Connect with us

DAKSHINA KANNADA

ಹಿಂದೂ ಯುವತಿಯರೇ ಆಸೆ ಆಮಿಷಗಳಿಗೆ ಬಲಿಯಾಗಿ ಧರ್ಮ ತೊರೆಯದಿರಿ – ನಟಿ ಮಾಳವಿಕಾ

Published

on

ಪುತ್ತೂರು: ಲವ್ ಜಿಹಾದ್ ನಿಂದ ಧರ್ಮ ತೊರೆಯುವ ಯುವತಿಯರು ತಮ್ಮ ಭವಿಷ್ಯದ ಕುರಿತು ಗಂಭೀರ ಚಿಂತನೆ ಮಾಡಬೇಕು ಎಂದು ಚಲನಚಿತ್ರ ನಟಿ ಮಾಳವಿಕಾ ಅವಿನಾಶ್ ಮಹಿಳೆಯರಿಗೆ ಕರೆ ನೀಡಿದರು.

ಅವರು ಮಹಿಳಾ ಸಮನ್ವಯ ಪುತ್ತೂರು ಜಿಲ್ಲೆ ಮತ್ತು ಕೇಶವ ಸ್ಮೃತಿ ಸಂವರ್ಧನ ಸಮಿತಿಯ ಸಹಯೋಗದಲ್ಲಿ ನಿನ್ನೆ ಪುತ್ತೂರಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ‘ನಾರೀ ಶಕ್ತಿ ಸಂಗಮ’ ದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ವಿವಿಧ ಆಸೆ, ಆಮಿಷಗಳಿಗೊಳಗಾಗಿ ಲವ್ ಜಿಹಾದ್ ಮೂಲಕ ಯುವತಿಯರು ತಮ್ಮ ಧರ್ಮವನ್ನು ತೊರೆದು ಅನ್ಯ ಧರ್ಮದ ಕಟ್ಟುಪಾಡಿಗೊಳಗಾಗುವ ಮೊದಲು ತಮ್ಮ ಭವಿಷ್ಯದ ಬಗ್ಗೆ ಗಂಭೀರ ಚಿಂತನೆಯನ್ನು ಮಾಡಬೇಕು, ಅನ್ಯ ಧರ್ಮೀಯರನ್ನು ವಿವಾಹವಾಗುವ ಹಿಂದೂ ಯುವತಿ ತನ್ನ ಸಮಾನ ಹಕ್ಕುಗಳಿಂದ ವಂಚಿತಳಾಗುತ್ತಾಳೆ, ಮಹಿಳೆಯರು ಪ್ರಜ್ಞಾವಂತಿಕೆಯನ್ನು ಹೆಚ್ಚಿಸಿಕೊಳ್ಳ ಬೇಕು ಎಂದರು.

DAKSHINA KANNADA

ಮಾವಿನ ಮಿಡಿ ಕೊಯ್ಯಲು ಹೋಗಿ ದುರಂ*ತ; ಮರದಿಂದ ಬಿ*ದ್ದು ವ್ಯಕ್ತಿ ಸಾ*ವು

Published

on

ಸುಳ್ಯ : ಮಾವಿನ ಮರ ಏರಿ ಮಾವಿನ ಮಿಡಿಗಳನ್ನು ಕೊಯ್ಯುತ್ತಿದ್ದ ವೇಳೆ ಮರದ ಕೊಂಬೆ ತುಂಡಾಗಿ ಬಿದ್ದು ವ್ಯಕ್ತಿಯೊಬ್ಬರು ಮೃ*ತ ಪಟ್ಟಿದ್ದಾರೆ. ಸುಳ್ಯ ತಾಲೂಕಿನ ಉಬರಡ್ಕ ಎಂಬಲ್ಲಿ ಈ ಘಟನೆ ನಡೆದಿದ್ದು, ಜನಾರ್ದನ ಪೂಜಾರಿ ಮೃ*ತ ದುರ್ದೈವಿ.

ಉಬರಡ್ಕದ ನೆಯ್ಯೋಣಿ ನಿವಾಸಿಯಾಗಿದ್ದ ಇವರು ಮಾರ್ಚ್ 22 ರಂದು ಮಾವಿನ ಮರದಿಂದ ಮಾವಿನ ಮಿಡಿ ಕೊಯ್ಯುತ್ತಿದ್ದರು. ಈ ವೇಳೆ ಕೊಂಬೆ ತುಂಡಾಗಿದೆ. ಪರಿಣಾಮ ಕೊಂಬೆಯ ಸಹಿತ ಮರದಿಂದ ಕೆಳಗೆ ಬಿ*ದ್ದ ಅವರಿಗೆ ಗಂಭೀ*ರ ಸ್ವರೂಪದ ಗಾ*ಯಗಳಾಗಿತ್ತು.

ಇದನ್ನೂ ಓದಿ : ಬೆಳ್ತಂಗಡಿ : ಟಿಸಿ ಬಳಿಯಲ್ಲಿ ಮೆಸ್ಕಾಂ ಸಿಬ್ಬಂದಿಯ ಮೃ*ತದೇಹ ಪತ್ತೆ

ಸೊಂಟ ಹಾಗೂ ತಲೆಗೆ ಏಟಾಗಿದ್ದ ಅವರನ್ನು ತಕ್ಷಣ ಸುಳ್ಯದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಜನಾರ್ದನ ಪೂಜಾರಿ ಮೃ*ತಪಟ್ಟಿದ್ದಾರೆ.

Continue Reading

DAKSHINA KANNADA

ಬೆಳ್ತಂಗಡಿ : ಟಿಸಿ ಬಳಿಯಲ್ಲಿ ಮೆಸ್ಕಾಂ ಸಿಬ್ಬಂದಿಯ ಮೃ*ತದೇಹ ಪತ್ತೆ

Published

on

ಬೆಳ್ತಂಗಡಿ : ಮೆಸ್ಕಾಂ ಇಲಾಖೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಲೈನ್ ಮ್ಯಾನ್ ಆಗಿ ಕರ್ತವ್ಯದಲ್ಲಿದ್ದ ಸಿಬ್ಬಂದಿಯೊಬ್ಬರ ಮೃ*ತದೇಹ ಟ್ರಾನ್ಸ್ ಫಾರ್ಮರ್ ಒಂದರ ಬಳಿ ಪತ್ತೆಯಾಗಿದೆ.  ಬುಧವಾರ(ಮಾ.26) ಸಂಜೆ ವೇಳೆಯಲ್ಲಿ ಮೃ*ತದೇಹ ಪತ್ತೆಯಾಗಿದ್ದು, ಸಾ*ವು ಆಕಸ್ಮಿಕವೋ ಅಥವಾ ದು*ರ್ಘಟನೆಯೋ ಎಂಬ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಬೆಳ್ತಂಗಡಿ ತಾಲೂಕಿನ ನಾರವಿಯ ಅಡಿಂಜೆ ಎಂಬಲ್ಲಿ ಈ ಘಟನೆ ನಡೆದಿದ್ದು, ಮೃ*ತ ವ್ಯಕ್ತಿ ಕಿಟ್ಟಿ ಎಂದೇ ಫೇಮಸ್ ಆಗಿದ್ದ  ಸುಧಾಕರ್(50) ಎಂಬವರದ್ದಾಗಿದೆ. ನಾರಾವಿಯ ತುಂಬೆ ಗುಡ್ಡೆ ಎಂಬಲ್ಲಿಯ ನಿವಾಸಿಯಾಗಿದ್ದ ಸುಧಾಕರ್ ಕಳೆದ 27 ವರ್ಷಗಳಿಂದ ಮೆಸ್ಕಾಂ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬುಧವಾರ ಸಂಜೆ ಟ್ರಾನ್ಸ್ ಫಾರ್ಮರ್ ಬಳಿ ಹೋಗಿದ್ದ ಇವರು ಅಲ್ಲೇ ಮೃ*ತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಇದನ್ನೂ ಓದಿ : ಕೋಟ : ಅಜ್ಜಿಯ ಚಿನ್ನದ ಸರ ಕದ್ದಿದ್ದ ಆರೋಪಿ ಅರೆಸ್ಟ್

ಕೈನಲ್ಲಿ ಸಣ್ಣದೊಂದು ಗಾ*ಯ ಹೊರತು ಪಡಿಸಿದರೆ ಬೇರೆ ಯಾವುದೇ ಅನುಮಾನಾಸ್ಪದವಾದ ಕುರುಹು ಇಲ್ಲವಾಗಿದೆ. ಹಾಗಂತ ನಿನ್ನೆ ಸಂಜೆಯ ವೇಳೆ ಪರಿಸರದಲ್ಲಿ ಗುಡುಗು ಹಾಗು ಸಿಡಿಲು ಕೂಡ ಇತ್ತು. ಹಾಗಾಗಿ ಟ್ರಾನ್ಸ್ ಫಾರ್ಮರ್ ಬಳಿ ಹೋಗಿದ್ದಾಗ ಸಿಡಿಲು ಬಡಿಯಿತಾ ಅಥವಾ ವಿದ್ಯುತ್ ಪ್ರವಹಿಸಿತಾ ಅನ್ನೋ ಅನುಮಾನವೂ ಇದೆ.

ಸದ್ಯ ಮೃ*ತದೇಹವನ್ನು ಮ*ರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದ್ದು, ವರದಿ ಬಂದ ಬಳಿಕವಷ್ಟೇ ಸಾ*ವಿಗೆ ನಿಖರ ಕಾರಣ ಗೊತ್ತಾಗಲಿದೆ.

 

Continue Reading

DAKSHINA KANNADA

ಅಕ್ರಮ ಗೋ ಸಾಗಾಟ ಗೋಹತ್ಯೆ ನಿಲ್ಲಿಸಲು ಒತ್ತಾಯ; ಪೊಲೀಸ್ ವೈಫಲ್ಯದ ಬಗ್ಗೆ ವಿಶ್ವ ಹಿಂದೂ ಪರಿಷತ್ ಖಂಡನೆ

Published

on

ಮಂಗಳೂರು : ಜಿಲ್ಲೆಯಾದ್ಯಂತ ಕಾನೂನು ಕಾಯ್ದೆಯನ್ನು ಮೀರಿ ನಿತ್ಯ ನೂರಾರು ಗೋವುಗಳ ಅಕ್ರಮ ಸಾಗಾಟ ಮತ್ತು ವಧೆ ಮಾಡಲಾಗುತ್ತಿದೆ. ಗೋ ಮಾಂಸ ಮಾಫಿಯಾದವರು ಎಗ್ಗಿಲ್ಲದೆ ನಡೆಸುತ್ತಿರುವ ಈ ದಂಧೆಯನ್ನು ಮಟ್ಟ ಹಾಕಲು ಪೊಲೀಸರು ವಿಫಲರಾಗಿದ್ದಾರೆ. ತಕ್ಷಣ ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳದೇ ಇದ್ದರೆ ಜಿಲ್ಲೆಯಾದ್ಯಂತ ಉಗ್ರ ಪ್ರತಿಭಟನೆಯನ್ನು ನಡೆಸಬೇಕಾಗುತ್ತದೆ ಅಂತ ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ ನೀಡಿದೆ. ಮಂಗಳೂರಿನ ವಿಶ್ವಹಿಂದೂ ಪರಿಷತ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿಹೆಚ್‌ಪಿ ಪ್ರಮುಖರು ಈ ವಿಚಾರ ತಿಳಿಸಿದ್ದಾರೆ.

ಕಳೆದ ಎರಡು ವಾರಗಳಲ್ಲಿ ನಾಲ್ಕು ಕಡೆಯಲ್ಲಿ ಬಜರಂಗದಳದ ಮಾಹಿತಿಯ ಹಿನ್ನಲೆಯಲ್ಲಿ ಪೊಲೀಸರು ಒಂದು ಟನ್ ಗೂ ಅಧಿಕ ಗೋ ಮಾಂಸ ಜಪ್ತಿ ಮಾಡಿದ್ದಾರೆ. ನಗರದ ಹತ್ತಾರು ಕಡೆಗಳಲ್ಲಿ ಅಕ್ರಮ ಕಸಾಯಿಖಾನೆಗಳು ತಲೆ ಎತ್ತಿದ್ದು ಅಕ್ರಮವಾಗಿ ಗೋವಧೆ ಮಾಡಲಾಗುತ್ತಿದೆ. ಆದ್ರೆ ಇದಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆಯ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗೋ ಮಾಂಸ ಜಪ್ತಿಯ ವಿಚಾರದಲ್ಲೂ ವಿಶ್ವ ಹಿಂದೂ ಪರಿಷತ್ ಕೆಲವೊಂದು ಬೇಡಿಕೆ ಇಟ್ಟಿದ್ದು, ಅಕ್ರಮ ಗೋ ಮಾಂಸ ಕದ್ದ ಗೋವಿನಿಂದ ಆಗಿದ್ದ ಎಂಬ ಬಗ್ಗೆ ತನಿಖೆ ನಡೆಸಬೇಕು. ಮಾಂಸದ ಅಂಗಡಿಗೆ ಲೈಸೆನ್ಸ್ ಪಡೆದು ಗೋ ಮಾಂಸ ಮಾರಾಟ ಮಾಡುವುದಕ್ಕೂ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ. ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಗೋ ರಕ್ಷಾ ಪ್ರಮುಖ್ ಸುನಿಲ್ ಹಾಗೂ ಜಿಲ್ಲಾಧ್ಯಕ್ಷ ಎಚ್ ಕೆ ಪುರುಷೋತ್ತಮ ಸಹಿತ ಹಲವು ವಿಹೆಚ್‌ಪಿ ಬಜರಂಗದಳ ಪ್ರಮುಖರು ಈ ಮಾಹಿತಿ ನೀಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page