Connect with us

LATEST NEWS

ಚೆನ್ನಾಗಿ ಬೆಳೆಯುತ್ತಿದ್ದ ನಿಮ್ಮ ಉಗುರು ದಿಢೀರ್​ ಮಧ್ಯಕ್ಕೆ ಕಟ್​ ಆಗೋದೇಕೆ? ಇಲ್ಲಿದೆ ಅಸಲಿ ಕಾರಣ

Published

on

ಇತ್ತೀಚಿನ ಯುಗದಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಉಗುರನ್ನು ಬೆಳಸಲು ಶುರು ಮಾಡಿದ್ದಾರೆ. ಅದರಲ್ಲೂ ಕೆಲವರು ಉಗುರಿನ ಬಗ್ಗೆ ವಿಶೇಷವಾದ ಕಾಳಜಿಯನ್ನು ವಹಿಸುತ್ತಾ ಇರುತ್ತಾರೆ.

ಹೌದು, ತಮ್ಮ ಉಗುರುಗಳು ನೋಡಲು ಚೆನ್ನಾಗಿ ಕಾಣುತ್ತವೆಯೇ ಎಂದು ಸಾಕಷ್ಟು ಬಾರಿ ಪರೀಕ್ಷಿಸುವ ಹೆಣ್ಣುಮಕ್ಕಳು ಕೂಡ ಇದ್ದಾರೆ. ಏಕೆಂದರೆ ದೇಹದ ಇತರ ಭಾಗಗಳಂತೆ ಉಗುರುಗಳು ಸಹ ಸೊಗಸಾಗಿ ಕಾಣುತ್ತವೆ. ಆದರೆ ಕೆಲವೊಂದು ಸಂದರ್ಭಗಳಲ್ಲಿ ಚೆನ್ನಾಗಿ ಬೆಳೆಸುತ್ತಿದ್ದ ಉಗುರು ಏಕಾಏಕಿ ಮಧ್ಯೆಕ್ಕೆ ಕಟ್​ ಆಗಿ ಬಿಡುತ್ತೆ. ಹೀಗಾಗಿ ಉಗುರಿನ ಆರೋಗ್ಯವನ್ನು ನಿರ್ಲಕ್ಷಿಸಬೇಡಿ.

ಮೊದ ಮೊದಲು ಚೆನ್ನಾಗಿ ಬೆಳೆಯುತ್ತಿದ್ದ ಉಗುರುಗಳು ದಿಢೀರನೇ ದುರ್ಬಲ, ಬಿರುಕು, ಕತ್ತರಿಸಿದ, ಒಡೆದ ಅಥವಾ ಸುಲಿದಂತೆ ಕಾಣುತ್ತವೆ. ಉಗುರುಗಳಲ್ಲಿ ಈ ಲಕ್ಷಣಗಳನ್ನು ಹೊಂದಿದ್ದರೆ ಒನಿಕೊಸ್ಚಿಜಿಯಾ ಎಂದು ಕರೆಯಲಾಗುತ್ತದೆ. ಇದು ಏಕೆ ಕಾಣಿಸಿಕೊಳ್ಳುತ್ತದೆ ಅಂತ ಸಾಕಷ್ಟು ಮಂದಿ ತಲೆಕೆಡಿಸಿಕೊಂಡಿದ್ದು ಉಂಟು.

ಕೂದಲು ಮತ್ತು ತ್ವಚೆಯ ಜೊತೆಗೆ ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಉಗುರುಗಳ ಆರೋಗ್ಯದ ಬಗ್ಗೆಯೂ ಸಂಪೂರ್ಣ ಕಾಳಜಿ ವಹಿಸುತ್ತಿದ್ದಾರೆ. ಆದರೆ ಅನೇಕ ಜನರ ಉಗುರುಗಳು ಆರೈಕೆ ಮಾಡಿದ ನಂತರವೂ ದುರ್ಬಲವಾಗುತ್ತವೆ. ಇದರಿಂದಾಗಿ ಅವರ ಉಗುರುಗಳು ಆಗಾಗ್ಗೆ ಒಡೆಯುತ್ತಲೇ ಇರುತ್ತವೆ. ಇದಕ್ಕೆ ಪ್ರಮುಖ ಕಾರಣವೆಂದರೆ ದೇಹದಲ್ಲಿನ ವಿಟಮಿನ್ ಕೊರತೆ. ಯಾವ ವಿಟಮಿನ್ ಕೊರತೆಯು ಇದಕ್ಕೆ ಕಾರಣವಾಗುತ್ತದೆ ಎಂದು ತಿಳಿಯೋಣ.

ದೇಹದಲ್ಲಿ ವಿಟಮಿನ್ B7 (ಬಯೋಟಿನ್) ಕೊರತೆಯಿಂದಾಗಿ, ಉಗುರುಗಳು ಒಡೆಯಲು ಪ್ರಾರಂಭಿಸುತ್ತವೆ. ಇದರೊಂದಿಗೆ ವಿಟಮಿನ್ ಬಿ 12 ಮತ್ತು ಕ್ಯಾಲ್ಸಿಯಂ ಕೊರತೆಯೂ ಕಾರಣವಾಗುತ್ತದೆ.

ವಿಟಮಿನ್ ಬಿ 12 ಕೊರತೆಯಿಂದಾಗಿ ನಿಮ್ಮ ಉಗುರುಗಳು ತೆಳುವಾಗುತ್ತವೆ ಮತ್ತು ದುರ್ಬಲವಾಗುತ್ತವೆ. ಅದರ ಕೊರತೆಯಿಂದಾಗಿ, ಉಗುರುಗಳು ಸರಿಯಾಗಿ ರೂಪುಗೊಳ್ಳುವುದಿಲ್ಲ ಮತ್ತು ಅವು ದುರ್ಬಲವಾಗುತ್ತದೆ.

ಅಲ್ಲದೇ ನಿಮ್ಮ ದೇಹದಲ್ಲಿ ಕ್ಯಾಲ್ಸಿಯಂ ಕೊರತೆಯಿಂದಾಗಿ ಉಗುರುಗಳು ತೆಳುವಾಗುತ್ತವೆ. ದುರ್ಬಲವಾಗಿರುತ್ತವೆ ಮತ್ತು ತುಂಬಾ ಗಟ್ಟಿಯಾಗುತ್ತವೆ. ದೇಹದಲ್ಲಿ ಕಬ್ಬಿಣದ ಕೊರತೆಯಿಂದಾಗಿ, ಉಗುರುಗಳು ಒಡೆಯಲು ಪ್ರಾರಂಭಿಸುತ್ತವೆ ಮತ್ತು ಅವುಗಳ ಬಣ್ಣವೂ ಬದಲಾಗಲು ಪ್ರಾರಂಭಿಸುತ್ತದೆ.

ಉಗುರುಗಳನ್ನು ಬಲಪಡಿಸಲು ಮತ್ತು ಈ ಎಲ್ಲಾ ಜೀವಸತ್ವಗಳ ಕೊರತೆಯನ್ನು ಪೂರೈಸಲು, ಕೋಳಿ, ಮೀನು, ಮೊಟ್ಟೆ, ಹಾಲು, ಚೀಸ್, ಧಾನ್ಯಗಳು, ಹಸಿರು ತರಕಾರಿಗಳು ಮತ್ತು ಹಣ್ಣುಗಳನ್ನು ನಿಮ್ಮ ಆಹಾರದ ಪಟ್ಟಿಯಲ್ಲಿ ಸೇರಿಸಿಕೊಂಡರೇ ಆರೋಗ್ಯದ ಜೊತೆಗೆ ಉಗುರಿನ ಬೆಳವಣಿಗೆಗೂ ಸಹಾಯಕಾರಿಯಾಗುತ್ತದೆ.

LATEST NEWS

ಪಾಕ್‌ಗೆ ಮತ್ತೊಂದು ಶಾ*ಕ್ ಕೊಟ್ಟ ಭಾರತ;  ಸೋಶಿಯಲ್ ಮೀಡಿಯಾ ಖಾತೆಗಳಿಗೆ ನಿರ್ಬಂಧ

Published

on

ಮಂಗಳೂರು/ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭ*ಯೋತ್ಪಾದಕ ದಾ*ಳಿಯಿಂದ ಭಾರತ ಆಕ್ರೋಶಗೊಂಡಿದೆ. ಪಾಕಿಸ್ತಾನದ ವಿರುದ್ಧ ಹಲವು ಕ್ರಮಗಳನ್ನು ಕೈಗೊಳ್ಳಲು ಸಿದ್ಧವಾಗಿದೆ.

ಸಾಂದರ್ಭಿಕ ಚಿತ್ರ

ಇದೀಗ ಭಾರತವು ಪಾಕಿಸ್ತಾನ ಸರ್ಕಾರದ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಗಳನ್ನು ನಿರ್ಬಂಧಿಸಿದೆ. ಹೀಗಾಗಿ ಭಾರತದಲ್ಲಿ ಪಾಕಿಸ್ತಾನ ಸರ್ಕಾರದ ಎಕ್ಸ್‌, ಫೇಸ್‌ ಬುಕ್ ಖಾತೆಗಳ ಚಟುವಟಿಕೆ ಸಂಪೂರ್ಣ ಸ್ಥಗಿತಗೊಂಡಿದೆ.

ಪಾಕ್ ಜೊತೆಗಿನ ತನ್ನ ಸಂಬಂಧಕ್ಕೆ ಕೆಲವೊಂದು ಕಡಿವಾಣ  ಹಾಕುವ ಕ್ರಮಕ್ಕೆ ಭಾರತ ಮುಂದಾಗಿದೆ. ಪಾಕ್ ಪ್ರಜೆಗಳಿಗೆ ನೀಡಲಾಗುತ್ತಿದ್ದ ಸಾರ್ಕ್ ವೀಸಾ ವಿನಾಯಿತಿ ಯೋಜನೆಯನ್ನು ರದ್ದು ಮಾಡಿದೆ. ಪಾಕಿಸ್ತಾನದ ರಾಯಭಾರಿ ಕಚೇರಿಯಿಂದ ರಕ್ಷಣಾ ಸಲಹೆಗಾರರನ್ನು ಹೊರಹಾಕಿದೆ.

ಇದನ್ನೂ ಓದಿ  : ಸೀರೆ ಬುಕ್ ಮಾಡಿದ ಮಹಿಳಾ ಐಎಎಸ್ ಅಧಿಕಾರಿಗೆ ವಂಚನೆ; ಯೂಟ್ಯೂಬರ್ ವಿರುದ್ಧ ಕೇಸ್

ಪಾಕ್ ಭಾರತ ನಡುವಿನ ಅಟ್ಟಾರಿ ಚೆಕ್ ಪೋಸ್ಟ್‌ನ್ನು ಭಾರತ ಮುಚ್ಚಿದೆ. 1960 ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ ರದ್ದು ಮಾಡಿದ್ದು, ಇದೀಗ ಸೋಶಿಯಲ್ ಮೀಡಿಯಾ ಖಾತೆ ಮೇಲೆ ಸಮರ ಸಾರಿದೆ. ಪಾಕ್ ಸರ್ಕಾರದ ಅಧಿಕೃತ ಎಕ್ಸ್ ಸೇರಿದಂತೆ ಇತರೆ ಸೋಶಿಯಲ್ ಮೀಡಿಯಾ ಖಾತೆಗಳಿಗೆ ನಿಷೇಧ ಹೇರಿದೆ.

 

 

 

Continue Reading

LATEST NEWS

ಏ.29 ರವರೆಗೆ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

Published

on

ಬೆಂಗಳೂರು: ವಾಯುಭಾರ ಕುಸಿತಗೊಂಡ ಹಿನ್ನೆಲೆ ರಾಜ್ಯದಲ್ಲಿ ಏ.29ರವರೆಗೂ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ, ಗದಗ, ಧಾರವಾಡ, ಕೊಪ್ಪಳ, ರಾಯಚೂರು, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ, ದಾವಣಗೆರೆ, ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಏ.29 ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ವಿಜಯಪುರ, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಹಾಸನ, ಮೈಸೂರು, ಕೊಡಗು, ತುಮಕೂರು, ಮಂಡ್ಯ, ಚಿಕ್ಕಮಂಗಳೂರು, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ ಚಿಕ್ಕಬಳ್ಳಾಪುರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

Continue Reading

BELTHANGADY

ಬೆಳ್ತಂಗಡಿ: ಮನೆಗೆ ನುಗ್ಗಿ ಚಿನ್ನಾಭರಣ ಸಹಿತ ನಗದನ್ನು ದೋಚಿ ಪರಾರಿಯಾದ ಕಳ್ಳ

Published

on

ಬೆಳ್ತಂಗಡಿ: ರಾತ್ರಿಯ ವೇಳೆ ಮನೆಮಂದಿ ಎಲ್ಲಾ ನಿದ್ದೆಗೆ ಜಾರಿದ ಸಂದರ್ಭದಲ್ಲಿ ಮನೆಗೆ ನುಗ್ಗಿ ಕಳ್ಳತನ ನಡೆಸಿ ಚಿನ್ನಾಭರಣ ಸಹಿತ ನಗದುಗಳನ್ನು ದೋಚಿಕೊಂಡು ಹೋಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರುವಿನ ಮನೆಯಲ್ಲಿ ಏ.23ರಂದು ರಾತ್ರಿ ನಡೆದಿದೆ.

ಗುತ್ತು ಮನೆ ನಿವಾಸಿ ಮುಸ್ತಫಾ ರವರ ಮನೆಗೆ ಕಳ್ಳರು ಹಿಂಬದಿ ಬಾಗಿಲಿನಿಂದ ಬೀಗ ಮುರಿದು ಮನೆಯೊಳಗೆ ಬಂದದ್ದು ಮಾತ್ರವಲ್ಲದೇ ಸುಮಾರು 5 ಪವನ್ ನಷ್ಟು ಚಿನ್ನ, ಮೂರು ಸಾವಿರ ರೂಪಾಯಿ ನಗದುಗಳನ್ನು ಕಳವುಗೈದು ಪರಾರಿಯಾಗಿದ್ದಾರೆ.

ನಿನ್ನೆ ಸುಮಾರು ಮೂರರಿಂದ ನಾಲ್ಕುಗಂಟೆ ಹೊತ್ತಿಗೆ ಈ ಘಟನೆ ನಡೆದಿದೆ ಎಂದು ಮನೆಯವರು ತಿಳಿಸಿದ್ದಾರೆ. ಅಲ್ಲದೇ ಮನೆಯ ಬ್ಯಾಗ್‌ಗಳನ್ನು ಕದ್ದುಕೊಂಡು ಹೋಗಿದ್ದು, ಬಳಿಕ ಅದರಲ್ಲಿ ಏನೂ ಇಲ್ಲದ್ದನ್ನು ನೋಡಿ ಪಕ್ಕದ ಅಂಗಳದಲ್ಲಿ ಬಿಸಾಕಿ ಹೋಗಿದ್ದಾರೆ.

ಇದೇ ಸಂದರ್ಭದಲ್ಲಿ ತೆಕ್ಕಾರುವಿನ ಕೋಡಿ ನಿವಾಸಿ ಅನ್ವರ್ ಎಂಬವರ ಮನೆಗೂ ಕಳ್ಳರು ನುಗ್ಗಿದ್ದು ಮನೆಯೊಳಗಡೆ ಕಪಾಟ್ ನ ಒಳಗಡೆಯಿದ್ದ ನಗದನ್ನು ದೋಚಿಕೊಂಡಿದ್ದು ಆದರೆ ಆಕಸ್ಮಾತ್ ಅವರ ಜೇಬಿಗೆ ಹಾಕುವ ಹಣವು ಕೆಳಗಡೆ ಬಿದ್ದಿದ್ದು ಬೆಳಿಗ್ಗೆ ಹೊತ್ತು ಮನೆಯವರು ನೀರು ಕುಡಿಯಲೆಂದು ಎದ್ದಾಗ ಕಳ್ಳತನ ನಡೆದ ಬಗ್ಗೆ ಅರಿವಾಗಿದೆ.

ಮನೆಯ ಹಿಂಬಾಗಿಲು ತೆರೆದ ಸ್ಥಿತಿಯಲ್ಲಿದ್ದು ದೋಚಿದ ಮೂರು ಸಾವಿರ ಹಣ ಅಂಗಳದಲ್ಲಿ ಬಿದ್ದು ಸಿಕ್ಕಿದೆ ಎಂದು ಅನ್ವರ್ ಮನೆಯವರು ತಿಳಿಸಿದ್ದಾರೆ. ಇದೇ ರೀತಿ ತೆಕ್ಕಾರು ವ್ಯಾಪ್ತಿಯ ಹಲವು ಮನೆಗಳಲ್ಲಿ ಕಳ್ಳತನ ನಡೆದಿದ್ದು ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page