Connect with us

DAKSHINA KANNADA

ರಂಗಸ್ಥಳದಲ್ಲೇ ಹೃದಯಘಾತವಾಗಿ ಯಕ್ಷಗಾನ ಕಲಾವಿದ ವಿಧಿವಶ : ಕಟೀಲಿನ 4ನೇ ಮೇಳದ 58 ವರ್ಷದ ಗುರುವಪ್ಪ ಬಾಯಾರು ಇನ್ನಿಲ್ಲ,!

Published

on

ಯಕ್ಷಗಾನ ಕಲಾವಿದರೊಬ್ಬರು ರಂಗಸ್ಥಳದಲ್ಲೇ ಹೃದಯಾಘಾತವಾಗಿ ನಿಧನರಾದ ಘಟನೆ ಮಂಗಳೂರಿನ ಕಟೀಲಿನಲ್ಲಿ ನಡೆದಿದೆ.

ಮಂಗಳೂರು :  ಯಕ್ಷಗಾನ ಕಲಾವಿದರೊಬ್ಬರು ರಂಗಸ್ಥಳದಲ್ಲೇ ಹೃದಯಾಘಾತವಾಗಿ ನಿಧನರಾದ ಘಟನೆ ಮಂಗಳೂರಿನ ಕಟೀಲಿನಲ್ಲಿ ನಡೆದಿದೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಮೇಳದ ಕಲಾವಿದ 58 ವರ್ಷದ ಗುರುವಪ್ಪ ಬಾಯಾರು ಅವರು ಬಾಯಾರು ರಂಗಸ್ಥಳದಲ್ಲೇ ಹೃದಯಾಘಾತದಿಂದ ನಿಧನರಾದ ಕಲಾವಿದರಾಗಿದ್ದಾರೆ.

ಗುರುವಾರ ರಾತ್ರಿ ಕಟೀಲಿನ ಸರಸ್ವತಿ ಸದನದಲ್ಲಿ ಯಕ್ಷಗಾನ ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಸರಸ್ವತೀ ಸದನದಲ್ಲಿ ಕಟೀಲು ನಾಲ್ಕನೇ ಮೇಳದ ಯಕ್ಷಗಾನ ಬಯಲಾಟ ತ್ರಿಜನ್ಮ ಮೋಕ್ಷ ಪ್ರಸಂಗ ನಡೆಯುತ್ತಿತ್ತು.

ಅದರಲ್ಲಿ ಬಾಯಾರು ಅವರು ಅದರಲ್ಲಿ ಶಿಶುಪಾಲನ ಪಾತ್ರ ನಿರ್ವಹಿಸಿದ್ದರು. ಪ್ರಸಂಗದ ಕೊನೆಯ ಭಾಗ ಪ್ರದರ್ಶನಗೊಳ್ಳುತ್ತಿತ್ತು.

ರಂಗಸ್ಥಳದಲ್ಲಿ ನಿಂತಿದ್ದ ಗುರುವಪ್ಪ ಬಾಯಾರು ರಂಗಸ್ಥಳದಿಂದ ಕೆಳಗಡೆ ಬಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಪರೀಕ್ಷಿಸಿದ ವೈದ್ಯರು ನಿಧನರಾಗಿದ್ದಾರೆ ಎಂದು ತಿಳಿಸಿದರು.

ನಾನಾ ಮೇಳಗಳಲ್ಲಿ ತಿರುಗಾಟ ನಡೆಸಿದ್ದ ಗುರುವಪ್ಪ ಬಾಯಾರು ಅವರು 2013ರಲ್ಲಿ ಕಟೀಲು ಮೇಳಕ್ಕೆ ಸೇರಿದ್ದರು.

ಮಧುಕೈಟಭ, ಮುಂತಾದ ಕಿರೀಟ ವೇಷಗಳನ್ನು ಮಾಡುತ್ತಿದ್ದ ಅವರಿಗೆ ಅನೇಕ ಕಡೆ ಸಂಮಾನಗಳು ಸಂದಿವೆ.

ಇದೀಗ ಹಿರಿಯ ಯಕ್ಞಗಾನ ಕಲಾವಿದನೊಬ್ಬನ ನಿಧನಕ್ಕೆ ಯಕ್ಷಗಾನ ರಂಗ ಹಾಗು ಯಕ್ಷಭಿಮಾನಿಗಳು ಕಂಬನಿ ಮಿಡಿದ್ದಾರೆ.ಕ್ಞ

BELTHANGADY

ಬೆಳ್ತಂಗಡಿ: ಮನೆಗೆ ನುಗ್ಗಿ ಚಿನ್ನಾಭರಣ ಸಹಿತ ನಗದನ್ನು ದೋಚಿ ಪರಾರಿಯಾದ ಕಳ್ಳ

Published

on

ಬೆಳ್ತಂಗಡಿ: ರಾತ್ರಿಯ ವೇಳೆ ಮನೆಮಂದಿ ಎಲ್ಲಾ ನಿದ್ದೆಗೆ ಜಾರಿದ ಸಂದರ್ಭದಲ್ಲಿ ಮನೆಗೆ ನುಗ್ಗಿ ಕಳ್ಳತನ ನಡೆಸಿ ಚಿನ್ನಾಭರಣ ಸಹಿತ ನಗದುಗಳನ್ನು ದೋಚಿಕೊಂಡು ಹೋಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರುವಿನ ಮನೆಯಲ್ಲಿ ಏ.23ರಂದು ರಾತ್ರಿ ನಡೆದಿದೆ.

ಗುತ್ತು ಮನೆ ನಿವಾಸಿ ಮುಸ್ತಫಾ ರವರ ಮನೆಗೆ ಕಳ್ಳರು ಹಿಂಬದಿ ಬಾಗಿಲಿನಿಂದ ಬೀಗ ಮುರಿದು ಮನೆಯೊಳಗೆ ಬಂದದ್ದು ಮಾತ್ರವಲ್ಲದೇ ಸುಮಾರು 5 ಪವನ್ ನಷ್ಟು ಚಿನ್ನ, ಮೂರು ಸಾವಿರ ರೂಪಾಯಿ ನಗದುಗಳನ್ನು ಕಳವುಗೈದು ಪರಾರಿಯಾಗಿದ್ದಾರೆ.

ನಿನ್ನೆ ಸುಮಾರು ಮೂರರಿಂದ ನಾಲ್ಕುಗಂಟೆ ಹೊತ್ತಿಗೆ ಈ ಘಟನೆ ನಡೆದಿದೆ ಎಂದು ಮನೆಯವರು ತಿಳಿಸಿದ್ದಾರೆ. ಅಲ್ಲದೇ ಮನೆಯ ಬ್ಯಾಗ್‌ಗಳನ್ನು ಕದ್ದುಕೊಂಡು ಹೋಗಿದ್ದು, ಬಳಿಕ ಅದರಲ್ಲಿ ಏನೂ ಇಲ್ಲದ್ದನ್ನು ನೋಡಿ ಪಕ್ಕದ ಅಂಗಳದಲ್ಲಿ ಬಿಸಾಕಿ ಹೋಗಿದ್ದಾರೆ.

ಇದೇ ಸಂದರ್ಭದಲ್ಲಿ ತೆಕ್ಕಾರುವಿನ ಕೋಡಿ ನಿವಾಸಿ ಅನ್ವರ್ ಎಂಬವರ ಮನೆಗೂ ಕಳ್ಳರು ನುಗ್ಗಿದ್ದು ಮನೆಯೊಳಗಡೆ ಕಪಾಟ್ ನ ಒಳಗಡೆಯಿದ್ದ ನಗದನ್ನು ದೋಚಿಕೊಂಡಿದ್ದು ಆದರೆ ಆಕಸ್ಮಾತ್ ಅವರ ಜೇಬಿಗೆ ಹಾಕುವ ಹಣವು ಕೆಳಗಡೆ ಬಿದ್ದಿದ್ದು ಬೆಳಿಗ್ಗೆ ಹೊತ್ತು ಮನೆಯವರು ನೀರು ಕುಡಿಯಲೆಂದು ಎದ್ದಾಗ ಕಳ್ಳತನ ನಡೆದ ಬಗ್ಗೆ ಅರಿವಾಗಿದೆ.

ಮನೆಯ ಹಿಂಬಾಗಿಲು ತೆರೆದ ಸ್ಥಿತಿಯಲ್ಲಿದ್ದು ದೋಚಿದ ಮೂರು ಸಾವಿರ ಹಣ ಅಂಗಳದಲ್ಲಿ ಬಿದ್ದು ಸಿಕ್ಕಿದೆ ಎಂದು ಅನ್ವರ್ ಮನೆಯವರು ತಿಳಿಸಿದ್ದಾರೆ. ಇದೇ ರೀತಿ ತೆಕ್ಕಾರು ವ್ಯಾಪ್ತಿಯ ಹಲವು ಮನೆಗಳಲ್ಲಿ ಕಳ್ಳತನ ನಡೆದಿದ್ದು ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Continue Reading

DAKSHINA KANNADA

ಬಸ್‌ನಲ್ಲಿ ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ; ಬಸ್ ನಿರ್ವಾಹಕನನ್ನು ಬಂಧಿಸಿದ ಕೊಣಾಜೆ ಪೊಲೀಸರು

Published

on

ಉಳ್ಳಾಲ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳ ಜೊತೆ ಅಸಭ್ಯವಾಗಿ ವರ್ತಿಸಿದ ಸರ್ಕಾರಿ ಬಸ್ ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ.

 

ಮುಡಿಪು ಮಾರ್ಗವಾಗಿ ಸಂಚರಿಸುವ ಸರ್ಕಾರಿ ಬಸ್ ನಲ್ಲಿ ಯುವತಿಗೆ ಬಸ್ ನಿರ್ವಾಹಕ ಕಿರುಕುಳ ನೀಡಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದರ ಆಧಾರದಲ್ಲಿ ಕೊಣಾಜೆ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡು ಆರೋಪಿ ನಿರ್ವಾಹಕನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Watch Video: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಸ್ ನಿರ್ವಾಹಕನ ಅಸಭ್ಯ ವರ್ತನೆ

ಆರೋಪಿ ಪ್ರದೀಪ್ ಕಶಪ್ಪ ನಾಯ್ಕರ್ ಎಂದು ಗುರುತಿಸಲಾಗಿದ್ದು, ಆರೋಪಿಯ ವಿರುದ್ಧ ಬಿಎನ್ ಎಸ್ 75 ಮತ್ತು 76 ರಂತೆ ಲೈಂಗಿಕ ಕಿರುಕುಳದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

DAKSHINA KANNADA

Watch Video: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಸ್ ನಿರ್ವಾಹಕನ ಅಸಭ್ಯ ವರ್ತನೆ

Published

on

ಉಳ್ಳಾಲ: ಬಸ್ ನಲ್ಲಿ ಒಂಟಿಯಾಗಿ ಪ್ರಯಾಣಿಸುವ ಯುವತಿಯರು ಮಹಿಳೆಯರ ಜೊತೆ ಪ್ರಯಾಣಿಕರು ಅಸಭ್ಯವಾಗಿ ವರ್ತಿಸಿದ ಘಟನೆ ಸಾಕಷ್ಟು ನಡೆದಿದೆ. ಆದರೆ ಇದೀಗ ವಿಡಿಯೋ ಒಂದು ವೈರಲ್ ಆಗಿದ್ದು, ಬಸ್ ನಿರ್ವಾಹಕನೇ ಪ್ರಯಾಣಿಕ ಯುವತಿಗೆ ಕಿರುಕುಳ ನೀಡುವ ದೃಶ್ಯ ಬೆಳಕಿಗೆ ಬಂದಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವಿಡಿಯೋ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಬಸ್ ನಿರ್ವಾಹಕನ ವಿರುದ್ಧ ಕ್ರಮಕ್ಕೆ ಜನರು ಆಗ್ರಹಿಸಿದ್ದಾರೆ. ಈ ಘಟನೆ ಉಳ್ಳಾಲಕ್ಕೆ ಸಂಚರಿಸುವ ಸರ್ಕಾರಿ ಬಸ್ ನಲ್ಲಿ ನಡೆದಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಬಸ್ ನಲ್ಲಿ ನಿದ್ರಿಸುತ್ತಿದ್ದ ಯುವತಿಯ ಪಕ್ಕದಲ್ಲೇ ನಿಂತ ನಿರ್ವಾಹಕ ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಇಂತಹ ನಿರ್ವಾಹಕನನ್ನು ಸೇವೆಯಿಂದಲೇ ವಜಾ ಮಾಡಿ ಮಹಿಳೆಯರಿಗೆ ರಕ್ಷಣೆ ನೀಡಬೇಕು ಎಂದು ಜನರು ಆಗ್ರಹಿಸಿದ್ದಾರೆ.

Watch Video:

Continue Reading
Advertisement

Trending

Copyright © 2025 Namma Kudla News

You cannot copy content of this page