Connect with us

LATEST NEWS

ಗಂಡನನ್ನು ಕೊಂದು ಶವ ಕೆಮಿಕಲ್‌ನಲ್ಲಿ ಹುದುಗಿಟ್ಟ ಪತ್ನಿ: ತನ್ನದೊಂದು ತಪ್ಪಿನಿಂದ ಸಿಕ್ಕಿ ಬಿದ್ದ ಕಳ್ಳಿ

Published

on

ಲಕ್ನೋ: ಮಹಿಳೆಯೊಬ್ಬಳು ಅಕ್ರಮ ಸಂಬಂಧವನ್ನು ಮುಚ್ಚಿಟ್ಟುಕೊಳ್ಳಲು ಪ್ರಿಯಕರನ ಸಹಾಯದಿಂದ ತನ್ನ ಗಂಡನನ್ನೇ ಕೊಲೆ ಮಾಡಿ, ರಾಸಾಯನಿಕದಲ್ಲಿ ಆ ಶವವನ್ನು ಮುಳುಗಿಸಿಟ್ಟ ಘಟನೆ ಬಿಹಾರದ ಮುಜಾಫರ್​ಪುರದ ಸಿಖಂದರಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

30 ವರ್ಷದ ರಾಕೇಶ್ ಎಂಬಾತ ಕೊಲೆಯಾಗಿದ್ದು ಸಾವಿನ ಬೆನ್ನತ್ತಿ ಹೋದ ಪೊಲೀಸರಿಗೆ ಅದರ ಹಿಂದೆ ಆತನ ಹೆಂಡತಿ ರಾಧಾ, ಆಕೆಯ ಪ್ರಿಯಕರ ಸುಭಾಷ್, ಆಕೆಯ ತಂಗಿ ಹಾಗೂ ತಂಗಿಯ ಗಂಡನ ಕೈವಾಡವಿರುವುದು ಗೊತ್ತಾಯಿತು.

ಗಂಡನನ್ನು ಕೊಲೆ ಮಾಡಿದ ಬಳಿಕ ಆ ಹೆಣವನ್ನು ಸಾಗಿಸುವುದು ಕಷ್ಟವೆಂದು ಅರಿತ ರಾಧಾ ಏನು ಮಾಡುವುದೆಂದು ಇಂಟರ್ನೆಟ್​ನಲ್ಲಿ ಹುಡುಕಾಡಿದ್ದಳು. ಆಗ ಆಕೆಯ ಪ್ರೇಮಿಯ ಸಲಹೆಯಂತೆ ರಾಕೇಶನ ಶವವನ್ನು ಇಬ್ಬರೂ ಸೇರಿ ತುಂಡಾಗಿ ಕತ್ತರಿಸಿದ್ದರು. ನಂತರ ಅದಕ್ಕೆ ರಾಸಾಯನಿಕ ಸಿಂಪಡಿಸಿ, ವಾಸನೆ ಹರಡದಂತೆ ಮಾಡಿದ್ದರು.

ಬಳಿಕ ಆ ಶವವನ್ನು ಕಟ್ಟಿ ತಮ್ಮ ಬಾಡಿಗೆ ಮನೆಯ ರೂಮಿನಲ್ಲಿ ಇಟ್ಟಿದ್ದರು. ಇದಕ್ಕೆ ರಾಧಾ ತನ್ನ ತಂಗಿ ಹಾಗೂ ತಂಗಿಯ ಗಂಡನ ಸಹಾಯವನ್ನೂ ಪಡೆದಿದ್ದಳು.
ಆದರೆ, ಶವಕ್ಕೆ ಸಿಂಪಡಿಸಿದ್ದ ರಾಸಾಯನಿಕದಿಂದ ಶವ ತುಂಬಿಟ್ಟಿದ್ದ ಬ್ಯಾಗ್ ಜೋರಾಗಿ ಶಬ್ದವಾಗಿ ಸ್ಫೋಟವಾಗಿತ್ತು. ಇದರಿಂದ ಹೆದರಿದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದರು. ಅಪಾರ್ಟ್​ಮೆಂಟ್​ಗೆ ಬಂದ ಪೊಲೀಸರು ಶಬ್ದ ಕೇಳಿದ ಮನೆಯನ್ನು ಪರಿಶೀಲಿಸಿದಾಗ ಅಲ್ಲಿ ತುಂಡುಗಳನ್ನು ಗಮನಿಸಿದರು.

ಅಲ್ಲದೆ, ಮನೆಯಲ್ಲಿ ರಾಸಾಯನಿಕ ಸಿಂಪಡನೆ ಮಾಡಿದ ಕುರುಹುಗಳಿದ್ದವು. ಇದರಿಂದ ಅನುಮಾನಗೊಂಡ ಅವರು ರೂಮನ್ನು ಪರಿಶೀಲಿಸಿದಾಗ ತುಂಡಾಗಿದ್ದ ಶವ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆ ವೇಳೆ

ಅದು ರಾಕೇಶನ ಶವ ಎಂಬುದು ಖಚಿತವಾಗಿತ್ತು.
ಬಿಹಾರದಲ್ಲಿ ಆಲ್ಕೋಹಾಲ್ ನಿಷೇಧವಿದ್ದರೂ ರಾಕೇಶ್ ಅಕ್ರಮವಾಗಿ ಲಿಕ್ಕರ್ ಬ್ಯುಸಿನೆಸ್ ನಡೆಸುತ್ತಿದ್ದ. ಆಗೆಲ್ಲ ತನ್ನ ಹೆಂಡತಿಯೊಂದಿಗೆ ಈ ಮನೆಯಲ್ಲಿ ಯಾರಿಗೂ ಗೊತ್ತಾಗದ ಹಾಗೆ ವಾಸ ಮಾಡುತ್ತಿದ್ದ. ಆತ ಅಲ್ಲಿರುವ ವಿಚಾರ ಬಹುತೇಕರಿಗೆ ಗೊತ್ತಿರಲಿಲ್ಲ.

ಪೊಲೀಸರು ಕೂಡ ಆತನಿಗಾಗಿ ಹುಡುಕಾಡುತ್ತಿದ್ದರು. ಬ್ಯುಸಿನೆಸ್ ಸಲುವಾಗಿ ಬೇರೆ ರಾಜ್ಯಗಳಿಗೆ ಓಡಾಡುತ್ತಿದ್ದ ರಾಕೇಶ್ ತನ್ನ ಮನೆಯ ಕಡೆ ನೋಡಿಕೊಳ್ಳಲು ಗೆಳೆಯ ಸುಭಾಷ್​ಗೆ ಹೇಳಿದ್ದ.

ರಾಕೇಶ್ ಇಲ್ಲದಿದ್ದಾಗ ಆತನ ಮನೆಗೆ ಹೋಗುತ್ತಿದ್ದ ಸುಭಾಷ್​ ರಾಧಾ ಜೊತೆ ಅಕ್ರಮ ಸಂಬಂಧವಿಟ್ಟುಕೊಂಡಿದ್ದ. ಈ ವಿಷಯ ರಾಕೇಶನಿಗೆ ಗೊತ್ತಿರಲಿಲ್ಲ.
ಕ್ರಮೇಣ ರಾಕೇಶನ ಬಗ್ಗೆ ಆಸಕ್ತಿ ಕಳೆದುಕೊಂಡ ರಾಧಾ ಆತನನ್ನು ಕೊಂದು ಸುಭಾಷ್​ ಜೊತೆ ಇರಲು ಯೋಚಿಸಿದಳು.

ಅದಕ್ಕೆ ಆಕೆಯ ತಂಗಿ ಕೂಡ ಸಹಾಯ ಮಾಡಿದಳು. ತೀಜ್ ಪ್ರಯುಕ್ತ ಗಂಡ ರಾಕೇಶನಿಗೆ ಮನೆಗೆ ಬರಲು ಹೇಳಿದ್ದ ರಾಧಾ ಸುಭಾಷ್​ನ ಸಹಾಯದೊಂದಿಗೆ ಆತನನ್ನು ಅಂದೇ ಕೊಲೆ ಮಾಡಿದ್ದಳು. ಹಲವು ದಿನಗಳಾದರೂ ರಾಕೇಶನ ಸುಳಿವು ಇಲ್ಲದ ಕಾರಣ ಆತನ ಸೋದರ ದಿನೇಶ್ ರಾಧಾಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದ.

ರಾಧಾ ತನ್ನ ಅಕ್ರಮ ಸಂಬಂಧವನ್ನು ಮುಚ್ಚಿಟ್ಟುಕೊಳ್ಳಲು ನನ್ನ ಅಣ್ಣನನ್ನು ಕೊಲೆ ಮಾಡಿರುವ ಅನುಮಾನವಿದೆ ಎಂದು ದೂರು ನೀಡಿದ್ದ ಅಲ್ಲದೆ, ರಾಧಾ ಹಾಗೂ ಸುಭಾಷ್​ ಅಕ್ರಮ ಸಂಬಂಧದ ಬಗ್ಗೆ ಸುತ್ತಮುತ್ತಲಿನ ಎಲ್ಲರಿಗೂ ಗೊತ್ತಿದೆ.

ಆದರೆ, ರಾಕೇಶ್ ಇದನ್ನು ನಂಬಿರಲಿಲ್ಲ ಎಂದು ಆತ ದೂರಿನಲ್ಲಿ ತಿಳಿಸಿದ್ದ. ಆತನ ದೂರನ್ನು ಆಧರಿಸಿ ರಾಧಾಳ ವಿಚಾರಣೆ ನಡೆಸಿದ ಪೊಲೀಸರಿಗೆ ಆಕೆ ತನಗೇನೂ ಗೊತ್ತಿಲ್ಲವೆಂದೇ ಹೇಳಿದ್ದಳು. ಆದರೆ, ರಾಸಾಯನಿಕ ಸ್ಫೋಟವಾಗಿದ್ದರಿಂದ ಆಕೆಯ ಕೃತ್ಯ ಬೆಳಕಿಗೆ ಬಂದಿತ್ತು.

DAKSHINA KANNADA

7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ, ಲುಕ್ ಔಟ್ ನೋಟಿಸ್ ಹೊರಡಿಸಿದ ಕೊಣಾಜೆ ಪೊಲೀಸರು

Published

on

ಮಂಗಳೂರು: ನಗರದ ಹೊರವಲಯದ ಪಿ ಎ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಕಾಸರಗೋಡು ನಿವಾಸಿ ಸಲೀಂ ಎಂಬವರ ಪುತ್ರ ಮೊಹಮ್ಮದ್ ಶಾಮೀಲ್‌(21) ಎಂಬವರು 7  ವರ್ಷಗಳ ಹಿಂದೆ ಪಿ ಎ ಕಾಲೇಜಿನ ವಿದ್ಯಾರ್ಥಿಯಾಗಿದ್ದು, 14-4-2018ರಂದು ಕಾಲೇಜಿನ ಪಾರ್ಕಿಂಗ್ ಸ್ಥಳಕ್ಕೆ ಬಂದು ಕಾಲೇಜಿನ ಒಳಗೆ ಬಾರದೇ ಮನೆಗೂ ಹೋಗದೇ ನಾಪತ್ತೆಯಾಗಿದ್ದರು.

ಅವರನ್ನು ಕೂಡಲೇ ಪತ್ತೆ ಮಾಡಿಕೊಡುವಂತೆ ಲಿಖಿತ ದೂರನ್ನು ಕೊಣಾಜೆ ಠಾಣಾ ಪೊಲೀಸರಲ್ಲಿ ದಾಖಲಿಸಿದ್ದರು. ಪಿ ಎ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಶರೀಫ್ ಎಂಬವರು ಕೊಣಾಜೆ ಠಾಣೆಗೆ ಮತ್ತೆ ದೂರು ಸಲ್ಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈತನ ಎತ್ತರ 168 CM, ಗೋಧಿ ಮೈ ಬಣ್ಣ, ಸಾಧಾರಣ ಶರೀರ, ಕೋಲು ಮುಖ ಹೊಂದಿದ್ದು, ಕಪ್ಪು ಕುರುಚಲು ಗಡ್ಡ ಮತ್ತು ಮೀಸೆ ಹಾಗೂ ಉದ್ದ ತಲೆ ಕೂದಲು ಹೊಂದಿದ್ದಾರೆ. ಮಾಲಯಾಳಂ, ಇಂಗ್ಲೀಷ್, ಹಿಂದಿ ಭಾಷೆಯನ್ನು ಅವರು ಮಾತನಾಡುತ್ತಾರೆ.

ಇವರು ಪತ್ತೆಯಾದಲ್ಲಿ ಪೊಲೀಸ್ ಆಯುಕ್ತರ ಕಛೇರಿಯ ಮಂಗಳೂರು ನಗರ ನಿಯಂತ್ರಣ ಕೊಠಡಿಗೆ ದೂರವಾಣಿ ಸಂಖ್ಯೆ  0824-2220800 ಅಥವಾ ಕೊಣಾಜೆ ಪೊಲೀಸ್ ಠಾಣೆಯ 0824-2220536, 9091873198 ,9535247535 ನೇ ಸಂಖ್ಯೆಗೆ ಮಾಹಿತಿ ನೀಡಲು ಮನವಿ ಮಾಡಲಾಗಿದೆ.

 

 

Continue Reading

bengaluru

ವಿಶೇಷ ಚೇತನ ಯುವತಿಯನ್ನೂ ಬಿಡದ ಕಾಮುಕ, ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಸ್ಥಳೀಯರು

Published

on

ಬೆಂಗಳೂರು: ಗಾಂಜಾ ನಶೆಯಲ್ಲಿದ್ದ ಕಾಮುಕನೊಬ್ಬ ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ಬೆಂಗಳೂರಿನ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಘ್ನೇಶ್ ಅಲಿಯಾಸ್​​ ದಾಡು ಎಂಬಾತನಿಂದ ಕೃತ್ಯ ನಡೆದಿದ್ದು, ಆರೋಪಿಯನ್ನು ಹಿಡಿದು ಥಳಿಸಿರುವ ಸ್ಥಳೀಯರು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ಮದುವೆಗೆ ಎಂದು ಸಂತ್ರಸ್ತೆ ಕುಟುಂಬಸ್ಥರು ತೆರಳಿದ್ದು, ವಿಶೇಷ ಚೇತನ ಯುವತಿಯನ್ನು ಮನೆಯಲ್ಲೇ ಬಿಟ್ಟು ಹೋಗಿದ್ದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಬಂದ ಗಾಂಜಾ ನಶೆಯಲ್ಲಿದ್ದ ಆರೋಪಿ ವಿಘ್ನೇಶ್, ಚಿಲಕ ಹಾಕಿದ್ದ ಮನೆಗೆ ನುಗ್ಗಿದ್ದಾನೆ.

ಬಳಿಕ ಮನೆಯ ಒಳಗಿನಿಂದ ಚಿಲಕ ಹಾಕಿಕೊಂಡಿದ್ದಾನೆ. ಈ ವೇಳೆ ಮಗಳನ್ನು ನೋಡಿಕೊಂಡು ಹೋಗೋಣ ಎಂದು ತಾಯಿ ಬಂದಾಗ ಮನೆ ಒಳಗಿನಿಂದ ಚಿಲಕ ಹಾಕಿರುವುದು ಗೊತ್ತಾಗಿದೆ. ಹೀಗಾಗಿ ಕಾಲಿನಿಂದ ಒದ್ದು ಆಕೆ ಬಾಗಿಲನ್ನು ತೆರೆದಿದ್ದು, ಮಗಳ ಸ್ಥಿತಿ ಕಂಡು ಶಾಕ್​ ಆಗಿದ್ದಾಳೆ.

ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರ ನಡೆಸಲು ಆರೋಪಿ ಮುಂದಾಗಿದ್ದನು. ಘಟನೆ ಬಳಿಕ ತಕ್ಷಣ ಅಲರ್ಟ್​ ಆದ ಸ್ಥಳೀಯರು ಆರೋಪಿ ವಿಘ್ನೆಶ್​ನನ್ನು ಹಿಡಿದು ಮನಸೋ ಇಚ್ಛೆ ತಳಿಸಿದ್ದಾರೆ. ಬಳಿಕ ಪೊಲೀಸರಿಗೆ ವಿಘ್ನೇಶ್​​ನನ್ನು ಒಪ್ಪಿಸಲಾಗಿದ್ದು, ಆರೋಪಿಯನ್ನ ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ.

 

 

Continue Reading

DAKSHINA KANNADA

ಮಂಗಳೂರು: ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸಹಿತ ಮೂವರು ಅರೆಸ್ಟ್

Published

on

ಮಂಗಳೂರು: ಡ್ರಗ್‌ ಪೆಡ್ಲಿಂಗ್ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಮಂಗಳೂರಿನ ಉಳ್ಳಾಲ ಪೊಲೀಸರು ಕೋಟೆಕಾರು ಗ್ರಾಮದ ಬಗಂಬಿಲ ಮೈದಾನ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ಬಂಧಿಸಿದ್ದಾರೆ. ಮೊಹಮ್ಮದ್ ನಿಗಾರೀಸ್, ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಸಬೀರ್ ಅಹಮ್ಮದ್ ಬಂಧಿತ ಆರೋಪಿಗಳು.

ಆರೋಪಿಗಳಿಂದ 59,300 ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪಕ, 2 ಮೊಬೈಲ್, 1 ಸ್ಕೂಟರನ್ನು ವಶಪಡಿಸಿಕೊಂಡಿದ್ದಾರೆ. ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್  ವಿಲಾಸಿ ಜೀವನಕ್ಕಾಗಿ ತನ್ನ ಊರಿನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ.

ಇನ್ನೊಂದು ಪ್ರಕರಣದಲ್ಲಿ ನಾಟೆಕಲ್ ಉರುಮಣೆ ನಿವಾಸಿ ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಪೆರ್ಮನ್ನೂರು ಗಂಡಿ ನಿವಾಸಿ ಸಬೀರ್ ಅಹಮ್ಮದ್‌, ಡ್ರೈವರ್ ಮತ್ತು ಪೈಂಟರ್ ಅಗಿದ್ದವರು. ಶಕೀಬನು ಬಿ.ಸಿ.ರೋಡ್‌ನ ಫ್ಯಾಬೀನ್ ಎಂಬಾತನಿಂದ ಗಾಂಜಾ ಪಡೆದುಕೊಂಡು ಮಾರಾಟ ಮಾಡುತ್ತಿರುವಾಗ ಗಂಡಿ ಪ್ರದೇಶದಲ್ಲಿ  ಬಂಧಿಸಿದ್ದಾರೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page