರಬಂದು ಇತಿಹಾಸ ಸೃಷ್ಟಿಸಿದ್ದರು. ವೈಲ್ಡ್ ಕಾರ್ಡ್ ಮೂಲಕ ಒಳಗೆ ಹೋದವರು ಗೆದ್ದು ತೋರಿಸಬಹುದೆಂದು ತೋರಿಸಿಕೊಟ್ಟಿದ್ದರು ಹನುಮಂತ. ಇದೀಗ ಈ ಬಾರಿಯ ಬಿಗ್ ಬಾಸ್ ವಿನ್ನರ್ ಯಾರು ಅನ್ನೋ ಭವಿಷ್ಯ ನುಡಿದಿದ್ದಾರೆ.

ಯಾರು ವಿನ್ನರ್ ?

ಗಿಲ್ಲಿ ಅಣ್ಣ ನನ್ನ ಫೇವರಿಟ್, ಅವರೇ ವಿನ್ನರ್ ಆಗ್ತಾರೆ ಎಂದು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಹನುಮಂತ ಹೇಳಿದ್ದಾರೆ.

ಈ ಬಾರಿಗೆ ಗಿಲ್ಲಿ ಚೆನ್ನಾಗಿ ಆಟವಾಡಿದ್ದಾರೆ. ಅವರು ಗೆಲ್ಲುವ ವಿಶ್ವಾಸ ನನಗೆ ಇದೆ. ಬಿಗ್ ಬಾಸ್ ಮನೆಯಲ್ಲಿ ಯಾವುದೇ ಭೇದ ಭಾವ ಮಾಡುವುದಿಲ್ಲ. ಈ ಬಾರಿ ಅತಿ ಹೆಚ್ಚು ವೋಟಿಂಗ್ ಆಗಿದೆ. ಅತಿ ಹೆಚ್ಚು ವೋಟು ಗಿಲ್ಲಿನಟ ತೆಗೆದುಕೊಂಡಿದ್ದಾರೆ. ನಾನು ಸಹ ಗಿಲ್ಲಿ ನಟನಿಗೆ ವೋಟ್ ಮಾಡಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ : BBK12: ಗಿಲ್ಲಿ ವಿನ್ನರ್ ಆದ್ರೂ ನಿಲ್ಲದ ಕಿಚ್ಚು: ರಕ್ಷಿತಾ ಪರ ಸೋಷಿಯಲ್ ಮೀಡಿಯಾ ವಾರ್; ಯಾಕೆ ಗೊತ್ತಾ?

ನನ್ನ ಫೇವರಿಟ್ ಗಿಲ್ಲಿ ಅಣ್ಣ. ಎಲ್ಲರಿಗೂ ಆಲ್ ದಿ ಬೆಸ್ಟ್. ಸೋತೋರು ಬೇಜಾರ್ ಮಾಡ್ಕೋಬೇಡಿ. ಎಲ್ಲರಿಗೂ ಆಲ್ ದಿ ಬೆಸ್ಟ್, ಗಿಲ್ಲಿ ಅಣ್ಣನಿಗೆ ವಿಶೇಷ ಆಲ್ ದಿ ಬೆಸ್ಟ್. ಸುದೀಪ್ ಸರ್ ಮುಂದೆ ನಿಲ್ಲೋದೆ ಪುಣ್ಯ. ಫೈನಲ್ ವರೆಗೂ ಹೋಗೋದೆ ಪುಣ್ಯ  ಎಂದಿದ್ದಾರೆ.

Continue Reading

BIG BOSS

BBK12: ಗಿಲ್ಲಿ ವಿನ್ನರ್ ಆದ್ರೂ ನಿಲ್ಲದ ಕಿಚ್ಚು: ರಕ್ಷಿತಾ ಪರ ಸೋಷಿಯಲ್ ಮೀಡಿಯಾ ವಾರ್; ಯಾಕೆ ಗೊತ್ತಾ?

Published

on

BBK12: ಬಿಗ್‌ಬಾಸ್‌ ಕನ್ನಡ ಸೀಸನ್‌ 12ರ ಫಿನಾಲೆ ಇಂದು ನಡೆಯಲಿದ್ದು, ಆರು ಸ್ಫರ್ಧಿಗಳು ಫಿನಾಲೆ ತಲುಪಿದ್ದಾರೆ. ಅವರ ಪೈಕಿ ಗಿಲ್ಲಿ ನಟನೇ ಈ ಸೀಸನ್‌ನ ವಿನ್ನರ್‌ ಎಂದು ಇಡೀ ಕರ್ನಾಟಕ ಸುದ್ದಿ ಮಾಡುತ್ತಿದೆ. ಇನ್ನು ಕೆಲವರು ಸೋಶಿಯಲ್‌ ಮೀಡಿಯಾದಲ್ಲಿ ಗಿಲ್ಲಿ ಬದಲು ರಕ್ಷಿತಾ ಶೆಟ್ಟಿ ಗೆಲ್ಲಬೇಕು ಎಂದು ಚರ್ಚೆ ಮಾಡುತ್ತಿದ್ದಾರೆ.


ರಕ್ಷಿತಾ ಶೆಟ್ಟಿ ಕೇವಲ ಯೂಟ್ಯೂಬ್‌ ಕಂಟೆಂಟ್‌ ಕ್ರಿಯೇಟರ್‌. ಆದರೆ ಗಿಲ್ಲಿ ನಟ ನಟರಾಗಿದ್ದಾರೆ. ರಕ್ಷಿತಾ ಯೂಟ್ಯೂಬ್‌ ಒಂದರಿಂದಲೇ ಇಷ್ಟು ಫೇಮಸ್‌ ಆಗಿ ಬಿಗ್‌ಬಾಸ್‌ ಶೋಗೆ ಸ್ಥಾನ ಪಡೆದಿದ್ದಾರೆ. ಅದಕ್ಕಾಗಿ ಗಿಲ್ಲಿಗಿಂತಲೂ ರಕ್ಷಿತಾ ಗ್ರೇಟ್‌ ಎಂದು ನೆಟ್ಟಿಗರು ಅಭಿಪ್ರಾಯ ಪಟ್ಟಿದ್ದಾರೆ.

ಆದರೆ, ರಕ್ಷಿತಾಗಿಂತ ಗಿಲ್ಲಿಗೆ ಅಭಿಮಾನಿಗಳು ಜಾಸ್ತಿ ಇದ್ದಾರೆ. ಅದೇ ಕಾರಣಕ್ಕಾಗಿ ಸಾಕಷ್ಟು ವೋಟ್‌ ಗಿಲ್ಲಿಗೆ ಬಂದಿವೆ. ಆದರೆ, ರಕ್ಷಿತಾ ಶೆಟ್ಟಿ ಗೆಲ್ಲಬೇಕು ಎಂಬ ಬಯಕೆ ಇರುವುದು ಈಗ ಜಗತ್ತಿಗೆ ಗೊತ್ತಾಗಿದೆ. ಕೆಲವು ಮಾಹಿತಿ ಪ್ರಕಾರ, ರಕ್ಷಿತಾ ಶೆಟ್ಟಿ ರನ್ನರ್‌ ಅಪ್‌ ಸ್ಥಾನ ಸಿಗುವುದು ಡೌಟ್‌ ಎನ್ನಲಾಗಿದೆ. ಗಿಲ್ಲಿ ವಿನ್ನರ್‌, ಅಶ್ವಿನಿ ಗೌಡ ರನ್ನರ್ ಎಂದು ಅನೇಕರು ಹೇಳುತ್ತಿದ್ದಾರೆ.

ಇದನ್ನೂ ಓದಿ: ಗಿಲ್ಲಿ ಫ್ಯಾನ್ಸ್ ಅಬ್ಬರ ಕಂಡು ಬೆಚ್ಚಿಬಿದ್ದ ಬಿಗ್ ಬಾಸ್ ಮನೆ ಮಂದಿ; ಸುದೀಪ್ ಕೊಟ್ಟ ಸುಳಿವೇನು?

ಇನ್ನು ಕೆಲವೇ ಸಮಯದಲ್ಲಿ ಬಿಗ್‌ಬಾಸ್‌ ಕನ್ನಡ 12ರ ವಿನ್ನರ್‌, ರನ್ನರ್‌ ಅದೇ ರೀತಿ 3ನೇ ಸ್ಥಾನ ಯಾರ ಪಾಲಾಗಲಿದೆ ಎಂಬುದು ತಿಳಿಯಲಿದೆ. ಕಲರ್ಸ್‌ ಕನ್ನಡದಲ್ಲಿ ಇಂದು ಪ್ರಕಟಿಸಲಾಗುತ್ತಿದ್ದು, ಕಪ್‌ ಯಾರ ಪಾಲಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ

Continue Reading

BIG BOSS

ಗಿಲ್ಲಿ ಫ್ಯಾನ್ಸ್ ಅಬ್ಬರ ಕಂಡು ಬೆಚ್ಚಿಬಿದ್ದ ಬಿಗ್ ಬಾಸ್ ಮನೆ ಮಂದಿ; ಸುದೀಪ್ ಕೊಟ್ಟ ಸುಳಿವೇನು?

Published

on

BBK12: ಬಿಗ್‌ಬಾಸ್‌ ಕನ್ನಡ ಸೀಸನ್‌ 12 ಶೋ ಮೂಲಕ ಎಲ್ಲರ ಗಿಲ್ಲಿ ನಟ ಎಲ್ಲರ ಗಮನ ಸೆಳೆದಿದ್ದಾರೆ. ಜತೆಗೆ ಪಳಾರ್‌ ಗಿಲ್ಲಿ ಎಂದು ಟೈಟಲ್‌ ಕೂಡ ಪಡೆದಿದ್ದಾರೆ. ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಹೇಳಿರುವ ಪ್ರತಿಯೊಂದು ಡೈಲಾಗ್‌ಗಳು ಕೂಡ ಟ್ರೆಂಡ್‌ ಆಗಿವೆ. ಅಷ್ಟೇ ಅಲ್ಲದೇ, ಗಿಲ್ಲಿ ನಟರ ಭಾವಚಿತ್ರವನ್ನು ಅಭಿಮಾನಿಗಳು ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಇದೀಗ ಫಿನಾಲೆ ತಲುಪಿರುವ ಆರು ಸ್ಪರ್ಧಿಗಳು ಮನೆಯಿಂದ ಹೊರಗೆ ಬಂದರೆ ಕ್ರೇಜ್‌ ಹೇಗಿರುತ್ತದೆ ಎಂಬುದನ್ನು ಕಿಚ್ಚ ಸುದೀಪ್‌ ಫ್ರೀ-ಫಿನಾಲೆ ಸಂಚಿಕೆಯಲ್ಲಿ ಹೇಳಿದರು.


‘ನೀವು ಹೊರಗಡೆ ಬಂದಾಗ ಎಲ್ಲಿಲ್ಲದ ಪ್ರೀತಿ, ಎಲ್ಲಿಲ್ಲದ ಪ್ರಶಂಸೆ, ಆ ಜನಬೀಡು ನಿಮಗೋಸ್ಕರ ಬಂದಾಗ ನಿಮ್ಮ ತಲೆಯಲ್ಲಿ ಏನು ಓಡಬೇಕು? ನಿಮ್ಮ ಜೀವನದಲ್ಲಿ ಏನು ಬದಲಾವಣೆ ಆಯಿತು ಅಂತ ನಿಮಗೆ ಅನಿಸುತ್ತದೆ’ ಎಂದು ಕಿಚ್ಚ ಸುದೀಪ್‌ ಹೇಳಿದರು. ಅದಕ್ಕೆ ಉತ್ತರ ಕೊಟ್ಟ ಗಿಲ್ಲಿ ನಟ, ‘ಬಿಗ್ ಬಾಸ್ ಮನೆಗೆ ಬಂದ ಅತಿಥಿಗಳು ನನಗೆ ಒಂದು ಮಾತು ಹೇಳಿದರು. ನೀವು ಸಖತ್ತಾಗಿ ಆಡುತ್ತಿದ್ದೀರಿ, ಹೊರಗೆ ಬಂದು ನೋಡಿ ಅಂದರು. ಆ ಕ್ಷಣದಲ್ಲಿ ನನಗೆ ರಿಯಲ್ ಎನಿಸಿತು’ ಎಂದು ಹೇಳಿದರು.

‘ತಕ್ಷಣಕ್ಕೆ ಅಷ್ಟೋಂದು ಪ್ರೀತಿ ಬಂದರೆ ನಿಜವೋ ಸುಳ್ಳೋ ಅಂತ ನಂಬೋಕೆ ಆಗಲ್ಲ. ಈ ಬದಲಾವಣೆ ಆಗಿದ್ದು ಬಿಗ್ ಬಾಸ್ ಶೋನಿಂದ. ಸಿನಿಮಾದಲ್ಲಿನ ಡೈಲಾಗ್​ಗಳನ್ನು ಹೇಳಿ ಅಂತ ಜನರು ವೇದಿಕೆಯಲ್ಲಿ ಕೇಳುತ್ತಾರೆ. ಆದರೆ ಇಲ್ಲಿಗೆ ಬಂದ ಅಭಿಮಾನಿಗಳು ಬಿಗ್ ಬಾಸ್ ಮನೆಯಲ್ಲಿ ನನ್ನ ಡೈಲಾಗ್ ಹೇಳಿ ಅಂತ ಡಿಮ್ಯಾಂಡ್ ಮಾಡಿದರು. ಅದು ನನಗೆ ಖುಷಿ ಆಯಿತು’ ಎಂದು ಗಿಲ್ಲಿ ಹೇಳಿದರು.

‘ನೀವು ಜನರನ್ನು ಸಂಪಾದಿಸಿರುವುದು, ಜನರು ನಿಮ್ಮನ್ನು ಇಷ್ಟಪಡುತ್ತಿರುವುದು ಬಿಗ್‌ಬಾಸ್‌ ವೇದಿಕೆಯ ಕಾರಣಕ್ಕೆ. ವೇದಿಕೆಯೇ ಇಲ್ಲ ಎಂದರೆ ಏನೂ ಇಲ್ಲ. ಬಿಗ್ ಬಾಸ್ ಇಲ್ಲದೇ ನಿಮ್ಮ ಜೀವನವನ್ನು ಊಹಿಸಿಕೊಂಡರೆ ಒಂದು ಖಾಲಿತನ ಕಾಣಿಸುತ್ತದೆ. ಹೊರಗಡೆ ಬಂದಾಗ ಪ್ರಪಂಚ ಏನೆಲ್ಲ ಆಗಿದೆ ಅನ್ನೋದನ್ನು ನೋಡಿ. ಆದರೆ ಇಂದು ನೀವು ಮಾತನಾಡಿದ್ದನ್ನು ಮರೆಯಬೇಡಿ’ ಎಂದು ಕಿಚ್ಚ ಸುದೀಪ್‌ ಹೇಳಿದರು.

ಇದನ್ನೂ ಓದಿ: ಎಲಿಮಿನೇಷನ್ ಬೆನ್ನಲ್ಲೇ ಹೊಸ ಪ್ಲ್ಯಾನ್ ರಿವೀಲ್ ಮಾಡಿದ ಧ್ರುವಂತ್

ರಕ್ಷಿತಾ ಶೆಟ್ಟಿ, ಕಾವ್ಯಾ ಶೈವ, ಅಶ್ವಿನಿ ಗೌಡ, ಮ್ಯೂಟೆಂಟ್‌ ರಘು, ಧನುಷ್‌ ಗೌಡ ಮತ್ತು ಗಿಲ್ಲಿ ನಟ ಬಿಗ್‌ಬಾಸ್‌ ಫಿನಾಲೆ ಹಂತವನ್ನು ತಲುಪಿದ್ದಾರೆ. ಇಂದು (ಜ.18) ಫಿನಾಲೆ ಸಂಚಿಕೆ ಪ್ರಸಾರ ಆಗಲಿದೆ. ಯಾರು ಕಪ್‌ ಗೆಲ್ಲುತ್ತಾರೆ ಎಂಬುವುದೇ ಕುತೂಹಲ.

Continue Reading
Advertisement

Trending

Copyright © 2025 Namma Kudla News

You cannot copy content of this page