Connect with us

LATEST NEWS

ಉಡುಪಿ ಉದ್ಯಾವರದಲ್ಲಿ ವಿದ್ಯುತ್ ಆಘಾತಕ್ಕೆ ಯುವಕ ಬಲಿ..!

Published

on

ಉಡುಪಿ : ವಿದ್ಯುತ್ ಆಘಾತಕ್ಕೆ ಸಿಲುಕಿ ಯುವಕನೋರ್ವ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಉದ್ಯಾವರ ಕನಕೋಡದಲ್ಲಿ ಸಂಭವಿಸಿದೆ.

ಮಲ್ಪೆ‌ ಕೊಡವೂರು ನಿವಾಸಿ ಮನೋಜ್‌ ಕರ್ಕೇರ ಮತ್ತು ಶಶಿಕಲಾ ದಂಪತಿಯ ಪುತ್ರ ಮೋಕ್ಷಿತ್ ಕರ್ಕೇರ (25) ಮೃತ ದುರ್ದೈವಿಯಾಗಿದ್ದಾರೆ.

ನಿನ್ನೆ ಬುಧವಾರ ಸಂಜೆ ಉದ್ಯಾವರ ಕನಕೋಡದಲ್ಲಿ ಆತನ ಚಿಕಪ್ಪ ಶಂಕರ ಎಂಬವರ ಮನೆಯಲ್ಲಿದ್ದಾಗ ಜೋರಾಗಿ ಬೀಸಿದ ಗಾಳಿ ಮಳೆಗೆ ವಿದ್ಯುತ್ ಕೈ ಕೊಟ್ಟಿದ್ದು, ಅದನ್ನು ಕಂಡು ಮೈನ್‌ ಸ್ವಿಚ್ ಬೋರ್ಡ್ ಪರಿಶೀಲನೆ ನಡೆಸುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ವಿದ್ಯುತ್ ಶಾಕ್ ನಿಂದ ಗಂಭೀರ ಗಾಯಗೊಂಡ ಆತನನ್ನು‌ ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಇಲೆಕ್ಟ್ರೀಷಿಯನ್ ವೃತ್ತಿ ನಡೆಸುತ್ತಿದ್ದ ಮೋಕ್ಷಿತ್ ಕರ್ಕೇರ ಮೆಕ್ಯಾನಿಕ್ ಆಗಿ, ಡೆಕೋರೆಟ್ ಮೊದಲಾದ ಕೆಲಸಗಳನ್ನು ನಡೆಸುತ್ತಿದ್ದನು. ಬಿಡುವಿನ ವೇಳೆಯಲ್ಲಿ ತಾಯಿಯೊಂದಿಗೆ ಮಲ್ಪೆಯಲ್ಲಿ ಮೀನು‌ ಮಾರಾಟದ ವ್ಯವಹಾರದಲ್ಲೂ ಕೈ ಜೋಡಿಸುತ್ತಿದ್ದನು.

ಮನೋಜ್ ಕರ್ಕೇರ ಮತ್ತು ಶಶಿಕಲಾ ದಂಪತಿಯ ಇಬ್ಬರು ಪುತ್ರರಲ್ಲಿ ಮೋಕ್ಷಿತ್ ಹಿರಿಯವನಾಗಿದ್ದು, ಮ‌ನೆಗೆ ಆಧಾರವಾಗಿ ಬೆಳೆಯುತ್ತಿದ್ದನು. ಮಗನ ಅಗಲುವಿಕೆಯಿಂದ ಮನೆಯವರ ಆಕ್ರಂಧನ ಮುಗಿಲು ಮುಟ್ಟಿದೆ.

ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿ ಕೊಂಡು ತನಿಖೆ ಮುಂದುವರಿಸಿದ್ದಾರೆ.

FILM

ಮೊಮೊಸ್ ಫಾಸ್ಟ್ ಫುಡ್ ಆರಂಭಿಸಿದ ಬಾಲಿವುಡ್ ನಟ

Published

on

ಮಂಗಳೂರು/ಡೆಹ್ರಾಡೂನ್: 12ತಹ ಫೇಲ್ ಸೇರಿದಂತೆ ಬಾಲಿವುಡ್‌ನ ಹತ್ತಾರು ಚಿತ್ರಗಳಲ್ಲಿ ಅಭಿನಯಿಸುತ್ತಿರುವ ನಟ ಭೂಪೇಂದ್ರ ತನೇಜಾ ಅವರು ತಮ್ಮ ಬಿಡುವನ ವೇಳೆಯಲ್ಲಿ ಡೆಹ್ರಾಡೂನ್ ಧರಂಪುರದಲ್ಲಿ ತಮ್ಮದೇ ಆದ ‘ಮೊಮೊ ಫಾಸ್ಟ್ ಫುಡ್’ ಸ್ಟಾಲ್ ನಡೆಸುತ್ತಿದ್ದಾರೆ.

ಹೌದು, ಭೂಪೇಂದ್ರ ತನೇಜಾ, ಡೆಹ್ರಾಡೂನ್‌ನ ಧರ್ಮಪುರದ ಮಾತಾ ಮಂದಿರ ರಸ್ತೆಯಲ್ಲಿ ತಮ್ಮ ಫಾಸ್ಟ್ ಫುಡ್ ಸ್ಟಾಲ್ ಹೊಂದಿದ್ದಾರೆ. ತನೇಜಾ ಶೂಟಿಂಗ್ ಇಲ್ಲದಿದ್ದಾಗ ಜನರಿಗೆ ರುಚಿಕರವಾದ ಫಾಸ್ಟ್ ಫುಡ್ ತಯಾರಿಸಿ ಉಣ ಬಡಿಸುತ್ತಿದ್ದಾರೆ. ಅವರಿಗೆ ಪತ್ನಿ ಸುಷ್ಮಾ ತನೇಜಾ ಕೂಡ ಈ ಕೆಲಸದಲ್ಲಿ ಅವರಿಗೆ ಉತ್ತಮ ಬೆಂಬಲ ನೀಡುತ್ತಿದ್ದಾರೆ.

ಇದನ್ನೂ ಓದಿ: ‘ಕೌನ್ ಬನೇಗಾ ಕರೋಡ್‌ಪತಿ-17’ರ ನಿರೂಪಕರ ಕುರಿತ ವದಂತಿಗೆ ತೆರೆ ಎಳೆದ ಬಿಗ್‌ ಬಿ

ಈ ಬಗ್ಗೆ ಮಾತನಾಡಿರುವ ಭೂಪೇಂದ್ರ ತನೇಜಾ ಅವರು, ನನಗೆ ಹಣದ ಕೊರತೆ ಇಲ್ಲ ಎನ್ನುತ್ತಾರೆ. ಆದರೆ ಅವರಿಗೆ ಏನನ್ನಾದರೂ ಹೊಸತನ್ನು ಮಾಡಬೇಕೆಂಬ ಬಯಕೆ ಇದೆ. ಹೀಗಾಗಿಯೇ ಮೊಮೊಸ್ ಫಾಸ್ಟ್ ಫುಡ್ ಆರಂಭಿಸಿದ್ದೇನೆ. ಇನ್ನು ತನೇಜಾ ಅವರಿಗೆ ಅಡುಗೆ ಮಾಡುವುದು ಎಂದರೆ ತುಂಬಾ ಇಷ್ಟವಂತೆ.

ಭೂಪೇಂದ್ರ ತನೇಜಾ ಅವರಿಗೆ ಉತ್ತಮ ಮನ್ನಣೆ ತಂದು ಕೊಟ್ಟ ಸಿನಿಮಾ ಎಂದರೆ 12 ಫೇಲ್. ಈ ಚಿತ್ರ ಆಸ್ಕರ್‌ಗೆ ನಾಮನಿರ್ದೇಶನಗೊಂಡಿತ್ತು. ಈ ಸಿನಿಮಾದಲ್ಲಿ ಅಭಿನಯಿಸಿದ್ದು ತನ್ನ ಅದೃಷ್ಟವೆಂದು ತನೇಜಾ ಹೇಳಿದ್ದಾರೆ.

ತನೇಜಾ ಅವರು ತಾಂಡವ್ ವೆಬ್ ಸರಣಿ, ಅಖ್ರಿ ಸಚ್, ಗನ್ಸ್ ಮತ್ತು ಗುಲಾಬ್, ಪಿಎಂ ನರೇಂದ್ರ ಮೋದಿ, ಬಟ್ಟಿ ಗುಲ್ ಮೀಟರ್ ಚಾಲು, ಲಾಲ್ ಸಿಂಗ್ ಚಡ್ಡಾ ಮುಂತಾದ ಚಿತ್ರಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

 

Continue Reading

bangalore

‘I LOVE YOU’ ಅಲ್ಲ.. ಕೇವಲ ಮೀನು ಕೊಟ್ಟು ಪ್ರಪೋಸ್ ಮಾಡ್ತಾರಂತೆ ‘ಕುಡ್ಲದ ಜನ’..! ಹೇಗೆ ಗೊತ್ತಾ ?

Published

on

ಪ್ರಸ್ತುತ ಝೀ ಕನ್ನಡದಲ್ಲಿ ಭರ್ಜರಿ ಬ್ಯಾಚುಲರ್ಸ್ ಸೀಸನ್ 2 ಆರಂಭವಾಗಿದ್ದು ಉತ್ತಮ ರಿತಿಯಲ್ಲಿ ನಡೆಯುತ್ತಿದೆ. ಬ್ಯಾಚುಲರ್ಸ್‌ಗಳಿಗೆ ಮೆಂಟರ್ಸ್‌ಗಳು ಕೂಡ ಸಿಕ್ಕಿದ್ದಾರೆ. ವಿವಿಧ ರೀತಿಯಲ್ಲಿ ತಮ್ಮ ಪಾರ್ಟ್ನರ್/ ಮೆಂಟರ್‌ಗಳಿಗೆ ಬ್ಯಾಚುಲರ್ಸ್ ಸರ್ಪ್ರೈಸ್ ನೀಡುವಂತೆ ಕಳೆದ ವಾರ ಸರ್ಪ್ರೈಸ್ ರೌಂಡ್ ಇತ್ತು. ಸಿನಿಮಾಗಳ ರೀಕ್ರಿಯೇಶನ್ ರೌಂಡ್ ಆಗಿದ್ದು ನಟಿ ಅಭಿಜ್ಞಾ ಭಟ್, ಸೂರ್ಯ ಕುಮಾರ್‌ಗೆ ಜೋಡಿಯಾಗಿದ್ದು, ಇವರು ಜೊತೆಯಾಗಿ ಕಾಂತಾರ ಸಿನಿಮಾದ ಸಿಂಗಾರ ಸಿರಿಯೇ ಹಾಡು ಹಾಗೂ ದೃಶ್ಯಗಳನ್ನು ರೀಕ್ರಿಯೇಟ್ ಮಾಡಿದ್ದಾರೆ.

ನಿರೂಪಕ ನಿರಂಜನ್ ದೇಶಪಾಂಡೆ ಮೀನುಗಳ ಬಗ್ಗೆ ಕೇಳಿದ ಪ್ರಶ್ನೆಗೆ ಅಭಿಜ್ಞಾ ಭಟ್ ಉತ್ತರಿಸಿದ್ದು, “ನಾನು ಮೀನು ತಿನ್ನೋದಿಲ್ಲ, ಆದರೆ ನಾನು ದಕ್ಷಿಣ ಕನ್ನಡದವಳು ಅಲ್ವಾ? ಹಾಗಾಗಿ ನಮ್ಮ ಅಕ್ಕ ಪಕ್ಕದ ಮನೆಯಲ್ಲಿ ಯಾವಾಗ ನೋಡಿದ್ರೂ ಮೀನು. ಮೀನು ಕಣ್ಣಿಗೆ ತುಂಬಾನೆ ಒಳ್ಳೆಯದು ಅಲ್ಲದೇ ಮೀನಿನ ಮಂಡೆ ತಿಂದ್ರೆ ನಮ್ಮ ಮಂಡೆಸ ಚುರುಕಾಗುತ್ತದೆ” ಎಂದರು . ಇಷ್ಟೇ ಅಲ್ಲ ಮೀನು ಕೊಟ್ಟು ಪ್ರಪೋಸ್ ಮಾಡುವ ಕುರಿತು ಸಹ ಅಭಿಜ್ಞಾ ಮಾಹಿತಿ ನೀಡಿದ್ದು, “ಇಲ್ಲೆಲ್ಲಾ ಹುಡುಗರು ಹುಡುಗಿಯರಿಗೆ ಪ್ರಪೋಸ್ ಮಾಡಲು, ಅಥವಾ ಇಂಪ್ರೆಸ್ ಮಾಡಲು ರೋಸ್, ಚಾಕ್ಲೆಟ್ ಎಲ್ಲಾ ಕೊಡ್ತಾರೆ, ಆದರೆ ನಮ್ ಕಡೆ ಹಾಗಲ್ಲ, ಮೀನು ಕೊಟ್ರೆ ಸಾಕು. ಇಲ್ಲೆಲ್ಲ ಐ ಲವ್ ಯೂ ಅಂದ್ರೆ ಮುಗೀತು, ಆದ್ರೆ ನಮ್ ಕಡೆ ‘ಹೇ ಭಾಗಿ ನಿನಗಾಗಿ ಮೀನು ತಂದಿದ್ದೇನೆ, ಸಾರು ಮಾಡಿಡು, ರಾತ್ರಿ ಬೇಗ ಬರ್ತೇನೆ’ ಎನ್ನುತ್ತಾರಂತೆ ಕುಡ್ಲದ ಜನ. ಹಾಗಾಗಿ ಭಾಗಿ ಮನೆಯಲ್ಲಿ ಮೀನು ಸಾರು ಅಂದ್ರೆ, ಇವತ್ತೇನೋ ಸ್ಪೆಷಲ್ ಇದೆ ಎಂದು ಕನೆಕ್ಟ್ ಮಾಡ್ಬೇಕು” ಎಂದಿದ್ದಾರೆ ಅಭಿಜ್ಞಾ.

ಕಾರ್ಯಕ್ರಮದ ಜಡ್ಜ್ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿಜ್ಞಾಳ ಕತೆಯನ್ನೆಲ್ಲಾ ಕೇಳಿ, “ಯಾವ ಯಾವ ಮೀನು ಕೊಡಬೇಕು ? ಅದರ ಅರ್ಥ ಏನು ?” ಎಂದು ಕೇಳಿದ್ದಾರೆ. ಅದಕ್ಕೆ ಅಭಿಜ್ಞಾ, “ಬಂಗುಡೆ ಮೀನು ಕೊಟ್ರೆ, ಬರೀ ರೋಮ್ಯಾನ್ಸ್. ಕಾಣೆ ಫಿಶ್ ಕೊಟ್ರೆ ಸ್ವಲ್ಪ ಜಾಸ್ತಿನೇ ರೊಮ್ಯಾನ್ಸ್ , ಪಾಂಪ್ಲೆಟ್ ಮೀನು ಕೊಟ್ರೆ ಲವ್ ಮಾಡೋದು ಅಂತ ಅರ್ಥ, ಇನ್ನು ಏಡಿಯನ್ನು ತಂದು ಕೊಟ್ರೆ ಫಸ್ಟ್ ಸೆಕೆಂಡ್ ಸ್ಟೇಜ್ ಏನೂ ಇಲ್ಲ, ಡೈರೆಕ್ಟ್” ಎಂದ ಅಭಿಜ್ಞಾ ಕೊನೆಗೆ “ನಾನು ಸುಮ್ಮನೆ ಹೇಳಿದ್ದು, ಇವಳಿಗೇನು ಮಾಡೋದಕ್ಕೆ ಬೇರೆ ಕೆಲ್ಸ ಇಲ್ವಾ ಅಂತ ಹೇಳ್ಬೇಡಿ” ಎಂದು ಹೇಳಿಕೊಂಡಿದ್ದಾರೆ.

Continue Reading

LATEST NEWS

ಹಮಾಸ್ ಬೆಂಬಲಿಸಿದ ಭಾರತೀಯ ವಿದ್ಯಾರ್ಥಿನಿಯ ಅಮೆರಿಕ ವೀಸಾ ರದ್ದು, ಸ್ವಯಂ ಗಡಿಪಾರು

Published

on

ಮಂಗಳೂರು/ವಾಷಿಂಗ್ಟನ್ : ಹಮಾಸ್‌ಗೆ ಬೆಂಬಲ ವ್ಯಕ್ತಪಡಿಸಿದ ಭಾರತೀಯ ವಿದ್ಯಾರ್ಥಿಯ ವೀಸಾವನ್ನು ಅಮೆರಿಕ ರದ್ದುಗೊಳಿಸಿದೆ. ಹೀಗಾಗಿ ಆಕೆ ಸ್ವಯಂ ಗಡಿಪಾರಾಗಿದ್ದಾಳೆ ಎಂದು ವರದಿಗಳು ತಿಳಿಸಿವೆ. ಭಾರತದ ಪ್ರಜೆ ರಂಜನಿ ಶ್ರೀನಿವಾಸನ್ ಎಫ್ – 1 ವಿದ್ಯಾರ್ಥಿ ಕಲಿಕಾ ವೀಸಾದಲ್ಲಿ ಅಮೆರಿಕಕ್ಕೆ ತೆರಳಿದ್ದರು. ವರದಿಗಳ ಪ್ರಕಾರ, ಆಕೆ ಕೊಲಂಬಿಯಾದ ಗ್ರಾಜುಯೇಟ್ ಸ್ಕೂಲ್ ಆಫ್ ಆರ್ಕಿಟೆಕ್ಚರ್, ಪ್ಲಾನಿಂಗ್ ಮತ್ತು ಪ್ರಿಸರ್ವೇಶನ್‌ನಲ್ಲಿ ಸಂಶೋಧನೆ ನಡೆಸುತ್ತಿದ್ದರು.

ರಂಜನಿ ಶ್ರೀನಿವಾಸನ್ ಭಯೋತ್ಪಾದಕ ಸಂಘಟನೆಯಾದ ಹಮಾಸ್ ಅನ್ನು ಬೆಂಬಲಿಸುವ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಹೀಗಾಗಿ ಮಾರ್ಚ್ 5 ರಂದು, ವಿದೇಶಾಂಗ ಇಲಾಖೆ ಅವರ ವೀಸಾವನ್ನು ರದ್ದುಗೊಳಿಸಿದೆ. ಹೀಗಾಗಿ ಅಧಿಕಾರಿಗಳು ಕ್ರಮ ಕೈಗೊಳ್ಳುವ ಮೊದಲು ರಂಜನಿ ಹೋಮ್ ಅಪ್ಲಿಕೇಶನ್ ಮೂಲಕ ಸ್ವಯಂ ಗಡಿಪಾರಾಗಿದ್ದಾರೆ. ಇಲ್ಲವಾದಲ್ಲಿ ಅಮೆರಿಕ ಮಿಲಿಟರಿ ವಿಮಾನದ ಮೂಲಕ ಮನೆಗೆ ಕಳುಹಿಸಲಾಗುತ್ತಿತ್ತು.

ಗೃಹ ಭದ್ರತಾ ಕಾರ್ಯದರ್ಶಿ ಪೋಸ್ಟ್ :

ರಂಜನಿ ಶ್ರೀನಿವಾಸನ್ ವಿಮಾನ ನಿಲ್ದಾಣದಲ್ಲಿದ್ದ ವೀಡಿಯೋವೊಂದನ್ನು ಗೃಹ ಭದ್ರತಾ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : ‘ಕೌನ್ ಬನೇಗಾ ಕರೋಡ್‌ಪತಿ-17’ರ ನಿರೂಪಕರ ಕುರಿತ ವದಂತಿಗೆ ತೆರೆ ಎಳೆದ ಬಿಗ್‌ ಬಿ

ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ ವಾಸಿಸಲು ಮತ್ತು ಅಧ್ಯಯನ ಮಾಡಲು ವೀಸಾ ಪಡೆಯುವುದು ಒಂದು ಸೌಭಾಗ್ಯ. ನೀವು ಹಿಂಸೆ ಮತ್ತು ಭಯೋತ್ಪಾದನೆಯನ್ನು ಪ್ರತಿಪಾದಿಸುವಾಗ ಆ ಸವಲತ್ತು ರದ್ದುಗೊಳ್ಳುತ್ತದೆ. ನೀವು ಈ ದೇಶದಲ್ಲಿ ಇರಲು ಅರ್ಹರಲ್ಲ. ಕೊಲಂಬಿಯಾ ವಿಶ್ವವಿದ್ಯಾಲಯದ ಭಯೋತ್ಪಾದಕ ಸಹಾನುಭೂತಿ ಹೊಂದಿರುವ ಒಬ್ಬರು ಸ್ವಯಂ ಗಡೀಪಾರು ಮಾಡಲು CBP ಹೋಮ್ ಅಪ್ಲಿಕೇಶನ್ ಅನ್ನು ಬಳಸುವುದನ್ನು ನೋಡಿ ನನಗೆ ಸಂತೋಷವಾಗಿದೆ ಎಂದು ಬರೆದುಕೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page