Connect with us

FILM

ಗೋವಾದಲ್ಲಿ ಕೇಕ್ ಕತ್ತರಿಸಿ ಯಶ್ ಬರ್ತ್‌ಡೇ ಸಂಭ್ರಮ

Published

on

ನ್ಯಾಷನಲ್ ಸ್ಟಾರ್ ಯಶ್‌ಗೆ ಇಂದು (ಜ.8) 39ನೇ ವರ್ಷದ ಹುಟ್ಟುಹಬ್ಬದ ಸಂಭ್ರಮವಾಗಿದ್ದು, ಪತ್ನಿ ರಾಧಿಕಾ ಹಾಗೂ ಆಪ್ತರೊಂದಿಗೆ ಗೋವಾದಲ್ಲಿ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ.

ಗೋವಾದಲ್ಲಿ ಮಧ್ಯರಾತ್ರಿ ಯಶ್‌ ಕೇಕ್‌ ಕತ್ತರಿಸಿ ಬರ್ತ್‌ಡೇ ಸೆಲೆಬ್ರೇಟ್‌ ಮಾಡಿದ್ದಾರೆ. ಪತ್ನಿ ರಾಧಿಕಾ ಮತ್ತು ಮಕ್ಕಳೊಂದಿಗೆ ಬರ್ತ್‌ಡೇ ಆಚರಿಸಿ ಯಶ್ ಖುಷಿಪಟ್ಟಿದ್ದಾರೆ. ನಟನ ಆಪ್ತ ಪಾನಿ ಪುರಿ ಕಿಟ್ಟಿ, KVN ಸಂಸ್ಥೆಯ ರೂವಾರಿ ವೆಂಕಟ್ ಸೇರಿದಂತೆ ಅನೇಕರು ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿ ಶುಭಕೋರಿದ್ದಾರೆ.

ಈ ಮೊದಲೇ ತಾವು ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ. ಅಭಿಮಾನಿಗಳಿಗೆ ನೀವು ಇರುವ ಕಡೆಯಿಂದಲೇ ಹಾರೈಸಿ ಎಂದು ನಟ ತಿಳಿಸಿದ್ದರು. ಆದರೆ ಇದೀಗ ‘ಟಾಕ್ಸಿಕ್‌’ ಲುಕ್‌ನಿಂದ ಫ್ಯಾನ್ಸ್‌ಗೆ ಸರ್ಪ್ರೈಸ್‌ ಕೊಟ್ಟಿದ್ದಾರೆ. ಫ್ಯಾನ್ಸ್‌ ನಿರೀಕ್ಷೆಗೆ ಅವರು ನಿರಾಸೆ ಮಾಡಿಲ್ಲ. ರಾಕಿ ಭಾಯ್ ಬರ್ತ್‌ಡೇ ಪ್ರಯುಕ್ತ 59 ಸೆಕೆಂಡ್ ಗ್ಲಿಂಪ್ಸ್ ರಿವೀಲ್ ಆಗಿದ್ದು, ಡ್ರಗ್ಸ್ ಮಾಫಿಯಾ ಕುರಿತ ಚಿತ್ರವಾಗಿದೆ. ರಿಲೀಸ್ ಆದ ಗ್ಲಿಂಪ್ಸ್‌ನಲ್ಲಿ ಕಲರ್‌ಫುಲ್ ಸೆಟ್‌ನಲ್ಲಿ ನಟನ ಸ್ಟೈಲೀಶ್ ವಾಕ್, ಹಾಟ್ ಮ್ಯಾನರಿಸಮ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

BIG BOSS

ಬಿಗ್ ಬಾಸ್ ಸೀಸನ್ 1  ಟು 12 : ಇಲ್ಲಿದೆ ಗೆದ್ದವರ ವಿವರ!

Published

on

BBK12 : ಬಿಗ್ ಬಾಸ್ ಸೀಸನ್ 12ಕ್ಕೆ ಅದ್ದೂರಿ ತೆರೆ ಬಿದ್ದಿದೆ. ಗಿಲ್ಲಿ ನಟ ಈ ಬಾರಿಯ‘ಬಿಗ್ ಬಾಸ್ ಕನ್ನಡ 12’ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ.  ಕರಾವಳಿಯ ರಕ್ಷಿತಾ ರನ್ನರ್ ಅಪ್ ಆಗಿದ್ದಾರೆ. ಅಶ್ವಿನಿ ಗೌಡ  ಎರಡನೇ ರನ್ನರ್ ಅಪ್ ಆಗಿದ್ದಾರೆ. ಸದ್ಯ ಗೆದ್ದವರ ಅಭಿಮಾನಿಗಳು ಫುಲ್ ಖುಷಿಯಲ್ಲಿದ್ದಾರೆ.

ಬಿಗ್ ಬಾಸ್ ಗೆದ್ದವರ ವಿವರ :

BBK 1  : ಬಿಗ್ ಬಾಸ್ ಕನ್ನಡ ಮೊದಲ ಶೋ ಆರಂಭವಾಗಿದ್ದು 2013ರಲ್ಲಿ. ಈಟಿವಿಯಲ್ಲಿ ಈ ಶೋ ಆರಂಭಗೊಂಡಿತ್ತು. ಮೊದಲ ಸೀಸನ್‌ನಲ್ಲಿ ವಿಜಯ್ ರಾಘವೇಂದ್ರ ಗೆದ್ದಿದ್ದರು. ಅರುಣ್ ಸಾಗರ್ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದರು.

BBK2 : ಬಿಗ್ ಬಾಸ್ ಸೀಸನ್ 2 2014ರಲ್ಲಿ ನಡೆಯಿತು. ಜೂನ್ 29 ರಿಂದ ಅಕ್ಟೋಬರ್ 5ರ ವರೆಗೆ ಈ ಸೀಸನ್ ನಡೆಯಿತು. ನಿರೂಪಕ ಅಕುಲ್ ಬಾಲಾಜಿ ವಿಜೇತರಾಗಿದ್ದರು.  ಮತ್ತೊಬ್ಬ ನಿರೂಪಕ ಸೃಜನ್ ಲೋಕೇಶ್ ರನ್ನರ್ ಅಪ್ ಆಗಿದ್ದರು.

BBK3:  ಬಿಗ್ ಬಾಸ್ ಸೀಸನ್ 3 ರಲ್ಲಿ 18 ಸ್ಪರ್ಧಿಗಳಿದ್ದರು. 2015 – 16ನೇ ಸಾಲಿನಲ್ಲಿ ನಡೆದಿದ್ದ ಈ ಶೋನಲ್ಲಿ ನಟಿ ಶ್ರುತಿ ಗೆದ್ದು ಬೀಗಿದ್ದರು. ಚಂದನ್ ರನ್ನರ್ ಆಪ್ ಆಗಿ ಮಿಂಚಿದ್ದರು.

BBk 4 : 2016-17ರಲ್ಲಿ ನಡೆದಿದ್ದ ಸೀಸನ್ 4ನಲ್ಲಿ ಒಳ್ಳೆ ಹುಡುಗ ಪ್ರಥಮ್‌ ಗೆಲುವಿನ ನಗೆ ಬೀರಿದ್ದರು. ಕಿರಿಕ್ ಕೀರ್ತಿ ರನ್ನರ್ ಅಪ್ ಆಗಿದ್ದರು.

BBK5 : ಬಿಗ್ ಬಾಸ್ ಸೀಸನ್ 5 ರಲ್ಲಿ ರ್ಯಾಪರ್ ಚಂದನ್ ಶೆಟ್ಟಿ ವಿಜೇತರಾಗಿ ಹೊಮ್ಮಿದ್ದರು. ದಿವಾಕರ್ ರನ್ನರ್ ಅಪ್ ಆಗಿದ್ದರು.

BBK6 : 2018 – 19 ರಲ್ಲಿ ಬಿಗ್ ಬಾಸ್ ಸೀಸನ್ 6 ನಡೆಯಿತು. ರೈತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಶಶಿಕುಮಾರ್ ಬಿಗ್ ಬಾಸ್ ಟ್ರೋಫಿ ಗೆದ್ದಿದ್ದರು. ಗಾಯಕ, ಸಂಗೀತ ನಿರ್ದೇಶಕ ನವೀನ್ ಸಜ್ಜು ರನ್ನರ್ ಅಪ್ ಆಗಿದ್ದರು.

BBK7 : 2019 – 20 ರಲ್ಲಿ ಬಿಗ್ ಬಾಸ್ ಸೀಸನ್ 7 ನಡೆಯಿತು. ಶೈನ್ ಶೆಟ್ಟಿ ಗೆದ್ದಿದ್ದರು. ಹಾಸ್ಯ ನಟ ಕುರಿ ಪ್ರತಾಪ್ ರನ್ನರ್ ಅಪ್ ಆಗಿದ್ದರು.

BBK8 : ಸೀಸನ್ 8 ಕೋವಿಡ್ ಕಾರಣದಿಂದ ಅರ್ಧಕ್ಕೆ ನಿಂತು ಮತ್ತೆ ಆರಂಭವಾಯಿತು. ಈ ಶೋನ ವಿನ್ನರ್ ಆಗಿ ಮಂಜು ಪಾವಗಡ ಹೊರಹೊಮ್ಮಿದ್ದರು.  ಅರವಿಂದ್ ಕೆ.ಪಿ ರನ್ನರ್ ಅಪ್ ಆಗಿದ್ದರು.

BBK9 : ಹಳೆಯ ಸೀಸನ್‌ನ ಸ್ಪರ್ಧಿಗಳು ಸೀಸನ್‌ 9ರಲ್ಲಿ ಬಂದಿದ್ದರು. ಒಟಿಟಿ ಶೋ ಕೂಡ ಇತ್ತು. ರೂಪೇಶ್ ಶೆಟ್ಟಿ ಗೆದ್ದರೆ, ರಾಕೇಶ್ ಅಡಿಗ ರನ್ನರ್ ಅಪ್ ಆದರು.

BBK10 : ಭಾರೀ ಕುತೂಹಲ ಕೆರಳಿಸಿದ್ದ ಸೀಸನ್ 10. ಕಾರ್ತಿಕ್ ಮಹೇಶ್‌ ಗೆದ್ದಿದ್ದರು. ಡ್ರೋನ್ ಪ್ರತಾಪ್ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದರು.

BBK 11 : ‘ಬಿಗ್ ಬಾಸ್‌ ಕನ್ನಡ 1!ರ ವಿನ್ನರ್‌ ಟ್ರೋಫಿ ಹನುಮಂತ ಲಮಾಣಿ ಗೆದ್ದಿದ್ದರು. ರನ್ನರ್‌ ಅಪ್‌ ಆಗಿ ತ್ರಿವಿಕ್ರಮ್‌ ,  ಮೂರನೇ ಸ್ಥಾನ ರಜತ್‌ ಪಡೆದುಕೊಂಡರು.

Continue Reading

BIG BOSS

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಗೆದ್ದ ಗಿಲ್ಲಿ; ನುಡಿದಂತೆ ನಡೆದ ‘ಆ’ ವ್ಯಕ್ತಿ!

Published

on

BBK12 : ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರಲ್ಲಿ ಗಿಲ್ಲಿ ನಟ ಗೆದ್ದು ಬೀಗಿದ್ದಾರೆ. ರಕ್ಷಿತಾ ಶೆಟ್ಟಿ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಗಿಲ್ಲಿ ಮತ್ತು ರಕ್ಷಿತಾ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಮತ್ತೊಂದೆಡೆ ಚಾಲೆಂಜ್ ಮಾಡಿರುವ ವ್ಯಕ್ತಿ ತಾನು ನುಡಿದಂತೆ ನಡೆದಿದ್ದಾರೆ.

ಗಿಲ್ಲಿ ಗೆದ್ದರೆ ಅರ್ಧ ಗಡ್ಡ ಮತ್ತು ಮೀಸೆ ತೆಗೆಯುತ್ತೇನೆಂದು ಚಾಲೆಂಜ್‌ ಮಾಡಿದ್ದ ವ್ಯಕ್ತಿಯೊಬ್ಬರು ತಾನು ಹೇಳಿದಂತೆ ಮಾಡಿದ್ದಾರೆ. ಅಬ್ದುಲ್ ರಜಾಕ್ ಎಂಬ ವ್ಯಕ್ತಿ ಈ ಸವಾಲು ಹಾಕಿದ್ದರು. ಗಿಲ್ಲಿ ಗೆಲುವು ದಾಖಲಿಸುತ್ತಿದ್ದಂತೆ, ಅರ್ಧ ಗಡ್ಡ ಮತ್ತು ಮೀಸೆಯನ್ನು ತೆಗೆದಿದ್ದಾರೆ. ಇದನ್ನು ವೀಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

ಒಂದು ವೇಳೆ ಗಿಲ್ಲಿ ಬಿಗ್‌ ಬಾಸ್‌ನಲ್ಲಿ ವಿನ್ನರ್‌ ಆದ್ರೆ ಅರ್ಧ ಗಡ್ಡ ಮತ್ತು ಮೀಸೆಯನ್ನು ತೆಗೆಯುತ್ತೇನೆಂದು ಚಾಲೆಂಜ್‌ ಮಾಡಿದ್ದೆ. ಅವರು ಗೆದ್ದಿದ್ದಾರೆ. ಗಿಲ್ಲಿನ ಫ್ಯಾನ್ಸ್‌ ಗೆಲ್ಲಿಸಿದ್ದಾರೆ. ಅದಕ್ಕಾಗಿ ಗಡ್ಡ, ಮೀಸೆ ತೆಗೆಯುತ್ತಿದ್ದೇನೆ ಎಂದು ವೀಡಿಯೋದಲ್ಲಿ ವ್ಯಕ್ತಿ ಹೇಳಿದ್ದಾರೆ.

ಇದನ್ನೂ ಓದಿ : ‘ನಿಮ್ಮನ್ನು ಕಳಿಸಿಯೇ ನಾನು ಹೋಗೋದು’; ಅಶ್ವಿನಿ ವಿರುದ್ಧ ರಕ್ಷಿತಾ ಹಾಕಿದ್ದ ಸವಾಲು ಕೊನೆಗೂ ನಿಜವಾಯ್ತು!

ಬಿಗ್ ಬಾಸ್ ಸೀಸನ್ 12ಕ್ಕೆ ಅದ್ದೂರಿ ತೆರೆ ಬಿದ್ದಿದೆ. ಗಿಲ್ಲಿ ನಟ ಈ ಬಾರಿಯ‘ಬಿಗ್ ಬಾಸ್ ಕನ್ನಡ 12’ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ಅವರಿಗೆ ಬರೋಬ್ಬರಿ 40 ಕೋಟಿಗೂ ಅಧಿಕ ವೋಟ್ ಸಿಕ್ಕಿರೋದು ವಿಶೇಷ. ಕರಾವಳಿಯ ರಕ್ಷಿತಾ ರನ್ನರ್ ಅಪ್ ಆಗಿದ್ದಾರೆ. ಅಶ್ವಿನಿ ಗೌಡ  ಎರಡನೇ ರನ್ನರ್ ಅಪ್ ಆಗಿದ್ದಾರೆ. ಗಿಲ್ಲಿಗೆ 50 ಲಕ್ಷ ರೂಪಾಯಿ ಕ್ಯಾಶ್‌ ಪ್ರೈಸ್‌ ಜೊತೆ ಭರ್ಜರಿ ಗಿಫ್ಟ್‌  ಸಿಕ್ಕಿದೆ. ಮಾರುತಿ ಸುಜುಕಿ ವಿಕ್ಟೋರಿಸ್‌ ಕಾರು ಉಡುಗೊರೆಯಾಗಿ ಕೊಡಲಾಗಿದೆ.  ಸುದೀಪ್ ಕಡೆಯಿಂದ ಗಿಲ್ಲಿಗೆ 10 ಲಕ್ಷ ರೂಪಾಯಿ ಸಿಗುತ್ತಿದೆ.

Continue Reading

BIG BOSS

ಅಂತ್ಯ ಅಲ್ಲ….ಇದು ಹೊಸ ಆರಂಭ..ಧ್ರುವಂತ್ ಗೆಟಪ್ ಚೇಂಜ್

Published

on

ಮಂಗಳೂರು/ಬೆಂಗಳೂರು : ಬಿಗ್ ಬಾಸ್ ಸೀಸನ್ 12 ಮುಕ್ತಾಯದ ಹಂತದಲ್ಲಿದೆ. ಒಬ್ಬೊಬ್ಬರೇ ಹೊರ ನಡೆದಿದ್ದಾರೆ. ಈಗ ಉಳಿದಿರೋದು ಕೇವಲ ಐದು ಮಂದಿ. ಮಿಡ್ ವೀಕ್ ಎಲಿಮಿನೇಷನ್‌ ಮೂಲಕ ಧ್ರುವಂತ್ ಹೊರಬಂದಿದ್ದಾರೆ. ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಲೇ ಧ್ರುವಂತ್ ಬದಲಾಗಿದ್ದಾರೆ.

ಬದಲಾಯ್ತು ಗೆಟಪ್:

ಬಿಗ್ ಬಾಸ್ ಮನೆಯೊಳಗಿದ್ದಾಗ ತಮ್ಮದೇ ಆದ ರೀತಿಯಲ್ಲಿ ಆಟವಾಡಿದ್ದರು ಧ್ರುವಂತ್. ಚರ್ಚೆ, ಜಗಳ, ವಾದದಲ್ಲೂ ಧ್ರುವಂತ್ ಇದ್ದರು. ಎಲ್ಲರೊಂದಿಗೆ ಜಗಳವಾಡುತ್ತಿದ್ದ ಧ್ರುವಂತ್‌ರನ್ನು ಕಿಚ್ಚ ಕ್ಲಾಸ ತೆಗೆದುಕೊಂಡಿದ್ದೂ ಇದೆ. ದೊಡ್ಮನೆಯೊಳಗೆ ‘ಜೈ ಮಹಾಕಾಳ್’ ಎನ್ನುತ್ತಾ ಖ್ಯಾತರಾಗಿದ್ದ ಧ್ರುವಂತ್ ಸೀಕ್ರೆಟ್ ರೂಮಿಗೂ ಹೋಗಿದ್ದರು. ಅಲ್ಲೂ ರಕ್ಷಿತಾ ಶೆಟ್ಟಿ ಜೊತೆ ಅವರ ಜಗಳ ಸಿಕ್ಕಾಪಟ್ಟೆ ಸದ್ದು ಮಾಡಿತ್ತು.

ಬಿಗ್ ಬಾಸ್ ಮನೆಯಲ್ಲಿ ತನ್ನ ಉದ್ದ ಕೂದಲನ್ನು ಜುಟ್ಟು ಕಟ್ಟಿಕೊಂಡು ವಿಭಿನ್ನವಾಗಿ ಕಾಣಿಸಿಕೊಳ್ಳುತ್ತಿದ್ದ ಧ್ರುವಂತ್, ಇದೀಗ ಜುಟ್ಟಿಗೆ ಕತ್ತರಿ ಹಾಕಿಸಿಕೊಂಡಿದ್ದಾರೆ. ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಕಣ್ಣು ಬಣ್ಣದ ಥಾರ್‌ನಲ್ಲಿ ಬಂದಿಳಿದ ಧ್ರುವಂತ್, ಅಭಿಮಾನಿಗಳನ್ನು ಭೇಟಿಯಾಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಬಳಿಕ ಸೆಲೂನ್‌ಗೆ ಹೋದ ಅವರು ಕೂದಲು ಕತ್ತರಿಸಿಕೊಂಡಿದ್ದಾರೆ. ಸ್ಟೈಲಿಷ್ ಹೇರ್ ಸ್ಟೈಲ್ ಮಾಡಿಕೊಂಡು ಡಿಫರೆಂಟ್ ಲುಕ್‌ನಲ್ಲಿ ಕಂಗೊಳಿಸಿದ್ದಾರೆ. ಅಂತ್ಯ ಅಲ್ಲ….ಇದು ಹೊಸ ಆರಂಭ ಎಂಬುದಾಗಿ ಟ್ಯಾಗ್ ಲೈನ್‌ನೊಂದಿಗೆ ವೀಡಿಯೋ ಹಂಚಿಕೊಂಡಿದ್ದು, ಅವರ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ : ‘ಅಶ್ವಿನಿ ಗೌಡಗೆ ಕನ್ನಡ ಬರೆಯೋಕೆ ಬರಲ್ಲ’ ಎಂಬ ಟೀಕೆಗೆ ಸ್ಪಷ್ಟೀಕರಣ ಕೊಟ್ಟ ಕರವೇ ನಾರಾಯಣ ಗೌಡ!

ಅಂದಹಾಗೆ, ಇಂದು(ಜ.17) ಬಿಗ್ ಬಾಸ್ ಪ್ರಿ ಫಿನಾಲೆ ನಡೆಯಲಿದೆ. ನಾಳೆ(ಜ.18) ಗ್ರ್ಯಾಂಡ್ ಫಿನಾಲೆ ನಡೆಯಲಿದೆ. ರಕ್ಷಿತಾ ಶೆಟ್ಟಿ, ಗಿಲ್ಲಿ ನಟ, ಕಾವ್ಯಾ,ರಘು, ಧನುಷ್, ಅಶ್ವಿನಿ ಗೌಡರಲ್ಲಿ ಯಾರು ಬಿಗ್ ಬಾಸ್ ಟ್ರೋಫಿ ಗೆಲ್ತಾರೆ ಅನ್ನೋದು ಸದ್ಯದ ಕುತೂಹಲ.

Continue Reading
Advertisement

Trending

Copyright © 2025 Namma Kudla News

You cannot copy content of this page